ಮುದ್ದೇಬಿಹಾಳ : ಪಟ್ಟಣದ ವಿದ್ಯಾನಗರದ ಶಿರವಾಳ ಲೇಔಟ್ದಲ್ಲಿರುವ ಪ್ರಗತಿ ಜೆಸಿ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಚಿನ್ಮಯ ಜೆಸಿ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಇದೇ ಪ್ರಥಮ ಬಾರಿಗೆ ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ-2026-27 ಹಮ್ಮಿಕೊಳ್ಳಲಾಗಿದೆ ಎಂದು ಶಾಲೆಯ ಅಧ್ಯಕ್ಷ ಡಾ.ವೀರೇಶ ಪಾಟೀಲ ಹೇಳಿದರು.
ಪಟ್ಟಣದ ಚಿನ್ಮಯ ಜೆಸಿ ಶಾಲೆಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.4-9 ತರಗತಿ ಮಕ್ಕಳಿಗಾಗಿ ಮಾ.15 ರಂದು ಬೆಳಗ್ಗೆ 11 ರಿಂದ 12.30ರವರೆಗೆ ಪರೀಕ್ಷೆ ನಡೆಯಲಿದೆ.ಮಾ.14 ಹೆಸರು ನೋಂದಾಯಿಸಿಕೊಳ್ಳಲು ಕಡೆಯ ದಿನವಾಗಿದೆ ಎಂದು ತಿಳಿಸಿದರು.
ಪರೀಕ್ಷೆಯಲ್ಲಿ ಆಆಯ್ಕೆಯಾಗುವ ಮೊದಲ ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಒಂದು ವರ್ಷದ ಉಚಿತ ಶಿಕ್ಷಣ ನೀಡಲಾಗುತ್ತದೆ.ಎರಡನೇ ಸ್ಥಾನ ಪಡೆಯುವ ವಿದ್ಯಾರ್ಥಿಗಳಿಗೆ ಶೇ.50ರಷ್ಟು ಶುಲ್ಕದಲ್ಲಿ ರಿಯಾಯಿತಿ , ಮೂರನೇ ಸ್ಥಾನ ಪಡೆಯುವ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಶುಲ್ಕದಲ್ಲಿ ರಿಯಾಯಿತಿ ನೀಡಲಾಗುತ್ತದೆ.4,5 ಹಾಗೂ ಆರನೇ ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಕ್ರಮವಾಗಿ 2000,1000 ಹಾಗೂ 500 ರೂ.ನಗದು ಬಹುಮಾನ ನೀಡಲಾಗುತ್ತದೆ ಎಂದು ತಿಳಿಸಿದರು.
ಸಂಸ್ಥೆಯ ನಿರ್ದೇಶಕ ಸತೀಶ ಓಸ್ವಾಲ್ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಇತರೆ ಸಂಸ್ಥೆಗಳAತೆ ನಾವೂ ಪೈಪೋಟಿ ನಡೆಸಬೇಕಾಗಿದೆ.ಅದಕ್ಕಾಗಿಯೇ ಈ ಬಾರಿ ಸಾರ್ವಜನಿಕವಾಗಿ ಸ್ಪರ್ಧಾತ್ಮಕ ಪರೀಕ್ಷೆ ಆಯೋಜಿಸಲಾಗಿದೆ.ಸಮಾನ ಮನಸ್ಕ ಗೆಳೆಯರ ಬಳಗದವರು ಸೇರಿಕೊಂಡು ಮುದ್ದೇಬಿಹಾಳದಲ್ಲಿ ಜೆಸಿ ಶಾಲೆಯನ್ನು ಆರಂಭಿಸಿದ್ದೇವೆ.ಗುಣಮಟ್ಟದ ಶಿಕ್ಷಣ ನಮ್ಮ ಮಕ್ಕಳಿಗೆ ದೊರೆಯಬೇಕು ಎಂಬ ಉದ್ದೇಶದಿಂದ ಆರಂಭಿಸಿರುವ ನಮ್ಮ ಸಂಸ್ಥೆ ಮಕ್ಕಳು ಕಳೆದ ಹತ್ತು ವರ್ಷಗಳಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಪಡೆದುಕೊಳ್ಳುತ್ತಾ ಬರುತ್ತಿದ್ದಾರೆ ಎಂದು ಹೇಳಿದರು.
ಶಾಲೆಯ ಮುಖ್ಯಗುರು ಆನಂದ ಓಗಿ ಮಾತನಾಡಿ, ಪರೀಕ್ಷೆಯ ಸ್ವರೂಪ 60 ಅಂಕಗಳದ್ದಾಗಿದ್ದು ಇಂಗ್ಲಿಷ್, ಗಣಿತ,ವಿಜ್ಞಾನ,ಮಾನಸಿಕ ಸಾಮರ್ಥ್ಯ ಹಾಗೂ ಸಾಮಾನ್ಯ ಜ್ಞಾನದ್ದಾಗಿರುತ್ತದೆ.ಪ್ರತಿ ಪ್ರಶ್ನೆಯ ಸರಿ ಉತ್ತರಕ್ಕೆ ನಾಲ್ಕು ಅಂಕ, ಪ್ರತಿ ತಪ್ಪು ಉತ್ತರಕ್ಕೆ ಒಂದು ಅಂಕ ಕಡಿತಗೊಳಿಸಲಾಗುತ್ತದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ನಿರ್ದೇಶಕರಾದ ಶ್ರೀನಿವಾಸ ಇಲ್ಲೂರ,ಪ್ರಭುದೇವ ಕಲ್ಬುರ್ಗಿ,ನೀಲಕಂಠರಾವ ನಾಡಗೌಡ್ರ,ಮುರಳೀಕೃಷ್ಣ ಬುಡ್ಡೋಡಿ,ರವಿ ತಡಸದ,ಸುನೀಲ ಇಲ್ಲೂರ,ವಿಲಾಸರಾವ ದೇಶಪಾಂಡೆ ,ಮುಖ್ಯಗುರುಮಾತೆ ಸಿಸ್ಟರ್ ಸ್ಟೆಲ್ಲಾ ಇದ್ದರು.
ಪರೀಕ್ಷೆಗೆ ಹೆಸರು ನೋಂದಾಯಿಸಲು ಮೊಬೈಲ್ ಸಂಖ್ಯೆ: 9481748268, 9731173194, 9448302128, 9449154555 ಸಂಪರ್ಕಿಸಬಹುದಾಗಿದೆ.







