SSLC ಪರೀಕ್ಷೆ : ಶಿಕ್ಷಣ ಸಚಿವರಿಗೆ ಅಭಿನಂದನೆ ತಿಳಿಸಿದ ವಿದ್ಯಾರ್ಥಿನಿ

SSLC ಪರೀಕ್ಷೆ : ಶಿಕ್ಷಣ ಸಚಿವರಿಗೆ ಅಭಿನಂದನೆ ತಿಳಿಸಿದ ವಿದ್ಯಾರ್ಥಿನಿ

ಮುದ್ದೇಬಿಹಾಳ : ಪಟ್ಟಣದ ಐದು ಪರೀಕ್ಷಾ ಕೇಂದ್ರಗಳು ಸೇರಿದಂತೆ ಮುದ್ದೇಬಿಹಾಳ,ತಾಳಿಕೋಟಿ,ನಾಗರಬೆಟ್ಟ ಪರೀಕ್ಷಾ ಕೇಂದ್ರಗಳಲ್ಲಿ ಮೊದಲ ದಿನದ ಪರೀಕ್ಷೆಗಳು ಅತ್ಯಂತ ಬಿಗಿ ಭದ್ರತೆಯಲ್ಲಿ ಕಟ್ಟುನಿಟ್ಟಾಗಿ ನಡೆದಿರುವುದಾಗಿ ವರದಿಯಾಗಿದೆ.

ಪಟ್ಟಣದ ವಿಬಿಸಿ ಪ್ರೌಢಶಾಲೆ,ಜ್ಞಾನ ಭಾರತಿ ವಿದ್ಯಾಮಂದಿರ, ಚಿನ್ಮಯ ಜೆ.ಸಿ.ಆಂಗ್ಲಮಾಧ್ಯಮ ಪ್ರೌಢಶಾಲೆ,ಸ್ವಾಮಿ ವಿವೇಕಾನಂದ ಪ್ರೌಢಶಾಲೆ ಶಿರೋಳ,ಅಭ್ಯುದಯ ಆಂಗ್ಲಮಾಧ್ಯಮ ಪ್ರೌಢಶಾಲೆ ಸೇರಿದಂತೆ ತಾಲ್ಲೂಕಿನ ಗ್ರಾಮೀಣ ಭಾಗದ ಪರೀಕ್ಷಾ ಕೇಂದ್ರಗಳಲ್ಲೂ ಯಾವುದೇ ಗೊಂದಲವಿಲ್ಲದೇ ಕಟ್ಟುನಿಟ್ಟಾಗಿ ಪರೀಕ್ಷೆಗಳು ನಡೆದಿವೆ ಎಂದು ಎಸ್.ಎಸ್.ಎಲ್.ಸಿ ಪರೀಕ್ಷೆಯ ಅಧ್ಯಕ್ಷರು,ತಹಶೀಲ್ದಾರ್ ಕೀರ್ತಿ ಚಾಲಕ ತಿಳಿಸಿದರು.

ಒಟ್ಟು 6356 ವಿದ್ಯಾರ್ಥಿಗಳು ಪ್ರಥಮ ಭಾಷೆ ಪರೀಕ್ಷೆಗೆ ನೋಂದಾಯಿಸಿಕೊAಡಿದ್ದು ಅದರಲ್ಲಿ 6233 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರೆ 123 ವಿದ್ಯಾರ್ಥಿಗಳು ಗೈರು ಉಳಿದಿದ್ದಾರೆ ಎಂದು ಎಸ್.ಎಸ್.ಎಲ್.ಸಿ ಪರೀಕ್ಷೆಯ ನೋಡಲ್ ಅಧಿಕಾರಿ ಮೊಹ್ಮದಇಲಿಯಾಸ್ ಬಾಗವಾನ ಮಾಹಿತಿ ನೀಡಿದರು.

ಅತೀ ಸೂಕ್ಷö್ಮ ಪರೀಕ್ಷಾ ಕೇಂದ್ರಗಳೆoದು ಗುರುತಿಸಲಾಗಿದ್ದ ಬಳಬಟ್ಟಿ ಸರಕಾರಿ ಪ್ರೌಢಶಾಲೆ,ಇಂಗಳಗೇರಿ ಸರ್ಕಾರಿ ಪ್ರೌಢಶಾಲೆಗಳಿಗೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.ಮುದ್ದೇಬಿಹಾಳ ಪಿಎಸ್‌ಐ ಸಂಜಯ ತಿಪರೆಡ್ಡಿ ತಮ್ಮ ಸಿಬ್ಬಂದಿಯೊoದಿಗೆ ಬಳಬಟ್ಟಿ ಪರೀಕ್ಷಾ ಕೇಂದ್ರದಲ್ಲಿ ಎರಡು ಗಂಟೆಗಳ ಕಾಲ ಬೀಡುಬಿಟ್ಟು ಹೊರಗಿನ ಜನರನ್ನು ನಿಯಂತ್ರಿಸಿದರಲ್ಲದೇ ಯಾವುದೇ ಗೊಂದಲಗಳಿಗೆ ಆಸ್ಪದ ದೊರೆಯದಂತೆ ನೋಡಿಕೊಂಡರು.

ತಾಳಿಕೋಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಇಂಗಳಗೇರಿ ಪರೀಕ್ಷಾ ಕೇಂದ್ರಕ್ಕೆ ತಾಳಿಕೋಟಿ ಪಿಎಸ್‌ಐ ಜ್ಯೋತಿ ಖೋತ ಭೇಟಿ ನೀಡಿ ಭದ್ರತೆ ಪರಿಶೀಲನೆ ನಡೆಸಿದರು.

ಇನ್ನುಳಿದಂತೆ ಮೈಲೇಶ್ವರ ಬ್ರಿಲಿಯಂಟ್ ಶಾಲೆಯಲ್ಲಿ ವಿಕಲಚೇತನ ಅಭ್ಯರ್ಥಿಯೊಬ್ಬರು ಡಿಡಿಪಿಐ ಅವರ ಅನುಮತಿ ಮೇರೆಗೆ ಸಹಾಯಕರನ್ನು ಪಡೆದುಕೊಂಡು ಪರೀಕ್ಷೆ ಎದುರಿಸಿದರು.ವಿಚಕ್ಷಣ ದಳದ ಅಧಿಕಾರಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ ಭಾವಿಕಟ್ಟಿ ಮಾತನಾಡಿ, ನಾವು ಭೇಟಿ ಕೊಟ್ಟಿರುವ ಎಲ್ಲ ಕಡೆಯೂ ಪರೀಕ್ಷೆಗಳು ಶಾಂತವಾಗಿ ಸುಸೂತ್ರವಾಗಿ ನಡೆದಿವೆ.ಯಾವುದೇ ಗೊಂದಲಗಳು ಕಂಡು ಬಂದಿಲ್ಲ ಎಂದು ತಿಳಿಸಿದರು.

ತಾಳಿಕೋಟಿಯ ಎಸ್.ಕೆ.ಪಪೂ ಕಾಲೇಜು,ಶ್ರೀ ಸಂಗಮೇಶ್ವರ ಪ್ರೌಢಶಾಲೆ,ಸರ್ವಜ್ಞ ವಿದ್ಯಾಪೀಠ ಕನ್ನಡ ಮಾಧ್ಯಮ ಪ್ರೌಢಶಾಲೆ,ನಾಲತವಾಡದ ಶ್ರೀ ವೀರೇಶ್ವರ ಪಪೂ ಕಾಲೇಜು,ಹಿರೂರ ಶ್ರೀ ಭೋಗೇಶ್ವರ ಪ್ರೌಢಶಾಲೆ,ರಕ್ಕಸಗಿ ಕರ್ನಾಟಕ ಪಬ್ಲಿಕ್ ಶಾಲೆ,ನಾಗರಬೆಟ್ಟದ ಎಸ್.ಡಿ.ಕೆ ಪ್ರೌಢಶಾಲೆ, ನಾಗರಬೆಟ್ಟ ಆಕ್ಸ್ಫರ್ಡ್ ಆಂಗ್ಲಮಾಧ್ಯಮ ಪ್ರೌಢಶಾಲೆ,ಮಿಣಜಗಿ ಕ್ರಾಸ್‌ನ ಕನಕ ಕನ್ನಡ ಮಾಧ್ಯಮ ಪ್ರೌಢಶಾಲೆ,ಮೈಲೇಶ್ವರದ ಬ್ರಿಲಿಯಂಟ್ ಕನ್ನಡ ಮಾಧ್ಯಮ ಪ್ರೌಢಶಾಲೆ,ಇಂಗಳಗೇರಿ ಸರ್ಕಾರಿ ಪ್ರೌಢಶಾಲೆ,ಬಸರಕೋಡ ಪವಾಡ ಬಸವೇಶ್ವರ ಪ್ರೌಢಶಾಲೆ,ಕೊಡಗಾನೂರದ ಜೆ.ಎಸ್.ಎಸ್.ಪ್ರೌಢಶಾಲೆ ಬ್ಯಾಲ್ಯಾಳ ಕ್ರಾಸ್‌ನ ಪರೀಕ್ಷಾ ಕೇಂದ್ರಗಳಲ್ಲಿ ಅಚ್ಚುಕಟ್ಟಾಗಿ ಪರೀಕ್ಷೆಗಳು ನಡೆದಿವೆ.

ಬಿಇಒ ಬಿ.ಎಸ್.ಸಾವಳಗಿ,ಬಿಆರ್‌ಸಿ ಆರ್.ಧಮ್ಮೂರಮಠ,ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಎA.ಬೆಳಗಲ್ ಮೊದಲಾದವರು ಪರೀಕ್ಷಾ ಕೇಂದ್ರಗಳಿಗೆ ಸಂಚರಿಸಿ ವ್ಯವಸ್ಥೆ ಪರಿಶೀಲನೆ ನಡೆಸಿದರು.
ಮುದ್ದೇಬಿಹಾಳ,ಬಳಬಟ್ಟಿ,ಕಂದಗನೂರ ಮೊದಲಾದ ಶಾಲೆಯ ವಿದ್ಯಾರ್ಥಿಗಳು ಪರೀಕ್ಷೆಯ ವ್ಯವಸ್ಥೆ ಹಾಗೂ ಪ್ರಶ್ನೆಪತ್ರಿಕೆ ಹೇಗಿತ್ತು ಎಂಬುದರ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊoಡರು.


ಶಿಕ್ಷಣ ಸಚಿವರಿಗೆ ಅಭಿನಂದನೆ ಸಲ್ಲಿಸಿದ ವಿದ್ಯಾರ್ಥಿನಿ:
‘ನಾನು ಪ್ರಥಮ ಬಾರಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಎದುರಿಸುತ್ತಿದ್ದೇನೆ.ನಮ್ಮ ಶಾಲೆಯಲ್ಲಿ ಹತ್ತನೇ ತರಗತಿ ಪೂರ್ವಸಿದ್ಧತೆ ಪರೀಕ್ಷೆ ಸಮಯದಲ್ಲಿ ತಿಳಿಸಿದ್ದಂತೆ ಅದೇ ಮಾದರಿಯಲ್ಲಿ ಪ್ರಶ್ನೆಗಳು ಸರಳವಾಗಿದ್ದ ಕಾರಣ ನಮಗೆ ಬರೆಯುವುದಕ್ಕೆ ಕಷ್ಟವೆನಿಸಲಿಲ್ಲ.ಇದಕ್ಕಾಗಿ ನಾನು ಎಲ್ಲ ವಿದ್ಯಾರ್ಥಿಗಳ ಪರವಾಗಿ ರಾಜ್ಯದ ಶಿಕ್ಷಣ ಸಚಿವರಿಗೆ ಅಭಿನಂದಿಸುತ್ತೇನೆ ಎಂದು ಮುದ್ದೇಬಿಹಾಳ ಪಟ್ಟಣದ ಜ್ಞಾನ ಭಾರತಿ ಪರೀಕ್ಷಾ ಕೇಂದ್ರದಲ್ಲಿ ಮೊದಲ ದಿನದ ಪರೀಕ್ಷೆ ಮುಗಿಸಿಕೊಂಡು ಹೊರ ಬಂದ ಪಟ್ಟಣದ ಅಭ್ಯುದಯ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿಯೊಬ್ಬರು ಹೇಳಿದರು.

Latest News

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

ಕಲಬುರಗಿ: ಪ್ರೀತಿಸಿ ಮದುವೆಯಾದ ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿಯೊಬ್ಬರು ತವರು

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದ ಫಲಿತಾಂಶ : ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಂಸ್ಥೆಯ ಶೃತಿ ರಾಜ್ಯಕ್ಕೆ 2ನೇ ರ‍್ಯಾಂಕ್

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದ ಫಲಿತಾಂಶ : ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಂಸ್ಥೆಯ ಶೃತಿ ರಾಜ್ಯಕ್ಕೆ 2ನೇ ರ‍್ಯಾಂಕ್

ಮುದ್ದೇಬಿಹಾಳ : ಸನ್ 2026 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮರು ಮೌಲ್ಯಮಾಪನದಲ್ಲಿ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ ಮಠ್ಸ್ ಸಮೂಹ ಸಂಸ್ಥೆಯ ಎಸ್.ಡಿ.ಕೆ ಪ್ರೌಢಶಾಲೆಯ ವಿದ್ಯಾರ್ಥಿನಿ ಶೃತಿ ಶಿವನಗೌಡ ಪೀರಾಪೂರ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾಳೆ. ಈ ಮೊದಲು ಫಲಿತಾಂಶ ಪ್ರಕಟಗೊಂಡಾಗ ಶೃತಿಗೆ 617 ಅಂಕ ಪಡೆದುಕೊಂಡಿದ್ದಳು.ಶಾಲೆಯ ಆಡಳಿತ ಮಂಡಳಿ ಹಾಗೂ ಪಾಲಕರು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದಾಗ ಮತ್ತೆ ಏಳು ಅಂಕಗಳು ಶೃತಿಗೆ ಲಭಿಸಿವೆ.ಆ ಮೂಲಕ ಶೃತಿ ಕನ್ನಡ ಮಾಧ್ಯಮದಲ್ಲಿ

ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ:  ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ: ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಮುದ್ದೇಬಿಹಾಳ : ಯಾವುದೇ ಒಂದು ಸಾಧನೆ ಇರಲಿ ಅಲ್ಲಿ ಆತ್ಮಸ್ಥೆರ್ಯ ಪ್ರಮುಖ ಪಾತ್ರ ವಹಿಸುತ್ತದೆ. ಈಗಿನ ಹೆಣ್ಣು ಮಕ್ಕಳು ಮಾಡುವ ಸಾಧನೆಯನ್ನು ಪುರುಷ ಪ್ರಧಾನ ಸಮಾಜ ತಲೆ ಎತ್ತಿ ನೋಡುವಂತೆ ಆಗಿದೆ ಎಂದು ಕೆಎಸ್‌ಡಿಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟ ಆಕ್ಸ್ಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮರು ಮೌಲ್ಯಮಾಪನದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್‌ಗಳಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು. ನಾಗರಬೆಟ್ಟದ ಆಕ್ಸಫರ್ಡ್