ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ : ವಿದ್ಯಾರ್ಥಿನಿ ಕಣ್ಣೀರು…! ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ : ವಿದ್ಯಾರ್ಥಿನಿ ಕಣ್ಣೀರು…! ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ಮುದ್ದೇಬಿಹಾಳ : ಸನ್ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ನಾಗರಬೆಟ್ಟದ ಎಸ್.ಡಿ.ಇ ಟ್ರಸ್ಟ್ನ ಅಡಿಯಲ್ಲಿ ನಡೆಯುತ್ತಿರುವ ಎಸ್.ಡಿ.ಕೆ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಪೂಜಾ ಎಚ್.ಲಮಾಣಿ ಕೇವಲ ಒಂದೇ ಒಂದು ಅಂಕದಿAದ ರಾಜ್ಯಕ್ಕೆ ಮೊದಲ ಸ್ಥಾನ ಬರುವ ಅವಕಾಶ ಕೈ ತಪ್ಪಿದ್ದು ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾಳೆ.

ಈ ಸಂಸ್ಥೆಯಲ್ಲಿ ಪ್ರತಿವರ್ಷ ರಾಜ್ಯಮಟ್ಟದಲ್ಲಿ ಒಂದಿಲ್ಲೊOದು ಸ್ಥಾನ ಗಳಿಸುತ್ತಿದ್ದು ಈ ಬಾರಿಯೂ ಮತ್ತೊಮ್ಮೆ ರಾಜ್ಯದ ಗಮನ ಸೆಳೆಯುವಂತಹ ಫಲಿತಾಂಶವನ್ನು ಶಾಲೆಯ ವಿದ್ಯಾರ್ಥಿಗಳು ನೀಡಿದ್ದಾರೆ.ಪ್ರಸ್ತುತ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪೂಜಾ ಎಚ್. ಲಮಾಣಿ 624 (99.84%) ಅಂಕ ಪಡೆದು ರಾಜ್ಯಕ್ಕೆ 2 ನೇ ರ‍್ಯಾಂಕ್, ಬಸಮ್ಮ ಪಾಟೀಲ 622 (99.52%) ಅಂಕ ಪಡೆದು ರಾಜ್ಯಕ್ಕೆ 4 ನೇ ರ‍್ಯಾಂಕ್, LAXMI HUGAR 620 (99.20%) ಅಂಕ ಪಡೆದು ರಾಜ್ಯಕ್ಕೆ 6 ನೇ ರ‍್ಯಾಂಕ್, ಅಕ್ಷತಾ ಮೆದಿಕಿನಾಳ 619 (99.04%) ಅಂಕ ಪಡೆದು ರಾಜ್ಯಕ್ಕೆ 7 ನೇ ರ‍್ಯಾಂಕ್ ಪಡೆದು ಸಂಸ್ಥೆಯ ಸಾಧನೆಯನ್ನು ರಾಜ್ಯಮಟ್ಟಕ್ಕೆ ಕೊಂಡೊಯ್ದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಟಾಪರ್ ಪೂಜಾ ಲಮಾಣಿ, ನನಗೆ ಪೂರ್ಣ ಅಂಕ ಬರುವ ವಿಶ್ವಾಸ ಇತ್ತು.ಒಂದೇ ಒಂದು ಅಂಕದಿAದ ರಾಜ್ಯಮಟ್ಟಕ್ಕೆ ಪ್ರಥಮ ಸ್ಥಾನ ಪಡೆದುಕೊಳ್ಳುವಲ್ಲಿ ಸ್ವಲ್ಪ ಹಿನ್ನಡೆ ಆಯಿತು ಎಂದು ಭಾವುಕಳಾಗಿ ಕಣ್ಣೀರು ಹಾಕಿದಳು.ಆದರೂ ಅದೊಂದು ಅಂಕ ಎಲ್ಲಿ ಮಿಸ್ ಆಗಿದೆ ಎಂಬುದನ್ನು ತಿಳಿದುಕೊಳ್ಳಲು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುತ್ತೇನೆ.ಶಾಲೆಯ ಅಧ್ಯಕ್ಷರಾದ ಬಿ.ಜಿ.ಮಠ,ಆಡಳಿತಾಧಿಕಾರಿ ಪ್ರಜ್ವಲ ಮಠ,ಕಾರ್ಯದರ್ಶಿಗಳಾದ ಸಿದ್ದಯ್ಯ ಹಿರೇಮಠ,ತಂದೆ ತಾಯಿ,ಶಿಕ್ಷಕರ ಪ್ರೋತ್ಸಾಹದಿಂದ ಈ ಸಾಧನೆ ಮಾಡಿದ್ದೇನೆ ಎಂದು ತಿಳಿಸಿದರು.

ಮನೆಯಲ್ಲಿ ಹೂವು ಕಟ್ಟುತ್ತಾ ವಿದ್ಯಾಭ್ಯಾಸ ಮಾಡಿರುವ LAXMI HUGAR ಮಾತನಾಡಿ, ಬಡತನದಲ್ಲಿ ಒಳ್ಳೆಯ ರೀತಿಯಲ್ಲಿ ಓದಿ ಹೆಚ್ಚಿನ ಅಂಕ ಪಡೆದುಕೊಳ್ಳಲು ಸಾಧ್ಯವಾಗಿದೆ.ಇದಕ್ಕೆ ಸಂಸ್ಥೆಯವರ ಪರಿಶ್ರಮ ಅಗಾಧವಾದದು.ಮುಂದೆ ನೀಟ್ ಓದುತ್ತೇನೆ ಎಂದು ಹೇಳಿದರು.

ಸಂಸ್ಥೆಯ ಆಡಳಿತಾಧಿಕಾರಿ ಪ್ರಜ್ವಲ ಮಠ ಮಾತನಾಡಿ, ಕೆಲವೊಂದಿಷ್ಟು ಪಾಲಕರಲ್ಲಿ ಇವರ ಶಾಲೆಯಲ್ಲಿ ನೀಟ್ ಆಗುವುದಿಲ್ಲ.ಮೆಡಿಕಲ್ ಆಗುವುದಿಲ್ಲ ಎಂದು ಮಾತನಾಡಿಕೊಳ್ಳುತ್ತಿರುತ್ತಾರೆ.ನಮ್ಮಲ್ಲಿ ಕಳೆದ ವರ್ಷವೇ 30 ಜನ ವಿದ್ಯಾರ್ಥಿಗಳು ಮೆಡಿಕಲ್,ಬಿಎಎಂಎಸ್ ಹಾಗೂ ಅಗ್ರಿ,ಇಂಜಿನಿಯರಿOಗ್ ಸೀಟುಗಳು ದೊರೆತಿವೆ.ಯಾರದ್ದೋ ಮಾತುಗಳಿಗೆ ಕಿವಿಯಾಗದೇ ಪಾಲಕರು ಸತ್ಯಾಸತ್ಯತೆ ಪರಾಮರ್ಶೆ ಮಾಡಿ ಮಕ್ಕಳ ಭವಿಷ್ಯ ರೂಪಿಸಲು ಮುಂದಾಗಬೇಕು ಎಂದು ಹೇಳಿದ ಅವರು, ಜನರಲ್ 400, ಎಸ್.ಸಿ.ಎಸ್ಟಿ ಜನಾಂಗದವರು 350 ಸಿಇಟಿ ಅಂಕ ಪಡೆದುಕೊಂಡಲ್ಲಿ ಅವರಿಗೆ ಲಾಂಗ್‌ಟರ್ಮ್ ನೀಟ್ ಉಚಿತ ತರಬೇತಿ ನಮ್ಮಲ್ಲಿ ನೀಡಲಾಗುವುದು ಎಂದರು.

ಶಾಲೆಯ ಫಲಿತಾಂಶ : ಒಟ್ಟು 229 ಕ್ಕೆ 229 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಯ ಫಲಿತಾಂಶ ಶೇಕಡ 100 ಕ್ಕೆ 100 ರಷ್ಟು ಪಡೆದಿರುತ್ತದೆ. 125 ವಿದ್ಯಾರ್ಥಿಗಳು ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದಿದ್ದಾರೆ.100 ಕ್ಕೆ 100 ರಷ್ಟು ಕನ್ನಡದಲ್ಲಿ 16, ಇಂಗ್ಲೀಷ್ 02, ಹಿಂದಿ 86, ಗಣಿತ 09, ವಿಜ್ಞಾನ 07, ಸಮಾಜ ವಿಜ್ಞಾನ 71 ರಷ್ಟು ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಬಿ. ಜಿ. ಮಠ,ಕಾರ್ಯದರ್ಶಿ ಸಿದ್ದಯ್ಯ ಮಠ,ಮುಖ್ಯ ಗುರುಗಳಾದ ಹೀರೂನಾಯಕ,ಶಿವಯ್ಯ ಮಠ, ಕಾಲೇಜಿನ ಪ್ರಾಚಾರ್ಯ ಇರ್ಫಾನ್ ಬಾಗವಾನ್, ಎಚ್.ಎಮ್.ನದಾಫ ಅಭಿನಂದಿಸಿದ್ದಾರೆ.


ಎಸ್.ಡಿ.ಕೆ ಪ್ರೌಢಶಾಲೆಯ ವಿದ್ಯಾರ್ಥಿನಿ ಪೂಜಾ ಲಮಾಣಿ 624 ಅಂಕ ಪಡೆದುಕೊಂಡು ರಾಜ್ಯಕ್ಕೆ ಎರಡನೇ ಸ್ಥಾನ ಪಡೆದುಕೊಂಡಿರುವುದು ಹೆಮ್ಮೆ ತಂದಿದೆ.ವಿದ್ಯಾರ್ಥಿಗಳಿಗೆ ಈ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿರುವುದಕ್ಕೆ ಈ ಫಲಿತಾಂಶ ಸಾಕ್ಷಿಯಾಗಿದೆ.ಶಿಕ್ಷಣ ಇಲಾಖೆಯ ಪರವಾಗಿ ವಿದ್ಯಾರ್ಥಿನಿಗೆ,ಸಂಸ್ಥೆಯವರನ್ನು ಅಭಿನಂದಿಸುವೆ. —-ಬಿ.ಎಸ್.ಸಾವಳಗಿ, ಬಿಇಒ

Latest News

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ನೂತನ

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಪಟ್ಟಣದಲ್ಲಿ ಇತ್ತೀಚಿಗೆ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮೃತಪ್ಪಟ ಕಟ್ಟಡ ಕಾರ್ಮಿಕರಾದ ಶಕೀಲಅಹ್ಮದ್

17.17 ಲಕ್ಷ ರೂ.ಅನುದಾನ ದುರುಪಯೋಗ;                   ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

17.17 ಲಕ್ಷ ರೂ.ಅನುದಾನ ದುರುಪಯೋಗ; ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

ಮುದ್ದೇಬಿಹಾಳ : ಪ್ರಸ್ತುತ ಬಾಗಲಕೋಟ ತಾಪಂ ಅಧೀಕ್ಷಕಿಯಾಗಿ ಸೇವೆಯಲ್ಲಿರುವ ಹಿಂದಿನ ಮುದ್ದೇಬಿಹಾಳ ತಾಲ್ಲೂಕು ಯರಝರಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ರುದ್ರಪ್ಪ ಮಾ. ಲಮಾಣಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ. ಗುಡಿಮನಿ ಅವರು ಕರ್ನಾಟಕ ರಾಜ್ಯ ಸರಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಕಬಡ್ಡಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿದ್ದಕ್ಕೆ ಹಾಗೂ ಗುಂಡು ಎಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಅವರನ್ನು ಬುಧವಾರ ಮುದ್ದೇಬಿಹಾಳ ತಾಲೂಕು ಪಂಚಾಯತ ಕಚೇರಿಯಲ್ಲಿ ತಾಪಂ ಇಒ ಸಂಗನಗೌಡ ಬಿರಾದಾರ ಸನ್ಮಾನಿಸಿದರು. ಈ ಸಂದರ್ಭದಲ್ಲಿ ತಾಪಂ ಪ್ರಭಾರ ಎಡಿ ಮಲ್ಲಿಕಾರ್ಜುನ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು ಬಂಕ್‌ಗಳ ಮುಂದೆ ಸರದಿಯಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಟ್ಟಣದ ಹಲವು ಪೆಟ್ರೋಲ್ ಬಂಕ್‌ಗಳ ಮುಂದೆ ಅಡ್ಡಲಾಗಿ ಹಗ್ಗ ಕಟ್ಟಿ ನೋ ಸ್ಟಾಕ್ ಬೋರ್ಡ್ ಹಾಕಿದ್ದರೆ ಡಿಸೇಲ್ ಲಭ್ಯವಿರುವ ಪೆಟ್ರೋಲ್ ಬಂಕ್‌ಗಳ ಮುಂದೆ ಸಾಕಷ್ಟು ಸಂಖ್ಯೆಯಲ್ಲಿ ವಾಹನ ಸವಾರರು,ಖಾಲಿ ಕ್ಯಾನ್‌ಗಳೊಂದಿಗೆ ಸರದಿಯಲ್ಲಿ ನಿಂತಿದ್ದು ಕಂಡು ಬಂದಿತು. ಪಟ್ಟಣದ ತಾಳಿಕೋಟಿ ರಸ್ತೆಯಲ್ಲಿರುವ ನಾಗಠಾಣ ಪೆಟ್ರೋಲ್ ಬಂಕ್‌ನಲ್ಲಿ ಡಿಸೇಲ್