ನಾವು ಬಿಳಿ ಹಾಳೆ ಹಾಗೆ ನಮ್ಮಲ್ಲಿ ಮುಚ್ಚು ಮರೆಯೇ ಇಲ್ಲ: ನಿಖಿಲ್ ಕುಮಾರಸ್ವಾಮಿ

ನಾವು ಬಿಳಿ ಹಾಳೆ ಹಾಗೆ ನಮ್ಮಲ್ಲಿ ಮುಚ್ಚು ಮರೆಯೇ ಇಲ್ಲ: ನಿಖಿಲ್ ಕುಮಾರಸ್ವಾಮಿ

ಮಂಡ್ಯ: ಮೈಸೂರು ಚಲೋ 4ನೇ ದಿನದ ಪಾದಯಾತ್ರೆ ಆರಂಭವಾಗುವುದಕ್ಕೂ ಮುನ್ನ ಮದ್ದೂರು ತಾಲೂಕಿನ ಸೋಮನಹಳ್ಳಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರಸ್ವಾಮಿಯವರು ಪತ್ರಿಕಾಗೋಷ್ಠಿ ನಡೆಸಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮುಡಾ , ವಾಲ್ಮೀಕಿ ನಿಗಮದ ಅಭಿವೃದ್ಧಿ ಹಣವನ್ನ ಕಾಂಗ್ರೆಸ್ ಸರ್ಕಾರ ದುರುಪಯೋಗ ಮಾಡಿಕೊಂಡಿದೆ. ಮೂಡಾಗೆ ಸಂಬಂಧಿಸಿದ ಸುಳ್ಳುದಾಖಲೆ ಸೃಷ್ಟಿ ಮಾಡಿ 14 ಸೈಟ್ ಗಳನ್ನ ಪಡೆದುಕೊಂಡಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಇಬ್ಬರು ರೈತ ನಾಯಕರು ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ ಕೊಟ್ಟಿದ್ದಾರೆ. ನಿನ್ನೆ ಕೆಂಗಲ್ ನಿಂದ ನಿಡಘಟ್ಟಕ್ಕೆ ಪಾದಯಾತ್ರೆ ಬಂದಿದ್ದೇವೆ.

ನಿನ್ನೆ ಪಕ್ಷದ ಕಾರ್ಯಕರ್ತೆ ಗೌರಮ್ಮ ಎನ್ನುವವರು ಹೃದಯಾಘಾತದಿಂದ ಮೃತಪಟ್ಟಿರೋದು ಮನಸ್ಸಿಗೆ ನೋವಾಗಿದೆ. ಪಾದಯಾತ್ರೆಗೆ ಎರಡು ಪಕ್ಷದ ಕಾರ್ಯಕರ್ತರು ಪ್ರತಿದಿನ ನಮ್ಮ ಜೊತೆ ಹೆಗಲಿಗೆ ಹೆಗಲು ಕೊಟ್ಟು ಹೆಜ್ಜೆ ಹಾಕುತ್ತಿದ್ದಾರೆ ಎಂದರು.

ಸಿಎಂ ಸಿದ್ದರಾಮಯ್ಯಗೆ ನೈತಿಕತೆ ಇಲ್ಲ:
ಇನ್ನು ಯಾದಗಿರಿಯಲ್ಲಿ ಪಿಎಸ್ಐ ವರ್ಗಾವಣೆಗೆ 40 ಲಕ್ಷ ಹಣವನ್ನು ಶಾಸಕರು ಹಾಗೂ ಅವರ ಮಗನಿಂದ ಬೇಡಿಕೆ ಇಟ್ಟಿದ್ದರು. ಇದರಿಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಿಎಸ್ಐ ಪರಶುರಾಮ್ ಅವರ ಪತ್ನಿ ಜೊತೆ ಈಗಾಗಲೇ ಕೇಂದ್ರ ಸಚಿವರಾದ ಕುಮಾರಸ್ವಾಮಿಯವರು ದೂರವಾಣಿ ಮೂಲಕ ಮಾತಾಡಿದ್ದಾರೆ. ಪಾದಯಾತ್ರೆ ಮುಗಿದ ಬಳಿಕ ಅವರಿಗೆ ನ್ಯಾಯ‌ ಕೊಡಿಸುವತ್ತ ಗಮನ ಹರಿಸುತ್ತೇವೆ.

ಅಹಿಂದ ಹಿಂದುಳಿದ ವರ್ಗದ ಸಹಕಾರದಿಂದ ಸಿಎಂ ಸಿದ್ದರಾಮಯ್ಯನವರ ಸರ್ಕಾರ ಅಧಿಕಾರಕ್ಕೆ ಬಂದಿದೆ. ಆದ್ರೆ ಇವತ್ತು ಜನ ಅವರಿಗೆ ಛೀಮಾರಿ ಹಾಕ್ತಿದ್ದಾರೆ. ₹187 ಕೋಟಿ ವಾಲ್ಮೀಕಿ ನಿಗಮದಲ್ಲಿ ಅಕ್ರಮವಾಗಿದೆ. ಸಿಎಂ ಅವರಿಗೆ ನೈತಿಕತೆ ಇದ್ರೆ ಈ ಕೂಡಲೇ ರಾಜೀನಾಮೆ ಕೊಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಅಗ್ರಹಿಸಿದರು.

ಇನ್ನು ಇದೇ ವೇಳೆ ಡಿಕೆ ಶಿವಕುಮಾರ್ ಹೇಳಿಕೆಗೆ ಉತ್ತರಿಸಿದ ಅವರು. ಕುಮಾರಸ್ವಾಮಿ ಅವರು ಸಿನಿಮಾ ಹಂಚಿಕೆದಾರರಾಗಿ ಅವರ ವೃತ್ತಿ ಜೀವನ ಆರಂಭ ಮಾಡಿದ್ರು, ಅದ್ರಲ್ಲಿ ಯಶಸ್ಸು ಕಂಡಿದ್ರು, ಇವತ್ತು ಆಸ್ತಿ ಬಗ್ಗೆ ಡಿಕೆ ಶಿವಕುಮಾರ್‌ ಅವರು ಮಾತಾಡುತ್ತಿದ್ದಾರೆ. ಇದೆಲ್ಲಾ ರಾಜ್ಯದ ಜನಕ್ಕೆ ಗೊತ್ತಿದೆ. ನಾವು ಬಿಳಿ ಹಾಳೆಯಿದ್ದ ಹಾಗೆ ಯಾವುದೇ ಮುಚ್ಚು ಮರೆ ಮಾಡಿಲ್ಲಾ‌. ಎನ್‌ಡಿಎ ಜೊತೆ ಮೈತ್ರಿಯಾದ ಬಳಿಕ 28 ಲೋಕಸಭೆಯ ಕ್ಷೇತ್ರಗಳಲ್ಲಿ ತಳಮಟ್ಟದಲ್ಲಿ ಕಾರ್ಯಕರ್ತರು ಹೊಂದಾಗಿದ್ದಾರೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಶ್ರೀ ಸುರೇಶ್ ಬಾಬು ಅವರು, ಮಾಜಿ ಸಚಿವರಾದ ಡಿ.ಸಿ ತಮ್ಮಣ್ಣ ನವರು, ಪುಟ್ಟರಾಜು ಅವರು, ಬಿಜೆಪಿ ಮಾಜಿ ಶಾಸಕ ಪಿ. ರಾಜೀವ್ ಅವರು, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಇಂದ್ರೇಶ್ ಅವರು ಸೇರಿದಂತೆ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಜೊತೆಯಲಿದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ