ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ : ವಿದ್ಯಾರ್ಥಿನಿ ಕಣ್ಣೀರು…! ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ : ವಿದ್ಯಾರ್ಥಿನಿ ಕಣ್ಣೀರು…! ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ಮುದ್ದೇಬಿಹಾಳ : ಸನ್ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ನಾಗರಬೆಟ್ಟದ ಎಸ್.ಡಿ.ಇ ಟ್ರಸ್ಟ್ನ ಅಡಿಯಲ್ಲಿ ನಡೆಯುತ್ತಿರುವ ಎಸ್.ಡಿ.ಕೆ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಪೂಜಾ ಎಚ್.ಲಮಾಣಿ ಕೇವಲ ಒಂದೇ ಒಂದು ಅಂಕದಿAದ ರಾಜ್ಯಕ್ಕೆ ಮೊದಲ ಸ್ಥಾನ ಬರುವ ಅವಕಾಶ ಕೈ ತಪ್ಪಿದ್ದು ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾಳೆ.

ಈ ಸಂಸ್ಥೆಯಲ್ಲಿ ಪ್ರತಿವರ್ಷ ರಾಜ್ಯಮಟ್ಟದಲ್ಲಿ ಒಂದಿಲ್ಲೊOದು ಸ್ಥಾನ ಗಳಿಸುತ್ತಿದ್ದು ಈ ಬಾರಿಯೂ ಮತ್ತೊಮ್ಮೆ ರಾಜ್ಯದ ಗಮನ ಸೆಳೆಯುವಂತಹ ಫಲಿತಾಂಶವನ್ನು ಶಾಲೆಯ ವಿದ್ಯಾರ್ಥಿಗಳು ನೀಡಿದ್ದಾರೆ.ಪ್ರಸ್ತುತ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪೂಜಾ ಎಚ್. ಲಮಾಣಿ 624 (99.84%) ಅಂಕ ಪಡೆದು ರಾಜ್ಯಕ್ಕೆ 2 ನೇ ರ‍್ಯಾಂಕ್, ಬಸಮ್ಮ ಪಾಟೀಲ 622 (99.52%) ಅಂಕ ಪಡೆದು ರಾಜ್ಯಕ್ಕೆ 4 ನೇ ರ‍್ಯಾಂಕ್, LAXMI HUGAR 620 (99.20%) ಅಂಕ ಪಡೆದು ರಾಜ್ಯಕ್ಕೆ 6 ನೇ ರ‍್ಯಾಂಕ್, ಅಕ್ಷತಾ ಮೆದಿಕಿನಾಳ 619 (99.04%) ಅಂಕ ಪಡೆದು ರಾಜ್ಯಕ್ಕೆ 7 ನೇ ರ‍್ಯಾಂಕ್ ಪಡೆದು ಸಂಸ್ಥೆಯ ಸಾಧನೆಯನ್ನು ರಾಜ್ಯಮಟ್ಟಕ್ಕೆ ಕೊಂಡೊಯ್ದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಟಾಪರ್ ಪೂಜಾ ಲಮಾಣಿ, ನನಗೆ ಪೂರ್ಣ ಅಂಕ ಬರುವ ವಿಶ್ವಾಸ ಇತ್ತು.ಒಂದೇ ಒಂದು ಅಂಕದಿAದ ರಾಜ್ಯಮಟ್ಟಕ್ಕೆ ಪ್ರಥಮ ಸ್ಥಾನ ಪಡೆದುಕೊಳ್ಳುವಲ್ಲಿ ಸ್ವಲ್ಪ ಹಿನ್ನಡೆ ಆಯಿತು ಎಂದು ಭಾವುಕಳಾಗಿ ಕಣ್ಣೀರು ಹಾಕಿದಳು.ಆದರೂ ಅದೊಂದು ಅಂಕ ಎಲ್ಲಿ ಮಿಸ್ ಆಗಿದೆ ಎಂಬುದನ್ನು ತಿಳಿದುಕೊಳ್ಳಲು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುತ್ತೇನೆ.ಶಾಲೆಯ ಅಧ್ಯಕ್ಷರಾದ ಬಿ.ಜಿ.ಮಠ,ಆಡಳಿತಾಧಿಕಾರಿ ಪ್ರಜ್ವಲ ಮಠ,ಕಾರ್ಯದರ್ಶಿಗಳಾದ ಸಿದ್ದಯ್ಯ ಹಿರೇಮಠ,ತಂದೆ ತಾಯಿ,ಶಿಕ್ಷಕರ ಪ್ರೋತ್ಸಾಹದಿಂದ ಈ ಸಾಧನೆ ಮಾಡಿದ್ದೇನೆ ಎಂದು ತಿಳಿಸಿದರು.

ಮನೆಯಲ್ಲಿ ಹೂವು ಕಟ್ಟುತ್ತಾ ವಿದ್ಯಾಭ್ಯಾಸ ಮಾಡಿರುವ LAXMI HUGAR ಮಾತನಾಡಿ, ಬಡತನದಲ್ಲಿ ಒಳ್ಳೆಯ ರೀತಿಯಲ್ಲಿ ಓದಿ ಹೆಚ್ಚಿನ ಅಂಕ ಪಡೆದುಕೊಳ್ಳಲು ಸಾಧ್ಯವಾಗಿದೆ.ಇದಕ್ಕೆ ಸಂಸ್ಥೆಯವರ ಪರಿಶ್ರಮ ಅಗಾಧವಾದದು.ಮುಂದೆ ನೀಟ್ ಓದುತ್ತೇನೆ ಎಂದು ಹೇಳಿದರು.

ಸಂಸ್ಥೆಯ ಆಡಳಿತಾಧಿಕಾರಿ ಪ್ರಜ್ವಲ ಮಠ ಮಾತನಾಡಿ, ಕೆಲವೊಂದಿಷ್ಟು ಪಾಲಕರಲ್ಲಿ ಇವರ ಶಾಲೆಯಲ್ಲಿ ನೀಟ್ ಆಗುವುದಿಲ್ಲ.ಮೆಡಿಕಲ್ ಆಗುವುದಿಲ್ಲ ಎಂದು ಮಾತನಾಡಿಕೊಳ್ಳುತ್ತಿರುತ್ತಾರೆ.ನಮ್ಮಲ್ಲಿ ಕಳೆದ ವರ್ಷವೇ 30 ಜನ ವಿದ್ಯಾರ್ಥಿಗಳು ಮೆಡಿಕಲ್,ಬಿಎಎಂಎಸ್ ಹಾಗೂ ಅಗ್ರಿ,ಇಂಜಿನಿಯರಿOಗ್ ಸೀಟುಗಳು ದೊರೆತಿವೆ.ಯಾರದ್ದೋ ಮಾತುಗಳಿಗೆ ಕಿವಿಯಾಗದೇ ಪಾಲಕರು ಸತ್ಯಾಸತ್ಯತೆ ಪರಾಮರ್ಶೆ ಮಾಡಿ ಮಕ್ಕಳ ಭವಿಷ್ಯ ರೂಪಿಸಲು ಮುಂದಾಗಬೇಕು ಎಂದು ಹೇಳಿದ ಅವರು, ಜನರಲ್ 400, ಎಸ್.ಸಿ.ಎಸ್ಟಿ ಜನಾಂಗದವರು 350 ಸಿಇಟಿ ಅಂಕ ಪಡೆದುಕೊಂಡಲ್ಲಿ ಅವರಿಗೆ ಲಾಂಗ್‌ಟರ್ಮ್ ನೀಟ್ ಉಚಿತ ತರಬೇತಿ ನಮ್ಮಲ್ಲಿ ನೀಡಲಾಗುವುದು ಎಂದರು.

ಶಾಲೆಯ ಫಲಿತಾಂಶ : ಒಟ್ಟು 229 ಕ್ಕೆ 229 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಯ ಫಲಿತಾಂಶ ಶೇಕಡ 100 ಕ್ಕೆ 100 ರಷ್ಟು ಪಡೆದಿರುತ್ತದೆ. 125 ವಿದ್ಯಾರ್ಥಿಗಳು ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದಿದ್ದಾರೆ.100 ಕ್ಕೆ 100 ರಷ್ಟು ಕನ್ನಡದಲ್ಲಿ 16, ಇಂಗ್ಲೀಷ್ 02, ಹಿಂದಿ 86, ಗಣಿತ 09, ವಿಜ್ಞಾನ 07, ಸಮಾಜ ವಿಜ್ಞಾನ 71 ರಷ್ಟು ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಬಿ. ಜಿ. ಮಠ,ಕಾರ್ಯದರ್ಶಿ ಸಿದ್ದಯ್ಯ ಮಠ,ಮುಖ್ಯ ಗುರುಗಳಾದ ಹೀರೂನಾಯಕ,ಶಿವಯ್ಯ ಮಠ, ಕಾಲೇಜಿನ ಪ್ರಾಚಾರ್ಯ ಇರ್ಫಾನ್ ಬಾಗವಾನ್, ಎಚ್.ಎಮ್.ನದಾಫ ಅಭಿನಂದಿಸಿದ್ದಾರೆ.


ಎಸ್.ಡಿ.ಕೆ ಪ್ರೌಢಶಾಲೆಯ ವಿದ್ಯಾರ್ಥಿನಿ ಪೂಜಾ ಲಮಾಣಿ 624 ಅಂಕ ಪಡೆದುಕೊಂಡು ರಾಜ್ಯಕ್ಕೆ ಎರಡನೇ ಸ್ಥಾನ ಪಡೆದುಕೊಂಡಿರುವುದು ಹೆಮ್ಮೆ ತಂದಿದೆ.ವಿದ್ಯಾರ್ಥಿಗಳಿಗೆ ಈ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿರುವುದಕ್ಕೆ ಈ ಫಲಿತಾಂಶ ಸಾಕ್ಷಿಯಾಗಿದೆ.ಶಿಕ್ಷಣ ಇಲಾಖೆಯ ಪರವಾಗಿ ವಿದ್ಯಾರ್ಥಿನಿಗೆ,ಸಂಸ್ಥೆಯವರನ್ನು ಅಭಿನಂದಿಸುವೆ. —-ಬಿ.ಎಸ್.ಸಾವಳಗಿ, ಬಿಇಒ

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ