ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮುದ್ದೇಬಿಹಾಳ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಾಲಕರು ಮಕ್ಕಳ ಮೇಲೆ ಅನಗತ್ಯ ಒತ್ತಡ ಹೇರುವುದನ್ನು ಕೈಬಿಡಬೇಕು. ಮಕ್ಕಳನ್ನು ಕೇವಲ ಅಂಕ ತುಂಬುವ ಚೀಲವನ್ನಾಗಿ ಮಾಡುವ ಮನೋಭಾವದಿಂದ ಹೊರಬಂದು, ಅವರಲ್ಲಿ ಜ್ಞಾನ ಮತ್ತು ಸಾಧನೆಯ ಹಸಿವನ್ನು ಬೆಳೆಸಬೇಕು ಎಂದು ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಎಂ.ಎಂ.ಬೆಳಗಲ್ಲ ಹೇಳಿದರು.

ಪಟ್ಟಣದ ತಂಗಡಗಿ ರಸ್ತೆಯ ಶಿವಾಚಾರ್ಯ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಭಾನುವಾರ ಸ್ವಾಮಿ ವಿವೇಕಾನಂದ ಇಂಟರ್ನ್ಯಾಷನಲ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಹಾಗೂ ಚಾಲೆಂಜ್ ನವೋದಯ ಕೋಚಿಂಗ್ ಕ್ಲಾಸಸ್‌ನಿಂದ ಹಮ್ಮಿಕೊಂಡಿದ್ದ ‘ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನಾ ಪ್ರಶಸ್ತಿ’ ಹಾಗೂ ‘ಟ್ಯಾಲೆಂಟ್ ಅವಾರ್ಡ್ ಸ್ಕಾಲರ್‌ಶಿಪ್ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಪಾಲಕರು ಕೇವಲ ಫಲಿತಾಂಶದ ಹಿಂದೆ ಬೀಳದೆ, ಮಕ್ಕಳಲ್ಲಿ ಕೌಶಲ ಮತ್ತು ಜ್ಞಾನವೃದ್ಧಿಗೆ ಸಹಕರಿಸಬೇಕು. ಸಂಸ್ಕಾರಯುತ ಶಿಕ್ಷಣದೊಂದಿಗೆ ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು ಎಂದು ಅವರು ಕಿವಿಮಾತು ಹೇಳಿದರು.

ಪಶು ಆಸ್ಪತ್ರೆಯ ವೈದ್ಯ ಡಾ. ಸುರೇಶ್ ಭಜಂತ್ರಿ ಮಾತನಾಡಿ, ವಿದ್ಯಾರ್ಥಿಗಳು ಗುರಿ ಮುಟ್ಟುವ ಕಡೆಗೆ ದೃಢವಾದ ಯೋಜನೆಯನ್ನು ಹೊಂದಿರಬೇಕು ಎಂದರು.

ಎಸ್.ಎನ್.ಡಿ. ಶಾಲೆಯ ಅಧ್ಯಕ್ಷ ಮಂಜುನಾಥ ಕೊಪ್ಪ ಮಾತನಾಡಿದರು.ದಿವ್ಯ ಸಾನಿಧ್ಯ ಶರಣಸೋಮನಾಳದ ಬಸವಲಿಂಗೇಶ್ವರ ಮಠದ ಶಿವಪುತ್ರ ಸ್ವಾಮೀಜಿ,ಕವಡಿಮಟ್ಟಿ ಹಿರೇಮಠದ ಬಸವಪ್ರಭು ಹಿರೇಮಠ, ದುರ್ಗಾದೇವಿ ಆಶ್ರಮದ ಉಪಾಸಕ ಲಾಲಲಿಂಗೇಶ್ವರ ಶರಣರು, ನಿವೃತ್ತ ಪ್ರಾಧ್ಯಾಪಕ ಎಸ್.ಎಸ್. ಹೂಗಾರ, ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮುಖ್ಯಗುರು ಇಸ್ಮಾಯಿಲ್ ಮನಿಯಾರ, ಚಾಲೆಂಜ್ ನವೋದಯ ಕೋಚಿಂಗ್ ಶಾಲೆ ಅಧ್ಯಕ್ಷ ವೀರೇಶ ಹವಾಲ್ದಾರ, ಮುಖ್ಯಗುರುಮಾತೆ ವಿಜಯಲಕ್ಷ್ಮಿ ಹವಾಲ್ದಾರ,ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ಅಧ್ಯಕ್ಷ ವೀರೇಶ ಗುರುಮಠ ಮತ್ತಿತರರು ಉಪಸ್ಥಿತರಿದ್ದರು. ಟ್ಯಾಲೆಂಟ್ ಅವಾರ್ಡ್ ವಿಜೇತರು:ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸುಮಾರು 200 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದರು. 4ನೇ ತರಗತಿ: ಸಾನಿಧ್ಯಾ (ಪ್ರಥಮ), ಬೃಂದಾ ಅಲ್ಲಾಪುರ ಹಾಗೂ ಅಭಿಜ್ಞಾ (ದ್ವಿತೀಯ), ಅನ್ವಿತಾ ರಕ್ಕಸಗಿ (ತೃತೀಯ).5ನೇ ತರಗತಿ: ಸಾಕ್ಷಿ ವಡಗೇರಿ (ಪ್ರಥಮ), ಶಶಾಂಕ್ ಪಾಟೀಲ್ (ದ್ವಿತೀಯ), ವೀರೇಶ್ ಜಾಲಹಳ್ಳಿ (ತೃತೀಯ).

ಸಾಧಕರಿಗೆ ಪ್ರಶಸ್ತಿ ಗೌರವ: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರಿಗೆ ‘ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನಾ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಹೋರಾಟ ಕ್ಷೇತ್ರದಲ್ಲಿ ಪ್ರಶಾಂತ್ ಕಾಳೆ, ಮಾಧ್ಯಮ ಕ್ಷೇತ್ರದಲ್ಲಿ ಪತ್ರಕರ್ತ ಬಸವರಾಜ ಈ. ಕುಂಬಾರ (ಚವನಭಾವಿ), ದೇಶ ಸೇವೆಯಲ್ಲಿ ಸೈನಿಕ ಬಸವರಾಜ ಎಸ್. ಶಿಕ್ಷಣ ಕ್ಷೇತ್ರದದಲ್ಲಿ ಪಿ.ಪಿ. ಮುರಡಿ, ಡಾ. ಎಸ್.ಎಸ್. ಒಡೆಯರ್, ಬಸಮ್ಮ ಪಟ್ಟಣಶೆಟ್ಟಿ, ಶಾಂತಾ ಎಚ್., ಶಾಮಿಮಬಾನು ತೆಲಸಂಗ, ಮಹಮ್ಮದಯೂಸುಫ್ ಅವಟಿ, ಅರವಿಂದ್ ಬಿರಾದಾರ, ಜಿ.ವಿ. ಹಾದಿಮನಿ, ಚಾಮುಂಡೇಶ್ವರಿ ಹಿರೇಮಠ, ಬಸವರಾಜ ಕಾಳಪ್ಪನವರ, ಎಂ.ವೈ. ಕಳ್ಳಿಮನಿ, ಶರಣಮ್ಮ ಬಿರಾದಾರ, ಅಂಬಿಕಾ ಕರಕೊಪ್ಪಗೋಳ, ದೀಪಾ ಕೇಶ್ವಾಪೂರ, ರವಿ ಲಮಾಣಿ, ಬಸವರಾಜ್ ಮೂಲಿಮನಿ, ಆಯೇಷಾ ನದಾಫ್, ಕೆ.ಎಂ. ಲಮಾಣಿ, ಪಿ.ಎಂ. ಕೊಪ್ಪದ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Latest News

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ :                                              ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ : ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರು ಕಾಯಕದ ಮಹತ್ವ ಸಾರುವ

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

ಮುದ್ದೇಬಿಹಾಳ : ರಾಜ್ಯಾದ್ಯಂತ ಬರದ ಪರಿಸ್ಥಿತಿ ಇದ್ದರೂ ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲ್ಲೂಕುಗಳನ್ನು

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ

ಕಲಾವಿದರ ಸಂಘ ಉದ್ಘಾಟನೆ:                                                           ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಕಲಾವಿದರ ಸಂಘ ಉದ್ಘಾಟನೆ: ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು ಎಂದು ಎಲ್ಲರೂ ಹೇಳುತ್ತಾರೆ.ಆದರೆ ಜನರು,ಸಮಾಜ ಬಯಸುವುದನ್ನೇ ಬಡ ಕಲಾವಿದರು ನೀಡುತ್ತಾರೆ.ಮೊದಲು ಸಮಾಜ ಯಾವುದನ್ನು ಕಲಾವಿದರಿಂದ ಬಯಸಬೇಕು ಎಂಬುದನ್ನು ಆತ್ಮಾವಲೋಕನಕ್ಕೆ ಇದು ಸಕಾಲ ಎಂದು ಹಾಸ್ಯ ಕಲಾವಿದ ಗೋಪಾಲ ಹೂಗಾರ ಹೇಳಿದರು. ಪಟ್ಟಣದ ಓಸ್ವಾಲ್ ಫಂಕ್ಷನ್ ಹಾಲ್ನಲ್ಲಿ ಹಮ್ಮಿಕೊಂಡಿದ್ದ ಪಂ.ಪುಟ್ಟರಾಜ ಗವಾಯಿಗಳ ಜನಪದ ಹಾಗೂ ಸಾಂಸ್ಕೃತಿಕ ಕಲಾವಿದರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಬಹುತೇಕ ಕಡೆಗಳಲ್ಲಿ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ ಅರ್ಹತೆಯಾಗಿದೆ.ಒಳ್ಳೆಯ ಸೇವೆ ನೀಡುವುದನ್ನು ಮುಂದುವರೆಸಿಕೊoಡು ಸಾಗಿ ಎಂದು ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿ ಆಸ್ಪತ್ರೆಯ ಮೂಲಸೌಕರ‍್ಯಗಳನ್ನು ವೀಕ್ಷಿಸಿ ಬಾಣಂತಿಯರ ಕೊಠಡಿ,ಹೆರಿಗೆ ಕೊಠಡಿಗಳನ್ನು ಪರಿಶೀಲನೆ ನಡೆಸಿದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದಿದ್ದ ರೋಗಿಗಳನ್ನು ಅವರ ಸಂಬoಧಿಕರನ್ನು ಮಾತನಾಡಿಸಿ ಆಸ್ಪತ್ರೆಯ ಸೇವೆ ಬಗ್ಗೆ ಮೆಚ್ಚುಗೆ