ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ದೊರೆಯುತ್ತದೆ ಎಂಬುದನ್ನು ಮನಗಾಣಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಪಟ್ಟಣದ ಮಾರುತಿ ನಗರದಲ್ಲಿ ಶುಕ್ರವಾರ ಲೋಕೋಪಯೋಗಿ ಇಲಾಖೆಯಿಂದ ನಿರ್ಮಿಸಲಾಗಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಸರ್ಕಾರಿ ಬಾಲಕಿಯರ ವಸತಿ ನಿಲಯದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ ಶಾಲೆಗಳಲ್ಲಿ ನುರಿತ ಶಿಕ್ಷಕರನ್ನು ನಿಯೋಜಿಸಲಾಗಿರುತ್ತದೆ.ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾಸಾಗಿ ಬಂದವರು ಇರುತ್ತಾರೆ.ಆದರೆ ಸ್ಪರ್ಧಾತ್ಮಕ ಪರೀಕ್ಷೆ ಅನುತ್ತೀರ್ಣರಾಗಿ ಬಂದವರು ಖಾಸಗಿ ಶಾಲೆಗಳಲ್ಲಿರುತ್ತಾರೆ.ಅಂತಹವರು ಇರುವ ಶಾಲೆಗಳಲ್ಲಿ ನಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಸಿಗುತ್ತದೆ ಎಂದು ನಂಬಿಕೊAಡಿರುವ ಪಾಲಕರ ಅಭಿಪ್ರಾಯ ಬದಲಾಗಬೇಕಿದೆ ಎಂದರು.

ಇತ್ತೀಚಿಗೆ ಹಾಸ್ಟೆಲ್‌ಗಳ ಮೇಲೆ ಒತ್ತಡ ಹೆಚ್ಚುತ್ತಿದೆ.ಮಕ್ಕಳು ಮನೆಯಲ್ಲಿದ್ದರೆ ಮೊಬೈಲ್,ಟಿವಿ ದಾಸರಾಗುತ್ತಾರೆ.ಗೆಳೆಯರ ಜೊತೆ ಹೊರಗಡೆ ಹರಟೆ ಹೊಡೆಯಲು ಹೋಗುತ್ತಾರೆ.ಚೆನ್ನಾಗಿ ಓದುವುದಿಲ್ಲ ಎಂಬ ಭಾವನೆಯಿಂದ ಮಕ್ಕಳನ್ನು ಹಾಸ್ಟೆಲ್‌ನಲ್ಲಿ ಸೇರಿಸುವುದಕ್ಕೆ ಮುಂದಾಗುತ್ತಿದ್ದಾರೆ.ವಿಶೇಷವಾಗಿ ಸರಕಾರಿ ಹಾಸ್ಟೆಲ್, ಶಾಲೆಗಳಲ್ಲಿ ಓದುವ ಮಕ್ಕಳು ಉನ್ನತ ಅಂಕ ಪಡೆದುಕೊಳ್ಳುತ್ತಾರೆ.ಮೂಲಸೌಕರ್ಯ ಹೆಚ್ಚಿರುತ್ತದೆ.ಬಡವರ ಮಕ್ಕಳಷ್ಟೇ ಅಲ್ಲಿ ಓದುತ್ತಾರೆ ಎನ್ನುವುದಕ್ಕಿಂತ ಇಂದು ಉಳ್ಳವರು ತಮ್ಮ ಮಕ್ಕಳನ್ನು ಹಾಸ್ಟೆಲ್‌ಗಳಿಗೆ ಸೇರಿಸುತ್ತಿದ್ದಾರೆ ಎಂದರು.

ಪಿಡಬ್ಲೂö್ಯಡಿ ಎಇಇ ಎ.ಬಿ.ರೆಡ್ಡಿ ಮಾತನಾಡಿ, ಎಸ್.ಸಿ.ಪಿ/ಟಿಎಸ್‌ಪಿ ಅನುದಾನದ ಅಡಿಯಲ್ಲಿ 6.50 ಕೋಟಿ ರೂ.ವೆಚ್ಚದಲ್ಲಿ ಕಾಲಮಿತಿಯಲ್ಲಿ ಈ ಕಾಮಗಾರಿ ಪೂರ್ಣಗೊಂಡಿದೆ.100ವಿದ್ಯಾರ್ಥಿಗಳ ಸಾಮರ್ಥ್ಯ ಹಾಸ್ಟೆಲ್‌ನಲ್ಲಿದ್ದು ಶುದ್ಧ ಕುಡಿವ ನೀರಿನ ಘಟಕ,ಪುಸ್ತಕ ಇಡಲು ಗ್ರಂಥಾಲಯ,ಇAಟರನೆಟ್ ಸೌಲಭ್ಯ,ಸಿಸಿಟಿವಿ ಅಳವಡಿಸಲಾಗಿದೆ ಎಂದರು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಬಸಂತಿ ಮಠ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಹೆಣ್ಣು ಮಕ್ಕಳಿಗೆ 10ನೇ ತರಗತಿ ಮುಗಿದ ಕೂಡಲೇ ಶಾಲೆಯನ್ನು ಬಿಡಿಸುವ ಮನೋಭಾವ ಪಾಲಕರಲ್ಲಿದೆ.ಆದರೆ ಸರ್ಕಾರ ಇಂತಹ ವಸತಿ ನಿಲಯಗಳನ್ನು ಆರಂಭಿಸುವ ಮೂಲಕ ಹೆಣ್ಣು ಮಕ್ಕಳು ಉನ್ನತ ಶಿಕ್ಷಣಕ್ಕೆ ದಾರಿಯಾಗಲು ಅವಕಾಶ ದೊರೆಯುತ್ತದೆ.ಈ ವಸತಿ ನಿಲಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿದರೆ ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗಿ ಸರಿಯಾದ ಸಮಯಕ್ಕೆ ನಿಲಯದಲ್ಲಿರಲು ಅನುಕೂಲವಾಗುತ್ತದೆ ಎಂದು ಹೇಳಿದರು. ತಾಪಂ ಪ್ರಭಾರ ಇಒ ಸಂಗನಗೌಡ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಗಣ್ಯರಾದ ಸತೀಶ ಓಸ್ವಾಲ್, ಶ್ರೀಕಾಂತ ಚಲವಾದಿ,ಪುರಸಭೆ ಮಾಜಿ ಸದಸ್ಯ ವೀರೇಶ ಹಡಲಗೇರಿ,ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ನಿರ್ದೇಶಕ ಆನಂದಗೌಡ ಬಿರಾದಾರ,ಗುತ್ತಿಗೆದಾರ ಅರುಣ ಮಠ ಮತ್ತಿತರರು ಇದ್ದರು.ಟಿ.ಡಿ.ಲಮಾಣಿ ನಿರೂಪಿಸಿದರು.

ವಸತಿ ನಿಲಯದ ಕಟ್ಟಡದ ಬಗ್ಗೆ ಶಾಸಕರ ಅಸಮಾಧಾನ:
ವಸತಿ ನಿಲಯದ ಮುಂಭಾಗದಲ್ಲಿರುವ ಕಂಪೌAಡ್ ಅತ್ಯಂತ ಕೆಳಮಟ್ಟದಲ್ಲಿರುವುದಕ್ಕೆ ಶಾಸಕ ಸಿ.ಎಸ್.ನಾಡಗೌಡ ಆಕ್ಷೇಪ ವ್ಯಕ್ತಪಡಿಸಿದರು.ಹೆಣ್ಣುಮಕ್ಕಳಿರುವ ಹಾಸ್ಟೆಲ್ ಇದಾಗಿದ್ದು ಹೆಚ್ಚಿನ ಭದ್ರತೆ ಇರಬೇಕು.ಆದರೆ ಪುಂಡಪೋಕರಿಗಳು ತಡೆಗೋಡೆ ಜಿಗಿದು ಹೋಗಲು ಆಗುವಂತೆ ಕೆಳಮಟ್ಟದಲ್ಲಿ ತಡೆಗೋಡೆ ಇದೆ.ಇದನ್ನು ಎತ್ತರಿಸಿ ತಂತಿಬೇಲಿ ಅಳವಡಿಸಿ ಎಂದು ಹೇಳಿದರಲ್ಲದೇ ಇಂಜಿನಿಯರ್ ಕಟ್ಟಡ ಕಾಮಗಾರಿ ಮಾಡುವಾಗ ಗಮನಿಸಲಿಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದರು.ಕಟ್ಟಡ ಇನ್ನುಳಿದ ಸುತ್ತಮುತ್ತಲಿನ ಕಟ್ಟಡಕ್ಕಿಂತ ಕೆಳಮಟ್ಟದಲ್ಲಿದ್ದು ಮಳೆಗಾಲದಲ್ಲಿ ನೀರು ಹಾಸ್ಟೆಲ್ ಆವರಣದಲ್ಲಿಯೇ ನಿಲ್ಲುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ