ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ: ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ: ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಮುದ್ದೇಬಿಹಾಳ : ಯಾವುದೇ ಒಂದು ಸಾಧನೆ ಇರಲಿ ಅಲ್ಲಿ ಆತ್ಮಸ್ಥೆರ್ಯ ಪ್ರಮುಖ ಪಾತ್ರ ವಹಿಸುತ್ತದೆ. ಈಗಿನ ಹೆಣ್ಣು ಮಕ್ಕಳು ಮಾಡುವ ಸಾಧನೆಯನ್ನು ಪುರುಷ ಪ್ರಧಾನ ಸಮಾಜ ತಲೆ ಎತ್ತಿ ನೋಡುವಂತೆ ಆಗಿದೆ ಎಂದು ಕೆಎಸ್‌ಡಿಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಹೇಳಿದರು.

ತಾಲ್ಲೂಕಿನ ನಾಗರಬೆಟ್ಟ ಆಕ್ಸ್ಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮರು ಮೌಲ್ಯಮಾಪನದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್‌ಗಳಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.

ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಹಾಗೂ ಎಕ್ಸಪರ್ಟ್ ಶಿಕ್ಷಣ ಸಂಸ್ಥೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುತ್ತಿರುವುದಕ್ಕೆ ವಿದ್ಯಾರ್ಥಿಗಳ ಸಾಧನೆಯೇ ಕಾರಣವಾಗಿದೆ.ಹೆಣ್ಣು ಮಕ್ಕಳು ಸಮಾಜದಲ್ಲಿ ಹಿಂಜಯರಿಯದೇ ಸಾಧನೆ ಮಾಡಬೇಕು.ಎಲ್ಲಿಯವರೆಗೆ ತಾವು ಶೈಕ್ಷಣಿಕವಾಗಿ ಗುರಿ ಹೊಂದಿದ್ದೀರೋ ಅಲ್ಲಿಯವರೆಗೂ ರಾಜ್ಯ ಮತ್ತು ರಾಷ್ಟçಮಟ್ಟದ ಸಾಧನೆ ತಮ್ಮದಾಗಲಿ ಎಂದು ಹೇಳಿದರು.

ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಮಾತನಾಡಿ, ನಮ್ಮ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಬದುಕು ರೂಪಿಸುವ ಶಿಕ್ಷಣ ನೀಡುತ್ತಿದ್ದೇವೆ.ನಮ್ಮಲ್ಲಿ ಗುಣಮಟ್ಟದ ಹಾಗೂ ಅತ್ಯುನ್ನತ ಶೈಕ್ಷಣಿಕ ಮಾರ್ಗದರ್ಶನ ದೊರೆಯುತ್ತಿರುವುದರಿಂದಲೇ ಪಾಲಕರು,ವಿದ್ಯಾರ್ಥಿಗಳು ಸಂಸ್ಥೆಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ.ನಿರಂತರ ರಾಜ್ಯಮಟ್ಟದ ಸಾಧನೆ ಸುಲಭವಾದ ಮಾತಲ್ಲ ಎಂದು ಹೇಳಿದರು.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ನಾಲತವಾಡದ ವಿದ್ಯಾರ್ಥಿನಿ ಸೃಷ್ಟಿ ಪಾಟೀಲ,ಎರಡನೇ ಸ್ಥಾನ ಪಡೆದುಕೊಂಡ ಕುದುರಿಸಾಲವಾಡಗಿಯ ಅಪೂರ್ವಾ ಮೂಲಿಮನಿ ಅವರನ್ನು ಸಂಸ್ಥೆಯಿAದ ಸನ್ಮಾನಿಸಲಾಯಿತು.ಶಾಸಕರು ಇಬ್ಬರು ಸಾಧಕ ವಿದ್ಯಾರ್ಥಿಗಳಿಗೆ ತಲಾ ಐದು ಸಾವಿರ ರೂ.ಪ್ರೋತ್ಸಾಹಧನದ ಚೆಕ್ ನೀಡಿದರು.ನಾಲತವಾಡದ ಗಣ್ಯರಾದ ಶಿವಪ್ಪಗೌಡ ತಾತರಡ್ಡಿ,ಎ.ಜಿ.ಗಂಗನಗೌಡ್ರ(ಗುOಡುಸಾಹುಕಾರ), ರಾಯನಗೌಡ ತಾತರಡ್ಡಿ, ಪ್ರಾಚಾರ್ಯ ಇಸ್ಮಾಯಿಲ್ ಮನಿಯಾರ,ಎನ್.ಎ.ಬಿರಾಜದಾರ,ವಿಜಯಕುಮಾರ ಪಾಟೀಲ,ರೇವಣಸಿದ್ದ ಚಲವಾದಿ, ರಾಜಶೇಖರ ಹಿರೇಮಠ,ಪ್ರಮೋದ ಯರಗುಂಟಿ,ಮAಜುನಾಥ ಮಂಕಣಿ, ಸಾಧಕರ ಪಾಲಕರಾದ ಡಾ.ಸಿದ್ದನಗೌಡ ಪಾಟೀಲ, ಸಿದ್ದನಗೌಡ ಮೂಲಿಮನಿ, ಸಂಗಣ್ಣ ಪತ್ತಾರ, ಜೆ.ಡಿ.ಮುಲ್ಲಾ ಮೊದಲಾದವರು ಇದ್ದರು.

ಎಂ.ಎಸ್.ಪಾಟೀಲರು ಒಬ್ಬ ತತ್ವಜ್ಞಾನಿ-ಶಾಸಕ ನಾಡಗೌಡರ ಪ್ರಶಂಸೆ ಶೈಕ್ಷಣಿಕ ಕ್ಷೇತ್ರದಲ್ಲಿ ಸತತ ಸಾಧನೆ ಮಾಡುತ್ತಿರುವ ನಾಗರಬೆಟ್ಟದ ಆಕ್ಸ್ಫರ್ಡ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಎಂ.ಎಸ್.ಪಾಟೀಲರು ತಾವು ಉನ್ನತ ವಿದ್ಯಾಭ್ಯಾಸ ಮಾಡದೇ ಇದ್ದರೂ ಗ್ರಾಮೀಣ ಪ್ರದೇಶದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡಿದ್ದಾರೆ. ಪ್ರಾಥಮಿಕ ಹಂತದಲ್ಲೇ ಖ್ಯಾತಿ ಪಡೆದಿರುವ ಈ ಸಂಸ್ಥೆಯಿOದ ದೇಶ ನಾನಾ ಕಡೆಗಳಲ್ಲಿ ವಿದ್ಯಾರ್ಥಿಗಳು ಉನ್ನತ ಹುದ್ದೆಯಲ್ಲಿದ್ದಾರೆ. ನಿಜಕ್ಕೂ ಅವರೊಬ್ಬ ತತ್ವಜ್ಞಾನಿ ಎಂದು ಬಣ್ಣಿಸಿದರಲ್ಲದೇ ಸಂಸ್ಥೆಯ ಸಾಧನೆ ಮುಂದುವರೆಯಲಿ ಎಂದು ಶಾಸಕ ನಾಡಗೌಡರು ಪ್ರಶಂಸೆ ವ್ಯಕ್ತಪಡಿಸಿದರು.

ನಾವು ಯಾವುದೇ ವಿದ್ಯಾರ್ಥಿಗಳನ್ನು ಒತ್ತಾಯಪೂರ್ವಕವಾಗಿ ನಮ್ಮ ಸಂಸ್ಥೆಯಲ್ಲಿ ಪ್ರವೇಶ ಪಡೆದುಕೊಳ್ಳುವುದಿಲ್ಲ.ಸಾಧನೆ ಮಾಡಿದ ವಿದ್ಯಾರ್ಥಿಗಳು ಯಾವುದೇ ಸಂಸ್ಥೆಯವರಾದರೂ ಅವರನ್ನು ಅಭಿನಂದಿಸುವುದು ನಮ್ಮ ಧರ್ಮ.ಪಾಲಕರು,ವಿದ್ಯಾರ್ಥಿಗಳು ನಮ್ಮಲ್ಲಿ ದೊರೆಯುವ ಶಿಕ್ಷಣ ನೋಡಿ ಬರುತ್ತಾರೆಯೇ ಹೊರತು ಯಾವುದೇ ಆಸೆ,ಆಮಿಷಗಳಿಗೆ ಒಳಗಾಗಿ ಪ್ರವೇಶ ಪಡೆದುಕೊಳ್ಳುವುದಿಲ್ಲ.ಕೆಲವರು ನಮ್ಮ ಸಂಸ್ಥೆಯ ಕುರಿತು ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿರುತ್ತಾರೆ.ಅದಕ್ಕೆಲ್ಲ ಕಿವಿಗೊಡುವುದಿಲ್ಲ.
–ಅಮೀತಗೌಡ ಎಂ.ಪಾಟೀಲ,ಆಡಳಿತಾಧಿಕಾರಿ, ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ,ನಾಗರಬೆಟ್ಟ

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ