ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ ದಯಾನಂದಪುರಿ ಸ್ವಾಮೀಜಿಗಳ 36ನೇ ಪಟ್ಟಾಭಿಷೇಕ ಮಹೋತ್ಸವವನ್ನು ಮೇ.8 ಹಾಗೂ 9 ರಂದು ಬಾದಾಮಿ ತಾಲ್ಲೂಕು ಬನಶಂಕರಿ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ದೇವಾಂಗ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ ಚಿತ್ತರಗಿ ಹೇಳಿದರು.

ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಬುಧವಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಹಂಪಿ ಹೇಮಕೂಟ ಶ್ರೀ ಗಾಯತ್ರಿಪೀಠದ ಜಗದ್ಗುರು ದಯಾನಂದಪುರಿ ಸ್ವಾಮೀಜಿಗಳು ಆಗಮಿಸಿದ್ದ ವೇಳೆ ಅವರು ಸಮಾಜದ ಬಾಂಧವರ ಸಭೆಯಲ್ಲಿ ಮಾತನಾಡಿದರು. ಹಂಪಿಯಲ್ಲಿ ದೇವಾಂಗ ಸಮಾಜದ ಮೂಲಮಠವಿದ್ದು ತಮಿಳುನಾಡಿನ ತ್ರಿಮೂರ್ತಿ ಮಲೈನಲ್ಲಿ,ಬಾದಾಮಿಯ ಬನಶಂಕರಿ ಕ್ಷೇತ್ರದಲ್ಲಿ,ವಿಜಾಪುರದಲ್ಲಿ ಮತ್ತು ನೆಲಮಂಗಲದ ಕೆಂಪಲಿAಗನಹಳ್ಳಿಯಲ್ಲಿ ಶ್ರೀಗಳು ಗಾಯತ್ರಿಪೀಠದ ಶಾಖಾ ಮಠಗಳನ್ನು ಸ್ಥಾಪಿಸಿ ಅಭಿವೃದ್ಧಿಪಡಿಸಿದ್ದಾರೆ ಎಂದು ಹೇಳಿದರು.

ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ,ಪತ್ರಕರ್ತ ಶಂಕರ ಈ.ಹೆಬ್ಬಾಳ ಮಾತನಾಡಿ, ಹಂಪಿ ಹೇಮಕೂಟ ಗಾಯತ್ರಿಪೀಠ ಮಹಾಸಂಸ್ಥಾನ ಟ್ರಸ್ಟ್ ಹಾಗೂ ಕರ್ನಾಟಕ ರಾಜ್ಯ ದೇವಾಂಗ ಸಂಘದ ಸಹಯೋಗದಲ್ಲಿ ಅಖಿಲ ಭಾರತ ಮಟ್ಟದ ದೇವಾಂಗ ಜನಜಾಗೃತಿ ಸಮಾವೇಶ ಹಾಗೂ ದಯಾನಂದಪುರಿ ಸ್ವಾಮೀಜಿಗಳ 36ನೇ ಪಟ್ಟಾಭಿಷೇಕ ಮಹೋತ್ಸವನ್ನು ಸಂಘಟಿಸಿದ್ದಾರೆ.ರಾಷ್ಟಾçದಾದ್ಯOತ ಇರುವ ದೇವಾಂಗ ಸಮಾಜ ಬಾಂಧವರನ್ನು ಒಂದೆಡೆ ಸೇರಿಸಿ ನಮ್ಮ ಸಂಘಟನಾ ಶಕ್ತಿಯನ್ನು ತೋರಿಸುವ ಉದ್ದೇಶದಿಂದ ಹಾಗೂ ರಾಜಕೀಯ,ಆರ್ಥಿಕ,ಶೈಕ್ಷಣಿ ಹಾಗೂ ಔದ್ಯೋಗಿಕ ಕ್ಷೇತ್ರಗಳಲ್ಲಿ ಹಿಂದುಳಿದಿರುವ ನಮ್ಮ ಸಮಾಜಕ್ಕೆ ಶಕ್ತಿ ತುಂಬಲು ಸಮಾವೇಶ ಆಯೋಜಿಸಲಾಗಿದೆ ಎಂದು ಹೇಳಿದರು.

ಸಭೆಯ ದಿವ್ಯ ಸಾನಿಧ್ಯ ವಹಿಸಿದ್ದ ಹಂಪಿ ಹೇಮಕೂಟ ಗಾಯತ್ರಿ ಮಹಾಸಂಸ್ಥಾನ ಗುರುಪೀಠದ ದಯಾನಂದಪುರಿ ಸ್ವಾಮೀಜಿಗಳು ಮಾತನಾಡಿ,ಮಠದಿಂದ ಈಗಾಗಲೇ ಕೆಂಪಲಿOಗನಹಳ್ಳಿ ಶಾಖಾಮಠದ ಆವರಣದಲ್ಲಿ ಒಂದು ಶಾಲಾ ಕಟ್ಟಡ,ಬೃಹತ್ ಕಲ್ಯಾಣಮಂಟಪ ನಿರ್ಮಿಸಲಾಗಿದೆ.ದೇವಾಂಗ ಸಂಘವು ಸಮಾಝದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ನೀಡುತ್ತ ಬಂದಿದೆ.ಇದಲ್ಲದೇ ಹಲವಾರು ಕ್ಷೇತ್ರಗಳಲ್ಲಿ ಹಿಂದುಳಿದಿರುವ ನಮ್ಮ ಸಮಾಜಕ್ಕೆ ಮತ್ತು ನೇಕಾರಿಕೆಯನ್ನೇ ವೃತ್ತಿಯನ್ನಾಗಿ ಮಾಡಿಕೊಂಡಿರುವ ಸಮಾಜದ ಬಾಂಧವರಿಗೆ ಆಧುನಿಕ ತಂತ್ರಜ್ಞಾನದಿAದ ಆಗುತ್ತಿರುವ ಹಲವಾರು ತೊಂದರೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳಲು ಬೃಹತ್ ಸಂಘಟನೆಯ ಸಮಾವೇಶ ಆಯೋಜಿಸಲಾಗುತ್ತಿದೆ.ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿಗಳು,ಉಪ ಮುಖ್ಯಮಂತ್ರಿಗಳು,ಅನ್ಯ ರಾಜ್ಯದ ಪೀಠಾಧಿಪತಿಗಳು,ದೇವಾಂಗ ಸಮಾಜದ ಅಧ್ಯಕ್ಷರು,ಮುಖಂಡರು ಆಗಮಿಸುತ್ತಿದ್ದಾರೆ.ಈ ಸಮಾವೇಶಕ್ಕೆ ನಾಡಿನ ಮೂಲೆ ಮೂಲೆಯಲ್ಲಿರುವ ದೇವಾಂಗ ಸಮಾಜದ ಕುಲಬಾಂಧವರು ಆಗಮಿಸಿ ಸಮಾವೇಶ ಯಶಸ್ವಿಗೆ ಶ್ರಮಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಹಂಪಿ ಹೇಮಕೂಟ ಗಾಯತ್ರಿ ಪೀಠದ ಟ್ರಸ್ಟಿ ನಾಗೇಶ ಭಾವಿಕಟ್ಟಿ, ಸಮಾಜದ ಮುಖಂಡರಾದ ಮುತ್ತಣ್ಣ ಪ್ಯಾಟಿಗೌಡರ,ಸಿದ್ದಣ್ಣ ಚಿತ್ತರಗಿ,ಸಂಗಣ್ಣ ಡಂಬಳ,ಉಮ್ಮಣ್ಣ ಹೆಬ್ಬಾಳ, ಅಮರೀಶ ಡಂಬಳ,ನಾಗಪ್ಪ ಅಗಸಬಾಳ,ಉದಯ ಕುಪ್ಪಸ್ತ,ಯುವ ಘಟಕದ ಅಧ್ಯಕ್ಷ ಶಿವಶಂಕರ ಪ್ಯಾಟಿಗೌಡರ,ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದ ಪರವಾಗಿ ಶ್ರೀಗಳನ್ನು ಸನ್ಮಾನಿಸಲಾಯಿತು.ಸಂಘದ ಅಧ್ಯಕ್ಷ ಶಂಕರ ಹೆಬ್ಬಾಳ, ಉಪಾಧ್ಯಕ್ಷ ರಮೇಶ ಹೆಬ್ಬಾಳ,ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿಜಯಲಕ್ಷಿö್ಮÃ ಪ್ಯಾಟಿಗೌಡರ,ನಿರ್ದೇಶಕರಾದ ಶ್ರೀಕಾಂತ ಹೆಬ್ಬಾಳ,ದ್ಯಾವಪ್ಪ ಹುಣಶ್ಯಾಳ ಸೇರಿದಂತೆ ಹಲವರು ಇದ್ದರು.

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ