ಮೀನುಗಾರಿಕೆ ಕ್ಷೇತ್ರದಲ್ಲಿ ವಿಫುಲ ಉದ್ಯೋಗವಕಾಶ-ಶಾಸಕ ನಾಡಗೌಡ

ಮೀನುಗಾರಿಕೆ ಕ್ಷೇತ್ರದಲ್ಲಿ ವಿಫುಲ ಉದ್ಯೋಗವಕಾಶ-ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮ ಭಾಗದ ನಾರಾಯಣಪೂರ ಹಾಗೂ ಆಲಮಟ್ಟಿ ಜಲಾಶಯದ ಮಧ್ಯೆದಲ್ಲಿ ಬರುವ ಕೃಷ್ಣಾ ನದಿ ತೀರದಲ್ಲಿ ವ್ಯಾಪಕವಾಗಿ ಮೀನುಗಾರಿಕೆಗೆ ಅವಕಾಶ ಇದ್ದು ಯುವಕರು ಈ ಕ್ಷೇತ್ರದಲ್ಲಿ ತರಬೇತಿ ಪಡೆದುಕೊಂಡರೆ ನಿರುದ್ಯೋಗ,ಬಡತನ ನಿವಾರಣೆ ಮಾಡಲು ಸಾಧ್ಯವಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿ ಶನಿವಾರ ಸನ್ 2025-26ಸಾಲಿನ ಜಿಪಂ ಲಿಂಕ್ ಡಾಕ್ಯುಮೆಂಟ್ ಯೋಜನೆಯಡಿ ಮೀನುಗಾರಿಕಾ ಇಲಾಖೆಯ ನೂತನ ಕಚೇರಿಯ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮೀನುಮರಿಗಳ ಉತ್ಪಾದಕ ಜಾಗೆಯನ್ನು ನಾರಾಯಣಪೂರ ಗಡಿ ಭಾಗದ ಸಿದ್ದಾಪುರದಲ್ಲಿ ಗುರುತಿಸಿ 75 ಎಕರ ಜಮಿನು ಸ್ವಾಧೀನಗೊಳಿಸಲಾಗಿದೆ.ಆ ಸಮಯದಲ್ಲಿ ಸಿಂಧನೂರ ಶಾಸಕರಾಗಿದ್ದ ವೆಂಕಟರಾವ ನಾಡಗೌಡರ ಮೂಲಕ ಸೀಡ್ ಫಾರ್ಮ್ಗೆ ಒಂಭತ್ತು ಕೋಟಿ ರೂ.ಮಂಜೂರು ಮಾಡಿಸಿದ್ದೇವು.ಅದರ ಅಭಿವೃದ್ಧಿಗೆ ಹಣ ಕೊಟ್ಟಿದ್ದೇವು.ಆದರೆ ಸಮರ್ಪಕ ಕೆಲಸ ಆಗಲಿಲ್ಲ ಎಂದು ಹೇಳಿದರು.

ನಮ್ಮ ಭಾಗದಲ್ಲಿ ಆಂಧ್ರ ಮತ್ತು ತಮಿಳುನಾಡು ಜನ ಮೀನುಗಾರಿಕೆ ಮಾಡುತ್ತಾರೆ.ಅವರನ್ನು ಗುತ್ತಿಗೆದಾರರು ತಂದು ಕೆಲಸಕ್ಕೆ ಹಚ್ಚಿ ಬುಟ್ಟಿ ಕೊಡಿಸುವುದು,ಬಲೆ ಕೊಡಿಸಿ ಕೆಜಿ ಮೀನಿಗೆ 50-60ರೂ. ಕೊಡುತ್ತಿದ್ದರು.ಆದರೆ ಮಾರುಕಟ್ಟೆಯಲ್ಲಿ 250-300 ರೂ ಮಾರಾಟ ಮಾಡುತ್ತಿದ್ದರು.ಮಧ್ಯವರ್ತಿಗಳು ಇದರ ಲಾಭ ಪಡೆದುಕೊಳ್ಳುತ್ತಿದ್ದರು.ನಮ್ಮ ಭಾಗದ ಯಾವುದೇ ಸೊಸೈಟಿಯಲ್ಲಿ ಮೀನುಹಿಡಿಯಲು ಆಸಕ್ತಿ ಕಡಿಮೆ. ಹಿಂದುಳಿದ ಜನಾಂಗ ಇದ್ದಾರೆ.ಎಷ್ಟೊ ಜನಕ್ಕೆ ಭೂಮಿಯಿಲ್ಲ.ಈ ಜಲಾಶಯಗಳು ದೇವರು ಕೊಟ್ಟ ವರದಾನ.ಮೀನುಗಾರಿಕೆ ತರಬೇತಿ ಪಡೆದರೆ ಆರ್ಥಿಕವಾಗಿ ಆದಾಯ ಬರುತ್ತದೆ ಎಂದು ಹೇಳಿದರು.
ಇಲಾಖೆಯ ಸಹಾಯಕ ನಿರ್ದೇಶಕ ಶರಣಗೌಡ ಬಿರಾದಾರ ಮಾತನಾಡಿ, ಕಾಂಗ್ರೆಸ್ ಸರ್ಕಾರದಲ್ಲಿ ಮೀನುಗಾರಿಕಾ ಉತ್ಪಾದನಾ ಕೇಂದ್ರ ಆಲಮಟ್ಟಿ ಜಲಾಶಯ ವ್ಯಾಪ್ತಿಯಲ್ಲಿ ಆರಂಭಿಸಲಾಗಿದೆ.ಮೀನುಗಾರಿಕೆ ಕೌಶಲ್ಯಾಭಿವೃದ್ಧಿ ಕೇಂದ್ರದ ಆರಂಭಕ್ಕೆ ಒತ್ತು ನೀಡಲಾಗಿದೆ.ಮೀನುಮರಿಗಳನ್ನು ಉತ್ಪಾದಿಸುವ ಹೊಸಪೇಟೆ, ಶಿವಮೊಗ್ಗ ನಮ್ಮ ರೈತರು ಹೋಗಬೇಕಿತ್ತು.ಆದರೆ ಸಿದ್ದಾಪುರದ ಮೀನುಗಾರಿಕಾ ಉತ್ಪಾದನಾ ಕೇಂದ್ರದಿAದ ಶೇ. 80 ರಷ್ಟು ಮರಿಗಳು ಉಳಿಯುತ್ತವೆ ಎಂದು ಹೇಳಿದರು.

ಮೀನುಗಾರಿಕಾ ಇಲಾಖೆಯ ಉಪ ನಿರ್ದೇಶಕ ಇರ್ಫಾನ್ ಭಾಂಗಿ ಮಾತನಾಡಿ, ಜಿಪಂನಿAದ 50 ಲಕ್ಷ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣಕ್ಕೆ ಹೊಸ ಜಾಗೆಯನ್ನು ಶಾಸಕ ಸಿ.ಎಸ್.ನಾಡಗೌಡರು ಕಾಳಜಿಯಿಂದ ನೀಡಿದ್ದಾರೆ.ಕೆ.ಆರ್.ಐ.ಡಿ.ಎಲ್ ಮುಂದುವರೆದ ಕಾಮಗಾರಿ ಎಂದು 50 ಲಕ್ಷ ರೂ.ಗಳನ್ನು ಇಲಾಖೆ ನೀಡಿದೆ ಎಂದು ಹೇಳಿದರಲ್ಲದೇ ವಿಶೇಷ ಘಟಕದ ಯೋಜನೆಯಡಿ ಒಂದು ವಾಹನ ಮೀನುಗಾರರಿಗೆ ಮಂಜೂರಿಯಾಗಿದೆ.ಮೀನುಗಾರರಿಗೆ ಲೈಫ್ ಜಾಕೆಟ್, ಬಲಿ ನೀಡಲಾಗುತ್ತದೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ,ಕಾಂಗ್ರೆಸ್ ಹಿರಿಯ ಮುಖಂಡ ಎಂ.ಬಿ.ನಾವದಗಿ, ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಕೆಪಿಸಿಸಿ ಸದಸ್ಯ ರಮೇಶ ಓಸ್ವಾಲ,ವೀರಶೈವ ಲಿಂಗಾಯತ ಸಮಾಜದ ಮುಖಂಡ ಪ್ರಭುರಾಜ ಕಲ್ಬುರ್ಗಿ , ಉದ್ಯಮಿ ಶರಣು ಸಜ್ಜನ,ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕರಾದ ಸತೀಶ ಓಸ್ವಾಲ್, ರಾಜು ಕರಡ್ಡಿ,ಸಂಗನಗೌಡ ಬಿರಾದಾರ, ಡಾ.ವಿಜಯಕುಮಾರ ಗೂಳಿ,ಸದು ಮಠ,ನಾಗರಾಜ ಬಿರಾದಾರ, ಪ್ರಥಮ ದರ್ಜೆ ಗುತ್ತಿಗೆದಾರ ಸುರೇಶಗೌಡ ಪಾಟೀಲ ಇಂಗಳಗೇರಿ,ಲಕ್ಷö್ಮಣ ಲಮಾಣಿ ಸೇರಿದಂತೆ ಹಲವರು ಇದ್ದರು.ವಿಶೇಷ ಘಟಕ ಯೋಜನೆಯಡಿ ಗೆದ್ದಲಮರಿಯ ಶಾಂತಾಬಾಯಿ ಲಮಾಣಿ ಅವರಿಗೆ ಮೀನುಗಾರಿಕೆಗಾಗಿ ಗೂಡ್ಸ್ ಕ್ಯಾಬ್‌ನ್ನು ವಿತರಿಸಲಾಯಿತು.

Latest News

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷದ ಎಸ್.ಟಿ.ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರ ಶಿಫಾರಸ್ಸಿನ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮೀತಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಅಧ್ಯಕ್ಷ ಎಂ.ವಿಜಯನಾಯಕ ನೇಮಕ ಮಾಡಿ ಆದೇಶಿಸಿದ್ದಾರೆ.

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ ದಯಾನಂದಪುರಿ ಸ್ವಾಮೀಜಿಗಳ 36ನೇ ಪಟ್ಟಾಭಿಷೇಕ ಮಹೋತ್ಸವವನ್ನು ಮೇ.8 ಹಾಗೂ 9 ರಂದು ಬಾದಾಮಿ ತಾಲ್ಲೂಕು ಬನಶಂಕರಿ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ದೇವಾಂಗ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ ಚಿತ್ತರಗಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಬುಧವಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಹಂಪಿ ಹೇಮಕೂಟ ಶ್ರೀ ಗಾಯತ್ರಿಪೀಠದ