ನಾವು ಬಿಳಿ ಹಾಳೆ ಹಾಗೆ ನಮ್ಮಲ್ಲಿ ಮುಚ್ಚು ಮರೆಯೇ ಇಲ್ಲ: ನಿಖಿಲ್ ಕುಮಾರಸ್ವಾಮಿ

ನಾವು ಬಿಳಿ ಹಾಳೆ ಹಾಗೆ ನಮ್ಮಲ್ಲಿ ಮುಚ್ಚು ಮರೆಯೇ ಇಲ್ಲ: ನಿಖಿಲ್ ಕುಮಾರಸ್ವಾಮಿ

ಮಂಡ್ಯ: ಮೈಸೂರು ಚಲೋ 4ನೇ ದಿನದ ಪಾದಯಾತ್ರೆ ಆರಂಭವಾಗುವುದಕ್ಕೂ ಮುನ್ನ ಮದ್ದೂರು ತಾಲೂಕಿನ ಸೋಮನಹಳ್ಳಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರಸ್ವಾಮಿಯವರು ಪತ್ರಿಕಾಗೋಷ್ಠಿ ನಡೆಸಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮುಡಾ , ವಾಲ್ಮೀಕಿ ನಿಗಮದ ಅಭಿವೃದ್ಧಿ ಹಣವನ್ನ ಕಾಂಗ್ರೆಸ್ ಸರ್ಕಾರ ದುರುಪಯೋಗ ಮಾಡಿಕೊಂಡಿದೆ. ಮೂಡಾಗೆ ಸಂಬಂಧಿಸಿದ ಸುಳ್ಳುದಾಖಲೆ ಸೃಷ್ಟಿ ಮಾಡಿ 14 ಸೈಟ್ ಗಳನ್ನ ಪಡೆದುಕೊಂಡಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಇಬ್ಬರು ರೈತ ನಾಯಕರು ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ ಕೊಟ್ಟಿದ್ದಾರೆ. ನಿನ್ನೆ ಕೆಂಗಲ್ ನಿಂದ ನಿಡಘಟ್ಟಕ್ಕೆ ಪಾದಯಾತ್ರೆ ಬಂದಿದ್ದೇವೆ.

ನಿನ್ನೆ ಪಕ್ಷದ ಕಾರ್ಯಕರ್ತೆ ಗೌರಮ್ಮ ಎನ್ನುವವರು ಹೃದಯಾಘಾತದಿಂದ ಮೃತಪಟ್ಟಿರೋದು ಮನಸ್ಸಿಗೆ ನೋವಾಗಿದೆ. ಪಾದಯಾತ್ರೆಗೆ ಎರಡು ಪಕ್ಷದ ಕಾರ್ಯಕರ್ತರು ಪ್ರತಿದಿನ ನಮ್ಮ ಜೊತೆ ಹೆಗಲಿಗೆ ಹೆಗಲು ಕೊಟ್ಟು ಹೆಜ್ಜೆ ಹಾಕುತ್ತಿದ್ದಾರೆ ಎಂದರು.

ಸಿಎಂ ಸಿದ್ದರಾಮಯ್ಯಗೆ ನೈತಿಕತೆ ಇಲ್ಲ:
ಇನ್ನು ಯಾದಗಿರಿಯಲ್ಲಿ ಪಿಎಸ್ಐ ವರ್ಗಾವಣೆಗೆ 40 ಲಕ್ಷ ಹಣವನ್ನು ಶಾಸಕರು ಹಾಗೂ ಅವರ ಮಗನಿಂದ ಬೇಡಿಕೆ ಇಟ್ಟಿದ್ದರು. ಇದರಿಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಿಎಸ್ಐ ಪರಶುರಾಮ್ ಅವರ ಪತ್ನಿ ಜೊತೆ ಈಗಾಗಲೇ ಕೇಂದ್ರ ಸಚಿವರಾದ ಕುಮಾರಸ್ವಾಮಿಯವರು ದೂರವಾಣಿ ಮೂಲಕ ಮಾತಾಡಿದ್ದಾರೆ. ಪಾದಯಾತ್ರೆ ಮುಗಿದ ಬಳಿಕ ಅವರಿಗೆ ನ್ಯಾಯ‌ ಕೊಡಿಸುವತ್ತ ಗಮನ ಹರಿಸುತ್ತೇವೆ.

ಅಹಿಂದ ಹಿಂದುಳಿದ ವರ್ಗದ ಸಹಕಾರದಿಂದ ಸಿಎಂ ಸಿದ್ದರಾಮಯ್ಯನವರ ಸರ್ಕಾರ ಅಧಿಕಾರಕ್ಕೆ ಬಂದಿದೆ. ಆದ್ರೆ ಇವತ್ತು ಜನ ಅವರಿಗೆ ಛೀಮಾರಿ ಹಾಕ್ತಿದ್ದಾರೆ. ₹187 ಕೋಟಿ ವಾಲ್ಮೀಕಿ ನಿಗಮದಲ್ಲಿ ಅಕ್ರಮವಾಗಿದೆ. ಸಿಎಂ ಅವರಿಗೆ ನೈತಿಕತೆ ಇದ್ರೆ ಈ ಕೂಡಲೇ ರಾಜೀನಾಮೆ ಕೊಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಅಗ್ರಹಿಸಿದರು.

ಇನ್ನು ಇದೇ ವೇಳೆ ಡಿಕೆ ಶಿವಕುಮಾರ್ ಹೇಳಿಕೆಗೆ ಉತ್ತರಿಸಿದ ಅವರು. ಕುಮಾರಸ್ವಾಮಿ ಅವರು ಸಿನಿಮಾ ಹಂಚಿಕೆದಾರರಾಗಿ ಅವರ ವೃತ್ತಿ ಜೀವನ ಆರಂಭ ಮಾಡಿದ್ರು, ಅದ್ರಲ್ಲಿ ಯಶಸ್ಸು ಕಂಡಿದ್ರು, ಇವತ್ತು ಆಸ್ತಿ ಬಗ್ಗೆ ಡಿಕೆ ಶಿವಕುಮಾರ್‌ ಅವರು ಮಾತಾಡುತ್ತಿದ್ದಾರೆ. ಇದೆಲ್ಲಾ ರಾಜ್ಯದ ಜನಕ್ಕೆ ಗೊತ್ತಿದೆ. ನಾವು ಬಿಳಿ ಹಾಳೆಯಿದ್ದ ಹಾಗೆ ಯಾವುದೇ ಮುಚ್ಚು ಮರೆ ಮಾಡಿಲ್ಲಾ‌. ಎನ್‌ಡಿಎ ಜೊತೆ ಮೈತ್ರಿಯಾದ ಬಳಿಕ 28 ಲೋಕಸಭೆಯ ಕ್ಷೇತ್ರಗಳಲ್ಲಿ ತಳಮಟ್ಟದಲ್ಲಿ ಕಾರ್ಯಕರ್ತರು ಹೊಂದಾಗಿದ್ದಾರೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಶ್ರೀ ಸುರೇಶ್ ಬಾಬು ಅವರು, ಮಾಜಿ ಸಚಿವರಾದ ಡಿ.ಸಿ ತಮ್ಮಣ್ಣ ನವರು, ಪುಟ್ಟರಾಜು ಅವರು, ಬಿಜೆಪಿ ಮಾಜಿ ಶಾಸಕ ಪಿ. ರಾಜೀವ್ ಅವರು, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಇಂದ್ರೇಶ್ ಅವರು ಸೇರಿದಂತೆ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಜೊತೆಯಲಿದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ