ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ : ವಿದ್ಯಾರ್ಥಿನಿ ಕಣ್ಣೀರು…! ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ : ವಿದ್ಯಾರ್ಥಿನಿ ಕಣ್ಣೀರು…! ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ಮುದ್ದೇಬಿಹಾಳ : ಸನ್ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ನಾಗರಬೆಟ್ಟದ ಎಸ್.ಡಿ.ಇ ಟ್ರಸ್ಟ್ನ ಅಡಿಯಲ್ಲಿ ನಡೆಯುತ್ತಿರುವ ಎಸ್.ಡಿ.ಕೆ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಪೂಜಾ ಎಚ್.ಲಮಾಣಿ ಕೇವಲ ಒಂದೇ ಒಂದು ಅಂಕದಿAದ ರಾಜ್ಯಕ್ಕೆ ಮೊದಲ ಸ್ಥಾನ ಬರುವ ಅವಕಾಶ ಕೈ ತಪ್ಪಿದ್ದು ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾಳೆ.

ಈ ಸಂಸ್ಥೆಯಲ್ಲಿ ಪ್ರತಿವರ್ಷ ರಾಜ್ಯಮಟ್ಟದಲ್ಲಿ ಒಂದಿಲ್ಲೊOದು ಸ್ಥಾನ ಗಳಿಸುತ್ತಿದ್ದು ಈ ಬಾರಿಯೂ ಮತ್ತೊಮ್ಮೆ ರಾಜ್ಯದ ಗಮನ ಸೆಳೆಯುವಂತಹ ಫಲಿತಾಂಶವನ್ನು ಶಾಲೆಯ ವಿದ್ಯಾರ್ಥಿಗಳು ನೀಡಿದ್ದಾರೆ.ಪ್ರಸ್ತುತ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪೂಜಾ ಎಚ್. ಲಮಾಣಿ 624 (99.84%) ಅಂಕ ಪಡೆದು ರಾಜ್ಯಕ್ಕೆ 2 ನೇ ರ‍್ಯಾಂಕ್, ಬಸಮ್ಮ ಪಾಟೀಲ 622 (99.52%) ಅಂಕ ಪಡೆದು ರಾಜ್ಯಕ್ಕೆ 4 ನೇ ರ‍್ಯಾಂಕ್, LAXMI HUGAR 620 (99.20%) ಅಂಕ ಪಡೆದು ರಾಜ್ಯಕ್ಕೆ 6 ನೇ ರ‍್ಯಾಂಕ್, ಅಕ್ಷತಾ ಮೆದಿಕಿನಾಳ 619 (99.04%) ಅಂಕ ಪಡೆದು ರಾಜ್ಯಕ್ಕೆ 7 ನೇ ರ‍್ಯಾಂಕ್ ಪಡೆದು ಸಂಸ್ಥೆಯ ಸಾಧನೆಯನ್ನು ರಾಜ್ಯಮಟ್ಟಕ್ಕೆ ಕೊಂಡೊಯ್ದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಟಾಪರ್ ಪೂಜಾ ಲಮಾಣಿ, ನನಗೆ ಪೂರ್ಣ ಅಂಕ ಬರುವ ವಿಶ್ವಾಸ ಇತ್ತು.ಒಂದೇ ಒಂದು ಅಂಕದಿAದ ರಾಜ್ಯಮಟ್ಟಕ್ಕೆ ಪ್ರಥಮ ಸ್ಥಾನ ಪಡೆದುಕೊಳ್ಳುವಲ್ಲಿ ಸ್ವಲ್ಪ ಹಿನ್ನಡೆ ಆಯಿತು ಎಂದು ಭಾವುಕಳಾಗಿ ಕಣ್ಣೀರು ಹಾಕಿದಳು.ಆದರೂ ಅದೊಂದು ಅಂಕ ಎಲ್ಲಿ ಮಿಸ್ ಆಗಿದೆ ಎಂಬುದನ್ನು ತಿಳಿದುಕೊಳ್ಳಲು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುತ್ತೇನೆ.ಶಾಲೆಯ ಅಧ್ಯಕ್ಷರಾದ ಬಿ.ಜಿ.ಮಠ,ಆಡಳಿತಾಧಿಕಾರಿ ಪ್ರಜ್ವಲ ಮಠ,ಕಾರ್ಯದರ್ಶಿಗಳಾದ ಸಿದ್ದಯ್ಯ ಹಿರೇಮಠ,ತಂದೆ ತಾಯಿ,ಶಿಕ್ಷಕರ ಪ್ರೋತ್ಸಾಹದಿಂದ ಈ ಸಾಧನೆ ಮಾಡಿದ್ದೇನೆ ಎಂದು ತಿಳಿಸಿದರು.

ಮನೆಯಲ್ಲಿ ಹೂವು ಕಟ್ಟುತ್ತಾ ವಿದ್ಯಾಭ್ಯಾಸ ಮಾಡಿರುವ LAXMI HUGAR ಮಾತನಾಡಿ, ಬಡತನದಲ್ಲಿ ಒಳ್ಳೆಯ ರೀತಿಯಲ್ಲಿ ಓದಿ ಹೆಚ್ಚಿನ ಅಂಕ ಪಡೆದುಕೊಳ್ಳಲು ಸಾಧ್ಯವಾಗಿದೆ.ಇದಕ್ಕೆ ಸಂಸ್ಥೆಯವರ ಪರಿಶ್ರಮ ಅಗಾಧವಾದದು.ಮುಂದೆ ನೀಟ್ ಓದುತ್ತೇನೆ ಎಂದು ಹೇಳಿದರು.

ಸಂಸ್ಥೆಯ ಆಡಳಿತಾಧಿಕಾರಿ ಪ್ರಜ್ವಲ ಮಠ ಮಾತನಾಡಿ, ಕೆಲವೊಂದಿಷ್ಟು ಪಾಲಕರಲ್ಲಿ ಇವರ ಶಾಲೆಯಲ್ಲಿ ನೀಟ್ ಆಗುವುದಿಲ್ಲ.ಮೆಡಿಕಲ್ ಆಗುವುದಿಲ್ಲ ಎಂದು ಮಾತನಾಡಿಕೊಳ್ಳುತ್ತಿರುತ್ತಾರೆ.ನಮ್ಮಲ್ಲಿ ಕಳೆದ ವರ್ಷವೇ 30 ಜನ ವಿದ್ಯಾರ್ಥಿಗಳು ಮೆಡಿಕಲ್,ಬಿಎಎಂಎಸ್ ಹಾಗೂ ಅಗ್ರಿ,ಇಂಜಿನಿಯರಿOಗ್ ಸೀಟುಗಳು ದೊರೆತಿವೆ.ಯಾರದ್ದೋ ಮಾತುಗಳಿಗೆ ಕಿವಿಯಾಗದೇ ಪಾಲಕರು ಸತ್ಯಾಸತ್ಯತೆ ಪರಾಮರ್ಶೆ ಮಾಡಿ ಮಕ್ಕಳ ಭವಿಷ್ಯ ರೂಪಿಸಲು ಮುಂದಾಗಬೇಕು ಎಂದು ಹೇಳಿದ ಅವರು, ಜನರಲ್ 400, ಎಸ್.ಸಿ.ಎಸ್ಟಿ ಜನಾಂಗದವರು 350 ಸಿಇಟಿ ಅಂಕ ಪಡೆದುಕೊಂಡಲ್ಲಿ ಅವರಿಗೆ ಲಾಂಗ್‌ಟರ್ಮ್ ನೀಟ್ ಉಚಿತ ತರಬೇತಿ ನಮ್ಮಲ್ಲಿ ನೀಡಲಾಗುವುದು ಎಂದರು.

ಶಾಲೆಯ ಫಲಿತಾಂಶ : ಒಟ್ಟು 229 ಕ್ಕೆ 229 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಯ ಫಲಿತಾಂಶ ಶೇಕಡ 100 ಕ್ಕೆ 100 ರಷ್ಟು ಪಡೆದಿರುತ್ತದೆ. 125 ವಿದ್ಯಾರ್ಥಿಗಳು ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದಿದ್ದಾರೆ.100 ಕ್ಕೆ 100 ರಷ್ಟು ಕನ್ನಡದಲ್ಲಿ 16, ಇಂಗ್ಲೀಷ್ 02, ಹಿಂದಿ 86, ಗಣಿತ 09, ವಿಜ್ಞಾನ 07, ಸಮಾಜ ವಿಜ್ಞಾನ 71 ರಷ್ಟು ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಬಿ. ಜಿ. ಮಠ,ಕಾರ್ಯದರ್ಶಿ ಸಿದ್ದಯ್ಯ ಮಠ,ಮುಖ್ಯ ಗುರುಗಳಾದ ಹೀರೂನಾಯಕ,ಶಿವಯ್ಯ ಮಠ, ಕಾಲೇಜಿನ ಪ್ರಾಚಾರ್ಯ ಇರ್ಫಾನ್ ಬಾಗವಾನ್, ಎಚ್.ಎಮ್.ನದಾಫ ಅಭಿನಂದಿಸಿದ್ದಾರೆ.


ಎಸ್.ಡಿ.ಕೆ ಪ್ರೌಢಶಾಲೆಯ ವಿದ್ಯಾರ್ಥಿನಿ ಪೂಜಾ ಲಮಾಣಿ 624 ಅಂಕ ಪಡೆದುಕೊಂಡು ರಾಜ್ಯಕ್ಕೆ ಎರಡನೇ ಸ್ಥಾನ ಪಡೆದುಕೊಂಡಿರುವುದು ಹೆಮ್ಮೆ ತಂದಿದೆ.ವಿದ್ಯಾರ್ಥಿಗಳಿಗೆ ಈ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿರುವುದಕ್ಕೆ ಈ ಫಲಿತಾಂಶ ಸಾಕ್ಷಿಯಾಗಿದೆ.ಶಿಕ್ಷಣ ಇಲಾಖೆಯ ಪರವಾಗಿ ವಿದ್ಯಾರ್ಥಿನಿಗೆ,ಸಂಸ್ಥೆಯವರನ್ನು ಅಭಿನಂದಿಸುವೆ. —-ಬಿ.ಎಸ್.ಸಾವಳಗಿ, ಬಿಇಒ

Latest News

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ತಾಲ್ಲೂಕು ಬರಪೀಡಿತ ಎಂದು ಘೋಷಣೆಗೆ ಸ್ಥಳ ಪರಿಶೀಲನೆಗೆ ಆದೇಶ ಮಾಡಿದ್ದಾರೆ.ಅಧಿಕೃತವಾಗಿ ಬರಪೀಡಿತ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ : ಬರಪೀಡಿತ ತಾಲ್ಲೂಕು ಪಟ್ಟಿಯಲ್ಲಿ ಮುದ್ದೇಬಿಹಾಳ ತಾಲ್ಲೂಕು ಘೋಷಣೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು,ನಾಡಗೌಡರ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ:                                ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ: ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನ ವರದಿ ವರ್ಷದಲ್ಲಿ ಸಂಘದ ಆದಾಯ ಒಟ್ಟು 1.04

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ:                              ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ: ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಮುದ್ದೇಬಿಹಾಳ : ಪ್ರಕೃತಿ ವಿಕೋಪ ಹಾಗೂ ತೀವ್ರ ಬರಪೀಡಿತ ಸಂದರ್ಭದಲ್ಲಿ ರೈತರಿಗೆ ನೆರವು ಒದಗಿಸುವ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ನೇತೃತ್ವದಲ್ಲಿ ಶನಿವಾರ ಕರೆ ನೀಡಿದ್ದ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆಸುತ್ತಿದ್ದ ಹೋರಾಟದ ಭಾಗವಾಗಿ ಆರನೇ ದಿನದ ಪ್ರತಿಭಟನೆಯನ್ನು ಮುದ್ದೇಬಿಹಾಳ ಬಂದ್ ಕರೆ ನೀಡುವ ಮೂಲಕ ಮುಂದುವರೆಸಲಾಗಿತ್ತು.ಬoದ್‌ಗೆ ವ್ಯಾಪಾರಸ್ಥರು,ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಮುದ್ದೇಬಿಹಾಳ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಎಲ್ಲ ಅಂಗಡಿ

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ 50 ಸಾವಿರ ರೂ.ಗಳಿಂದ ಗರಿಷ್ಠ 5 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯ ಪಡೆಯಬಹುದಾಗಿದೆ.ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಂಡು ಸ್ವಯಂ ಉದ್ಯೋಗದ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶಿವಾನಂದ ಪಿ. ಹೇಳಿದರು. ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಶುಕ್ರವಾರ ನಡೆದ ಸಿಡ್ಬಿ ಸಮೃದ್ಧಿ