ಅಗ್ನಿಶಾಮಕ ತಂಡದಿOದ ಕಾರ್ಮಿಕನ ರಕ್ಷಣೆ; ಕಾಂಕ್ರಿಟ್ ಮಿಕ್ಸರ್ ಯಂತ್ರದಲ್ಲಿ ಕೈ ಸಿಲುಕಿ ಎಲುಬುಗಳ ತುಂಡು..!

ಅಗ್ನಿಶಾಮಕ ತಂಡದಿOದ ಕಾರ್ಮಿಕನ ರಕ್ಷಣೆ; ಕಾಂಕ್ರಿಟ್ ಮಿಕ್ಸರ್ ಯಂತ್ರದಲ್ಲಿ ಕೈ ಸಿಲುಕಿ ಎಲುಬುಗಳ ತುಂಡು..!

ಮುದ್ದೇಬಿಹಾಳ : ಕಾಂಕ್ರೀಟ್ ಮಿಕ್ಸರ್‌ನಲ್ಲಿ ಕಾರ್ಮಿಕನೊಬ್ಬನ ಕೈ ಸಿಲುಕಿಕೊಂಡು ಎಲುಬುಗಳು ತುಂಡಾಗಿರುವ ಘಟನೆ ಮಂಗಳವಾರ ಇಲ್ಲಿನ ಪಟ್ಟಣದಲ್ಲಿ ಅಂಬೇಡ್ಕರ್ ಸಮುದಾಯ ಭವನದ ಬಳಿ ನಡೆದಿದೆ.

ಅಬ್ಬಿಹಾಳ ಗ್ರಾಮದ ಕಾರ್ಮಿಕ ಗಂಗಣ್ಣ ಬಸಪ್ಪ ಕಂಬಳಿ(25) ಘಟನೆಯಲ್ಲಿ ಅವರ ಬಲಗೈ ಮಣಿಕಟ್ಟಿಗೆ ತೀವ್ರ ಗಾಯವಾಗಿ ನರಗಳು ಮತ್ತು ಎಲಬು ತುಂಡಾಗಿದೆ.ವಿಷಯ ತಿಳಿದ ತಕ್ಷಣ ಹತ್ತಿರದಲ್ಲಿಯೇ ಇದ್ದ ಅಗ್ನಿಶಾಮಕ ಇಲಾಖೆ ಇಡೀ ತಂಡದ ಸಿಬ್ಬಂದಿ ಧಾವಿಸಿ ಬಂದು ಕಾರ್ಮಿಕನನ್ನು ಪ್ರಾಣಾಪಾಯದಿಂದ ರಕ್ಷಣೆ ಮಾಡಿದರು.

ಕಾಂಕ್ರಿಟ್ ಮಿಕ್ಸರ್‌ನಲ್ಲಿ ಕೈ ಸಿಲುಕಿ ತೀವ್ರ ನೋವಿನಿಂದ ಒದ್ಡಾಡುತ್ತಿದ್ದ ಅವರನ್ನು ತಕ್ಷಣ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸಲಕರಣೆಗಳನ್ನು ಬಳಸಿ ಕಾಂಕ್ರೀಟ್ ಮಿಕ್ಸರ್‌ನಿಂದ ಕೈ ಹೊರತಗೆದರು.ಬಳಿಕ ಅವರ ವಾಹನದಲ್ಲಿಯೇ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಯನ್ನು ಕೊಡಿಸಲಾಯಿತು.

ಅಗ್ನಿಶಾಮಕ ಇಲಾಖೆಯ ಅಧಿಕಾರಿ ಬಸವರಾಜ ಬಿರಾದಾರ,ಪ್ರಮುಖ ಅಗ್ನಿಶಾಮಕ ಸುಭಾಷ ರಾಥೋಡ್ ,ಚಾಲಕ ಶಿವಾನಂದ ವಾಲೀಕಾರ,ಸಿಬ್ಬಂದಿ ತಮ್ಮಣ್ಣ ಗೌಡರ ,ಸಿದ್ದಣ್ಣ ಪೊಲೇಶಿ, ಅಗ್ನಿಶಾಮಕರು , ಬಸವರಾಜ್ ಭಜಂತ್ರಿ , ಸಂತೋಷ್ ಲಮಾಣಿ , ಶರಣು ಬಾಗೇವಾಡಿ , ಲಕ್ಷ್ಮಣ ಕರ್ನಾಲಗಿ,ಕಾರ್ತಿಕ ಅಜಮನಿ, ವಿರೂಪಾಕ್ಷಿ ಪೂಜಾರಿ, ಶಕೀಲ್ ಅವಟಿ, ರಂಗನಗೌಡ ಬಿರಾದಾರ,ರಾಜು ರಾಥೋಡ ಭಾಗಿಯಾಗಿದ್ದರು.

Latest News

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ತಾಲ್ಲೂಕು ಬರಪೀಡಿತ ಎಂದು ಘೋಷಣೆಗೆ ಸ್ಥಳ ಪರಿಶೀಲನೆಗೆ ಆದೇಶ ಮಾಡಿದ್ದಾರೆ.ಅಧಿಕೃತವಾಗಿ ಬರಪೀಡಿತ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ : ಬರಪೀಡಿತ ತಾಲ್ಲೂಕು ಪಟ್ಟಿಯಲ್ಲಿ ಮುದ್ದೇಬಿಹಾಳ ತಾಲ್ಲೂಕು ಘೋಷಣೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು,ನಾಡಗೌಡರ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ:                                ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ: ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನ ವರದಿ ವರ್ಷದಲ್ಲಿ ಸಂಘದ ಆದಾಯ ಒಟ್ಟು 1.04

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ:                              ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ: ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಮುದ್ದೇಬಿಹಾಳ : ಪ್ರಕೃತಿ ವಿಕೋಪ ಹಾಗೂ ತೀವ್ರ ಬರಪೀಡಿತ ಸಂದರ್ಭದಲ್ಲಿ ರೈತರಿಗೆ ನೆರವು ಒದಗಿಸುವ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ನೇತೃತ್ವದಲ್ಲಿ ಶನಿವಾರ ಕರೆ ನೀಡಿದ್ದ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆಸುತ್ತಿದ್ದ ಹೋರಾಟದ ಭಾಗವಾಗಿ ಆರನೇ ದಿನದ ಪ್ರತಿಭಟನೆಯನ್ನು ಮುದ್ದೇಬಿಹಾಳ ಬಂದ್ ಕರೆ ನೀಡುವ ಮೂಲಕ ಮುಂದುವರೆಸಲಾಗಿತ್ತು.ಬoದ್‌ಗೆ ವ್ಯಾಪಾರಸ್ಥರು,ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಮುದ್ದೇಬಿಹಾಳ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಎಲ್ಲ ಅಂಗಡಿ

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ 50 ಸಾವಿರ ರೂ.ಗಳಿಂದ ಗರಿಷ್ಠ 5 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯ ಪಡೆಯಬಹುದಾಗಿದೆ.ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಂಡು ಸ್ವಯಂ ಉದ್ಯೋಗದ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶಿವಾನಂದ ಪಿ. ಹೇಳಿದರು. ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಶುಕ್ರವಾರ ನಡೆದ ಸಿಡ್ಬಿ ಸಮೃದ್ಧಿ