SSLC ಪರೀಕ್ಷೆ : ಶಿಕ್ಷಣ ಸಚಿವರಿಗೆ ಅಭಿನಂದನೆ ತಿಳಿಸಿದ ವಿದ್ಯಾರ್ಥಿನಿ

SSLC ಪರೀಕ್ಷೆ : ಶಿಕ್ಷಣ ಸಚಿವರಿಗೆ ಅಭಿನಂದನೆ ತಿಳಿಸಿದ ವಿದ್ಯಾರ್ಥಿನಿ

ಮುದ್ದೇಬಿಹಾಳ : ಪಟ್ಟಣದ ಐದು ಪರೀಕ್ಷಾ ಕೇಂದ್ರಗಳು ಸೇರಿದಂತೆ ಮುದ್ದೇಬಿಹಾಳ,ತಾಳಿಕೋಟಿ,ನಾಗರಬೆಟ್ಟ ಪರೀಕ್ಷಾ ಕೇಂದ್ರಗಳಲ್ಲಿ ಮೊದಲ ದಿನದ ಪರೀಕ್ಷೆಗಳು ಅತ್ಯಂತ ಬಿಗಿ ಭದ್ರತೆಯಲ್ಲಿ ಕಟ್ಟುನಿಟ್ಟಾಗಿ ನಡೆದಿರುವುದಾಗಿ ವರದಿಯಾಗಿದೆ.

ಪಟ್ಟಣದ ವಿಬಿಸಿ ಪ್ರೌಢಶಾಲೆ,ಜ್ಞಾನ ಭಾರತಿ ವಿದ್ಯಾಮಂದಿರ, ಚಿನ್ಮಯ ಜೆ.ಸಿ.ಆಂಗ್ಲಮಾಧ್ಯಮ ಪ್ರೌಢಶಾಲೆ,ಸ್ವಾಮಿ ವಿವೇಕಾನಂದ ಪ್ರೌಢಶಾಲೆ ಶಿರೋಳ,ಅಭ್ಯುದಯ ಆಂಗ್ಲಮಾಧ್ಯಮ ಪ್ರೌಢಶಾಲೆ ಸೇರಿದಂತೆ ತಾಲ್ಲೂಕಿನ ಗ್ರಾಮೀಣ ಭಾಗದ ಪರೀಕ್ಷಾ ಕೇಂದ್ರಗಳಲ್ಲೂ ಯಾವುದೇ ಗೊಂದಲವಿಲ್ಲದೇ ಕಟ್ಟುನಿಟ್ಟಾಗಿ ಪರೀಕ್ಷೆಗಳು ನಡೆದಿವೆ ಎಂದು ಎಸ್.ಎಸ್.ಎಲ್.ಸಿ ಪರೀಕ್ಷೆಯ ಅಧ್ಯಕ್ಷರು,ತಹಶೀಲ್ದಾರ್ ಕೀರ್ತಿ ಚಾಲಕ ತಿಳಿಸಿದರು.

ಒಟ್ಟು 6356 ವಿದ್ಯಾರ್ಥಿಗಳು ಪ್ರಥಮ ಭಾಷೆ ಪರೀಕ್ಷೆಗೆ ನೋಂದಾಯಿಸಿಕೊAಡಿದ್ದು ಅದರಲ್ಲಿ 6233 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರೆ 123 ವಿದ್ಯಾರ್ಥಿಗಳು ಗೈರು ಉಳಿದಿದ್ದಾರೆ ಎಂದು ಎಸ್.ಎಸ್.ಎಲ್.ಸಿ ಪರೀಕ್ಷೆಯ ನೋಡಲ್ ಅಧಿಕಾರಿ ಮೊಹ್ಮದಇಲಿಯಾಸ್ ಬಾಗವಾನ ಮಾಹಿತಿ ನೀಡಿದರು.

ಅತೀ ಸೂಕ್ಷö್ಮ ಪರೀಕ್ಷಾ ಕೇಂದ್ರಗಳೆoದು ಗುರುತಿಸಲಾಗಿದ್ದ ಬಳಬಟ್ಟಿ ಸರಕಾರಿ ಪ್ರೌಢಶಾಲೆ,ಇಂಗಳಗೇರಿ ಸರ್ಕಾರಿ ಪ್ರೌಢಶಾಲೆಗಳಿಗೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.ಮುದ್ದೇಬಿಹಾಳ ಪಿಎಸ್‌ಐ ಸಂಜಯ ತಿಪರೆಡ್ಡಿ ತಮ್ಮ ಸಿಬ್ಬಂದಿಯೊoದಿಗೆ ಬಳಬಟ್ಟಿ ಪರೀಕ್ಷಾ ಕೇಂದ್ರದಲ್ಲಿ ಎರಡು ಗಂಟೆಗಳ ಕಾಲ ಬೀಡುಬಿಟ್ಟು ಹೊರಗಿನ ಜನರನ್ನು ನಿಯಂತ್ರಿಸಿದರಲ್ಲದೇ ಯಾವುದೇ ಗೊಂದಲಗಳಿಗೆ ಆಸ್ಪದ ದೊರೆಯದಂತೆ ನೋಡಿಕೊಂಡರು.

ತಾಳಿಕೋಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಇಂಗಳಗೇರಿ ಪರೀಕ್ಷಾ ಕೇಂದ್ರಕ್ಕೆ ತಾಳಿಕೋಟಿ ಪಿಎಸ್‌ಐ ಜ್ಯೋತಿ ಖೋತ ಭೇಟಿ ನೀಡಿ ಭದ್ರತೆ ಪರಿಶೀಲನೆ ನಡೆಸಿದರು.

ಇನ್ನುಳಿದಂತೆ ಮೈಲೇಶ್ವರ ಬ್ರಿಲಿಯಂಟ್ ಶಾಲೆಯಲ್ಲಿ ವಿಕಲಚೇತನ ಅಭ್ಯರ್ಥಿಯೊಬ್ಬರು ಡಿಡಿಪಿಐ ಅವರ ಅನುಮತಿ ಮೇರೆಗೆ ಸಹಾಯಕರನ್ನು ಪಡೆದುಕೊಂಡು ಪರೀಕ್ಷೆ ಎದುರಿಸಿದರು.ವಿಚಕ್ಷಣ ದಳದ ಅಧಿಕಾರಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ ಭಾವಿಕಟ್ಟಿ ಮಾತನಾಡಿ, ನಾವು ಭೇಟಿ ಕೊಟ್ಟಿರುವ ಎಲ್ಲ ಕಡೆಯೂ ಪರೀಕ್ಷೆಗಳು ಶಾಂತವಾಗಿ ಸುಸೂತ್ರವಾಗಿ ನಡೆದಿವೆ.ಯಾವುದೇ ಗೊಂದಲಗಳು ಕಂಡು ಬಂದಿಲ್ಲ ಎಂದು ತಿಳಿಸಿದರು.

ತಾಳಿಕೋಟಿಯ ಎಸ್.ಕೆ.ಪಪೂ ಕಾಲೇಜು,ಶ್ರೀ ಸಂಗಮೇಶ್ವರ ಪ್ರೌಢಶಾಲೆ,ಸರ್ವಜ್ಞ ವಿದ್ಯಾಪೀಠ ಕನ್ನಡ ಮಾಧ್ಯಮ ಪ್ರೌಢಶಾಲೆ,ನಾಲತವಾಡದ ಶ್ರೀ ವೀರೇಶ್ವರ ಪಪೂ ಕಾಲೇಜು,ಹಿರೂರ ಶ್ರೀ ಭೋಗೇಶ್ವರ ಪ್ರೌಢಶಾಲೆ,ರಕ್ಕಸಗಿ ಕರ್ನಾಟಕ ಪಬ್ಲಿಕ್ ಶಾಲೆ,ನಾಗರಬೆಟ್ಟದ ಎಸ್.ಡಿ.ಕೆ ಪ್ರೌಢಶಾಲೆ, ನಾಗರಬೆಟ್ಟ ಆಕ್ಸ್ಫರ್ಡ್ ಆಂಗ್ಲಮಾಧ್ಯಮ ಪ್ರೌಢಶಾಲೆ,ಮಿಣಜಗಿ ಕ್ರಾಸ್‌ನ ಕನಕ ಕನ್ನಡ ಮಾಧ್ಯಮ ಪ್ರೌಢಶಾಲೆ,ಮೈಲೇಶ್ವರದ ಬ್ರಿಲಿಯಂಟ್ ಕನ್ನಡ ಮಾಧ್ಯಮ ಪ್ರೌಢಶಾಲೆ,ಇಂಗಳಗೇರಿ ಸರ್ಕಾರಿ ಪ್ರೌಢಶಾಲೆ,ಬಸರಕೋಡ ಪವಾಡ ಬಸವೇಶ್ವರ ಪ್ರೌಢಶಾಲೆ,ಕೊಡಗಾನೂರದ ಜೆ.ಎಸ್.ಎಸ್.ಪ್ರೌಢಶಾಲೆ ಬ್ಯಾಲ್ಯಾಳ ಕ್ರಾಸ್‌ನ ಪರೀಕ್ಷಾ ಕೇಂದ್ರಗಳಲ್ಲಿ ಅಚ್ಚುಕಟ್ಟಾಗಿ ಪರೀಕ್ಷೆಗಳು ನಡೆದಿವೆ.

ಬಿಇಒ ಬಿ.ಎಸ್.ಸಾವಳಗಿ,ಬಿಆರ್‌ಸಿ ಆರ್.ಧಮ್ಮೂರಮಠ,ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಎA.ಬೆಳಗಲ್ ಮೊದಲಾದವರು ಪರೀಕ್ಷಾ ಕೇಂದ್ರಗಳಿಗೆ ಸಂಚರಿಸಿ ವ್ಯವಸ್ಥೆ ಪರಿಶೀಲನೆ ನಡೆಸಿದರು.
ಮುದ್ದೇಬಿಹಾಳ,ಬಳಬಟ್ಟಿ,ಕಂದಗನೂರ ಮೊದಲಾದ ಶಾಲೆಯ ವಿದ್ಯಾರ್ಥಿಗಳು ಪರೀಕ್ಷೆಯ ವ್ಯವಸ್ಥೆ ಹಾಗೂ ಪ್ರಶ್ನೆಪತ್ರಿಕೆ ಹೇಗಿತ್ತು ಎಂಬುದರ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊoಡರು.


ಶಿಕ್ಷಣ ಸಚಿವರಿಗೆ ಅಭಿನಂದನೆ ಸಲ್ಲಿಸಿದ ವಿದ್ಯಾರ್ಥಿನಿ:
‘ನಾನು ಪ್ರಥಮ ಬಾರಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಎದುರಿಸುತ್ತಿದ್ದೇನೆ.ನಮ್ಮ ಶಾಲೆಯಲ್ಲಿ ಹತ್ತನೇ ತರಗತಿ ಪೂರ್ವಸಿದ್ಧತೆ ಪರೀಕ್ಷೆ ಸಮಯದಲ್ಲಿ ತಿಳಿಸಿದ್ದಂತೆ ಅದೇ ಮಾದರಿಯಲ್ಲಿ ಪ್ರಶ್ನೆಗಳು ಸರಳವಾಗಿದ್ದ ಕಾರಣ ನಮಗೆ ಬರೆಯುವುದಕ್ಕೆ ಕಷ್ಟವೆನಿಸಲಿಲ್ಲ.ಇದಕ್ಕಾಗಿ ನಾನು ಎಲ್ಲ ವಿದ್ಯಾರ್ಥಿಗಳ ಪರವಾಗಿ ರಾಜ್ಯದ ಶಿಕ್ಷಣ ಸಚಿವರಿಗೆ ಅಭಿನಂದಿಸುತ್ತೇನೆ ಎಂದು ಮುದ್ದೇಬಿಹಾಳ ಪಟ್ಟಣದ ಜ್ಞಾನ ಭಾರತಿ ಪರೀಕ್ಷಾ ಕೇಂದ್ರದಲ್ಲಿ ಮೊದಲ ದಿನದ ಪರೀಕ್ಷೆ ಮುಗಿಸಿಕೊಂಡು ಹೊರ ಬಂದ ಪಟ್ಟಣದ ಅಭ್ಯುದಯ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿಯೊಬ್ಬರು ಹೇಳಿದರು.

Latest News

ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಮುದ್ದೇಬಿಹಾಳ : ಕೊಲ್ಲಿ ರಾಷ್ಟ್ರಗಳ ಮಧ್ಯೆ ನಡೆದಿರುವ ಯುದ್ದದ ಸಂಘರ್ಷದಿAದ ತೈಲೋತ್ಪನ್ನಗಳ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದ್ದು

ಅಸ್ಕಿ ಫೌಂಡೇಶನ್ ನೇತೃತ್ವ :                                            ಮಾ.17 ರಂದು ಬಾವೂರನಲ್ಲಿ ಸೌಹಾರ್ದ ಇಫ್ತಾರಕೂಟ

ಅಸ್ಕಿ ಫೌಂಡೇಶನ್ ನೇತೃತ್ವ : ಮಾ.17 ರಂದು ಬಾವೂರನಲ್ಲಿ ಸೌಹಾರ್ದ ಇಫ್ತಾರಕೂಟ

ತಾಳಿಕೋಟಿ : ರಂಜಾನ್ ಹಬ್ಬದ ಪ್ರಯುಕ್ತ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ತಾಲ್ಲೂಕಿನ ಬಾವೂರ ಗ್ರಾಮದಲ್ಲಿ

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಮುದ್ದೇಬಿಹಾಳ : ರಾಯಚೂರಿನ ಸಿದ್ದರಾಮ ಜಮ್ಮಲದಿನ್ನಿ ಕಲ್ಯಾಣ ಮಂಟಪದಲ್ಲಿ ನಡೆದ ಮಾತೋಶ್ರೀ ಮಹಾಂತಮ್ಮ ಶಿವಬಸ್ಸಪ್ಪ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ :                   ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ : ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ಮುದ್ದೇಬಿಹಾಳ : ನಗರ ಪ್ರದೇಶಗಳಲ್ಲಾದರೆ ಸಂಸ್ಥೆಗಳು ಕೇಳಿದಷ್ಟು ಶುಲ್ಕ ಕೊಡಲು ಪಾಲಕರು ಸಿದ್ಧರಿರುತ್ತಾರೆ.ಅಲ್ಲಿ ಶಿಕ್ಷಣ

ಮೀನುಗಾರಿಕೆ ಕ್ಷೇತ್ರದಲ್ಲಿ ವಿಫುಲ ಉದ್ಯೋಗವಕಾಶ-ಶಾಸಕ ನಾಡಗೌಡ

ಮೀನುಗಾರಿಕೆ ಕ್ಷೇತ್ರದಲ್ಲಿ ವಿಫುಲ ಉದ್ಯೋಗವಕಾಶ-ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮ ಭಾಗದ ನಾರಾಯಣಪೂರ ಹಾಗೂ ಆಲಮಟ್ಟಿ ಜಲಾಶಯದ ಮಧ್ಯೆದಲ್ಲಿ ಬರುವ ಕೃಷ್ಣಾ ನದಿ ತೀರದಲ್ಲಿ ವ್ಯಾಪಕವಾಗಿ ಮೀನುಗಾರಿಕೆಗೆ ಅವಕಾಶ ಇದ್ದು ಯುವಕರು ಈ ಕ್ಷೇತ್ರದಲ್ಲಿ ತರಬೇತಿ ಪಡೆದುಕೊಂಡರೆ ನಿರುದ್ಯೋಗ,ಬಡತನ ನಿವಾರಣೆ ಮಾಡಲು ಸಾಧ್ಯವಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿ ಶನಿವಾರ ಸನ್ 2025-26ಸಾಲಿನ ಜಿಪಂ ಲಿಂಕ್ ಡಾಕ್ಯುಮೆಂಟ್ ಯೋಜನೆಯಡಿ ಮೀನುಗಾರಿಕಾ ಇಲಾಖೆಯ ನೂತನ ಕಚೇರಿಯ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಸಮ್ಮಿಶ್ರ

ವಿದ್ಯುತ್ ಸ್ಪರ್ಶಿಸಿ ಪಿಗ್ಮಿ ಏಜೆಂಟ್ ಸಾವು

ವಿದ್ಯುತ್ ಸ್ಪರ್ಶಿಸಿ ಪಿಗ್ಮಿ ಏಜೆಂಟ್ ಸಾವು

ಮುದ್ದೇಬಿಹಾಳ : ಮನೆ ಕಟ್ಟಡಕ್ಕೆ ನೀರು ಹೊಡೆಯುವ ಸಂದರ್ಭದಲ್ಲಿ ಮೋಟರ್‌ಗೆ ಪೈಪ್ ಜೋಡಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ತಾಲ್ಲೂಕಿನ ನಾಲತವಾಡ ಪಟ್ಟಣದ ನಿವಾಸಿ, ಭಾವಸಾರ ಕ್ಷತ್ರಿಯ ಕೋ ಆಪರೇಟಿವ್ ಬ್ಯಾಂಕಿನ ಪಿಗ್ಮಿ ಸಂಗ್ರಾಹಕರ ನಾಗೇಶ ಬಿ.ಲೋಕರೆ (42) ಶುಕ್ರವಾರ ಮೃತಪಟ್ಟಿದ್ದಾರೆ. ವಿದ್ಯುತ್ ಸ್ಪರ್ಶಿಸಿ ಪ್ರಜ್ಞಾಹೀನರಾದ ಅವರನ್ನು ಸ್ಥಳದಲ್ಲೇ ಇದ್ದ ಯುವಕರು ಸ್ಥಳೀಯ ಆರೋಗ್ಯ ಸಮುದಾಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸುವುದರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದರು. ಅವರಿಗೆ