ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದ ಫಲಿತಾಂಶ : ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಂಸ್ಥೆಯ ಶೃತಿ ರಾಜ್ಯಕ್ಕೆ 2ನೇ ರ‍್ಯಾಂಕ್

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದ ಫಲಿತಾಂಶ : ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಂಸ್ಥೆಯ ಶೃತಿ ರಾಜ್ಯಕ್ಕೆ 2ನೇ ರ‍್ಯಾಂಕ್

ಮುದ್ದೇಬಿಹಾಳ : ಸನ್ 2026 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮರು ಮೌಲ್ಯಮಾಪನದಲ್ಲಿ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ ಮಠ್ಸ್ ಸಮೂಹ ಸಂಸ್ಥೆಯ ಎಸ್.ಡಿ.ಕೆ ಪ್ರೌಢಶಾಲೆಯ ವಿದ್ಯಾರ್ಥಿನಿ ಶೃತಿ ಶಿವನಗೌಡ ಪೀರಾಪೂರ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾಳೆ.

ಈ ಮೊದಲು ಫಲಿತಾಂಶ ಪ್ರಕಟಗೊಂಡಾಗ ಶೃತಿಗೆ 617 ಅಂಕ ಪಡೆದುಕೊಂಡಿದ್ದಳು.ಶಾಲೆಯ ಆಡಳಿತ ಮಂಡಳಿ ಹಾಗೂ ಪಾಲಕರು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದಾಗ ಮತ್ತೆ ಏಳು ಅಂಕಗಳು ಶೃತಿಗೆ ಲಭಿಸಿವೆ.ಆ ಮೂಲಕ ಶೃತಿ ಕನ್ನಡ ಮಾಧ್ಯಮದಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನವನ್ನು ಪಡೆದುಕೊಂಡು ಸಂಸ್ಥೆಯ,ಊರಿನ ಕೀರ್ತಿ ಹೆಚ್ಚಿಸಿದ್ದಾಳೆ.

ಆಂಗ್ಲ ಮಾಧ್ಯಮ ವಿಭಾಗದಲ್ಲಿ ಹರ್ಷಿತಾ ನಾಗೂರ ಈ ಮುಂಚೆ 620 ಅಂಕ ಪಡೆದುಕೊಂಡಿದ್ದು ಮರುಮೌಲ್ಯಪಾಲನದಲ್ಲಿ ಮತ್ತೆ ಎರಡು ಅಂಕ ಬಂದಿದ್ದು 622 ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್ ಪಡೆದುಕೊಂಡಿದ್ದಾಳೆ.ಕನ್ನಡ ಮಾಧ್ಯಮದಲ್ಲಿ ಸವಿತಾ ಲೊಟಗೇರಿ ಮೊದಲು ಫಲಿತಾಂಶ ಪ್ರಕಟಗೊಂಡಾಗ 612 ಅಂಕ ಪಡೆದುಕೊಂಡಿದ್ದು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದಾಗ 10 ಅಂಕಗಳು ಬಂದಿದ್ದು ಒಟ್ಟು 622 ಅಂಕಗಳೊoದಿಗೆ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದುಕೊಂಡು ಸಂಸ್ಥೆಯ ಕೀರ್ತಿ ಹೆಚ್ಚಿಸಿದ್ದಾಳೆ. ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ ವಿದ್ಯಾರ್ಥಿಗಳನ್ನು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಬಿ. ಜಿ. ಮಠ, ಆಡಳಿತಾಧಿಕಾರಿ ಪ್ರಜ್ವಲ್ ಬಿ. ಮಠ, ಕಾರ್ಯದರ್ಶಿ ಸಿದ್ದಯ್ಯ ಮಠ,ಮುಖ್ಯಗುರು ಹೀರೂ ನಾಯಕ,ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿನ ಪ್ರಾಚಾರ್ಯ ಇರ್ಫಾನ್ ಬಾಗವಾನ್,ಮಾರ್ಗದರ್ಶಕ ಎಂ.ಎ.ನದಾಫ ಅಭಿನಂದಿಸಿದ್ದಾರೆ.

ಮೌಲ್ಯಮಾಪಕರ ವಿರುದ್ಧ ಕ್ರಮ-ವಿದ್ಯಾರ್ಥಿಗಳಿಗೆ ಶುಲ್ಕ ವಾಪಸ್:
ಆಕ್ಸಫರ್ಡ್ ಮಠ್ಸ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದಾಗ ಇಬ್ಬರು ವಿದ್ಯಾರ್ಥಿಗಳಿಗೆ ಆರಕ್ಕಿಂತ ಹೆಚ್ಚು ಅಂಕ ಲಭಿಸಿದ್ದು ತಪ್ಪು ಮೌಲ್ಯಮಾಪನ ಮಾಡಿದ ಮೌಲ್ಯಮಾಪಕರಿಗೆ ದಂಡ ವಿಧಿಸಲು ಅವಕಾಶ ಇದೆ.ನಿಯಮದಂತೆ ಆರಕ್ಕಿಂತ ಹೆಚ್ಚು ಅಂಕ ವಿದ್ಯಾರ್ಥಿ ಪಡೆದರೆ ಆ ಪತ್ರಿಕೆಯನ್ನು ಮೌಲ್ಯಮಾಪನ ಮಾಡಿದ ತಪ್ಪಿತಸ್ಥ ಮೌಲ್ಯಮಾಪಕರಿಂದ ದಂಡ ವಸೂಲಿ ಮಾಡಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಶುಲ್ಕ ವಾಪಸ್ ಮಾಡಲಾಗುತ್ತದೆ ಎಂದು ಬಿಇಒ ಬಿ.ಎಸ್.ಸಾವಳಗಿ ತಿಳಿಸಿದ್ದಾರೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ