ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ: ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ: ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಮುದ್ದೇಬಿಹಾಳ : ದೇಶವನ್ನು ಆಳುತ್ತಿರುವ ಪ್ರಧಾನ ನರೇಂದ್ರ ಮೋದಿ ಅವರಿಗೆ ಬಡವರು,ಮಧ್ಯಮ ವರ್ಗದವರದ್ದು ಆಲೋಚನೆ ಇಲ್ಲ.ಅಧಿಕಾರಕ್ಕೆ ಬಂದ ಮೊದಲ ದಿನದಿಂದ ಇದುವರೆಗೂ ಏನೂ ಮಾಡಿಲ್ಲ.ಸಿಲಿಂಡರ್ ದೊರೆಯದಂತಹ ಪರಿಸ್ಥಿತಿ ತಂದಿಟ್ಟಿದ್ದು ತುರ್ತು ಸ್ಥಿತಿ ನಿಭಾಯಿಸಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಸಚೀನಗೌಡ ಪಾಟೀಲ ಹೇಳಿದರು.

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಎನ್.ಎಸ್.ಯೂ.ಐ., ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್‌ನಿAದ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಗುರುವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಇರಾನ್, ರಷ್ಯಾ ಬೆಲೆ ಏರಿಕೆ ಮಾಡಿದರೂ ನಮ್ಮಲ್ಲಿ ಸಿಲಿಂಡರ್ ಸಿಗದೇ ಇರುವ ಪರಿಸ್ಥಿತಿ ತಂದಿಟ್ಟಿದ್ದಾರೆ.ಎರಡು ಸಾವಿರ ರೂ. ಕೊಟ್ಟರೂ ಸಿಲಿಂಡರ್ ಇಂದು ದೊರೆಯದ ಪರಿಸ್ಥಿತಿ ನಿರ್ಮಾಣವಾಗಿದೆ.ಇವರು ಪ್ರಧಾನಿ ಹುದ್ದೆಯಲ್ಲಿ ಮುಂದುವರೆಯಲು ಅರ್ಹರಲ್ಲ.ರಾಜೀನಾಮೆ ಕೊಟ್ಟು ಮನೆಯಲ್ಲಿ ಕುಳಿತುಕೊಳ್ಳಿ ಎಂದು ಆಗ್ರಹಿಸಿದರು.

ಗ್ಯಾರಂಟಿ ಸಮೀತಿ ಜಿಲ್ಲಾ ಉಪಾಧ್ಯಕ್ಷ ಸದ್ದಾಂ ಕುಂಟೋಜಿ ಮಾತನಾಡಿ, ದೇಶದ ಪ್ರಧಾನ ಮಂತ್ರಿ ನಮ್ಮ ರಾಷ್ಟçದ ಮರ್ಯಾದೆಯನ್ನು ಅಂತರಾಷ್ಟಿçÃಯ ಮಟ್ಟದಲ್ಲಿ ಹರಾಜು ಹಾಕಿದ್ದಾರೆ.ದೇಶದ ನಾಗರಿಕರಿಗೆ ತಡೆಯಿಲ್ಲದಂತೆ ಸಿಲಿಂಡರ್ ಗ್ಯಾಸ್ ಪೂರೈಸಲು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಗ್ಯಾರಂಟಿ ಸಮೀತಿ ಸದಸ್ಯ ಬುಡ್ಡೇಸಾಬ ಚಪ್ಪರಬಂದ ಮಾತನಾಡಿ, ಮೋದಿ ಮೋದಿ ಎಂದು ಜಪಿಸುವ ಬಿಜೆಪಿಯ ಅಂಧ ಭಕ್ತರು ಈಗ ಎಲ್ಲಿದ್ದಾರೆ ? ಮೋದಿ ಮಾಡುತ್ತಿರುವ ಕೆಲಸಗಳನ್ನು ಅವರು ತಿಳಿದುಕೊಳ್ಳಬೇಕು.ಮೋದಿ ಚಹಾ ಮಾರಿದ್ದಾರೋ ಗೊತ್ತಿಲ್ಲ.ಆದರೆ ದೇಶವನ್ನು ಮಾರುವುದಂತೂ ಗ್ಯಾರಂಟಿ ಎಂದು ಟೀಕಿಸಿದರು.

ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಕ್ಷತಾ ಚಲವಾದಿ,ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಬಸವರಾಜ ಭಜಂತ್ರಿ, ಮಹ್ಮದರಫೀಕ ಶಿರೋಳ,ರಾಮಣ್ಣ ರಾಜನಾಳ, ರಾಮಣ್ಣ ನಾಯಕಮಕ್ಕಳ,ಲಕ್ಷö್ಮಣ ಲಮಾಣಿ, ಅಬ್ದುಲಸಲಾಂ ಮುಲ್ಲಾ, ಸಮೀರ ದ್ರಾಕ್ಷಿ,ಸುಜಾತಾ ಸಿಂಧೆ, ಮಾಬುಬಿ ಬಾಗವಾನ,ಶೋಭಾ ಶೆಳ್ಳಗಿ, ನೀಲಮ್ಮ ಚಲವಾದಿ,ಕಮಲಾ ಭಜಂತ್ರಿ, ಶಿವಲೀಲಾ ಬಸರಕೋಡ,ಮಮ್ತಾಜ ಮುÄಲ್ಲಾ ಮೊದಲಾದವರು ಇದ್ದರು.ಇದೇ ವೇಳೆ ಖಾಲಿ ಸಿಲಿಂಡರ್‌ಗಳಿಗೆ ಪೂಜೆ ಸಲ್ಲಿಸಿ ವೃತ್ತದಲ್ಲಿಯೆ ಕಟ್ಟಿಗೆಗಳನ್ನು ಒಲೆಯಲ್ಲಿಟ್ಟು ರೊಟ್ಟಿ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ