ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಮುದ್ದೇಬಿಹಾಳ : ಮುಂಗಾರು ಹಂಗಾಮಿನಲ್ಲಿ ಯೂರಿಯಾ ವಿತರಣೆಗೆ ಆಪ್ ಅಭಿವೃದ್ಧಿಪಡಿಸಲಾಗಿದ್ದು ಎಲ್ಲ ಕೃಷಿ ಪರಿಕರ ಮಾರಾಟಗಾರರು ಅದನ್ನು ಬಳಸಿಕೊಂಡು ಯೂರಿಯಾ ಮಾರಾಟ ಮಾಡಬೇಕು.ಯೂರಿಯಾ ,ಡಿಎಪಿ ಗೊಬ್ಬರ ಖರೀದಿಸಲು ರೈತರ ಖಾತೆಗಳು ಎಫ್.ಐ.ಡಿ ನೋಂದಣಿಯಾಗಿರುವುದು ಕಡ್ಡಾಯವಾಗಿದೆ ಎಂದು ವಿಜಯಪುರದ ಉಪ ಕೃಷಿ ನಿರ್ದೇಶಕ ಶರಣಗೌಡ ಆರ್, ಎಂದು ಹೇಳಿದರು.

ಪಟ್ಟಣದ ಹುಡ್ಕೋದಲ್ಲಿರುವ ಬಿ.ಜಿ.ಮಠ್ ಸಭಾಭವನದಲ್ಲಿ ಮಂಗಳವಾರ ಕೃಷಿಪರಿಕರ ಮಾರಾಟಗಾರರಿಗೆ ಏರ್ಪಡಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ಸನ್ 2026-27ನೇ ಸಾಲಿನಲ್ಲಿ ರೈತರಿಗೆ ಯೂರಿಯಾ ಕೊರತೆ ಇಲ್ಲದಂತೆ ನೋಡಿಕೊಳ್ಳಲಾಗುತ್ತದೆ.ಆದರೆ ಕೊಲ್ಲಿ ರಾಷ್ಟçಗಳ ಯುದ್ದದ ಪರಿಣಾಮ ರಸಗೊಬ್ಬರದ ಪೂರೈಕೆ ವಿತರಣೆ ಮೇಲೆ ವ್ಯತ್ಯಾಸ ಆಗದಂತೆ ಕ್ರಮ ಕೈಗೊಳ್ಳುವ ಸಲುವಾಗಿ ಮಾರಾಟಗಾರರಿಗೆ ತಿಳಿವಳಿಕೆ ನೀಡಲಾಗುತ್ತದೆ.ಎಫ್.ಐ.ಡಿ ಇಲ್ಲದ ರೈತರಿಗೆ ಸಂಬOಧಿಸಿದ ರೈತ ಸಂಪರ್ಕ ಕೇಂದ್ರಗಳಲ್ಲಿ ತಕ್ಷಣ ಎಫ್.ಐ.ಡಿ ಮಾಡಿಕೊಟ್ಟು ಯೂರಿಯಾ ವಿತರಣೆಗೆ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಿದರು.

ವಿಜಯಪುರ ಜಾರಿದಳದ ಸಹಾಯಕ ಕೃಷಿ ನಿರ್ದೇಶಕ ಎ. ಪಿ. ಬಿರಾದಾರ ಮಾತನಾಡಿ, ಯೂರಿಯಾ, ಡಿಎಪಿ ಗೊಬ್ಬರದ ವಿತರಣೆ ಬಗ್ಗೆ ಕೃಷಿ ಪರಿಕರ ಮಾರಾಟಗಾರರಿಗೆ ತಿಳಿಸಲಾಗಿದೆ.ನಿಗದಿತ ದರದಲ್ಲಿ ರಸಗೊಬ್ಬರ ಮಾರಾಟ ಮಾಡಲು ತಿಳಿಸಲಾಗಿದೆ.ರಸಗೊಬ್ಬರದ ಕೃತಕ ಅಭಾವ, ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡು ಬಂದಲ್ಲಿ ಸಂಬOಧಿಸಿದ ಮಾರಾಟಗಾರರ ಲೈಸನ್ಸ್ ರದ್ದುಗೊಳಿಸುವುದು,ಕ್ರಿಮಿನಲ್ ಕೇಸ್ ದಾಖಲಿಸುವುದು ಸೇರಿದಂತೆ ಹಲವು ಕ್ರಮಗಳನ್ನು ಜರುಗಿಸಲಾಗುತ್ತದೆ ಎಂದು ಹೇಳಿದರು.

ಜಾರಿದಳದ ಇನ್ನೋರ್ವ ಸಹಾಯಕ ನಿರ್ದೇಶಕಿ ರೇಷ್ಮಾ ಸುತಾರ್ ಮಾತನಾಡಿ, ಯೂರಿಯಾ ಗೊಬ್ಬರವನ್ನು ದೊಡ್ಡ ರೈತರಿಗೆ ಹೆಚ್ಚು ಸಣ್ಣ ರೈತರಿಗೆ ಕಡಿಮೆ ಪ್ರಮಾಣದಲ್ಲಿ ವಿತರಿಸದೇ ಆದ್ಯತೆ ಮೇರೆಗೆ ಎಲ್ಲರಿಗೂ ದೊರೆಯುವಂತೆ ನೋಡಿಕೊಳ್ಳಬೇಕು.ಮೊದಲು ನಮ್ಮ ಜಿಲ್ಲೆ, ತಾಲ್ಲೂಕಿನ ರೈತರಿಗೆ ಯೂರಿಯಾ ಗೊಬ್ಬರ ದೊರೆಯಬೇಕು.ನಂತರ ಬೇರೆ ಜಿಲ್ಲೆ,ತಾಲ್ಲೂಕಿನ ರೈತರಿಗೆ ಆದ್ಯತೆ ನೀಡಬಹುದಾಗಿದೆ ಎಂದು ಹೇಳಿದರು.

ತಾಂತ್ರಿಕ ಕೃಷಿ ಅಧಿಕಾರಿ ರಾಜೇಶ್ವರಿ ನಾಡಗೌಡ,ಢವಳಗಿ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಗೋವಿಂದರೆಡ್ಡಿ ಮೆದಿಕಿನಾಳ,ಮುದ್ದೇಬಿಹಾಳ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಸೋಮನಗೌಡ ಬಿರಾದಾರ,ಕೃಷಿ ಪರಿಕರ ಮಾರಾಟಗಾರರ ಪ್ರತಿನಿಧಿ ಶಿವಶಂಕರಗೌಡ ಹಿರೇಗೌಡರ ಹಾಗೂ ಮುದ್ದೇಬಿಹಾಳ,ತಾಳಿಕೋಟಿ ತಾಲ್ಲೂಕಿನ ಕೃಷಿ ಪರಿಕರ ಮಾರಾಟಗಾರರು ಇದ್ದರು.

Latest News

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ

ಎರಡು ಮೇಕೆಗಳು, 20ಕ್ಕೂ ಅಧಿಕ ಕೋಳಿಗಳು ಸಜೀವ ದಹನ

ಎರಡು ಮೇಕೆಗಳು, 20ಕ್ಕೂ ಅಧಿಕ ಕೋಳಿಗಳು ಸಜೀವ ದಹನ

ಮುದ್ದೇಬಿಹಾಳ : ಬಿರು ಬಿಸಿಲಿನ ತಾಪದ ತೀವ್ರತೆಗೆ ಗುಡಿಸಲು ಹಾಗೂ ಜಾನುವಾರು ಕಟ್ಟುವ ಶೆಡ್‌ಗಳಿಗೆ

ಏ.5 ರಂದು ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ ಪರೀಕ್ಷೆ: ನಮ್ಮದು ಬಡ ಪ್ರತಿಭಾವಂತ ಮಕ್ಕಳನ್ನು ಬೆಳೆಸುವ ಸಂಸ್ಥೆ-ಎಂ.ಎನ್.ಮದರಿ

ಏ.5 ರಂದು ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ ಪರೀಕ್ಷೆ: ನಮ್ಮದು ಬಡ ಪ್ರತಿಭಾವಂತ ಮಕ್ಕಳನ್ನು ಬೆಳೆಸುವ ಸಂಸ್ಥೆ-ಎಂ.ಎನ್.ಮದರಿ

ಮುದ್ದೇಬಿಹಾಳ : ನಮ್ಮ ಸಂಸ್ಥೆಯ ಆರಂಭದಿAದ ಇಲ್ಲಿಯವರೆಗೂ ಬಡ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಅವರಿಗೆ

ಯಲಗೂರ ಗೋಶಾಲೆಗೆ ಐದು ಟ್ರಾಕ್ಟರ್ ಮೇವು ಕೊಡುಗೆ

ಯಲಗೂರ ಗೋಶಾಲೆಗೆ ಐದು ಟ್ರಾಕ್ಟರ್ ಮೇವು ಕೊಡುಗೆ

ಮುದ್ದೇಬಿಹಾಳ : ಈಚೆಗೆ ಮುದ್ದೇಬಿಹಾಳದಲ್ಲಿ ಜರುಗಿದ್ದ ಹಿಂದೂ ಮಹಾಸಮ್ಮೇಳನದಲ್ಲಿ ಜಮಾಖರ್ಚು ಆಗಿ ಉಳಿತಾಯದ ಹಣದಲ್ಲಿ ಯಲಗೂರಿನ ಗೋಶಾಲೆಗೆ ಇಲ್ಲಿನ ಹಿಂದೂ ಸಮಾಜದ ಬಾಂಧವರು ಐದು ಟ್ರಾö್ಯಕ್ಟರ್‌ನಷ್ಟು ಮೇವು ಕಾಣಿಕೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಪಟ್ಟಣದ ಹನುಮಾನ ದೇವಸ್ಥಾನದಲ್ಲಿ ಬುಧವಾರ ಸಂಜೆ ಮೇವು ತುಂಬಿದ್ದ ಟ್ರಾö್ಯಕ್ಟರ್‌ಗಳಿಗೆ ಪೂಜೆ ಸಲ್ಲಿಸಿ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಯಲಗೂರ ಗೋಶಾಲೆ ಕಾರ್ಯದರ್ಶಿ ವಿಠ್ಠಲ ಬಿರಾದಾರ, ಇದೇ ಮೊದಲ ಬಾರಿಗೆ ಮುದ್ದೇಬಿಹಾಳದ ಹಿಂದೂ ಸಮಾಜದವರು

60 ಲಕ್ಷ ರೂ.ಶಿಷ್ಯವೇತನ ಗೆಲ್ಲುವ ಅವಕಾಶ..!                         ಏ.3 ರಂದು ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್-2026 ಪರೀಕ್ಷೆ

60 ಲಕ್ಷ ರೂ.ಶಿಷ್ಯವೇತನ ಗೆಲ್ಲುವ ಅವಕಾಶ..! ಏ.3 ರಂದು ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್-2026 ಪರೀಕ್ಷೆ

ಮುದ್ದೇಬಿಹಾಳ : ಉನ್ನತ ಶಿಕ್ಷಣ ದುಬಾರಿ ಎನ್ನುವ ಕಾಲಘಟ್ಟದಲ್ಲಿ ನಮ್ಮ ಉತ್ತರ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಅತ್ಯಂತ ಕೈಗೆಟುಕುವ ದರದಲ್ಲಿ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ ಸಂಸ್ಥೆಯಿoದ ಪಿಯು ಶಿಕ್ಷಣ ನೀಡಲಾಗುತ್ತಿದ್ದು ಏ.3 ರಂದು 60 ಲಕ್ಷ ರೂ.ಗಳ ಶಿಷ್ಯವೇತನ ಗೆಲ್ಲುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಿದೆ. ಈ ಶಾಲೆಯಲ್ಲಿ ಓದಿದ ಹಲವು ವಿದ್ಯಾರ್ಥಿಗಳು ರಾಜ್ಯಮಟ್ಟದ ಸಾಧನೆ ತೋರಿದ್ದು ಅವರಿಗೆ ಪೂರ್ಣ ಶುಲ್ಕದ ವಿನಾಯ್ತಿಯನ್ನು ಸಂಸ್ಥೆಯ ಚೇರಮನ್ ಬಿ.ಜಿ.ಮಠ