ಕೋಚಿಮುಲ್ ಕಾಂಗ್ರೆಸ್ ಸರಕಾರದ ಕೃಪಾಪೋಷಿತ ನಾಟಕ ಮಂಡಳಿ: ಆರೋಪ

ಕೋಚಿಮುಲ್ ಕಾಂಗ್ರೆಸ್ ಸರಕಾರದ ಕೃಪಾಪೋಷಿತ ನಾಟಕ ಮಂಡಳಿ: ಆರೋಪ

ಕೋಲಾರ: ಕೋಚಿಮುಲ್ ಆಡಳಿತ ಮಂಡಳಿಗೆ ಮೂರು ತಿಂಗಳಲ್ಲಿ ಚುನಾವಣೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿದರು ಚುನಾವಣೆ ನಡೆಸುತ್ತಿಲ್ಲ ಎಂದು ಆರೋಪಿಸಿ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ವಿ ನಾಗರಾಜ್ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಅಕ್ರಂ ಪಾಷಗೆ ಮನವಿ ನೀಡಿ ಒತ್ತಾಯಿಸಿದರು.

ನಗರದ ಹೊರವಲಯದ ಜಿಲ್ಲಾಧಿಕಾರಿ ಕಛೇರಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಆಗಮಿಸಿ ಕೋಚಿಮುಲ್ ಆಡಳಿತ ಮಂಡಳಿಗೆ ಕೂಡಲೇ ಚುನಾವಣೆ ನಡೆಸುವಂತೆ ಆದೇಶವನ್ನು ನೀಡುವಂತೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ವಿ.ನಾಗರಾಜ್ ಮಾತನಾಡಿ ಕೋಚಿಮುಲ್ ಆಡಳಿತ ಮಂಡಳಿಯ ಅಧಿಕಾರ ಅವಧಿಯು ಕಳೆದ ಮೇ 12 ಕ್ಕೆ ಮುಕ್ತಾಯವಾಗಿದೆ ಆದರೂ ಆಡಳಿತ ಮಂಡಳಿಯು ಕಾಂಗ್ರೆಸ್ ಸರಕಾರದ ಕೃಪಾ ಪೋಷಿಕ ನಾಟಕ ಮಂಡಳಿ ರೀತಿಯಲ್ಲಿ ವರ್ತಿಸುತ್ತಿದೆ ಆಡಳಿತ ಮಂಡಳಿಯಲ್ಲಿ ಯಾವುದೇ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲು ಅಂಕಾರವಿಲ್ಲ ಈ ಬಗ್ಗೆ ಸರ್ಕಾರವು ಸ್ಪಷ್ಟ ಆದೇಶವನ್ನು ಹೊರಡಿಸಿದೆ ಆದರೂ ವಿಶೇಷ ಸಾಮಾನ್ಯ ಸಭೆ ಸೇರಿದಂತೆ ಹಣಕಾಸಿನ ವ್ಯವಹಾರಗಳನ್ನು ನಡೆಸಿದ್ದಾರೆ ಎಂದು ಆರೋಪಿಸಿದರು.

ಕೋಚಿಮುಲ್ ಆಡಳಿತ ಮಂಡಳಿಯನ್ನು ವಜಾ ಮಾಡಿ ಕೂಡಲೇ ಮೂರು ತಿಂಗಳೊಳಗೆ ಚುನಾವಣೆ ನಡೆಸಬೇಕು ಎಂದು ಕಳೆದ ಜುಲೈ 07 ರಂದು ಹೈಕೋರ್ಟ್ ಆದೇಶ ನೀಡಿದ್ದಾರೆ ಹಿಂದೆ ರಿಟರ್ನಿಂಗ್ ಅಧಿಕಾರಿಯಿಂದ ಕರಡು ಮತದಾರರ ಪಟ್ಟಿ ಪ್ರಕಟ ಮಾಡಿ ಚುನಾವಣಾ ಪ್ರಕ್ರಿಯೆ ಪ್ರಾರಂಭವಾಗಿ ಮಾ.೨೧ಕ್ಕೆ ಸ್ಥಗಿತಗೊಂಡಿದೆ. ಆ ಹಂತದಿಂದಲೇ ಚುನಾವಣಾ ಪ್ರಕ್ರಿಯೆ ಪ್ರಾರಂಭಿಸಬೇಕು ಎಂಬುದನ್ನು ಸೂಚಿಸಿದ್ದರು ಇದುವರೆಗೂ ಚುನಾವಣೆಗೆ ಸಂಬಂಧಿಸಿದ ಸಣ್ಣ ಪ್ರಯತ್ನವನ್ನು ಸಂಬಂಧಿಸಿದ ಅಧಿಕಾರಿಗಳು ಮಾಡಿಲ್ಲ ಎಂದರು.

ಚಿತ್ರದುರ್ಗ ಜಿಲ್ಲಾ ಸಹಕಾರಿ ಡಿಸಿಸಿ ಬ್ಯಾಂಕ್ ಮತ್ತು ಕೋಚಿಮುಲ್ ಸಹಕಾರಿ ಸಂಸ್ಥೆಗೆ ಏಕಕಾಲದಲ್ಲಿ ಚುನಾವಣೆ ನಡೆಸಬೇಕು ಎಂದು ಆದೇಶ ನೀಡಿದರು ಚಿತ್ರದುರ್ಗದಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆ ನಡೆಸಿದ್ದಾರೆ ಕೋಚಿಮುಲ್ ಆಡಳಿತ ಮಂಡಳಿಗೆ ಯಾಕೆ ಚುನಾವಣೆ ನಡೆಸಲಿಲ್ಲ ಇವತ್ತು ಕೋಚಿಮುಲ್ ಆಡಳಿತ ಮಂಡಳಿಯಲ್ಲಿನ ಏಕಪಕ್ಷೀಯ ನಿರ್ಧಾರದಿಂದ ನೇಮಕಾತಿಯ ಉದ್ದೇಶಕ್ಕಾಗಿ ಇಡಿ ತನಿಖಾ ಸಂಸ್ಥೆಯು ದಾಳಿ ಮಾಡಿದೆ ಇಂತಹ ಘಟನೆಗಳು ಇತಿಹಾಸದಲ್ಲಿ ಯಾವತ್ತೂ ಕೂಡ ನಡೆದಿಲ್ಲ ಒಂದು ಸಹಕಾರಿ ಸಂಸ್ಥೆಗೆ ಹೈಕೋರ್ಟ್ ಆದೇಶವನ್ನು ಪಾಲಿಸಲಿಲ್ಲ ಸರಕಾರದ ಒತ್ತಡದಿಂದಾಗಿ ಜಿಲ್ಲೆಯ ಹೈನುಗಾರಿಕೆಯಿಂದ ಜೀವನ ನಡೆಸುವ ರೈತರನ್ನು ಬೀದಿಗೆ ತರಲಾಗುತ್ತಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ಮುನಿಯಪ್ಪ ಮಾತನಾಡಿ ಬಾಗೇಪಲ್ಲಿಯಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಒಕ್ಕೂಟವನ್ನು ಪ್ರತ್ಯೇಕ ಮಾಡಲು ಅಂಗೀಕಾರವಾಗಿದೆ ಕೂಡಲೇ ಆಡಳಿತ ಮಂಡಳಿಯನ್ನು ವಜಾ ಮಾಡಿ ಹೈಕೋರ್ಟ್ ಆದೇಶವನ್ನು ಜಾರಿ ಮಾಡಬೇಕು ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳ ಸಂಸದರು, ಶಾಸಕರ ನೇತೃತ್ವದಲ್ಲಿ ಹಾಲು ಉತ್ಪಾದಕರು ಉಗ್ರವಾದ ಹೋರಾಟಕ್ಕೆ ಹೋಗಬೇಕಾಗುತ್ತದೆ ಕೂಡಲೇ ಆದೇಶವನ್ನು ಪಾಲನೆ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಅಕ್ರಂ ಪಾಷಾ, ಮಾತನಾಡಿ ಸಂಬಂಧಿಸಿದವರ ಗಮನಕ್ಕೆ ತಂದು ಮುಂದಿನ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು ವಿವಿಧ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಇದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ