ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ; ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ; ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿರುವ ರಾಜ್ಯದ ಅತ್ಯಂತ ಸರಳ ಸಜ್ಜನಿಕೆಯ ಹಿರಿಯ ರಾಜಕಾರಣಿ,ಯಾವುದೇ ಕಳಂಕವಿಲ್ಲದ ವ್ಯಕ್ತಿತ್ವ ಹೊಂದಿರುವ ಅಜಾತಶತ್ರು ಎಂದೇ ಹೆಸರಾಗಿರುವ ಶಾಸಕ ಸಿ.ಎಸ್.ನಾಡಗೌಡರಿಗೆ ಕಾಂಗ್ರೆಸ್ ಹೈಕಮಾಂಡ್ ಈ ಬಾರಿ ಸಂಪುಟ ವಿಸ್ತರಣೆಯಲ್ಲಿ ಆದ್ಯತೆ ನೀಡಬೇಕು.ಇಲ್ಲದಿದ್ದರೆ ಕಾರ್ಯಕರ್ತರಿಂದ ಪಕ್ಷತ್ಯಾಗ ನಡೆಯಲಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಸುರೇಶಗೌಡ ಪಾಟೀಲ(ಇಂಗಳಗೇರಿ) ಹೇಳಿದರು.

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಶುಕ್ರವಾರ ಮುದ್ದೇಬಿಹಾಳ ಬಂದ್ ಕರೆ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು, ವ್ಯಾಪಾರಸ್ಥರಿoದ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.ನಲವತ್ತು ವರ್ಷಗಳ ಕಾಲ ಅವರು ಸಕ್ರಿಯವಾಗಿ ಕಾಂಗ್ರೆಸ್ ಪಕ್ಷದಲ್ಲಿದ್ದಾರೆ.ಮುದ್ದೇಬಿಹಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಸ್ತಿತ್ವ ಕಂಡುಕೊoಡಿರುವುದೇ ನಾಡಗೌಡರಿಂದ.ಆದರೆ ಅವರಿಗೆ ನಿರಂತರವಾಗಿ ಪಕ್ಷದಿಂದ ಅನ್ಯಾಯವಾಗುತ್ತಿದೆ ಎಂದು ಹೇಳಿದರು.

ಕೆಪಿಸಿಸಿ ಸದಸ್ಯ ಬಾಪುರಾವ್ ದೇಸಾಯಿ ಹಡಗಲಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಮಾತನಾಡಿ, ಹೈಕಮಾಂಡ್‌ನ ವರಿಷ್ಠರಾದ ಸೋನಿಯಾ ಗಾಂಧಿ,ರಾಹುಲ್ ಗಾಂಧಿ,ಮಲ್ಲಿಕಾರ್ಜುನ ಖರ್ಗೆ,ಉಸ್ತುವಾರಿ ರಣದೀಪ ಸುರ್ಜೇವಾಲಾ, ಸಿಎಂ ಡಿ.ಕೆ.ಶಿವಕುಮಾರ,ಪಕ್ಷದ ಅಧ್ಯಕ್ಷ ಬಿ.ಕೆ.ಹರಿಪ್ರಸಾದ,ಮಾಜಿ ಸಿಎಂ ಸಿದ್ಧರಾಮಯ್ಯನವರು ಪ್ರಜಾಧ್ವನಿ ಸಮಾಜವೇಶದಲ್ಲಿ ಮಾತು ಕೊಟ್ಟಂತೆ ನಾಡಗೌಡರನ್ನು ಮಂತ್ರಿ ಮಾಡಿ ಕಾರ್ಯಕರ್ತರು,ಕ್ಷೇತ್ರದ ಮತದಾರರ ನಂಬಿಕೆಯನ್ನು ಉಳಿಸಿಕೊಳ್ಳಬೇಕು.ಇಲ್ಲದಿದ್ದಲ್ಲಿ ಪಕ್ಷದ ಎಲ್ಲ ಪದಾಧಿಕಾರಿಗಳು ಸಾಮೂಹಿಕವಾಗಿ ರಾಜೀನಾಮೆ ಸಲ್ಲಿಸುತ್ತೇವೆ ಎಂದು ಹೇಳಿದರು.

ತಾಳಿಕೋಟಿಯ ಮುಸ್ಲಿಂ ಸಮಾಜದ ಧಾರ್ಮಿಕ ಮುಖಂಡ ಸಯ್ಯದ ಶಕೀಲ್‌ಅಹ್ಮದ ಖಾಜಿ ಮಾತನಾಡಿ, ಎಸ್.ಎಂ.ಕೃಷ್ಣಾ,ಎo.ವೀರಪ್ಪಮೊಯ್ಲಿ,ಎಸ್.ಬoಗಾರಪ್ಪ,ಸಿದ್ಧರಾಮಯ್ಯನವರ ಅವಧಿಯಲ್ಲಿ ಶಾಸಕರಾಗಿ ಕಾರ್ಯನಿರ್ವಹಿಸಿರುವ ಸರಳ ಸಜ್ಜನಿಕೆಯ ರಾಜಕಾರಣಿ ನಾಡಗೌಡರು.ಕಾಂಗ್ರೆಸ್ ಹೈಕಮಾಂಡ್ ನಾಡಗೌಡರನ್ನು ಮಂತ್ರಿ ಮಾಡಿದ್ದಾದರೆ ಕಾಂಗ್ರೆಸ್ ಸರ್ಕಾರಕ್ಕೆ,ಡಿಕೆಶಿ ಸಂಪುಟಕ್ಕೆ ಗೌರವ ಬರಲಿದೆ.ಸಂಪುಟದಲ್ಲಿ ಸ್ಥಾನ ನೀಡದಿದ್ದರೆ ಬೆಂಗಳೂರು,ದೆಹಲಿಯವರೆಗೂ ಕಾರ್ಯಕರ್ತರು ವರಿಷ್ಠರ ಮೇಲೆ ಒತ್ತಡ ಹಾಕಲು ಹಿಂಜರಿಯುವುದಿಲ್ಲ.ಪಕ್ಷದಿoದ ನಾಡಗೌಡರನ್ನು ಗುರುತಿಸದಿದ್ದರೆ ಸಾಮೂಹಿಕವಾಗಿ ಪಕ್ಷತ್ಯಾಗ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಹಿರಿಯ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ವಾಯ್.ಎಚ್.ವಿಜಯಕರ್,ಬಿ.ಎಸ್.ಪಾಟೀಲ ಯಾಳಗಿ, ಗ್ಯಾರಂಟಿ ಸಮೀತಿ ತಾಲ್ಲೂಕು ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ,ವರ್ತಕರಾದ ಶರಣು ದೇಗಿನಾಳ,ಬಸವರಾಜ ಗೋನಾಳ, ಯುವ ಮುಖಂಡ ತಿಪ್ಪಣ್ಣ ದೊಡಮನಿ,ಮಹಿಳಾ ಘಟಕದ ಅಧ್ಯಕ್ಷೆ ಅಕ್ಷತಾ ಚಲವಾದಿ,ಸರಸ್ವತಿ ಪೀರಾಪೂರ,ಮಹ್ಮದರಫೀಕ ಶಿರೋಳ ಮತ್ತಿತರರು ಮಾತನಾಡಿದರು.
ಬಸವೇಶ್ವರ ವೃತ್ತದಲ್ಲಿ ಟೈರ್‌ಗೆ ಬೆಂಕಿ ಹಚ್ಚಿದ ಕಾರ್ಯಕರ್ತರು,ನಾಡಗೌಡರಿಗೆ ಸಚಿವ ಸ್ಥಾನ ಈ ಬಾರಿ ನೀಡಲೇಬೇಕು ಎಂದು ಹೈಕಮಾಂಡ್ ಮೇಲೆ ಒತ್ತಡ ತಂದರು. ಮುಖoಡರಾದ ಶ್ರೀಶೈಲ ಮರೋಳ, ರಾಜುಗೌಡ ಕೊಂಗಿ,ಬಸವರಾಜ ಇಸ್ಲಾಂಪೂರ,ಎ.ಗಣೇಶ ನಾರಾಯಣಸ್ವಾಮಿ,ಹೆಸ್ಕಾಂ ಗ್ರಾಹಕರ ಸಲಹಾ ಸಮಿತಿ ನಾಮನಿರ್ದೇಶಿತ ಸದಸ್ಯ ಸಿಕಂದರ್ ಜಾನ್ವೇಕರ,ಎಸ್ಸಿ ಮೋರ್ಚಾ ಅಧ್ಯಕ್ಷ ಶ್ರೀಕಾಂತ ಚಲವಾದಿ,ಶರಣಬಸ್ಸು ಚಲವಾದಿ,ಹಣಮಂತ ಕುರಿ,ಹುಸೇನ್ ಮುಲ್ಲಾ, ಸಂಗಣ್ಣ ಮೇಲಿನಮನಿ,ಸದು ಮಠ,ಎಸ್.ಎಸ್.ಮಾಲಗತ್ತಿ,ಕೆ.ಎಸ್.ಪಾಟೀಲ ಜಮ್ಮಲದಿನ್ನಿ,ಅಶೋಕ ಚಟ್ಟೇರ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಮಲ್ಲು ಅಪರಾಧಿ,ಅಮರೇಶ ಗೂಳಿ,ಬಾಪುಗೌಡ ಪೀರಾಪೂರ,ಮಹಿಳಾ ಘಟಕದ ಪದಾಧಿಕಾರಿಗಳಾದ ಕಮಲಾ ಭಜಂತ್ರಿ,ಹುಸೇನಬಿ ವಾಲೀಕಾರ,ನೀಲಮ್ಮ ಚಲವಾದಿ,ಮಾಬುಬಿ ಬಾಗವಾನ, ಸೇರಿದಂತೆ ಪ್ರತಿಭಟನೆಯಲ್ಲಿ ಮುದ್ದೇಬಿಹಾಳ,ತಾಳಿಕೋಟಿ,ನಾಲತವಾಡ ಭಾಗಗಳಿಂದ ಕಾಂಗ್ರೆಸ್ ಕಾರ್ಯಕರ್ತರು,ಮುಖಂಡರು,ನಾಡಗೌಡರ ಅಭಿಮಾನಿಗಳು ಭಾಗವಹಿಸಿದ್ದರು. ಬನಶಂಕರಿ ದೇವಸ್ಥಾನದಿಂದ ಪ್ರಮುಖ ಬೀದಿಯಲ್ಲಿ ಹಾಯ್ದು ಬಸವೇಶ್ವರ ವೃತ್ತದಲ್ಲಿ ಬಹಿರಂಗ ಸಮಾವೇಶ ನಡೆಸಲಾಯಿತು.ಡಿವೈಎಸ್‌ಪಿ ಚಂದ್ರಕಾoತ ನಂದರೆಡ್ಡಿ, ಸಿಪಿಐ ಮೊಹ್ಮದಫಸಿವುದ್ದೀನ, ಮುದ್ದೇಬಿಹಾಳ ಪಿಎಸ್‌ಐ ಸಂಜಯ ತಿಪರೆಡ್ಡಿ,ತಾಳಿಕೋಟಿ ಪಿಎಸ್‌ಐ ಜ್ಯೋತಿ ಖೋತ ಸೇರಿದಂತೆ ನಿಡಗುಂದಿ,ಕೊಲ್ಹಾರ,ಬ.ಬಾಗೇವಾಡಿ ಠಾಣೆಗಳಿಂದ ಪೊಲೀಸರು ಆಗಮಿಸಿ ಬಿಗಿ ಬಂದೋಬಸ್ತ್ ವಹಿಸಿದ್ದರು.

ಸ್ ಬಂದ್ ವೃದ್ಧರು,ಮಹಿಳೆಯರ ಪರದಾಟ: ಸಾರಿಗೆ ಘಟಕದಿಂದ ಹೊರ ಹೋಗುವ ಎಲ್ಲ ಬಹುತೇಕ ಮಾರ್ಗಗಳ ಬಸ್‌ಗಳನ್ನು ಊರಿನಿಂದ ಹೊರಗಡೆ ಎರಡು ಕಿ.ಮೀ ಅಂತರದಿoದ ಕಾರ್ಯಾಚರಣೆ ನಡೆಸಿದ್ದರಿಂದ ಪ್ರಯಾಣಿಕರು ತೀವ್ರ ಪರದಾಟ ಅನುಭವಿಸಬೇಕಾಯಿತು.ಮಹಿಳೆಯರು,ಸಣ್ಣ ಸಣ್ಣ ಮಕ್ಕಳನ್ನು ಕರೆತಂದಿದ್ದ ತಾಯಂದಿರು,ಸರಕು ಸರಂಜಾಮುಗಳನ್ನು ತಂದಿದ್ದ ಮಹಿಳೆಯರು,ಬೆಳಗ್ಗೆಯೇ ಕಾಲೇಜುಗಳಿಗೆ ಬಂದಿದ್ದ ವಿದ್ಯಾರ್ಥಿಗಳು ಕಿ.ಮಿ ಗಟ್ಟಲೇ ನಡೆದುಕೊಂಡು ಸಾಗಿ ಊರ ಹೊರಗಡೆ ಬಸ್ ನಿಲುಗಡೆ ಮಾಡಿದ್ದಲ್ಲಿಗೆ ತೆರಳಿದರು.ಕೆಲವರು ಈ ಬಂದ್ ಮಾಡಿದ್ದಕ್ಕೆ ಹಿಡಿಶಾಪ ಹಾಕಿದರು.

Latest News

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ನೂತನ

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಪಟ್ಟಣದಲ್ಲಿ ಇತ್ತೀಚಿಗೆ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮೃತಪ್ಪಟ ಕಟ್ಟಡ ಕಾರ್ಮಿಕರಾದ ಶಕೀಲಅಹ್ಮದ್

17.17 ಲಕ್ಷ ರೂ.ಅನುದಾನ ದುರುಪಯೋಗ;                   ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

17.17 ಲಕ್ಷ ರೂ.ಅನುದಾನ ದುರುಪಯೋಗ; ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

ಮುದ್ದೇಬಿಹಾಳ : ಪ್ರಸ್ತುತ ಬಾಗಲಕೋಟ ತಾಪಂ ಅಧೀಕ್ಷಕಿಯಾಗಿ ಸೇವೆಯಲ್ಲಿರುವ ಹಿಂದಿನ ಮುದ್ದೇಬಿಹಾಳ ತಾಲ್ಲೂಕು ಯರಝರಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ರುದ್ರಪ್ಪ ಮಾ. ಲಮಾಣಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ. ಗುಡಿಮನಿ ಅವರು ಕರ್ನಾಟಕ ರಾಜ್ಯ ಸರಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಕಬಡ್ಡಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿದ್ದಕ್ಕೆ ಹಾಗೂ ಗುಂಡು ಎಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಅವರನ್ನು ಬುಧವಾರ ಮುದ್ದೇಬಿಹಾಳ ತಾಲೂಕು ಪಂಚಾಯತ ಕಚೇರಿಯಲ್ಲಿ ತಾಪಂ ಇಒ ಸಂಗನಗೌಡ ಬಿರಾದಾರ ಸನ್ಮಾನಿಸಿದರು. ಈ ಸಂದರ್ಭದಲ್ಲಿ ತಾಪಂ ಪ್ರಭಾರ ಎಡಿ ಮಲ್ಲಿಕಾರ್ಜುನ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು ಬಂಕ್‌ಗಳ ಮುಂದೆ ಸರದಿಯಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಟ್ಟಣದ ಹಲವು ಪೆಟ್ರೋಲ್ ಬಂಕ್‌ಗಳ ಮುಂದೆ ಅಡ್ಡಲಾಗಿ ಹಗ್ಗ ಕಟ್ಟಿ ನೋ ಸ್ಟಾಕ್ ಬೋರ್ಡ್ ಹಾಕಿದ್ದರೆ ಡಿಸೇಲ್ ಲಭ್ಯವಿರುವ ಪೆಟ್ರೋಲ್ ಬಂಕ್‌ಗಳ ಮುಂದೆ ಸಾಕಷ್ಟು ಸಂಖ್ಯೆಯಲ್ಲಿ ವಾಹನ ಸವಾರರು,ಖಾಲಿ ಕ್ಯಾನ್‌ಗಳೊಂದಿಗೆ ಸರದಿಯಲ್ಲಿ ನಿಂತಿದ್ದು ಕಂಡು ಬಂದಿತು. ಪಟ್ಟಣದ ತಾಳಿಕೋಟಿ ರಸ್ತೆಯಲ್ಲಿರುವ ನಾಗಠಾಣ ಪೆಟ್ರೋಲ್ ಬಂಕ್‌ನಲ್ಲಿ ಡಿಸೇಲ್