ಶ್ರದ್ಧೆಯಿಂದ ಹಬ್ಬದಾಚರಣೆಗಳಲ್ಲಿ ತೊಡಗಿ-ಪೇಶ ಇಮಾಮ್

ಶ್ರದ್ಧೆಯಿಂದ ಹಬ್ಬದಾಚರಣೆಗಳಲ್ಲಿ ತೊಡಗಿ-ಪೇಶ ಇಮಾಮ್

ಮುದ್ದೇಬಿಹಾಳ : ಯಾರು ರಂಜಾನ್ ಮಾಸದಲ್ಲಿ ಶ್ರದ್ಧೆಯಿಂದ ನಮಾಜ್, ರೋಜಾ, ಕುರಾನ್ ತಿಲಾವತ್ ಹಾಗೂ ಜಕಾತ್‌ನಂತಹ ಧಾರ್ಮಿಕ ವಿಧಿಗಳನ್ನು ಪೂರೈಸಿರುತ್ತಾರೋ, ಬಡವರಿಗೆ ದಾನ ಧರ್ಮಗಳನ್ನು ಮಾಡಿರುತ್ತಾರೋ, ಅಂತಹವರಿಗೆ ಮಾತ್ರ ಈದ್ಗಾಗೆ ಪ್ರವೇಶಿಸುವ ಮತ್ತು ರಂಜಾನ್ ಹಬ್ಬವನ್ನು ಆಚರಿಸುವ ನೈತಿಕ ಹಕ್ಕಿದೆ ಎಂದು ಜಾಮಿಯಾ ಮಸೀದಿಯ ಪೇಶ ಇಮಾಮ್ ಪ್ರತಿಪಾದಿಸಿದರು.

ಪಟ್ಟಣದ ತಾಳಿಕೋಟಿ ರಸ್ತೆಯ ಪಕ್ಕದಲ್ಲಿರುವ ಈದ್ಗಾ ಮೈದಾನದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಈದ್ ಅಲ್-ಫಿತರ್ ರಂಜಾನ್ ಸಾಮೂಹಿಕ ನಮಾಜಿನ ನಂತರ ನೆರೆದಿದ್ದ ಮುಸ್ಲಿಂ ಬಾಂಧವರನ್ನು ಉದ್ದೇಶಿಸಿ ಅವರು ಮಾತನಾಡಿದರು.

“ರಂಜಾನ್ ಕೇವಲ ಉಪವಾಸಕ್ಕೆ ಸೀಮಿತವಾಗಿಲ್ಲ. ಇದು ಆತ್ಮಾವಲೋಕನ ಮತ್ತು ದಾನದ ಮಾಸವಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಹಸಿವನ್ನು ನೀಗಿಸುವ ‘ಜಕಾತ್’ ಪ್ರಕ್ರಿಯೆಯಲ್ಲಿ ಪಾಲ್ಗೊಂಡವರು ನಿಜವಾದ ಹಬ್ಬದ ಸಂಭ್ರಮಕ್ಕೆ ಅರ್ಹರು. ದೇವರ ಮೇಲಿನ ಭಕ್ತಿ ಹಾಗೂ ಬಡವರ ಮೇಲಿನ ಕರುಣೆ ಹೊಂದಿರುವವರು ಈ ಪವಿತ್ರ ಈದ್ಗಾದಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಹಬ್ಬದ ಸಾರ್ಥಕತೆ ಪಡೆಯುತ್ತಾರೆ” ಎಂದು ಅವರು ತಿಳಿಸಿದರು.

ನಗರದ ಎಲ್ಲಾ ಮಸೀದಿಗಳಿಂದ ಕಿಲ್ಲಾಗಲ್ಲಿಯ ಜುಮ್ಮಾ ಮಸೀದಿಯಲ್ಲಿ ಕೂಡಿದ ಜಮಾತಗಳನ್ನು ಸಾಮೂಹಿಕವಾಗಿ ತಕಬೀರ್ ಹೇಳುತ್ತಾ ಈದ್ಗಾ ಮೈದಾನಕ್ಕೆ ಆಗಮಿಸಿದರು.
ತಾಳಿಕೋಟಿ ರಸ್ತೆಯ ಈದ್ಗಾದಲ್ಲಿ ನಡೆದ ಈ ಸಾಮೂಹಿಕ ನಮಾಜಿನಲ್ಲಿ ಸಾವಿರಾರು ಮುಸ್ಲಿಂ ಬಾಂಧವರು ಪಾಲ್ಗೊಂಡು ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.ಸಿಪಿಐ ಮೊಹ್ಮದ ಫಸಿವುದ್ದೀನ,ಪಿಎಸ್‌ಐ ಸಂಜಯ ತಿಪರೆಡ್ಡಿ ಪೊಲೀಸ್ ಸಿಬ್ಬಂದಿ ಭದ್ರತೆ ಒದಗಿಸಿದ್ದರು.

Latest News

ಮಾನವ ಬಂಧುತ್ವ ವೇದಿಕೆ ಖಂಡನೆ :                                ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮಾನವ ಬಂಧುತ್ವ ವೇದಿಕೆ ಖಂಡನೆ : ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮುದ್ದೇಬಿಹಾಳ : ಉತ್ತರಖಂಡದ ರಾಮಲೀಲಾ ಮೈದಾನದಲ್ಲಿನ ಸಾರ್ವಜನಿಕ ಸ್ಥಳದಲ್ಲಿ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿರುವ ಜನಪದ ಕಲೆಗಳನ್ನು,ಕಲಾವಿದರನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ವಿಜಯಪುರ: ನಾವು ನಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಲು ದುಶ್ಚಟಗಳಿಂದ ದೂರ ಇರಬೇಕೆಂದು ನಗರದ ಪ್ರಜಾಪಿತ ಬ್ರಹ್ಮಕುಮಾರಿ

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ  ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಮುದ್ದೇಬಿಹಾಳ : ಹಾಸ್ಯ ಕಲಾವಿದ ,ಶಿಕ್ಷಕ ಗೋಪಾಲ ಎನ್.ಹೂಗಾರ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಕಲಾಸಿಂಚನ ಸಾಂಸ್ಕೃತಿಕ ಸಂಸ್ಥೆಯಿoದ ಗೋಪಾಲ ಹೂಗಾರ ಅವರ ಜನುಮದಿನದ ನಿಮಿತ್ಯವಾಗಿ ಯರಗಲ್ಲ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 500 ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಿಸುವ ಕಾರ್ಯ ಕೈಗೊಳ್ಳಲಾಯಿತು. ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಬಿ.ಧಮ್ಮೂರಮಠ ಮಾತನಾಡಿ, ಭಗವಂತ ಎಲ್ಲರಿಗೂ ಎಲ್ಲವನ್ನೂ ಕೊಟ್ಟಿರುತ್ತಾನೆ. ಆದರೆ ಕೊಡುವ ಮನಸ್ಸನ್ನು ಕೆಲವರಿಗೆ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು:       ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು: ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ನಾಮಪತ್ರ ತಿರಸ್ಕೃತಗೊಂಡು ಹೈಕೋರ್ಟ್ ಆದೇಶದೊಂದಿಗೆ ಕಣದಲ್ಲಿ ಉಳಿದಿದ್ದ ನಾಲ್ವರು ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದ್ದಾರೆ. ಪಟ್ಟಣದ ಅಂಜುಮನ್ ಹೈಸ್ಕೂಲ್‌ನಲ್ಲಿ ಸೋಮವಾರ ಸಂಜೆ 4.30ಕ್ಕೆ ಆರಂಭಗೊoಡ ಮತ ಎಣಿಕೆ ಕಾರ್ಯ ರಾತ್ರಿ 12 ಗಂಟೆಗೆ ಪೂರ್ಣಗೊಂಡಿತು.ಮತಎಣಿಕೆ ಕಾರ್ಯವನ್ನು ಕಂದಾಯ ಇಲಾಖೆಯವರಿಗೆ ವಹಿಸಿದ್ದರಿಂದ ಯಾವುದೇ ಗೊಂದಲಗಳಿಲ್ಲದoತೆ ಫಲಿತಾಂಶ ಪ್ರಕಟಿಸಲಾಯಿತು. ಚುನಾವಣಾಧಿಕಾರಿಯೂ ಆಗಿರುವ ಹೆಚ್ಚುವರಿ ಜಿಲ್ಲಾಧಿಕಾರಿ ಔದ್ರಾಮ್,