ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು ಬಂಕ್‌ಗಳ ಮುಂದೆ ಸರದಿಯಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪಟ್ಟಣದ ಹಲವು ಪೆಟ್ರೋಲ್ ಬಂಕ್‌ಗಳ ಮುಂದೆ ಅಡ್ಡಲಾಗಿ ಹಗ್ಗ ಕಟ್ಟಿ ನೋ ಸ್ಟಾಕ್ ಬೋರ್ಡ್ ಹಾಕಿದ್ದರೆ ಡಿಸೇಲ್ ಲಭ್ಯವಿರುವ ಪೆಟ್ರೋಲ್ ಬಂಕ್‌ಗಳ ಮುಂದೆ ಸಾಕಷ್ಟು ಸಂಖ್ಯೆಯಲ್ಲಿ ವಾಹನ ಸವಾರರು,ಖಾಲಿ ಕ್ಯಾನ್‌ಗಳೊಂದಿಗೆ ಸರದಿಯಲ್ಲಿ ನಿಂತಿದ್ದು ಕಂಡು ಬಂದಿತು.

ಪಟ್ಟಣದ ತಾಳಿಕೋಟಿ ರಸ್ತೆಯಲ್ಲಿರುವ ನಾಗಠಾಣ ಪೆಟ್ರೋಲ್ ಬಂಕ್‌ನಲ್ಲಿ ಡಿಸೇಲ್ ಬೆಳಗ್ಗೆ ಲೋಡ್ ಬಂದಿದ್ದರಿAದ ಹೆಚ್ಚಿನ ಜನಸಂದಣಿ ಕಂಡು ಬಂದಿತು.ವಿಜಯಪುರ ರಸ್ತೆಯಲ್ಲಿರುವ ಗುರಡ್ಡಿ ಪೆಟ್ರೋಲಿಯಂ ಬಂಕ್ ಮುಂದೆಯೂ ಸಾಕಷ್ಟು ಜನ ಜಮಾಯಿಸಿದ್ದರು.ಡಿಸೇಲ್ ಲಭ್ಯ ಇರುವವರೆಗೂ ಗ್ರಾಹಕರಿಗೆ ಮಾರಾಟ ಮಾಡಿದ ಬಂಕ್‌ನವರು ಮತ್ತಷ್ಟು ಡಿಸೇಲ್,ಪೆಟ್ರೋಲ್‌ಗಾಗಿ ಬೇಡಿಕೆ ಸಲ್ಲಿಸಿದ್ದಾರೆ.ಕೆಲವು ಬಂಕ್‌ಗಳಲ್ಲಿ ಸರದಿಯಲ್ಲಿ ನಿಲ್ಲದ ಯುವಕರು ಡಿಸೇಲ್ ಪಡೆದುಕೊಳ್ಳಲು ಮುಂದಾದಾಗ ಸರದಿಯಲ್ಲಿದ್ದವರು ತೀವ್ರ ವಾಗ್ವಾದ ನಡೆಸಿ ಹಿಂದಕ್ಕೆ ಕಳಿಸಿದ ಘಟನೆಗಳು ನಡೆದಿವೆ.

ಆಹಾರ,ನಾಗರಿಕರ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕ ವಿನಯಕುಮಾರ ಪಾಟೀಲ ಮಾತನಾಡಿ, ಸದ್ಯಕ್ಕೆ ಜಿಲ್ಲೆಯಲ್ಲಿ ಡಿಸೇಲ್,ಪೆಟ್ರೋಲ್‌ಗೆ ಕೊರತೆ ಇಲ್ಲವೆಂದು ಮಾರಾಟಾಧಿಕಾರಿಗಳು ಹೇಳುತ್ತಿದ್ದಾರೆ.ಆದರೆ ಬಂಕ್‌ನವರು ಬೇಡಿಕೆಯನ್ನು ಮುಂಗಡಪಾವತಿಯೊAದಿಗೆ ಬುಕ್ ಮಾಡಿದರೆ ಮಾತ್ರ ಇಂಧನ ಪೂರೈಕೆ ಮಾಡಲು ಕಂಪನಿಗಳು ಮುಂದಾಗುತ್ತಿವೆ.ಹೀಗಾಗಿ ಕೆಲವು ಬಂಕ್‌ನವರು ಖಾಲಿ ಆಗಿದೆ ಎಂಬ ನಾಮಫಲಕ ಹಾಕುತ್ತಿದ್ದಾರೆ.ಆದಾಗ್ಯೂ ಯಾವ ಬಂಕನವರು ಮುಂಗಡವಾಗಿ ಹಣ ಪಾವತಿಸಿ ಇಂಧನಕ್ಕಾಗಿ ಬೇಡಿಕೆ ಸಲ್ಲಿಸುತ್ತಾರೆಯೋ ಅವರಿಗೆ ಆದಷ್ಟು ತ್ವರಿತವಾಗಿ ಇಂಧನ ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಸಂಬAಧಿಸಿದ ಕಂಪನಿಯ ಮಾರಾಟಾಧಿಕಾರಿಗಳಿಗೆ ತಿಳಿಸಿದ್ದೇವೆ.ಈ ಸಂಬAಧ ತಾಲ್ಲೂಕು ಮಟ್ಟದಲ್ಲಿ ಸಹಾಯವಾಣಿ ಆರಂಭಿಸಿದ್ದೇವೆ ಎಂದು ಹೇಳಿದರು.

ಗುರಡ್ಡಿ ಪೆಟ್ರೋಲಿಯಂ ಮಾಲೀಕ ಜಿ.ಜಿ.ಗುರಡ್ಡಿ ಮಾತನಾಡಿ, ಮುದ್ದೇಬಿಹಾಳ ಪಟ್ಟಣದ ವ್ಯಾಪ್ತಿಯಲ್ಲಿ 11 ಬಂಕ್‌ಗಳಿವೆ.ಅದರಲ್ಲಿ ನನಗೆ ತಿಳಿದ ಮಟ್ಟಿಗೆ ಮೂರು ಪೆಟ್ರೋಲ್ ಬಂಕ್‌ನಲ್ಲಿ ಡಿಸೇಲ್ ಲಭ್ಯವಿತ್ತು.ನಮ್ಮಲ್ಲಿ ಇಂದು ಒಂದೆ ದಿನ 5200 ಲೀಟರ್ ಮಾರಾಟ ಮಾಡಿದ್ದೇವೆ.ನಮಗೆ ಬೇಕಾದಷ್ಟು ಇಂಧನ ಅಧಿಕಾರಿಗಳು ಪೂರೈಸುತ್ತಿದ್ದಾರೆ.ಯುದ್ಧದ ಸನ್ನಿವೇಶದ ಸಮಯದಲ್ಲಿ ಯಾರೂ ಈ ವಿಷಯದಲ್ಲಿ ಏನೂ ಮಾಡಲು ಅಸಾಧ್ಯ ಎನ್ನುವಂತಾಗಿದೆ.ಎಲ್ಲರಿಗೂ ಡಿಸೇಲ್ ದೊರೆಯಬೇಕು ಎಂಬ ಉದ್ದೇಶದಿಂದ ಒಬ್ಬರಿಗೆ 2000 ರೂ.ಗಳಷ್ಟು ಸಿಮೀತವಾಗಿ ಇಂಧನ ನೀಡುತ್ತಿದ್ದೇವೆ ಎಂದು ಹೇಳಿದರು.

ಐಒಸಿಎಲ್ ಮಾರಾಟಾಧಿಕಾರಿ ಶರಣಬಸವ ಕಳಸದ ಮಾತನಾಡಿ, ವಿಜಯಪುರ ಜಿಲ್ಲೆಯ ಐಓಸಿಎಲ್ ಪ್ಲಾಂಟ್‌ನಿAದ ನಿತ್ಯವೂ 150-160 ಟ್ಯಾಂಕ್ ಬೆಳಗಾವಿ,ವಿಜಯಪುರ,ಬಾಗಲಕೋಟ ಜಿಲ್ಲೆಯ ಬಂಕ್‌ಗಳಿಗೆ ಕಳಿಸುವ ಕೆಲಸ ಮಾಡುತ್ತಿದ್ದೇವೆ.ಯುದ್ಧದ ಸನ್ನಿವೇಶದ ಕಾರಣವೊಡ್ಡಿ ಕೆಲವು ಕಂಪನಿಯವರು ಇಂಧನ ಮಾರಾಟವನ್ನು ಕೈ ಬಿಟ್ಟಿದ್ದಾರೆ.ಇದರಿಂದ ನಮ್ಮ ಕಂಪನಿಯ ಮೇಲೆ ಹೆಚ್ಚಿನ ಒತ್ತಡ ಬಿದ್ದಿದೆ.ಅಧಿಕಾರಿಗಳಿಗೆ ನಾವು ಮನವಿ ಮಾಡಿದ್ದು ಇನ್ನುಳಿದ ಬಂಕ್‌ನವರು ಡಿಸೇಲ್,ಪೆಟ್ರೋಲ್ ಮಾರಾಟಕ್ಕೆ ಮುಂದಾಗಬೇಕು.ಬAಕ್‌ಗಳನ್ನು ಬಂದ್ ಮಾಡಿಕೊಂಡು ಕೂಡದಂತೆ ಆಯಾ ಮಾಲೀಕರಿಗೆ ತಿಳಿಸಬೇಕು ಎಂದು ಕೋರಿದ್ದೇವೆ.ಎಲ್ಲರಿಗೂ ಸಮಾನವಾಗಿ ಡಿಸೇಲ್ ,ಪೆಟ್ರೋಲ್ ದೊರೆಯಬೇಕು ಎಂಬುದು ನಮ್ಮ ಉದ್ದೇಶ.ಒಬ್ಬರಿಗೆ ಒಂದೆ ತಾಲ್ಲೂಕಿಗೆ ಕೇಳಿದಷ್ಟು ಇಂಧನ ಈ ಸಮಯದಲ್ಲಿ ಪೂರೈಕೆ ಮಾಡುವುದು ಅಸಾಧ್ಯದ ಸಂಗತಿ ಎಂದು ಹೇಳಿದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ