ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಮುದ್ದೇಬಿಹಾಳ : ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡು ಸ್ಥಗಿತಗೊಂಡಿರುವ ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸುವುದಕ್ಕಾಗಿ ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ಪ್ರಶ್ನಿಸಿದ್ದಾರೆ.

ಪಟ್ಟಣದ ಪಂಜುರ್ಲಿ ಹೊಟೇಲ್ ಸಭಾಂಗಣದಲ್ಲಿ ಭಾನುವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘದಿAದ ವಿಜಯಪುರದಲ್ಲಿ ಹಮ್ಮಿಕೊಂಡಿರುವ ರಾಜ್ಯಮಟ್ಟದ 4ನೇ ಬೃಹತ್ ರೈತ ಜಾಗೃತಿ ಸಮಾವೇಶದ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ವಿಜಯಪುರ ಜಿಲ್ಲೆಯಲ್ಲಿ ಜೀವನಾಡಿಯಾಗಿರುವ ಆಲಮಟ್ಟಿ ಆಣೆಕಟ್ಟಿನ ಎತ್ತರವನ್ನು 524.256 ಮಿ ಎತ್ತರಿಸುವ ಪ್ರಸ್ತಾವ ಸರ್ಕಾರದ ಮಟ್ಟದಲ್ಲಿ ನನೆಗುದಿಗೆ ಬಿದ್ದಿದೆ.ಜಿಲ್ಲೆಯಲ್ಲಿ ಕಬ್ಬು,ಈರುಳ್ಳಿ,ನಿಂಬೆ ಸೇರಿದಂತೆ ಪ್ರಮುಖ ಬೆಳೆಗಳ ಬೆಲೆ ಕುಸಿತವಾಗಿದ್ದರೂ ಸರ್ಕಾರ ರೈತರ ನೆರವಿಗೆ ಧಾವಿಸುತ್ತಿಲ್ಲ.ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸ್ವಾಮಿನಾಥನ್ ವರದಿ ಜಾರಿಗೆ ತರುತ್ತಿಲ್ಲ.79 ವರ್ಷ ನಮ್ಮನ್ನಾಳಿದ ಸರ್ಕಾರಗಳಿಂದ ರೈತರಿಗೆ ನ್ಯಾಯ ಸಿಕ್ಕಿಲ್ಲ ಎಂದು ದೂರಿದರು.

ಮೇ.8 ರಂದು ವಿಜಯಪುರದಲ್ಲಿ ಬೃಹತ್ ರೈತ ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.ವಿದ್ಯುತ್,ನೀರಾವರಿ,ಹೈನುಗಾರಿಕೆ ಖಾಸಗಿಯವರ ಪಾಲಾಗುತ್ತಿದೆ.ಈ ಬಗ್ಗೆ ಅರಿವು ಮೂಡಿಸಲು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಜಾಗೃತಿ ಮೂಡಿಸಲಾಗುತ್ತಿದೆ.ನಾಗರಬೆಟ್ಟ ಏತ ನೀರಾವರಿ ಯೋಜನೆ ಆರಂಭಕ್ಕೆ ಅಧಿಕಾರಿಗಳು,ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಸಂಘಟನೆಯಿAದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಮಾತನಾಡಿ, ಯಾವುದೇ ಪಕ್ಷ ,ರಾಜಕಾರಣಿಗಳು ಆಡಳಿತದ ಸಮಯದಲ್ಲಿ ಬೆಂಬಲ ನೀಡಿಲ್ಲ.ವಿರೋಧ ಪಕ್ಷದಲ್ಲಿದ್ದಾಗ ರೈತರನ್ನು ಬಳಸಿಕೊಂಡಿದ್ದಾರೆ.ಎಲ್ಲ ಸರಕಾರಗಳಿಂದ ರೈತರಿಗೆ ಮೋಸವಾಗುತ್ತಿದೆ.ರೈತರಿಗೆ 25 ಸಾವಿರದಲ್ಲಿ ದೊರೆಯುವ ಟಿಸಿ ಈಗ ಮೂರು ಲಕ್ಷ ರೂ.ಕೊಡಬೇಕಾಗಿದೆ.ಟಿಸಿಗೆ ಮೀಟರ್ ಕೂಡಿಸಲು 18-20 ಸಾವಿರ ರೂ.ತಗೆದುಕೊಳ್ಳುತ್ತಿದ್ದಾರೆ.ಕಾಲುವೆಗಳು ಒಡೆದು ಹೋಗಿದ್ದರೂ ಕೇಳುವವರಿಲ್ಲ.2018ರಲ್ಲಿ ಆರಂಭವಾಗಿರುವ ನಾಗರಬೆಟ್ಟ ಏತ ನೀರಾವರಿ ಯೋಜನೆ ಹತ್ತು ವರ್ಷಗಳಾಗುತ್ತ ಬಂದಿದ್ದರೂ ಈವರೆಗೂ ಮುಗಿದಿಲ್ಲ.ವಿಜಯಪುರದಲ್ಲಿ ಮೇ.8 ರಂದು ನಡೆಯಲಿರುವ ರೈತ ಜನಜಾಗೃತಿ ಸಮಾವೇಶಕ್ಕೆ ತಾಲ್ಲೂಕಿನ ರೈತ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ರೈತರ ವಿಷಯದಲ್ಲಿ ನಾನು ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡುತ್ತೇನೆ.ಸಂದರ್ಭ ಬಂದರೆ ನಾನು ಇರುವ ಪಕ್ಷ ಬಿಡುತ್ತೇನೆ.ಆದರೆ ರೈತರಿಗೆ ಅನ್ಯಾಯವಾಗುವುದಕ್ಕೆ ಯಾವತ್ತಿಗೂ ಬಿಡುವುದಿಲ್ಲ ಎಂದು ಮುಖಂಡ ಶಾಂತಗೌಡ ತಿಳಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ,ವಿಜಯಪುರ ಜಿಲ್ಲೆಯ ರೈತರ ಜ್ವಲಂತ ಸಮಸ್ಯೆಗಳನ್ನು ಮುಂದಿಟ್ಟುಕೊoಡು ಈ ಸಮಾವೇಶ ಆಯೋಜಿಸಲಾಗಿದ್ದು ಸಾಧಕ ರೈತರಿಗೆ ನೇಗಿಲಯೋಗಿ ಪ್ರಶಸ್ತಿ ಹಾಗೂ ವಿವಿಧ ಕ್ಷೇಥ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಷ್ಟಿçÃಯ ಸಮಾಜ ಸೇವಾ ರತ್ನ ಪ್ರಶಸ್ತಿ ನೀಡಲಾಗುತ್ತದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ್ ಕುಬಕಡ್ಡಿ,ತಾಲ್ಲೂಕು ಅಧ್ಯಕ್ಷ ಮಹಾಂತಗೌಡ ಬಿರಾದಾರ,ಕೋಲ್ಹಾರ ತಾಲ್ಲೂಕು ಅಧ್ಯಕ್ಷ ಸೋಮು ಬಿರಾದಾರ,ಮುಖಂಡರಾದ ಮುತ್ತು ಹಿರೇಮಠ,ಅಪ್ಪುಗೌಡ ಪಾಟೀಲ,ಶಿವನಗೌಡ ಕೇಸಪ್ಪಗೌಡರ,ಈಶ್ವರ ಬಡಿಗೇರ ಮೊದಲಾದವರು ಇದ್ದರು.

ರಾಜಕಾರಣಿಗಳು ತಲೆ ತಗ್ಗಿಸಬೇಕು-ನಡಹಳ್ಳಿ: ಎಂಟು ಸಾವಿರ ಎಕರೆ ನೀರಾವರಿಗೆ ಒಳಪಡುವ ನಾಗರಬೆಟ್ಟ ಏತ ನೀರಾವರಿ ಯೋಜನೆ ಕಳೆದ ಹತ್ತು ವರ್ಷಗಳಿಂದ ಪೂರ್ಣಗೊಳ್ಳದೇ ಇರುವುದಕ್ಕೆ ಈ ಭಾಗದ ರಾಜಕಾರಣಿಗಳು ತಲೆತಗ್ಗಿಸಬೇಕು.ಕೆಲವು ರೈತರು ತಮಗೆ ಅವಾರ್ಡ್ ಕಾಪಿ ಕೊಟ್ಟರೆ ಕೆಲಸ ಆರಂಭಿಸಲು ತಿಳಿಸುತ್ತಿದ್ದಾರೆ.ಸರ್ಕಾರ ಅವರಿಗೆ ಅವಾರ್ಡ ಕಾಪಿ ಕೊಟ್ಟು ಕಾಲುವೆ ಬಾಕಿ ಕೆಲಸ ಪೂರ್ಣಗೊಳಿಸಬೇಕು.ಒಂದು ತಿಂಗಳ ಒಳಗಾಗಿ ಕಾಲುವೆ ಕಾಮಗಾರಿ ಕೆಲಸ ಆರಂಭಗೊಳ್ಳದಿದ್ದಲ್ಲಿ ಯೋಜನೆ ವ್ಯಾಪ್ತಿಯಲ್ಲಿ ಒಳಪಡುವ 30ಹಳ್ಳಿಗಳ ರೈತರೊಂದಿಗೆ ಉಗ್ರ ಹೋರಾಟ ಮಾಡುತ್ತೇವೆ.ಜನಪ್ರತಿನಿಧಿಗಳ ಮನೆ ಮುಂದೆಯೂ ನಾವು ಹೋರಾಟ ಮಾಡಬೇಕಾಗುತ್ತದೆ.
—ಶಾಂತಗೌಡ ಪಾಟೀಲ ನಡಹಳ್ಳಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ

Latest News

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ

ಕ್ರೀಡಾಸ್ಫೂರ್ತಿಯಿಂದ ಆಟವಾಡಿ-ಶಾಸಕ ನಾಡಗೌಡ

ಕ್ರೀಡಾಸ್ಫೂರ್ತಿಯಿಂದ ಆಟವಾಡಿ-ಶಾಸಕ ನಾಡಗೌಡ

ಮುದ್ದೇಬಿಹಾಳ : ಬಿಸಿಲಿನ ತೀವ್ರತೆಯ ಮಧ್ಯೆ ಆರಂಭಗೊAಡಿರುವ ಹಾರ್ಡ ಟೆನ್ನಿಸ್‌ಬಾಲ್ ಕ್ರಿಕೇಟ್ ಟೂರ್ನಾಮೆಂಟ್‌ನಲ್ಲಿ ಪಾಲ್ಗೊಳ್ಳುವ

ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮುದ್ದೇಬಿಹಾಳ : ಬಿಎಎಸ್ ಸ್ಟಾಫಿಂಗ್ ಸಲೂಷನ್ಸ್ ಪ್ರೆöÊವೆಟ್ ಲಿಮಿಟೆಡ್ ಕಂಪನಿಯಿoದ ಮೇ.3 ರಂದು ಮುದ್ದೇಬಿಹಾಳದಲ್ಲಿ

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ ಕಾರ್ಯನಿರ್ವಹಣೆಗಾಗಿ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಪ್ರಶಸ್ತಿ ನೀಡಿ ಗೌರವಿಸಿದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಷ್ಟಿçÃಯ ಪಂಚಾಯತರಾಜ್ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಮುಖ್ಯಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಯೋಜನಾಧಿಕಾರಿ ಚಂದ್ರಕಾAತ ಕುಂಬಾರ ಮೊದಲಾದವರು ಇದ್ದರು.

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ನಾಲತವಾಡ : ತೆರಿಗೆ ವಸೂಲಾತಿಯಲ್ಲಿ ವಿಜಯಪುರ ಜಿಲ್ಲೆಗೆ ಮೂರನೇ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಮುದ್ದೇಬಿಹಾಳ ತಾಲ್ಲೂಕಿನ ಆಲೂರು ಗ್ರಾಮ ಪಂಚಾಯಿತಿಗೆ ಸನ್ 2025-26 ಸಾಲಿನ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿಜಯಪುರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟಿçÃಯ ಪಂಚಾಯತ್ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಪಂ ಸಿಇಒ ರಿಷಿ ಆನಂದ ಅವರು ಆಲೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜು ಆರ್.ನಾರಾಯಣಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ