ಏ.5 ರಂದು ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ ಪರೀಕ್ಷೆ: ನಮ್ಮದು ಬಡ ಪ್ರತಿಭಾವಂತ ಮಕ್ಕಳನ್ನು ಬೆಳೆಸುವ ಸಂಸ್ಥೆ-ಎಂ.ಎನ್.ಮದರಿ

ಏ.5 ರಂದು ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ ಪರೀಕ್ಷೆ: ನಮ್ಮದು ಬಡ ಪ್ರತಿಭಾವಂತ ಮಕ್ಕಳನ್ನು ಬೆಳೆಸುವ ಸಂಸ್ಥೆ-ಎಂ.ಎನ್.ಮದರಿ

ಮುದ್ದೇಬಿಹಾಳ : ನಮ್ಮ ಸಂಸ್ಥೆಯ ಆರಂಭದಿAದ ಇಲ್ಲಿಯವರೆಗೂ ಬಡ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಅವರಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಕಾರ್ಯ ಮಾಡುತ್ತಿದೆ ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು.

ಪಟ್ಟಣದ ಹುಡ್ಕೋದಲ್ಲಿರುವ ಎನ್.ಎಸ್.ಪೂಜಾರಿ ಕನ್ಸಟ್ರಕ್ಷನ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಬಡವರ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಬೇಕು ಎಂಬ ಗುರಿಯನ್ನಿಟ್ಟುಕೊಂಡು ನಾವು ಮುದ್ದೇಬಿಹಾಳ,ಕೋಳೂರು ಹಾಗೂ ಅಡವಿ ಹುಲಗಬಾಳದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿದ್ದೇವೆ. ನಮ್ಮ ಸಂಸ್ಥೆಯಲ್ಲಿ ಓದಿದ 10 ವಿದ್ಯಾರ್ಥಿಗಳು ಕೃಷಿ ವಿಜ್ಞಾನ ವಿಭಾಗಕ್ಕೆ ಆಯ್ಕೆಯಾಗಿದ್ದಾರೆ.8 ವಿದ್ಯಾರ್ಥಿಗಳು ಸೈನಿಕ ಶಾಲೆಗೆ ಆಯ್ಕೆಯಾಗಿದ್ದಾರೆ ಎಂದು ಹೇಳಿದರು.

2017ರಿಂದ ಬಿಪಿಎಲ್ ಕಾರ್ಡ ಹೊಂದಿದ ಮಕ್ಕಳಿಗೆ ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯಿAದ ಬಡವರು,ಕೂಲಿ ಕಾರ್ಮಿಕರ ಮಕ್ಕಳಿಗೆ ಗ್ರಾಮೀಣ ಮಟ್ಟದಲ್ಲಿ ಶಾಲೆಗಳನ್ನು ಆರಂಭಿಸಿ ಉಚಿತ ಶಿಕ್ಷಣ ಕೊಡುವ ಕಾರ್ಯ ಮಾಡುತ್ತಿದೆ.ತಂದೆ ತಾಯಿ ಇಲ್ಲದ ಮಕ್ಕಳಿದ್ದರೆ ಅವರಿಗೆ ಉಚಿತವಾಗಿ ಶಿಕ್ಷಣ ಕೊಡುವ ಕಾರ್ಯ ಮಾಡುತ್ತಿದ್ದೇವೆ. ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ ಪರೀಕ್ಷೆಯಲ್ಲಿ ವಿಜೇತರಾಗುವ 15 ವಿದ್ಯಾರ್ಥಿಗಳನ್ನು ಎರಡು ವರ್ಷದವರೆಗೆ ಉಚಿತ ಊಟ,ವಸತಿ ಸಮೇತ ಶಿಕ್ಷಣ ನೀಡುವ ಕಾರ್ಯ ಮಾಡುತ್ತಾ ಬಂದಿದ್ದೇವೆ.ತಾಲ್ಲೂಕಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುವ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಡಾ.ಎಚ್.ಬಿ.ವಾಲೀಕಾರ ಅವರ ಮಾರ್ಗದರ್ಶನದಲ್ಲಿ ಸ್ಪರ್ಧಾತ್ಮಕ ಕೋರ್ಸ್ಗಳನ್ನು ಆರಂಭಿಸಲಾಗುತ್ತಿದೆ.ಪ್ರಸಕ್ತ ವರ್ಷದಿಂದಲೇ ಧಾರವಾಡದಲ್ಲಿ ಹೊಸದಾಗಿ ಕಟ್ಟಡ ನಿರ್ಮಿಸಿದ್ದು ನುರಿತ ಶಿಕ್ಷಣ ತಜ್ಞರನ್ನು ಕರೆಯಿಸಿ ಅವರಿಂದ ಆನಲೈನ್ ಕ್ಲಾಸ್‌ಗಳನ್ನು ಆರಂಭಿಸಲು ಸಿದ್ಧತೆ ಕೈಗೊಂಡಿದ್ದೇವೆ.10ನೇ ತರಗತಿ, ಪಿಯುಸಿ ತರಗತಿ ಓದುವ ವಿದ್ಯಾರ್ಥಿಗಳಿಗೆ ನೇರವಾಗಿ ಡಾ.ವಾಲೀಕಾರ ಅವರು ತರಗತಿಗಳನ್ನು ನಡೆಸಿಕೊಡಲಿದ್ದಾರೆ ಎಂದು ತಿಳಿಸಿದರು. ಪರೀಕ್ಷೆಯಲ್ಲಿ ಆಯ್ಕೆಯಾದವರಿಗಷ್ಟೇ ಪ್ರಶಸ್ತಿ ನೀಡುವುದಲ್ಲದೇ ಪರೀಕ್ಷೆಗೆ ಹಾಜರಾದವರಿಗೂ ಶುಲ್ಕದಲ್ಲಿ ರಿಯಾಯಿತಿ ನೀಡಲಾಗುತ್ತದೆ. ಈ ಸಂದರ್ಭದಲ್ಲಿ ಸಂಸ್ಥೆಯ ಲೆಕ್ಕಾಧಿಕಾರಿ ಬಸವರಾಜ ಬಿಜ್ಜೂರ, ಮಾರ್ಗದರ್ಶಕರಾದ ರವಿ ಜಗಲಿ, ಬಸವರಾಜ ಗೂಡಲಮನಿ ಇದ್ದರು.

ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಎಕ್ಸಾಂ: ಏ.5 ರಂದು ಬೆಳಿಗ್ಗೆ 11.30ಕ್ಕೆ ನಡೆಯಲಿರುವ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯನ್ನು ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆದಿರುವ ರಾಜ್ಯ,ಸಿಬಿಎಸ್‌ಇ ಹಾಗೂ ಐಸಿಎಸ್‌ಇ ವಿದ್ಯಾರ್ಥಿಗಳು ಬರೆಯಬಹುದಾಗಿದ್ದು ಪ್ರಥಮ ಬಹುಮಾನ 10 ಸಾವಿರ ರೂ.ನಗದು ಸೇರಿ 1.60 ಲಕ್ಷ ರೂ.ಶಿಷ್ಯವೇತನ,ಎರಡನೇ ಬಹುಮಾನ 7 ಸಾವಿರ ನಗದು ಸೇರಿ 1.57 ಲಕ್ಷ ರೂ.ಶಿಷ್ಯವೇತನ ಹಾಗೂ ಮೂರನೇ ಬಹುಮಾನ ಐದು ಸಾವಿರ ರೂ.ನಗದು ಸೇರಿ 1.55 ಲಕ್ಷ ರೂ.ಶಿಷ್ಯವೇತನ ನೀಡಲಾಗುತ್ತದೆ.ಪ್ರತಿಭಾನ್ವಿತ 15 ವಿದ್ಯಾರ್ಥಿಗಳಿಗೆ ಎರಡು ವರ್ಷದ ಉಚಿತ ಶಿಕ್ಷಣ ನೀಡಲಾಗುವುದು.ಪರೀಕ್ಷೆ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಕಾಲೇಜು ಮುದ್ದೇಬಿಹಾಳದಲ್ಲಿ ನಡೆಸಲಾಗುತ್ತದೆ ಎಂದು ಸಂಸ್ಥೆಯ ಕಾರ್ಯದರ್ಶಿ ಎಂ.ಎನ್.ಮದರಿ ತಿಳಿಸಿದರು.

ಪರೀಕ್ಷೆಗೆ ನೋಂದಣಿ: ವಿದ್ಯಾರ್ಥಿಯ ಹೆಸರು- ವರ್ಗ-ಶಾಲೆ ಹೆಸರು-ವಿಳಾಸ-ಮೊಬೈಲ್ ಸಂಖ್ಯೆ ಟೈಪ್ ಮಾಡಿ 8147576710ಗೆ ಎಸ್.ಎಂ.ಎಸ್ ಮಾಡಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ 9945994710,9901847211,7795121761 ಸಂಪರ್ಕಿಸಬಹುದಾಗಿದೆ.

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ