ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ ಮೀಸಲಾತಿಯನ್ನು ತಪ್ಪಿಸಿ ನೇಮಕಾತಿ ಪ್ರಕ್ರಿಯೆ ನಡೆಸಲು ಸರ್ಕಾರ ಹೊರಡಿಸಿರುವ ಆದೇಶವನ್ನು ಖಂಡಿಸಿ ಶುಕ್ರವಾರ ಮುದ್ದೇಬಿಹಾಳ ಪಟ್ಟಣದಲ್ಲಿ ಮಾದಿಗ ಮತ್ತು ಸಂಬoಧಿತ ಉಪಜಾತಿಗಳ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಮುದ್ದೇಬಿಹಾಳ ಪಟ್ಟಣ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಪಟ್ಟಣದಲ್ಲಿ ಬೆಳಿಗ್ಗೆಯಿಂದಲೇ ಮಾದಿಗ ಮತ್ತು ಸಂಬAಧಿತ ಉಪಜಾತಿಗಳ ಸಂಘಟನೆಗಳ ಪದಾಧಿಕಾರಿಗಳು, ದಲಿತಪರ ಸಂಘಟನೆ ಕಾರ್ಯಕರ್ತರು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಕೆಲವೆಡೆ ಅರ್ಧಮರ್ಧ ತೆರೆದಿದ್ದ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಲು ಸಂಘಟನೆಯವರು ತಿಳಿ ಹೇಳಿ ಪ್ರತಿಭಟನೆ ನಡೆಸಿದರು.

ಸಮಾಜದ ಮುಖಂಡ ಬಸವರಾಜ ಪೂಜಾರಿ(ಸಿದ್ದಾಪೂರ ಪಿ.ಟಿ) ಮಾತನಾಡಿ, ಒಳ ಮೀಸಲಾತಿ ಜಾರಿಗೊಳಿಸದೆ ನೇಮಕಾತಿ ಪ್ರಕ್ರಿಯೆ ಮುಂದುವರಿಸುವ ಸರ್ಕಾರದ ನಡೆ ಸಾಮಾಜಿಕ ನ್ಯಾಯಕ್ಕೆ ಧಕ್ಕೆ ಉಂಟುಮಾಡುತ್ತಿದೆ.ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಕುರಿತಂತೆ ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನದ ಹಿನ್ನೆಲೆ ರಾಜ್ಯ ಸರ್ಕಾರ ಕಾಯ್ದೆ ರೂಪಿಸಿ ರಾಜ್ಯಪಾಲರಿಂದ ಅಂಕಿತ ಪಡೆದಿರುವುದು ಮಾದಿಗ ಸಮುದಾಯದ ಸುಮಾರು 35 ವರ್ಷಗಳ ಹೋರಾಟಕ್ಕೆ ದೊರೆತ ಐತಿಹಾಸಿಕ ಜಯವಾಗಿದೆ. ಆದರೂ ಒಳ ಮೀಸಲಾತಿ ಜಾರಿಗೊಳಿಸದೆ ನೇಮಕಾತಿ ನಡೆಸಲು ಸರ್ಕಾರ ಮುಂದಾಗಿರುವುದು ಮಾದಿಗ ಮತ್ತು ಸಂಬoಧಿತ ಜಾತಿಗಳಿಗೆ ಅನ್ಯಾಯವನ್ನುಂಟು ಮಾಡುವ ಹುನ್ನಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಕೀಲರಾದ ಕೆ.ಬಿ.ದೊಡಮನಿ ಮಾತನಾಡಿ, ಸರ್ಕಾರ ಫೆ.27 ರಂದು ಹೊರಡಿಸಿರುವ ಆದೇಶವನ್ನು ತಕ್ಷಣ ಹಿಂಪಡೆದು, ನ್ಯಾಯಮೂರ್ತಿ ನಾಗಮೋಹನ ದಾಸ್ ಆಯೋಗದ ಶಿಫಾರಸ್ಸಿನಂತೆ ಮಾದಿಗ ಮತ್ತು ಸಂಬoಧಿತ ಉಪಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಅಂಬೇಡ್ಕರ್ ಸರ್ಕಲ್‌ಗೆ ಆಗಮಿಸಿದ ಪ್ರತಿಭಟನಾಕಾರರನ್ನು ಭೇಟಿಯಾದ ತಹಶೀಲ್ದಾರ್ ಕೀರ್ತಿ ಚಾಲಕ್ ಮನವಿ ಪತ್ರ ಸ್ವೀಕರಿಸಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾಗಿರುವ ಸಾವಿರಾರು ಹುದ್ದೆಗಳನ್ನು ಒಳ ಮೀಸಲಾತಿ ಆಧಾರದಲ್ಲಿ ಭರ್ತಿ ಮಾಡಬೇಕು.ಸರ್ಕಾರ ತಕ್ಷಣ ಸ್ಪಂದಿಸಿ ಒಳ ಮೀಸಲಾತಿ ಜಾರಿಗೊಳಿಸದಿದ್ದರೆ ರಾಜ್ಯಾದ್ಯಂತ ತೀವ್ರ ಹೋರಾಟ ನಡೆಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಕೆ ನೀಡಲಾಗಿದೆ.

ಮುದ್ದೇಬಿಹಾಳ ಬಂದ್ ಹಿನ್ನೆಲೆಯಲ್ಲಿ ಬಸ್ ಸಂಚಾರ್ ಸ್ಥಗಿತಗೊಂಡಿತ್ತು.ಪಟ್ಟಣದ ಎಲ್ಲಾ ವ್ಯಾಪಾರಸ್ಥರ ಅಂಗಡಿ-ಮುಗ್ಗಟ್ಟುಗಳು ಬಂದ್ ಆಗಿದ್ದು, ವ್ಯಾಪಾರ ವ್ಯವಹಾರಗಳು ಸ್ಥಗಿತಗೊಂಡಿದ್ದವು.ಸಿಪಿಐ ಮೊಹ್ಮದಫಸಿವುದ್ದೀನ್ ಪಿಎಸ್‌ಐ ಸಂಜಯ ತಿಪರೆಡ್ಡಿ ನೇತೃತ್ವದಲ್ಲಿ ಪೊಲೀಸರು ಪ್ರಮುಖ ಸ್ಥಳಗಳಲ್ಲಿ ಬೀಡು ಬಿಟ್ಟು ಬಿಗಿ ಬಂದೋಬಸ್ತ್ ಕಲ್ಪಿಸಿದ್ದರು.ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರ ನಿವಾಸಕ್ಕೂ ಪೊಲೀಸ್ ಭದ್ರತೆ ನೀಡಲಾಗಿತ್ತು.

ಪ್ರತಿಭಟನೆಯಲ್ಲಿ ಹೋರಾಟಗಾರರಾದ ತಿಪ್ಪಣ್ಣ ದೊಡಮನಿ, ಬಾಲಚಂದ್ರ ಹುಲ್ಲೂರ,ಸುಭಾಸ ಕಟ್ಟಿಮನಿ(ಕಾಳಗಿ), ಮುತ್ತಪ್ಪ ಪೂಜಾರಿ, ಮಾರುತಿ ಸಿದ್ದಾಪೂರ, ಆನಂದ ಮುದೂರ, ಭೀಮರಾಯ ಹುಲ್ಲೂರ, ಕೆ ಬಿ ದೊಡಮನಿ,ರವಿ ಬಸರಕೋಡ,ಪರಶುರಾಮ ಶಿಂಧೆ, ಮಾಹಾಂತೇಶ ಕಂದಗನೂರ, ಹುಲಗೆಪ್ಪ ನಾಗರಬೆಟ್ಟ, ಶ್ರೀಧರ ಹಳ್ಳೂರ, ಬಸವರಾಜ ನಾಗರಬೆಟ್ಟ ಸೇರಿದಂತೆ ತಾಲ್ಲೂಕಿನಿಂದ ಆಗಮಿಸಿದ್ದ ದಲಿತಪರ ಸಂಘಟನೆ ಹೋರಾಟಗಾರರು ಪಾಲ್ಗೊಂಡಿದ್ದರು.

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ