ಯಲಗೂರ ಗೋಶಾಲೆಗೆ ಐದು ಟ್ರಾಕ್ಟರ್ ಮೇವು ಕೊಡುಗೆ

ಯಲಗೂರ ಗೋಶಾಲೆಗೆ ಐದು ಟ್ರಾಕ್ಟರ್ ಮೇವು ಕೊಡುಗೆ

ಮುದ್ದೇಬಿಹಾಳ : ಈಚೆಗೆ ಮುದ್ದೇಬಿಹಾಳದಲ್ಲಿ ಜರುಗಿದ್ದ ಹಿಂದೂ ಮಹಾಸಮ್ಮೇಳನದಲ್ಲಿ ಜಮಾಖರ್ಚು ಆಗಿ ಉಳಿತಾಯದ ಹಣದಲ್ಲಿ ಯಲಗೂರಿನ ಗೋಶಾಲೆಗೆ ಇಲ್ಲಿನ ಹಿಂದೂ ಸಮಾಜದ ಬಾಂಧವರು ಐದು ಟ್ರಾö್ಯಕ್ಟರ್‌ನಷ್ಟು ಮೇವು ಕಾಣಿಕೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಪಟ್ಟಣದ ಹನುಮಾನ ದೇವಸ್ಥಾನದಲ್ಲಿ ಬುಧವಾರ ಸಂಜೆ ಮೇವು ತುಂಬಿದ್ದ ಟ್ರಾö್ಯಕ್ಟರ್‌ಗಳಿಗೆ ಪೂಜೆ ಸಲ್ಲಿಸಿ ಬೀಳ್ಕೊಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಯಲಗೂರ ಗೋಶಾಲೆ ಕಾರ್ಯದರ್ಶಿ ವಿಠ್ಠಲ ಬಿರಾದಾರ, ಇದೇ ಮೊದಲ ಬಾರಿಗೆ ಮುದ್ದೇಬಿಹಾಳದ ಹಿಂದೂ ಸಮಾಜದವರು ಗೋವುಗಳಿಗೆ ಇಂತಹ ಕಷ್ಟಕಾಲದಲ್ಲಿ ಮೇವು ಒದಗಿಸುವ ಮೂಲಕ ಮೂಕ ಜಾನುವಾರುಗಳಿಗೆ ಆಸರೆಯಾಗಿದ್ದಾರೆ.ಸಮಾಜದಲ್ಲಿ ಸಾಕಷ್ಟು ಸಿರಿವಂತರು,ಉಳ್ಳವರು ಇದ್ದು ವ್ಯರ್ಥವಾಗಿ ಯಾವುದಕ್ಕೋ ಖರ್ಚು ಮಾಡುತ್ತಾರೆ.ಆದರೆ ನಮಗೆ ಕಾಮಧೇನು ಸ್ವರೂಪವಾಗಿರುವ ಗೋವಿನ ಸಂತತಿ ಉಳಿವಿಗೆ ಹಿಂದೇಟು ಹಾಕುತ್ತಾರೆ.ಆದರೆ ಮುದ್ದೇಬಿಹಾಳದ ಸಮಾಜದ ಬಾಂಧವರು ಇಂತಹದ್ದೊAದು ಮಾನವೀಯ ಸೇವೆ ಇಡೀ ರಾಜ್ಯಕ್ಕೆ ಮಾದರಿಯಾದ ಕಾರ್ಯವಾಗಲಿದೆ ಎಂದು ಹೇಳಿದರು.

ಹಿಂದೂ ಸಮಾಜದ ಮುಖಂಡ ಪ್ರಭು ಕಡಿ ಮಾತನಾಡಿ, ಹಿಂದೂ ಮಹಾ ಸಮ್ಮೇಳನದಲ್ಲಿ ಉಳಿದ ಹಣದಲ್ಲಿ ಗೋವುಗಳಿಗೆ ಸಹಾಯ ಮಾಡಬೇಕು ಎಂಬ ಒಮ್ಮತದ ತೀರ್ಮಾನವನ್ನು ಕೈಗೊಂಡು ಜಾನುವಾರುಗಳಿಗೆ ಮೇವು ಒದಗಿಸುವ ಸೇವೆ ಕೈಗೊಳ್ಳಲಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಹಿಂದೂ ಸಮಾಜದ ಪ್ರಮುಖರಾದ ವೆಂಕನಗೌಡ ಪಾಟೀಲ, ಮಾಣಿಕಚಂದ ದಂಡಾವತಿ, ಮುರಿಗೆಪ್ಪ ಮೋಟಗಿ,ಸಂಗಮೇಶ ನಾವದಗಿ, ಗುರುಸ್ವಾಮಿ ಬೂದಿಹಾಳಮಠ, ಉಮಾರಾಮ್ ಪಟೇಲ್,ಅಶೋಕ ಮಣಿ, ಮಹಾಂತೇಶ ಬೂದಿಹಾಳಮಠ, ಕಾಶೀನಾಥ ಹುಗ್ಗಿ, ಸುರೇಶ ಕಲಾಲ,ವಿಕ್ರಮ ಓಸ್ವಾಲ್,ಸಂಗನಗೌಡ ಪಾಟೀಲ,ಮೋತಿಲಾಲ ಕಲಾಲ,ಶ್ರೀಕಾಂತ ಹಿರೇಮಠ ಮೊದಲಾದವರು ಇದ್ದರು.ಬಜಾರ್ ಹನುಮಾನ ದೇವಸ್ಥಾನದಿಂದ ಪ್ರಮುಖ ಬೀದಿಯಲ್ಲಿ ಮೇವು ತುಂಬಿದ್ದ ಟ್ರಾö್ಯಕ್ಟರ್‌ಗಳನ್ನು ಮೆರವಣಿಗೆ ಮೂಲಕ ಯಲಗೂರಕ್ಕೆ ಕಳಿಸಿಕೊಡಲಾಯಿತು.

ಗೋವುಗಳು ಎಲ್ಲಿಯವರೆಗೆ ನಿಮಗೆ ಉಪಯೋಗಕ್ಕೆ ಬರುತ್ತವೆ ಅವುಗಳನ್ನು ಬಳಸಿಕೊಳ್ಳಿ.ಅವುಗಳಿಂದ ಉಪಯೋಗ ಇಲ್ಲ ಎಂದಾದಾಗ ಯಲಗೂರ ಗೋಶಾಲೆಗೆ ನೀಡಿ ನಾವು ಸಾಕುತ್ತೇವೆ.ದಯವಿಟ್ಟು ಅವುಗಳನ್ನು ಕೊಲ್ಲುವುದಕ್ಕೆ ಕೊಡಬೇಡಿ.
–ವಿಠಲ ಬಿರಾದಾರ,ಯಲಗೂರ ಗೋಶಾಲೆ ಕಾರ್ಯದರ್ಶಿ

Latest News

ಮಾನವ ಬಂಧುತ್ವ ವೇದಿಕೆ ಖಂಡನೆ :                                ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮಾನವ ಬಂಧುತ್ವ ವೇದಿಕೆ ಖಂಡನೆ : ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮುದ್ದೇಬಿಹಾಳ : ಉತ್ತರಖಂಡದ ರಾಮಲೀಲಾ ಮೈದಾನದಲ್ಲಿನ ಸಾರ್ವಜನಿಕ ಸ್ಥಳದಲ್ಲಿ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿರುವ ಜನಪದ ಕಲೆಗಳನ್ನು,ಕಲಾವಿದರನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ವಿಜಯಪುರ: ನಾವು ನಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಲು ದುಶ್ಚಟಗಳಿಂದ ದೂರ ಇರಬೇಕೆಂದು ನಗರದ ಪ್ರಜಾಪಿತ ಬ್ರಹ್ಮಕುಮಾರಿ

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ  ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಮುದ್ದೇಬಿಹಾಳ : ಹಾಸ್ಯ ಕಲಾವಿದ ,ಶಿಕ್ಷಕ ಗೋಪಾಲ ಎನ್.ಹೂಗಾರ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಕಲಾಸಿಂಚನ ಸಾಂಸ್ಕೃತಿಕ ಸಂಸ್ಥೆಯಿoದ ಗೋಪಾಲ ಹೂಗಾರ ಅವರ ಜನುಮದಿನದ ನಿಮಿತ್ಯವಾಗಿ ಯರಗಲ್ಲ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 500 ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಿಸುವ ಕಾರ್ಯ ಕೈಗೊಳ್ಳಲಾಯಿತು. ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಬಿ.ಧಮ್ಮೂರಮಠ ಮಾತನಾಡಿ, ಭಗವಂತ ಎಲ್ಲರಿಗೂ ಎಲ್ಲವನ್ನೂ ಕೊಟ್ಟಿರುತ್ತಾನೆ. ಆದರೆ ಕೊಡುವ ಮನಸ್ಸನ್ನು ಕೆಲವರಿಗೆ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು:       ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು: ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ನಾಮಪತ್ರ ತಿರಸ್ಕೃತಗೊಂಡು ಹೈಕೋರ್ಟ್ ಆದೇಶದೊಂದಿಗೆ ಕಣದಲ್ಲಿ ಉಳಿದಿದ್ದ ನಾಲ್ವರು ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದ್ದಾರೆ. ಪಟ್ಟಣದ ಅಂಜುಮನ್ ಹೈಸ್ಕೂಲ್‌ನಲ್ಲಿ ಸೋಮವಾರ ಸಂಜೆ 4.30ಕ್ಕೆ ಆರಂಭಗೊoಡ ಮತ ಎಣಿಕೆ ಕಾರ್ಯ ರಾತ್ರಿ 12 ಗಂಟೆಗೆ ಪೂರ್ಣಗೊಂಡಿತು.ಮತಎಣಿಕೆ ಕಾರ್ಯವನ್ನು ಕಂದಾಯ ಇಲಾಖೆಯವರಿಗೆ ವಹಿಸಿದ್ದರಿಂದ ಯಾವುದೇ ಗೊಂದಲಗಳಿಲ್ಲದoತೆ ಫಲಿತಾಂಶ ಪ್ರಕಟಿಸಲಾಯಿತು. ಚುನಾವಣಾಧಿಕಾರಿಯೂ ಆಗಿರುವ ಹೆಚ್ಚುವರಿ ಜಿಲ್ಲಾಧಿಕಾರಿ ಔದ್ರಾಮ್,