ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಮುದ್ದೇಬಿಹಾಳ : ಪ್ರಾಚೀನ ಗುರುಕುಲ ಪದ್ದತಿಯಿಂದ ಇಂದಿನವರೆಗೂ ಶಿಕ್ಷಕರಿಗೆ ಗೌರವದ ಭಾವನೆ ಇದೆ.ವಿದ್ಯಾರ್ಥಿಗಳಿಗೆ ಇಂದಿಗೂ ಒಳ್ಳೆಯ ಶಿಕ್ಷಕರು ರೋಲ್ ಮಾಡೆಲ್ ಆಗಿರುತ್ತಾರೆ ಎಂದು ಎಂ.ಜಿ.ವ್ಹಿ.ಸಿ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪ್ರಕಾಶ ನರಗುಂದ ಹೇಳಿದರು.

ಪಟ್ಟಣದ ಪ್ರೇರಣಾ ಕಿಂಡರ್ ಗಾರ್ಟನ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ 11ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜರ್ಮನಿಯ ಶಿಕ್ಷಣ ತಜ್ಞ ಫ್ರೆಡ್ರಿಕ್ ಪ್ರೋಬೆಲ್ ಕಿಂಡರ್ ಗಾರ್ಟನ್ ಕಲ್ಪನೆಯನ್ನು ಬಿತ್ತಿದರು.ಈ ವ್ಯವಸ್ಥೆಯಲ್ಲಿ ಮಕ್ಕಳು ಆಟದ ಮೂಲಕ ಉತ್ತಮವಾಗಿ ಕಲಿಯುತ್ತಾರೆ. ಇದರಲ್ಲಿ ಮಕ್ಕಳು ಸೃಜನಶೀಲತೆ ಮತ್ತು ಕಲ್ಪನೆಗಳನ್ನು ಬೆಳೆಸಿಕೊಳ್ಳಲು ಸಹಾಯಕವಾಗುತ್ತದೆ ಎಂದರು.

ಮುಖ್ಯ ಅತಿಥಿಗಳಾಗಿದ್ದ ನಿವೃತ್ತ ಶಿಕ್ಷಣಾಧಿಕಾರಿ ಎಸ್.ಬಿ.ಚಲವಾದಿ ಮಾತನಾಡಿ,ಪ್ರತಿಯೊಂದು ಮಗುವಿನಲ್ಲಿ ವಿಭಿನ್ನ ಸಾಮರ್ಥ್ಯವಿದ್ದು ಅದನ್ನು ಶಿಕ್ಷಕರು ಗ್ರಹಿಸಿ ಮಗುವಿನ ಕಲಿಕೆಯ ವೇಗ,ಬೋಧನಾ ವಿಧಾನಗಳನ್ನು ಅಳವಡಿಸಿ ಬೋಧಿಸಿದಾಗ ಮಕ್ಕಳು ಬೇಗನೇ ಕಲಿತುಕೊಳ್ಳುತ್ತಾರೆ ಎಂದರು.

ಪತ್ರಕರ್ತ ಶಂಕರ ಹೆಬ್ಬಾಳ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು.ನಮ್ಮ ಆಕಾಂಕ್ಷೆಯನ್ನು ಮಕ್ಕಳ ಮೇಲೆ ಹೇರದೇ ಮಕ್ಕಳ ಆಸೆಗೆ ತಕ್ಕಂತೆ ಶಿಕ್ಷಣ ಕೊಡಿಸಬೇಕು.ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಘಟಿಕೋತ್ಸವದ ಮಾದರಿಯಲ್ಲಿ ವಾರ್ಷಿಕೋತ್ಸವ ಮಾಡುತ್ತಿರುವ ಮೊದಲ ಶಾಲೆ ಪ್ರೇರಣಾ ಕಿಂಡರ್ ಗಾರ್ಟನ್ ಶಾಲೆಯಾಗಿದೆ.ಶಾಲೆಯ ಮುಖ್ಯಸ್ಥರಾದ ಚಂದ್ರು ಕಲಾ ಸದಾ ಹೊಸತನದ ಅನ್ವೇಷಕಾರರು ಎಂದರು.

ಪುರಸಭೆ ನಾಮನಿರ್ದೇಶಿತ ಮಾಜಿ ಸದಸ್ಯ ರಾಜಶೇಖರ ಹೊಳಿ, ಸಂಸ್ಥೆಯ ಆಡಳಿತಾಧಿಕಾರಿ ಚಂದ್ರು ಕಲಾಲ ಮಾತನಾಡಿದರು.ಯುಕೆಜಿ ಮಕ್ಕಳ ಘಟಿಕೋತ್ಸವದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಹಾಗೂ ಆರ್.ಎಂ.ಎಸ್.ಎ., ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ಶಾಲೆಯ ಅಧ್ಯಕ್ಷ ಮೋತಿಲಾಲ್ ಕಲಾಲ್ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಮಾಜಿ ಸದಸ್ಯರಾದ ವೀರೇಶ ಹಡಲಗೇರಿ, ಶಿವು ಶಿವಪೂರ,ಸಂಸ್ಥೆಯ ನಿರ್ದೇಶಕರಾದ ತುಕಾರಾಂ ಕಲಾಲ, ಮಹಮ್ಮದ್ ರಫೀಕ್ ಢವಳಗಿ, ಸೂರ್ಯವಂಶ ಕ್ಷತ್ರಿಯ ಸಮಾಜದ ಅಧ್ಯಕ್ಷ ಸುರೇಶ ಕಲಾಲ್,ಸದಸ್ಯರಾದ ಗಂಗಾzsರ ಕಲಾಲ,ಮಧುಮತಿ ಕಲಾಲ,ಸಮಾಜ ಸೇವಕ ಕಾಶಿನಾಥ್ ಹುಗ್ಗಿ,ಮುಖ್ಯಗುರುಮಾತೆ ವಿಜಯಲಕ್ಷಿö್ಮÃ ಬಡಿಗೇರ,ಮಧು ಹಾದಿಮನಿ,ಜ್ಯೋತಿ ತಳವಾರ,ವಿಜಯಲಕ್ಷ್ಮಿ ನೇಬಗೇರಿ,ತಹರೀನ ಬಾಗಲಕೋಟ,ಸುಮಾ ಬಳಗಾನೂರ ಇದ್ದರು.

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ