ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು.

ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು ವಿದ್ಯಾರ್ಥಿಗಳು ನಮ್ಮಲ್ಲೂ ಮೆಡಿಕಲ್ ಸೀಟು ಪಡೆದುಕೊಂಡು ಓದುತ್ತಿದ್ದಾರೆ.ಬರಲಿರುವ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಸ್ಥೆಯಿoದ ತರಬೇತಿ ಆರಂಭಿಸಲಾಗುತ್ತದೆ ಎಂದು ಹೇಳಿದರು.

ಧಾರವಾಡದ ಮಾಜಿ ಕುಲಪತಿ ಡಾ.ಎಚ್.ಬಿ.ವಾಲೀಕಾರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಆನಲೈನ್ ಕ್ಲಾಸ್ ನಡೆಸಲಾಗುತ್ತದೆ.ತಂದೆ ತಾಯಿ ಇಲ್ಲದ ಮಕ್ಕಳು,ಅಂಗವಿಕಲ ಮಕ್ಕಳಿದ್ದರೆ ಅವರಿಗೆ ಉಚಿತ ಶಿಕ್ಷಣ ನೀಡಲಾಗುವುದು.ಪ್ರತಿಭೆಗಳನ್ನು ಪೋಷಿಸುವ ಕೆಲಸ ನಿರಂತರವಾಗಿ ನಮ್ಮ ವಿದ್ಯಾಸಂಸ್ಥೆಯಿoದ ಮಾಡಲಾಗುವುದು ಎಂದು ತಿಳಿಸಿದರು.

ಸಂಸ್ಥೆಯ ಆಡಳಿತಾಧಿಕಾರಿ ಕಿರಣ ಮದರಿ ಮಾತನಾಡಿ, ಜಾಣ ವಿದ್ಯಾರ್ಥಿಗಳನ್ನು ಪ್ರವೇಶ ಪಡೆದುಕೊಂಡು ಅವರನ್ನು ಜಾಣರನ್ನಾಗಿ ಮಾಡುವುದು ದೊಡ್ಡ ವಿಷಯವಲ್ಲ.ಆದರೆ ಮಧ್ಯಮ,ಉತ್ತಮ ಶೈಕ್ಷಣಿಕ ಹಿನ್ನೆಲೆ ಇಲ್ಲದ ವಿದ್ಯಾರ್ಥಿಗಳನ್ನು ನಾವು ನಮ್ಮಿಂದ ಸಾಧ್ಯವಾದಷ್ಟು ಮಟ್ಟಿಗೆ ಅವರಿಗೆ ಗುಣಮಟ್ಟದ ಶಿಕ್ಷಣ ನೀಡಿ ಫಲಿತಾಂಶದ ಸುಧಾರಣೆಗೆ ಆದ್ಯತೆ ನೀಡುತ್ತಿದ್ದೇವೆ.ಬರಲಿರುವ ದಿನಗಳಲ್ಲಿ ನೀಟ್ ಲಾಂಗ್‌ಟರ್ಮ್ ತರಬೇತ ಆರಂಭಿಸಲಾಗುತ್ತಿದ್ದು ಇಚ್ಛೆಯುಳ್ಳುವರು ಸಂಪರ್ಕಿಸಬಹುದಾಗಿದೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರಾದ ಶ್ರೀದೇವಿ ಮದರಿ, ಕಾಲೇಜಿನ ಉಸ್ತುವಾರಿಗಳಾದ ರವಿ ಜಗಲಿ, ಲೆಕ್ಕಾಧಿಕಾರಿ ಬಸವರಾಜ ಬಿಜ್ಜೂರ,ಪ್ರಾಚಾರ್ಯ ಎಂ.ಎo.ಧನ್ನೂರ,ಗುಡದಪ್ಪ ಕಮರಿ,ಬಸವರಾಜ ಗೂಡಲಮನಿ,ವೀರೇಶ ಹುಲಿಕೇರಿ,ಪ್ರಶಾಂತ ಬಿರಾದಾರ, ಗೀತಾ ಹುರಕಡ್ಲಿ,ಬಾಲು ಕರೇಕಲ್ಲ, ಭೀಮಣ್ಣ ಪೂಜಾರಿ, ಆರ್.ಎಂ.ಹರನಾಳ,ಚoದ್ರು ಜೋಗಿ ಮೊದಲಾದವರು ಇದ್ದರು.

ಹೋಳ್ಕರ್ ಅವಾರ್ಡ್ ವಿಜೇತರ ಫಲಿತಾಂಶ : ಅಹಿಲ್ಯಾದೇವಿ ಹೋಳ್ಕರ್ ಪರೀಕ್ಷೆಯ ಫಲಿತಾಂಶದಲ್ಲಿ ಮೊದಲ ಸ್ಥಾನವನ್ನು ಮೂವರು ವಿದ್ಯಾರ್ಥಿನಿಯರು ಹಂಚಿಕೊoಡರು.ಬ್ರಿಲಿಯoಟ್ ಶಾಲೆಯ ಗಂಗಮ್ಮ ಕೋಳೂರ, ಪ್ರಾರ್ಥನಾ ಶಾಲೆಯ ಮೈಮುನಾ ಮುದ್ನಾಳ,ಆಕ್ಸಫರ್ಡ್ ಶಾಲೆಯ ತನುಶ್ರೀ ವಾಲೀಕಾರ ಪ್ರಥಮ ಸ್ಥಾನ ಸಮಾನವಾಗಿ ಹಂಚಿಕೊoಡರೆ,ಎರಡನೇ ಸ್ಥಾನವನ್ನು ಚಂದ್ರು ಚಲವಾದಿ, ಮೂರನೇ ಸ್ಥಾನವನ್ನು ಶ್ರೀನಿವಾಸ ಕಟ್ಟಿಮನಿ ಹಾಗೂ ಸಮರ್ಥ ಬಾಗೇವಾಡಿ ಪಡೆದುಕೊಂಡರು.ಉಚಿತ ಶಿಕ್ಷಣಕ್ಕೆ ಆಯ್ಕೆಯಾದ ಅರ್ಪಿತಾ ಎ.ಎಂ., ಪವನ್ ಜೈನಾಪೂರ,ವೀರೇಶ ಗುರಿಕಾರ,ಶ್ರೀನಿಧಿ ಪಾಟೀಲ,ಸೃಜನ ಜಂಗಿ, ಪ್ರತೀಕ್ಷಾ ಹೂಗಾರ,ಭಾರತಿ ದಯಾನಂದ, ಸರಸ್ವತಿ ಅಲಗುಂಡಿ,ಭವಾನಿ ಕುಲಕರ್ಣಿ,ಅಮೃತಾ ಎ.ಎಚ್. ವಿದ್ಯಾರ್ಥಿಗಳು ಆಯ್ಕೆಯಾದರು.ಪರೀಕ್ಷೆಯಲ್ಲಿ 900ಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಾಗಿದ್ದರು.ಪಾರದರ್ಶಕವಾಗಿ ಪರೀಕ್ಷೆಯನ್ನು ಕಾಲೇಜಿನ ಸಿಬ್ಬಂದಿ ನಡೆಸಿಕೊಟ್ಟರು.

ಬಡವರಿಗೆ ಅನುಕೂಲ ಒದಗಿಸುವ ಸಂಸ್ಥೆ: ವಿಜೇತರಾದ ಗಂಗಮ್ಮ ಕೋಳೂರ ಹಾಗೂ ಮೈಮುನಾ ಮುದ್ನಾಳ ಮಾತನಾಡಿ, ಸಮಾಜ ಸೇವಕರಾದ ಎಂ.ಎನ್.ಮದರಿ ಅವರು ಕೈಗೊಂಡಿರುವ ಈ ಶೈಕ್ಷಣಿಕ ಸೇವೆ ಬಡ,ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅದೆಷ್ಟೋ ಆಸರೆಯಾಗುತ್ತದೆ.ಕಲಿಯಬೇಕೆನ್ನುವ ಆದರೆ ಆರ್ಥಿಕ ಶಕ್ತಿ ಇಲ್ಲದವರಿಗೆ ಮದರಿ ಅವರು ನೀಡುತ್ತಿರುವ ಉಚಿತ ಶಿಕ್ಷಣವು ಬಹುದೊಡ್ಡ ಆಸರೆಯಾಗಿದೆ ಎಂದು ಸಂತಸ ಹಂಚಿಕೊoಡರು.

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ