ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಮುದ್ದೇಬಿಹಾಳ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಡಿಸಿಎಂ ಡಿ.ಕೆ.ಶಿವಕುಮಾರ ಅವರದ್ದು ಪ್ರಧಾನ ಪಾತ್ರವಾಗಿದೆ.ಕೋವಿಡ್ ಸಮಯದಲ್ಲಿ ಲಕ್ಷಾಂತರ ಜನರ ಜೀವ ಉಳಿಸಲು ಶ್ರಮಿಸಿದ ಅವರನ್ನು ಆಕ್ಸಿಜನ್ ಮ್ಯಾನ್ ಎಂದೇ ಗುರುತಿಸಲಾಗಿದೆ ಎಂದು ಎನ್.ಎಸ್.ಯೂ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸದ್ದಾಂ ಕುಂಟೋಜಿ ಹೇಳಿದರು.

ಪಟ್ಟಣದ ಬಸವೇಶ್ವರ ಸರ್ಕಲ್‌ನಲ್ಲಿ ಎನ್.ಎಸ್.ಯೂ.ಐ ಹಾಗೂ ಯುವ ಕಾಂಗ್ರೆಸ್ ಸಂಘಟನೆ ವತಿಯಿಂದ ಮಂಗಳವಾರ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಅಧಿಕಾರ ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಸಂಭ್ರಮಾಚರಣೆಯಲ್ಲಿ ಅವರು ಮಾತನಾಡಿದರು.

ಪಕ್ಷ ಸಂದಿಗ್ದ ಪರಿಸ್ಥಿತಿಯಲ್ಲಿ ಪಕ್ಷದ ಜವಾಬ್ದಾರಿ ವಹಿಸಿಕೊಂಡ ಡಿ.ಕೆ.ಶಿವಕುಮಾರ ಅವರು ಪಕ್ಷವನ್ನು ಅಧಿಕಾರಕ್ಕೆ ತರಲು ಕಷ್ಟಪಟ್ಟಿದ್ದಾರೆ ಎಂದು ಹೇಳಿದರು.

ಸರ್ಕಾರಿ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ನಾಮನಿರ್ದೇಶಿತ ಸದಸ್ಯ ರಫೀಕ ಶಿರೋಳ ಮಾತನಾಡಿ, ಕೇಂದ್ರದಲ್ಲಿ ಸಿದ್ಧರಾಮಯ್ಯ ಪ್ರಧಾನಿ ಹುದ್ದೆಗೇರಿ ರಾಜ್ಯದಲ್ಲಿ ಡಿ.ಕೆ.ಶಿವಕುಮಾರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿ ಎಂದು ಹೇಳಿದರು.

ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಮುಖAಡ ಬಾಬಾಪಟೇಲ್ ಬಿರಾದಾರ ಗುಡ್ನಾಳ, ಮುತ್ತು ಚಲವಾದಿ ಮಾತನಾಡಿದರು. ಹೆಸ್ಕಾಂ ಸಲಹಾ ಸಮೀತಿ ನಾಮನಿರ್ದೇಶಿತ ಸದಸ್ಯ ಸಿಕಂದರ್ ಜಾನ್ವೇಕರ, ಪ್ರಮುಖರಾದ ಹುಸೇನ್ ಮುಲ್ಲಾ, ರಾಮಣ್ಣಾ ನಾಯಕಮಕ್ಕಳ, ಸಮೀರ್ ದ್ರಾಕ್ಷಿ, ದಾವಲ್ ಗೊಳಸಂಗಿ, ರಂಜಾನ್ ನದಾಫ, ಅಬೂಬಕರ್ ಹಡಗಲಿ,ಕಯ್ಯೂಮ್ ಮೋಮಿನ , ಬಸವರಾಜ ಚಲವಾದಿ, ಚಂದ್ರು ಚಲವಾದಿ, ಅಭಿ ಕಲಾಲ, ಅಬ್ದುಲ್‌ಸಲಾಂ ಮುಲ್ಲಾ, ಬಂದೇನವಾಜ ಮ್ಯಾಗೇರಿ, ಮಂಜುನಾಥ ಮುರಾಳ, ಪ್ರದೀಪ್ ರಾಥೋಡ , ಇನಾಯತ್ ಮೋಮಿನ್,ರಾಜು ಪಾಟೀಲ್, ಶೇಖರ್ ಬಿರಾದಾರ ಇದ್ದರು.ಕೇಕ್ ಕತ್ತರಿಸಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಲಾಯಿತು.

Latest News

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ನಾಲತವಾಡ : ತೆರಿಗೆ ವಸೂಲಾತಿಯಲ್ಲಿ ವಿಜಯಪುರ ಜಿಲ್ಲೆಗೆ ಮೂರನೇ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಮುದ್ದೇಬಿಹಾಳ

ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ :  ವಿದ್ಯಾರ್ಥಿನಿ ಕಣ್ಣೀರು…!                                                                 ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ : ವಿದ್ಯಾರ್ಥಿನಿ ಕಣ್ಣೀರು…! ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ಮುದ್ದೇಬಿಹಾಳ : ಸನ್ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ನಾಗರಬೆಟ್ಟದ ಎಸ್.ಡಿ.ಇ

ಸೌಜನ್ಯಾ ಕಂದಕೂರಗೆ 625 ಅಂಕ :                        ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಪ್ರೌಢಶಾಲೆಗೆ ಈ ವರ್ಷವೂ ಸ್ಟೇಟ್ ರ‍್ಯಾಂಕ್..!

ಸೌಜನ್ಯಾ ಕಂದಕೂರಗೆ 625 ಅಂಕ : ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಪ್ರೌಢಶಾಲೆಗೆ ಈ ವರ್ಷವೂ ಸ್ಟೇಟ್ ರ‍್ಯಾಂಕ್..!

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿಯೊಬ್ಬಳು ಈ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ಮುದ್ದೇಬಿಹಾಳ : ಹಿಂದುಳಿದ,ಬಡವರ ಮಕ್ಕಳಿಗೆ ಉಚಿತ,ರಿಯಾಯಿತಿ ಶಿಕ್ಷಣ ಕೊಟ್ಟು ಒಳ್ಳೆಯ ಫಲಿತಾಂಶ ತಂದ ಮಕ್ಕಳನ್ನು

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-1 ರಲ್ಲಿ ಅಮೋಘ ಸಾಧನೆ ಮಾಡಿದ್ದಾರೆ.ಕಾಲೇಜಿನ ವಿದ್ಯಾರ್ಥಿಗಳು ಈ ವರ್ಷವೂ ರಾಜ್ಯಮಟ್ಟದಲ್ಲಿ ರ‍್ಯಾಂಕ್ ಪಡೆದುಕೊಳ್ಳುವ ಮೂಲಕ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಲಕ್ಷ್ಮೀ ಅಡಗಿಮನಿ 592 ಅಂಕ ಪಡೆದು ರಾಜ್ಯಕ್ಕೆ ಆರನೇ ಸ್ಥಾನ ಪಡೆದುಕೊಂಡಿದ್ದು ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಗಳಿಸಿದ್ದಾಳೆ.ಭಾಗ್ಯಾ ಹೊಸಮನಿ ಹಾಗೂ ನಂದಿತಾ ರೆಡ್ಡಿ 591ಅಂಕ ಪಡೆದು ದ್ವಿತೀಯ,ಸಂಜನಾ ಡಿ. 590

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ ಸಮಾಜದ ಬಾಂಧವರನ್ನು ಸೇರಿಕೊಂಡು ಅದ್ದೂರಿಯಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ. ಪಟ್ಟಣದ ಖಾಸ್ಗತೇಶ್ವರ ಮಠದಲ್ಲಿ ಶುಕ್ರವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.ಬಸವ ಜಯಂತಿಯ ದಿನದಂದು ಕಿಲ್ಲಾದಲ್ಲಿರುವ ಹೊಸಮಠದಲ್ಲಿ ಸಂಜೆ 4ಕ್ಕೆ ಧರ್ಮಸಭೆ ನಡೆಸಿ ಅಲ್ಲಿ ಬಸವಣ್ಣನವರ ಕುರಿತು ಉಪನ್ಯಾಸವನ್ನು ನುರಿತ ಅನುಭಾವಿಗಳಿಂದ ನಡೆಸಲಾಗುವುದು.ಧರ್ಮಸಭೆಗೆ ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ