ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ ಭಾಗದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು.

ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸೈನ್ಸ್ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಅವಾರ್ಡ್ ಸ್ಪರ್ಧೆಯಲ್ಲಿ ಅವರು ಮಾತನಾಡಿದರು.

ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಸಂಸ್ಕಾರ,ಸoಸ್ಕೃತಿ,ಪರoಪರೆ ನೀಡುವಲ್ಲಿ ನಾವು ಮರೆತಿದ್ದೇವೆ.ಅದನ್ನು ನೀಡುವ ಕಾರ್ಯ ಆಗಬೇಕು.ಇಂದು ಸರ್ಕಾರಿ ಶಿಕ್ಷಣ ಸಂಸ್ಥೆಗಳು ಸರಿಯಾಗಿಲ್ಲದ್ದಕ್ಕಾಗಿಯೇ ಬಹುತೇಕ ಶಿಕ್ಷಕರು,ಪಾಲಕರು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಮಕ್ಕಳನ್ನು ಕಲಿಸಲು ಕಳಿಸುತ್ತಿದ್ದಾರೆ. ಇಲ್ಲಿ ಓದಿ ವೈದ್ಯರಾಗುವರು ಸ್ವದೇಶದಲ್ಲಿ ಸೇವೆ ಸಲ್ಲಿಸಬೇಕು.ಒಳ್ಳೆಯ ವೈದ್ಯರಾಗಿ,ಇಂಜಿನಿಯರ್ ಆಗಿ ಸೇವೆ ಸಲ್ಲಿಸಬೇಕು ಎಂದು ಹೇಳಿದರು.

ಹೈದರಾಬಾದ್‌ನ ಶೈಕ್ಷಣಿಕ ತರಬೇತಿದಾರರಾದ ಗಿರಿಧರ ಪೂಜಾರಿ ಮಾತನಾಡಿ, ವಿದ್ಯಾರ್ಥಿಗಳಿಗೆ ಅಂಕ ಗಳಿಸುವುದೊಂದೇ ಇಲ್ಲಿ ಮಾನದಂಡ.ಅದಕ್ಕೆ ಜಾತಿ,ಬಡತನ,ಧರ್ಮ,ವರ್ಗ,ವರ್ಣ,ಆರ್ಥಿಕ ಸ್ಥಿತಿ ಇನ್ಯಾವುದು ಇಲ್ಲಿ ಪರಿಗಣನೆ ಆಗುವುದಿಲ್ಲ.ಮಕ್ಕಳನ್ನು ಸಾಲ ಮಾಡಿಸಿಯಾದರೂ ಓದಿಸಿ.ಮಕ್ಕಳ ಮದುವೆಗೆ ದುಂದು ವೆಚ್ಚ ಮಾಡಬೇಡಿ.ಅವರ ಕಲಿಕೆಗಾಗಿ ಹಣ ತೊಡಗಿಸಿ.ಕಲಿಕೆ ಜೀವನಕ್ಕೆ ದಾರಿಯಾಗುವಂತಿರಬೇಕು.ಆದರೆ ಅದು ಯಾವುದಕ್ಕೂ ಉಪಯೋಗಕ್ಕೆ ಬರದಿದ್ದರೆ ವ್ಯರ್ಥ.ಮಕ್ಕಳು ತಮ್ಮ ಹೆತ್ತವರಿಗೆ ಕೀರ್ತಿ ತರುವ ಸಾಧನೆ ಮಾಡಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಮಾತನಾಡಿ,ನಮ್ಮ ಸಂಸ್ಥೆಯಲ್ಲಿ ಕೋವಿಡ್ ಅವಧಿ 2020ರಲ್ಲಿಯೇ 85 ವಿದ್ಯಾರ್ಥಿಗಳು ಮೆಡಿಕಲ್ ಸೀಟು ಪಡೆದುಕೊಂಡಿದ್ದು 2021 ರಲ್ಲಿ 123, 2022ರಲ್ಲಿ 143, 2023ರಲ್ಲಿ 145, 2024ರಲ್ಲಿ 172, 2025ರಲ್ಲಿ 187 ವಿದ್ಯಾರ್ಥಿಗಳು ಮೆಡಿಕಲ್ ಸೀಟು ಪಡೆದುಕೊಂಡಿದ್ದಾರೆ.ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣದಿಂದ ವಂಚಿತರಾಗುವ ವಿದ್ಯಾರ್ಥಿಗಳಿಗೆ ಕರ್ನಾಟಕದಲ್ಲಿ ಮೂರು ಕೋಟಿ ರೂ.ವೆಚ್ಚದ ಸ್ಕಾಲರ್‌ಶಿಪ್ ಕೊಡುವ ಕೆಲಸ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆ ಮಾತ್ರ ಮಾಡುತ್ತಿದೆ.ನಾವು ದುಡ್ಡು ಮಾಡಬೇಕು ಎಂದು ಸಂಸ್ಥೆ ಕಟ್ಟಿಲ್ಲ.ಬೆಂಗಳೂರು, ಮಂಗಳೂರು ಕಾಲೇಜುಗಳಲ್ಲಿ ಕೊಡುವ ಫಲಿತಾಂಶ ನಮ್ಮ ಭಾಗದಲ್ಲೂ ಕೊಡಲಾಗುತ್ತಿದೆ ಎಂದು ಹೇಳಿದರು. ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವ ಶಂಕರಗೌಡ ಸೋಮನಾಳ,ದೇವಿಕಾ ಸುಬ್ಬಾರಾವ್ ಫೌಂಡೇಶನ್ ಅಧ್ಯಕ್ಷೆ ಪಲ್ಲವಿ ನಾಡಗೌಡ, ಪ್ರೋ.ಬಸವರಾಜ ಅಸ್ಕಿ, ಡಾ.ಎಸ್.ಬಿ.ಬಿರಾದಾರ ಮಾತನಾಡಿದರು. ಮುದನೂರ ಕಂಠಿಮಠದ ಚೆನ್ನಮಲ್ಲಿಕಾರ್ಜುನ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು.ಸಂಸ್ಥೆಯ ಮುಖ್ಯ ವ್ಯವಸ್ಥಾಪಕ ವಿಜಯಕುಮಾರ ಪಾಟೀಲ್, ಪ್ರಾಚಾರ್ಯರಾದ ರೇವಣಸಿದ್ದ ಮುರಾಳ, ಪ್ರೊ.ಎನ್.ಎ.ಬಿರಾಜದಾರ,ಶಿಕ್ಷಕ ಸಂಗಮೇಶ ಹೂಗಾರ,ರಾಜಶೇಖರ ಹಿರೇಮಠ,ಆನಂದ ನಾವಿ ಇದ್ದರು. ಇಸ್ಮಾಯಿಲ್ ಮನಿಯಾರ್ ಕಾರ್ಯಕ್ರಮ ನಿರ್ವಹಿಸಿದರು.ಕಾರ್ಯಕ್ರಮದಲ್ಲಿ 2025ರಲ್ಲಿ ಮೆಡಿಕಲ್‌ಗೆ ಆಯ್ಕೆಯಾದ 187 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಜೀನಿಯಸ್ ಅವಾರ್ಡ್ ಪುರಸ್ಕೃತರು :
ಎರಡು ವರ್ಷದ ಸಂಪೂರ್ಣ ವಸತಿ,ಊಟ ಸಮೇತ ಉಚಿತ ಶಿಕ್ಷಣಕ್ಕೆ ಅಕುಲ್ ಸವಣೂರ,ಅಜಯೆಕುಮಾರ ಜಗ್ಗಲ,ಶಿವಕುಮಾರ ಕಡಿಮನಿ,ಕೀರ್ತನಾ ಮಸಲಗಿ,ಶ್ರೇಯಾ ಗಾಳಿ, ಶ್ರೀಹರಿ ಎಂ.ಜಿ.,ದೀಪಾ ಗಾಡಿ,ಶ್ರೇಯಸ್ ಕಲ್ಲಗೋನಾಳ,ಸಮೃದ್ಧಿ ದೇಸಾಯಿ,ಸುನೀಲ ಹೊಸಮನಿ, ಬಸವರಾಜ ದಿವಟಗಿ,ಸಾಕ್ಷಿ ಬೆಳ್ಳುಂಡಗಿ,ಅರ್ನವ್ ಕುರಂದವಾಡೆ,ಚಿನ್ಮಯಕುಮಾರ ನಾಗೂರ,ಸಂಪತಕುಮಾರ ಉಕ್ಕನಾಳ,ಶ್ರೀನಿವಾಸ ಕಟ್ಟಿಮನಿ,ಚೈತ್ರಾ ಮಹದೇವ,ಮೈಮುನಾ ಮುದ್ನಾಳ, ಸುಪ್ರೀತ ಪಾಟೀಲ,ವಿವೇಕಾನಂದ ಮುದ್ದನೂರಮಠ ಅವರು ಆಯ್ಕೆಯಾದರು.ಇನ್ನುಳಿದಂತೆ 21-40 ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಎರಡು ವರ್ಷದ ಉಚಿತ ಶಿಕ್ಷಣ,40-60 ನೇ ಸ್ಥಾನ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಎರಡು ವರ್ಷದ ಶಿಕ್ಷಣಕ್ಕೆ ಶೇ.50ರಷ್ಟು ಶುಲ್ಕ ರಿಯಾಯಿತಿ,61-80 ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಶುಲ್ಕ ರಿಯಾಯಿತಿಗೆ ಆಯ್ಕೆ ಮಾಡಲಾಯಿತು.

Latest News

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

ಕಲಬುರಗಿ: ಪ್ರೀತಿಸಿ ಮದುವೆಯಾದ ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿಯೊಬ್ಬರು ತವರು

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮುದ್ದೆಬಿಹಾಳ : ಆನ್‌ಲೈನ್ ಪೋರ್ಟಲ್‌ಗಳ ಅನಿಯಂತ್ರಿತ ಕಾರ್ಯನಿರ್ವಹಣೆ ಮತ್ತು ದರೋಡೆಕೋರತನದ ಬೆಲೆ ಅಕ್ರಮಗಳು ಸೇರಿದಂತೆ

SSLC RE VALUVETION RESULT :                                                            ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

SSLC RE VALUVETION RESULT : ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

ತಾಳಿಕೋಟಿ : ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನದಲ್ಲಿ ಈ ಮೊದಲು ರಾಜ್ಯಕ್ಕೆ ಮೂರನೆ ಸ್ಥಾನ ಪಡೆದುಕೊಂಡಿದ್ದ ತಾಲ್ಲೂಕಿನ ಮೈಲೇಶ್ವರದ ಬ್ರಿಲಿಯಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಗಂಗಮ್ಮ ಕೋಳೂರುಗೆ ಮತ್ತೆ ಎರಡು ಅಂಕಗಳು ಬಂದಿದ್ದು ಅದರೊಂದಿಗೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ತಾಳಿಕೋಟಿ ಪಟ್ಟಣದ ನಿವಾಸಿಯಾಗಿರುವ ಗಂಗಮ್ಮ ಅಶೋಕ ಕೋಳೂರ ಈ ಮೊದಲು ಫಲಿತಾಂಶ ಬಂದಾಗ 623 ಅಂಕ ಪಡೆದುಕೊಂಡು ರಾಜ್ಯಕ್ಕೆ ಮೂರನೇ ಸ್ಥಾನ ಪಡೆದುಕೊಂಡಿದ್ದಳು.ಆದರೆ ಶಾಲೆಯ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ:                                                                  ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ: ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ಸ್ಥಾನ ಗಳಿಸುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾಳೆ. ತಾಲ್ಲೂಕಿನ ನಾಲತವಾಡದ ನಿವಾಸಿ ಸೃಷ್ಟಿ ಎಸ್.ಪಾಟೀಲ ವಿದ್ಯಾರ್ಥಿನಿ ಇದೀಗ 625ಕ್ಕೆ 625 ಅಂಕ ಪಡೆದುಕೊಂಡು ರಾಜ್ಯಕ್ಕೆ ಮೊದಲನೇ ಸ್ಥಾನ ಪಡೆದುಕೊಂಡಿದ್ದಾಳೆ.ಮೊದಲು ಫಲಿತಾಂಶ ಪ್ರಕಟಗೊಂಡಾಗ ಕನ್ನಡ 125,ಗಣಿತ 100,ಹಿಂದಿ 100,ಸಮಾಜ ವಿಜ್ಞಾನ 100, ಇಂಗ್ಲಿಷ್‌ಗೆ 99 ಹಾಗೂ ವಿಜ್ಞಾನ ವಿಷಯದಲ್ಲಿ 97