ಉತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ-ಡಾ.ರಂಗನಾಥ ವೈದ್ಯ

ಉತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ-ಡಾ.ರಂಗನಾಥ ವೈದ್ಯ

ಮುದ್ದೇಬಿಹಾಳ : ಸಾರ್ವಜನಿಕರಿಗೆ ನಮ್ಮಿಂದ ಸಾಧ್ಯವಷ್ಟರ ಮಟ್ಟಿಗೆ ಉತ್ತಮ ಸೇವೆ ನೀಡಲು ಶ್ರಮಿಸುತ್ತೇವೆ.ಕೆಲವು ಸಂದರ್ಭಗಳಲ್ಲಿ ಜಿಲ್ಲಾ ಆಸ್ಪತ್ರೆಗೆ ಬರೆದುಕೊಡುವುದು ಅನಿವಾರ್ಯವಾಗುತ್ತದೆ.ಇಂತಹ ಸಮಯದಲ್ಲಿ ನಾಗರಿಕರು ಆರೋಗ್ಯ ಇಲಾಖೆ ವೈದ್ಯರು,ಸಿಬ್ಬಂದಿಯೊAದಿಗೆ ಸಂಯಮದಿAದ ನಡೆದುಕೊಳ್ಳಬೇಕು ಎಂದು ಪ್ರಸೂತಿ ತಜ್ಞ ಡಾ.ರಂಗನಾಥ ವೈದ್ಯ ಅಭಿಪ್ರಾಯಪಟ್ಟರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಗುರುವಾರ ಆರೋಗ್ಯ ರಕ್ಷಾ ಸಮಿತಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.ಮೊದಲಿನಂತೆ ಈಗ ವೈದ್ಯಕೀಯ ಸೇವೆ ಅಷ್ಟೊಂದು ಸುಲಭದ್ದಾಗಿಲ್ಲ.ಆದರೆ ಸರ್ಕಾರ ಒದಗಿಸಿರುವ ಸೌಲಭ್ಯಗಳಿಂದ ಜನರಿಗೆ ಉತ್ತಮ ಸೇವೆ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು.

ಆಡಳಿತ ವೈದ್ಯಾಧಿಕಾರಿ ಡಾ.ಪರಶುರಾಮ ವಡ್ಡರ, ಅತ್ಯಂತ ಕ್ರಿಯಾಶೀಲ ಹಾಗೂ ಪ್ರಸೂತಿ ವಿಭಾಗದಲ್ಲಿ ಉತ್ತಮ ಹೆಸರು ಮಾಡಿರುವ ಡಾ.ರಂಗನಾಥ ಅವರು ನಮ್ಮ ಆಸ್ಪತ್ರೆಗೆ ಆಗಮಿಸಿರುವುದು ಸಂತಸದ ಸಂಗತಿಯಾಗಿದ್ದು ಬಡವರಿಗೆ ಒಳ್ಳೆಯ ಸೇವೆ ನೀಡಲು ಮತ್ತಷ್ಟು ಶ್ರಮಿಸುತ್ತೇವೆ ಎಂದರು.

ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷ ಡಾ.ವಿಜಯಕುಮಾರ ಗೂಳಿ ಮಾತನಾಡಿ,ಸರ್ಕಾರಿ ಆಸ್ಪತ್ರೆಯಲ್ಲಿ ಬಡವರಿಗೆ ಏನೆಲ್ಲಾ ಸೇವೆ ಲಭ್ಯವಿದೆಯೋ ಅದನ್ನು ಒದಗಿಸುವುದಕ್ಕೆ ಆರೋಗ್ಯ ಇಲಾಖೆಯೊಂದಿಗೆ ನಾವೆಲ್ಲ ಕೈಜೋಡಿಸುತ್ತೇವೆ.ಇನ್ನೂ ಅಗತ್ಯವಿರುವ ಅನುದಾನವನ್ನು ಶಾಸಕರ ಗಮನಕ್ಕೆ ತಂದು ಒದಗಿಸಲು ಪ್ರಯತ್ನಿಸುತ್ತೇವೆ.ಆದರೆ ಸರ್ಕಾರಿ ಆಸ್ಪತ್ರೆಯ ಹೆಸರು ಒಳ್ಳೆಯ ರೀತಿಯಲ್ಲಿ ಬೆಳೆಸುವ ಜವಾಬ್ದಾರಿ ವೈದ್ಯಕೀಯ ಸಿಬ್ಬಂದಿ ಮೇಲಿದೆ ಎಂದರು.

ಪತ್ರಕರ್ತ ಶಂಕರ ಈ.ಹೆಬ್ಬಾಳ ಮಾತನಾಡಿ, ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಗೆ ಖ್ಯಾತ ಪ್ರಸೂತಿ ತಜ್ಞ ಡಾ.ರಂಗನಾಥ ವೈದ್ಯರವರು ಆಗಮಿಸಿರುವುದು ಬಡ ಮತ್ತು ಮಧ್ಯಮ ವರ್ಗದವರಿಗೆ ತುಂಬಾ ಅನುಕೂಲವಾಗಲಿದೆ.50-60 ಸಾವಿರ ರೂ.ಖಾಸಗಿ ಆಸ್ಪತ್ರೆಗಳಲ್ಲಿ ಹಣ ಕೊಟ್ಟು ಹೆರಿಗೆ ಮಾಡಿಸಿಕೊಂಡು ಬರುವ ಶಕ್ತಿ ಇಲ್ಲದವರಿಗೆ ಮುದ್ದೇಬಿಹಾಳ ಆಸ್ಪತ್ರೆಯ ಪ್ರಸೂತಿ ವಿಭಾಗ ಸಂಜೀವಿನಿಯAತೆ ಕೆಲಸ ಮಾಡಲಿದೆ.ಮುದ್ದೇಬಿಹಾಳದ ಸುತ್ತಮುತ್ತಲಿನ ಜನರು ಹೆರಿಗೆಗಾಗಿ ವಿಜಯಪುರ,ಬಾಗಲಕೋಟೆಗೆ ತೆರಳುವ ಬದಲು ತಾಲ್ಲೂಕು ಆಸ್ಪತ್ರೆಯಲ್ಲಿ ಉತ್ತಮ ಸೇವೆ ಇನ್ನು ಮುಂದೆ ದೊರೆಯುವ ಆಶಾಭಾವನೆ ವ್ಯಕ್ತವಾಗಿದೆ.ಸಾರ್ವಜನಿಕರು ಸರಕಾರಿ ಆಸ್ಪತ್ರೆ ವೈದ್ಯರು,ಸಿಬ್ಬಂದಿಯೊAದಿಗೆ ಸೌಜನ್ಯದಿಂದ ನಡೆದುಕೊಳ್ಳಬೇಕು.ಉತ್ತಮ ವೈದ್ಯರು ಲಭ್ಯವಿದ್ದು ಉತ್ತಮ ಆಸ್ಪತ್ರೆ ಪ್ರಶಸ್ತಿ ಮುದ್ದೇಬಿಹಾಳ ಸಾರ್ವಜನಿಕ ಆಸ್ಪತ್ರೆ ಪಡೆದುಕೊಳ್ಳುವಂತಾಗಲಿ ಎಂದು ಹೇಳಿದರು.

ಡಾ.ಶಿವಾನಂದ ನಾಡಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಕ್ಷತಾ ಚಲವಾದಿ, ರಾಜ್ಯ ಸರ್ಕಾರಿ ನೌಕರ ಸಂಘದ ನಿರ್ದೇಶಕ ವಿಠ್ಠಲ ಕಿಲಾರಟ್ಟಿ, ಶುಶ್ರೂಷಕ ಸಂಘದ ಮುಖಂಡ ಶಿವಣ್ಣ ಮಾಗಿ ಮಾತನಾಡಿದರು. ಆರೋಗ್ಯ ರಕ್ಷಾ ಸಮೀತಿ ನಾಮನಿರ್ದೇಶಿತ ಸದಸ್ಯರಾದ ಶಿವನಗೌಡ ಪಾಟೀಲ, ಮಹ್ಮದರಫೀಕ ಶಿರೋಳ,ಸದು ಮಠ,ಅಂಬರೀಶ ಬಿರಾದಾರ,ಮಾಬೂಬಿ ಬಾಗವಾನ,ಡಾ.ಕೌಸರ,ಇಲಾಖೆ ನೌಕರರರಾದ ಮೊಮ್ಮದರಫಿಕ ಬಾಗವಾನ, ಅಯ್ಯಮ್ಮ ಕೊಣ್ಣೂರ , ಬಸವರಾಜ ಹಾವೇರಿ, ಬಸವರಾಜ ಬಡಿಗೇರ, ಯಲಗೂರೇಶ ತೊನಶ್ಯಾಳ , ರೇಖಾ ಜಾಯಗೊಂಡ, ಸಂತೋಷ ಅಂಗಡಗೇರಿ, ವೀರೇಶ್ ಜಿಂಜಿಗಡ್ಡಿ ,ರಾಜು ರಾಥೋಡ, ಪ್ರವೀಣ್ ಓದಿ, ಬಗಲಿ, ವಿ ವಿ.ಪವಾಡಶೆಟ್ಟಿ ಮಾಂತೇಶ ಹಿರೇಮಠ ಪಾಲ್ಗೊಂಡಿದ್ದರು.

Latest News

ಬೆಳಗಾವಿ ರಾಣಿ ಚೆನ್ನಮ್ಮ ವಿವಿ ಸಿಂಡಿಕೇಟ್‌ಗೆ ಹೊಸಮನಿ ನಾಮನಿರ್ದೇಶನ

ಬೆಳಗಾವಿ ರಾಣಿ ಚೆನ್ನಮ್ಮ ವಿವಿ ಸಿಂಡಿಕೇಟ್‌ಗೆ ಹೊಸಮನಿ ನಾಮನಿರ್ದೇಶನ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕು ಕುಂಟೋಜಿ ಗ್ರಾಮದ ನಿವಾಸಿ, ಬಸವನ ಬಾಗೇವಾಡಿ ತಾಲೂಕಿನ

ಆಲಿಕಲ್ಲು ಮಳೆಯಿಂದ ಬೆಳೆ‌ ಹಾನಿ:                                            3 ದಿನದೊಳಗೆ‌ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ‌

ಆಲಿಕಲ್ಲು ಮಳೆಯಿಂದ ಬೆಳೆ‌ ಹಾನಿ: 3 ದಿನದೊಳಗೆ‌ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ‌

ವಿಜಯಪುರ : ಇತ್ತೀಚಿಗೆ ಬೀಸಿದ‌‌ ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯಿಂದಾಗಿ ಕೃಷಿ, ತೋಟಗಾರಿಕಾ ಬೆಳೆ

ಇನ್ನೊಬ್ಬರ ಬೆಳವಣಿಗೆ ನೋಡಿ ಉರಿಯಬೇಡಿ-ಸಿದ್ಧಲಿಂಗ ದೇವರು

ಇನ್ನೊಬ್ಬರ ಬೆಳವಣಿಗೆ ನೋಡಿ ಉರಿಯಬೇಡಿ-ಸಿದ್ಧಲಿಂಗ ದೇವರು

ಮುದ್ದೇಬಿಹಾಳ : ದ್ವೇಷ ಮಾಡದೇ ಇರುವಷ್ಟು ದಿನ ಒಳ್ಳೆಯ ಕೆಲಸಗಳನ್ನು ಮಾಡಿ.ಪರಸ್ಪರ ಕಾಲೆಳೆಯಬೇಡಿ.ದ್ವೇಷ ಮಾಡಬೇಡಿ.ಇನ್ನೊಬ್ಬರ

ಶ್ರದ್ಧೆಯಿಂದ ಹಬ್ಬದಾಚರಣೆಗಳಲ್ಲಿ ತೊಡಗಿ-ಪೇಶ ಇಮಾಮ್

ಶ್ರದ್ಧೆಯಿಂದ ಹಬ್ಬದಾಚರಣೆಗಳಲ್ಲಿ ತೊಡಗಿ-ಪೇಶ ಇಮಾಮ್

ಮುದ್ದೇಬಿಹಾಳ : ಯಾರು ರಂಜಾನ್ ಮಾಸದಲ್ಲಿ ಶ್ರದ್ಧೆಯಿಂದ ನಮಾಜ್, ರೋಜಾ, ಕುರಾನ್ ತಿಲಾವತ್ ಹಾಗೂ

ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ?-ಶಾಸಕ ನಾಡಗೌಡ ಪ್ರಶ್ನೆ

ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ?-ಶಾಸಕ ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಮತಕ್ಷೇತ್ರದ ತಾಳಿಕೋಟಿ ತಾಲ್ಲೂಕಿನಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ತಮ್ಮ ಅವಧಿಯಲ್ಲಿ ಜಾಗೆ ಗುರುತಿಸುವುದನ್ನು ಬಿಟ್ಟು ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ಎಂದು ಶಾಸಕ ಸಿ.ಎಸ್.ನಾಡಗೌಡ ಮಾಜಿ ಶಾಸಕ ನಡಹಳ್ಳಿ ಅವರಿಗೆ ಪ್ರಶ್ನಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಶಾಸಕರಾಗಿದ್ದುಕೊಂಡು ಐದು ವರ್ಷ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಶ್ರಮಿಸದೇ ನಿದ್ದೆ ಮಾಡಿದ್ರಾ ನೀವು ? ಎಂದ ನಾಡಗೌಡ, ನಿಮಗೇಕೆ ಜಾಗೆ ಗುರುತಿಸಲಾಗಲಿಲ್ಲ.ನಿಮ್ಮಲ್ಲಿ ಇಚ್ಛಾಶಕ್ತಿ

ಮಾ.20 ರಂದು ತಂಗಡಗಿಯಲ್ಲಿ ದುರ್ಗಾದೇವಿ ಜಾತ್ರೆ,ಸಾಮೂಹಿಕ ವಿವಾಹ

ಮಾ.20 ರಂದು ತಂಗಡಗಿಯಲ್ಲಿ ದುರ್ಗಾದೇವಿ ಜಾತ್ರೆ,ಸಾಮೂಹಿಕ ವಿವಾಹ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ದುರ್ಗಾದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.20 ರಂದು ಸಾಮೂಹಿಕ ವಿವಾಹ ಕಾರ್ಯಕ್ರಮಗಳು ನಡೆಯಲಿದೆ. ಜಾತ್ರೆಯ ನಿಮಿತ್ಯ ಬೆಳಗ್ಗೆ 8.30ಕ್ಕೆ 101 ಕುಂಭಮೇಳ ಹಾಗೂ ಅಗ್ನಿಪ್ರವೇಶ ಕಾರ್ಯಕ್ರಮ ಜರುಗಲಿದೆ.ಮದ್ಯಾಹ್ನ 12ಕ್ಕೆ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿವೆ. ಕಾರ್ಯಕ್ರಮದ ನೇತೃತ್ವ ದೇವಿ ಆರಾಧಕ ಶಾಂತಪ್ಪ ಪೂಜಾರಿ ಅವರು ವಹಿಸಿಕೊಂಡಿದ್ದು ದಿವ್ಯ ಸಾನಿಧ್ಯವನ್ನು ಬಿಲ್‌ಕೆರೂರನ ಸಿದ್ಧಲಿಂಗ ಶಿವಾಚಾರ್ಯರು, ಪದ್ಮಶ್ರೀ ಪ್ರಶಸ್ತಿ ವಿಜೇತೆ ಮಾತಾ ಮಂಜಮ್ಮ ಜೋಗತಿ,ಬಸವನ ಬಾಗೇವಾಡಿಯ