ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಮುದ್ದೇಬಿಹಾಳ : ಮುಂಗಾರು ಹಂಗಾಮಿನಲ್ಲಿ ಯೂರಿಯಾ ವಿತರಣೆಗೆ ಆಪ್ ಅಭಿವೃದ್ಧಿಪಡಿಸಲಾಗಿದ್ದು ಎಲ್ಲ ಕೃಷಿ ಪರಿಕರ ಮಾರಾಟಗಾರರು ಅದನ್ನು ಬಳಸಿಕೊಂಡು ಯೂರಿಯಾ ಮಾರಾಟ ಮಾಡಬೇಕು.ಯೂರಿಯಾ ,ಡಿಎಪಿ ಗೊಬ್ಬರ ಖರೀದಿಸಲು ರೈತರ ಖಾತೆಗಳು ಎಫ್.ಐ.ಡಿ ನೋಂದಣಿಯಾಗಿರುವುದು ಕಡ್ಡಾಯವಾಗಿದೆ ಎಂದು ವಿಜಯಪುರದ ಉಪ ಕೃಷಿ ನಿರ್ದೇಶಕ ಶರಣಗೌಡ ಆರ್, ಎಂದು ಹೇಳಿದರು.

ಪಟ್ಟಣದ ಹುಡ್ಕೋದಲ್ಲಿರುವ ಬಿ.ಜಿ.ಮಠ್ ಸಭಾಭವನದಲ್ಲಿ ಮಂಗಳವಾರ ಕೃಷಿಪರಿಕರ ಮಾರಾಟಗಾರರಿಗೆ ಏರ್ಪಡಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ಸನ್ 2026-27ನೇ ಸಾಲಿನಲ್ಲಿ ರೈತರಿಗೆ ಯೂರಿಯಾ ಕೊರತೆ ಇಲ್ಲದಂತೆ ನೋಡಿಕೊಳ್ಳಲಾಗುತ್ತದೆ.ಆದರೆ ಕೊಲ್ಲಿ ರಾಷ್ಟçಗಳ ಯುದ್ದದ ಪರಿಣಾಮ ರಸಗೊಬ್ಬರದ ಪೂರೈಕೆ ವಿತರಣೆ ಮೇಲೆ ವ್ಯತ್ಯಾಸ ಆಗದಂತೆ ಕ್ರಮ ಕೈಗೊಳ್ಳುವ ಸಲುವಾಗಿ ಮಾರಾಟಗಾರರಿಗೆ ತಿಳಿವಳಿಕೆ ನೀಡಲಾಗುತ್ತದೆ.ಎಫ್.ಐ.ಡಿ ಇಲ್ಲದ ರೈತರಿಗೆ ಸಂಬOಧಿಸಿದ ರೈತ ಸಂಪರ್ಕ ಕೇಂದ್ರಗಳಲ್ಲಿ ತಕ್ಷಣ ಎಫ್.ಐ.ಡಿ ಮಾಡಿಕೊಟ್ಟು ಯೂರಿಯಾ ವಿತರಣೆಗೆ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಿದರು.

ವಿಜಯಪುರ ಜಾರಿದಳದ ಸಹಾಯಕ ಕೃಷಿ ನಿರ್ದೇಶಕ ಎ. ಪಿ. ಬಿರಾದಾರ ಮಾತನಾಡಿ, ಯೂರಿಯಾ, ಡಿಎಪಿ ಗೊಬ್ಬರದ ವಿತರಣೆ ಬಗ್ಗೆ ಕೃಷಿ ಪರಿಕರ ಮಾರಾಟಗಾರರಿಗೆ ತಿಳಿಸಲಾಗಿದೆ.ನಿಗದಿತ ದರದಲ್ಲಿ ರಸಗೊಬ್ಬರ ಮಾರಾಟ ಮಾಡಲು ತಿಳಿಸಲಾಗಿದೆ.ರಸಗೊಬ್ಬರದ ಕೃತಕ ಅಭಾವ, ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡು ಬಂದಲ್ಲಿ ಸಂಬOಧಿಸಿದ ಮಾರಾಟಗಾರರ ಲೈಸನ್ಸ್ ರದ್ದುಗೊಳಿಸುವುದು,ಕ್ರಿಮಿನಲ್ ಕೇಸ್ ದಾಖಲಿಸುವುದು ಸೇರಿದಂತೆ ಹಲವು ಕ್ರಮಗಳನ್ನು ಜರುಗಿಸಲಾಗುತ್ತದೆ ಎಂದು ಹೇಳಿದರು.

ಜಾರಿದಳದ ಇನ್ನೋರ್ವ ಸಹಾಯಕ ನಿರ್ದೇಶಕಿ ರೇಷ್ಮಾ ಸುತಾರ್ ಮಾತನಾಡಿ, ಯೂರಿಯಾ ಗೊಬ್ಬರವನ್ನು ದೊಡ್ಡ ರೈತರಿಗೆ ಹೆಚ್ಚು ಸಣ್ಣ ರೈತರಿಗೆ ಕಡಿಮೆ ಪ್ರಮಾಣದಲ್ಲಿ ವಿತರಿಸದೇ ಆದ್ಯತೆ ಮೇರೆಗೆ ಎಲ್ಲರಿಗೂ ದೊರೆಯುವಂತೆ ನೋಡಿಕೊಳ್ಳಬೇಕು.ಮೊದಲು ನಮ್ಮ ಜಿಲ್ಲೆ, ತಾಲ್ಲೂಕಿನ ರೈತರಿಗೆ ಯೂರಿಯಾ ಗೊಬ್ಬರ ದೊರೆಯಬೇಕು.ನಂತರ ಬೇರೆ ಜಿಲ್ಲೆ,ತಾಲ್ಲೂಕಿನ ರೈತರಿಗೆ ಆದ್ಯತೆ ನೀಡಬಹುದಾಗಿದೆ ಎಂದು ಹೇಳಿದರು.

ತಾಂತ್ರಿಕ ಕೃಷಿ ಅಧಿಕಾರಿ ರಾಜೇಶ್ವರಿ ನಾಡಗೌಡ,ಢವಳಗಿ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಗೋವಿಂದರೆಡ್ಡಿ ಮೆದಿಕಿನಾಳ,ಮುದ್ದೇಬಿಹಾಳ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಸೋಮನಗೌಡ ಬಿರಾದಾರ,ಕೃಷಿ ಪರಿಕರ ಮಾರಾಟಗಾರರ ಪ್ರತಿನಿಧಿ ಶಿವಶಂಕರಗೌಡ ಹಿರೇಗೌಡರ ಹಾಗೂ ಮುದ್ದೇಬಿಹಾಳ,ತಾಳಿಕೋಟಿ ತಾಲ್ಲೂಕಿನ ಕೃಷಿ ಪರಿಕರ ಮಾರಾಟಗಾರರು ಇದ್ದರು.

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ