ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಮುದ್ದೇಬಿಹಾಳ : ಸಿದ್ಧರಾಮಯ್ಯನವರ ಸರ್ಕಾರದಲ್ಲಿಯೇ ಈ ಹಿಂದೆ ನಿಮ್ಮ ಶಾಸಕ ಸಿ.ಎಸ್.ನಾಡಗೌಡರ ಹೆಸರು ಮಂತ್ರಿ ಸ್ಥಾನಕ್ಕೆ ಅಂತಿಮಗೊoಡಿತ್ತು.ಆದರೆ ಕೊನೆ ಗಳಿಗೆಯಲ್ಲಿ ಎಸ್.ಆರ್.ಪಾಟೀಲರ ಹೆಸರು ಘೋಷಣೆಯಾಯಿತು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರ ಬೆಂಬಲಿಗರು ನಾಡಗೌಡರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಸಿಎಂ ಕಚೇರಿಗೆ ಆಗಮಿಸಿದ್ದ ಪಕ್ಷದ ಕಾರ್ಯಕರ್ತರು,ಬೆಂಬಲಿಗರನ್ನುದ್ದೇಶಿಸಿ ಸಿಎಂ ಡಿಕೆಶಿ ಮಾತನಾಡುವ ವೇಳೆ ಈ ಹೇಳಿಕೆ ನೀಡಿದ್ದಾರೆ.
ನಿಮ್ಮ ಆಸೆ,ವಿಚಾರ ನಾನು ಅರಿತಿದ್ದೇನೆ.ನಾಡಗೌಡರ ಬಗ್ಗೆ ಯಾರು ಏನು ಹೇಳುವ ಅವಶ್ಯಕತೆ ಇಲ್ಲ. ಬಂಗಾರಪ್ಪನವರ ಸಂಪುಟದಲ್ಲಿ ನಾನು ಅವರು ಕೂಡಿಯೇ ಕೆಲಸ ಮಾಡಿದವರು.ಅನೇಕ ಬಾರಿ ನಾಡಗೌಡರು ಪಕ್ಷಕ್ಕೆ ತ್ಯಾಗ ಮಾಡಿದ್ದಾರೆ.ಅವರು ಹಾಗೂ ನಿವೆಲ್ಲ ನಮ್ಮ ಮೇಲೆ ಇಟ್ಟಿರುವ ಅಭಿಮಾನದ ಬಗ್ಗೆ ಅರಿವಿದೆ.ನನಗೂ ಅವರಿಗೂ 40 ವರ್ಷದ ಗೆಳೆತನದಿಂದ ರಾಜಕಾರಣ ಮಾಡಿಕೊಂಡು ಬಂದಿದ್ದೇವೆ.ಅವರು ಆರು ಬಾರಿ ಗೆದ್ದಿದ್ದಾರೆ.ಅವರ ವಿಚಾರದಲ್ಲಿ ವರಿಷ್ಠರಿಗೆ ಏನು ತಿಳಿಸಬೇಕು,ಮಂಡಿಸಬೇಕು ನಾನು ಆ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಹೇಳಿದ್ದಾರೆ. ನನ್ನ ಮೇಲೆ ನಾಡಗೌಡರು ಹೇಗೆ ವಿಶ್ವಾಸ ಇಟ್ಟಿದ್ದಾರೆ ಎಂಬುದರ ಅರಿವಿದೆ.ಪಕ್ಷದ ನಿಷ್ಠೆಗೆ ಎಲ್ಲರೂ ಸೇರಿ ದುಡಿದಿದ್ದಕ್ಕೆ ಸರಕಾರ ಬಂದಿದೆ.ರಾಜಕಾರಣ ವ್ಯವಸಾಯ ಇದ್ದಂತೆ.ಹಲವಾರು ವರ್ಷಗಳಿಂದ ದುಡಿಯಬೇಕು.ನಿಮ್ಮ ಕ್ಷೇತ್ರಕ್ಕೆ ನಾನು ಬರುತ್ತೇನೆ.ನಾಡಗೌಡರಿಗೆ ಒಳ್ಳೆಯದಾಗಲಿ ಎಂದು ಸಿಎಂ ಹೇಳಿದರು.

ಶಾಸಕ ನಾಡಗೌಡರಿಗೆ ನ್ಯಾಯ ಸಿಗಬೇಕು-ಬಿ.ಕೆ.ಹರಿಪ್ರಸಾದ್
ಮುದ್ದೇಬಿಹಾಳ : ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರಿಗೆ ಡಿ.ಕೆ.ಶಿವಕುಮಾರ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಮುದ್ದೇಬಿಹಾಳ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನ ಕೆಪಿಸಿಸಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಪಕ್ಷದ ವರಿಷ್ಠರ ಮೇಲೆ ಒತ್ತಡ ಹೇರುವ ಕಾರ್ಯ ಮಾಡಿದ್ದಾರೆ.
ಮುದ್ದೇಬಿಹಾಳ ಮತಕ್ಷೇತ್ರದ ಮುದ್ದೇಬಿಹಾಳ,ತಾಳಿಕೋಟಿ ಪುರಸಭೆ ಹಾಗೂ ನಾಲತವಾಡ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಾಗೂ ಜಿಲ್ಲಾ,ತಾಪಂ ಮತಕ್ಷೇತ್ರಗಳ ಮಾಜಿ ಸದಸ್ಯರು,ಪಕ್ಷದ ಮುಖಂಡರು,ಸರ್ಕಾರ ವಿವಿಧ ಇಲಾಖೆಗಳ ನಾಮನಿರ್ದೇಶಿತ ಸದಸ್ಯರು ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ತೆರಳಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರನ್ನು ಭೇಟಿ ಮಾಡಿ ನಾಡಗೌಡರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಕಾರ್ಯಕರ್ತರು,ಪಕ್ಷದ ಮುಖಂಡರ ಮನವಿ ಸ್ವೀಕರಿಸಿದ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ ಮಾತನಾಡಿ, ಪಕ್ಷದಲ್ಲಿ ಹಿರಿಯ ಶಾಸಕರಾಗಿರುವ ನಾಡಗೌಡರಿಗೆ ನ್ಯಾಯ ಸಿಗಬೇಕು ಎಂಬುದು ನನ್ನ ಮನಸ್ಸಲ್ಲಿಯೂ ಇದೆ.ವಿಜಯಪುರದಲ್ಲಿರುವವರು ಎಲ್ಲರೂ ಹಿರಿಯರಿ ಶಾಸಕರಿದ್ದಾರೆ.ಹೈಕಮಾಂಡ್ ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡೋಣ.ನೀವು ಕೊಟ್ಟಿರುವ ಮನವಿಯನ್ನು ಯಥಾವತ್ತಾಗಿ ಪಕ್ಷದ ಹೈಕಮಾಂಡ್‌ನ ವರಿಷ್ಠರಾದ ರಾಹುಲ್ ಗಾಂಧಿ,ಪಕ್ಷದ ರಾಷ್ಟಿಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಗಮನಕ್ಕೆ ತರುವೆ ಎಂದು ಕಾರ್ಯಕರ್ತರಿಗೆ ಭರವಸೆ ನೀಡಿದ್ದಾರೆ. ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ,ಬಾಲಾಜಿ ಶುರ‍್ಸ್ನ ನಿರ್ದೇಶಕ ರಾಹುಲ್‌ಗೌಡ ಪಾಟೀಲ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಪ್ರಮುಖರಾದ ಎ.ಗಣೇಶ ನಾರಾಯಣಸ್ವಾಮಿ,ರಮೇಶ ಓಸ್ವಾಲ್, ದಾನಪ್ಪ ನಾಗಠಾಣ,ಎಸ್.ಎಸ್.ಹುಲ್ಲೂರ,ಶಿವಶಂಕರಗೌಡ ಹಿರೇಗೌಡರ,ಪ್ರಭುರಾಜ ಕಲ್ಬುರ್ಗಿ,ಶ್ರೀಕಾಂತ ಚಲವಾದಿ,ಸಿಕಂದರ್ ಜಾನ್ವೇಕರ್,ಬಾಪುರಾಯ ದೇಸಾಯಿ,ರಾಜು ಕರಡ್ಡಿ,ರಾಯನಗೌಡ ತಾತರೆಡ್ಡಿ,ಸಂತೋಷ ಚವ್ಹಾಣ(ಹುಲ್ಲೂರ),ಕಾಶೀಂಪಟೇಲ್ ಮೂಕಿಹಾಳ, ವಾಯ್.ಎಚ್.ವಿಜಯಕರ್, ಎಸ್.ಎಸ್.ಮಾಲಗತ್ತಿ, ಎಂ.ಎಚ್.ಹಾಲಣ್ಣವರ,ಯಲ್ಲಪ್ಪ ಚಲವಾದಿ,ಮಹಿಳಾ ಘಟಕದ ಅಧ್ಯಕ್ಷೆ ಅಕ್ಷತಾ ಚಲವಾದಿ, ಮಾಜಿ ಅಧ್ಯಕ್ಷ ಶೋಭಾ ಶೆಳ್ಳಗಿ,ಸರಸ್ವತಿ ಪೀರಾಪೂರ,ನೀಲಮ್ಮ ಬೋರಾವತ್,ಕಮಲಾ ಭಜಂತ್ರಿ,ನೀಲಮ್ಮ ಚಲವಾದಿ ಸೇರಿದಂತೆ 500ಕ್ಕೂ ಹೆಚ್ಚು ಕಾರ್ಯಕರ್ತರು ನಿಯೋಗದಲ್ಲಿ ತೆರಳಿ ನಾಡಗೌಡರಿಗೆ ಮಂತ್ರಿ ಸ್ಥಾನ ನೀಡುವಂತೆ ವರಿಷ್ಠರ ಮೇಲೆ ಒತ್ತಡ ಹೇರಿದ್ದಾರೆ.

ಮಾಜಿ ಸಿಎಂಗೂ ಭೇಟಿ: ಮಾಜಿ ಸಿಎಂ,ಸಿಡಬ್ಲೂö್ಯಸಿ ಸಮೀತಿ ಸದಸ್ಯರಾದ ಸಿದ್ಧರಾಮಯ್ಯ ಅವರನ್ನು ಮುದ್ದೇಬಿಹಾಳ ಮತಕ್ಷೇತ್ರದ ಪ್ರಮುಖ ಮುಖಂಡರು ಭೇಟಿಯಾಗಿ ಒತ್ತಡ ಹೇರಿದ್ದಾರೆ.ಸಿಎಂ ಡಿ.ಕೆ.ಶಿವಕುಮಾರ ಹಾಗೂ ಮಾಜಿ ಸಿಎಂ ಸಿದ್ಧರಾಮಯ್ಯ ಅವರಿಂದ ನಾಡಗೌಡರಿಗೆ ಮಂತ್ರಿ ಸ್ಥಾನ ಕಲ್ಪಿಸುವ ಕುರಿತು ಸಕಾರಾತ್ಮಕ ಭರವಸೆ ದೊರೆತಿದೆ ಎಂದು ಮುಖಂಡರಾದ ಬಿ.ಕೆ.ಬಿರಾದಾರ,ಎ.ಗಣೇಶ ನಾರಾಯಣಸ್ವಾಮಿ ತಿಳಿಸಿದ್ದಾರೆ.

Latest News

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ  ಉತ್ತಮ ಪ್ರತಿಕ್ರಿಯೆ;                                                                                ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ; ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿರುವ ರಾಜ್ಯದ ಅತ್ಯಂತ ಸರಳ ಸಜ್ಜನಿಕೆಯ ಹಿರಿಯ ರಾಜಕಾರಣಿ,ಯಾವುದೇ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ:                  ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ: ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಕ್ರಿಯ ಕಾರ್ಯಕರ್ತ

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಜೂ.19

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ ; ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಅವರ ಸರ್ಕಾರದಲ್ಲಿ ಸಚಿವ ಸ್ಥಾನ ದೊರಕಲಿ.ಅವರ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಆರಂಭೋತ್ಸವ ಸರಳವಾಗಿ ನಡೆಸಲಾಯಿತು. ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಅವರ ನೇತೃತ್ವದಲ್ಲಿ ಶಿಕ್ಷಕರು ಸರಸ್ವತಿ ದೇವಿ ಚಿತ್ರಕ್ಕೆ ಪೂಜೆ ಸಲ್ಲಿಸಿದರು.ಇದೇ ವೇಳೆ ಶಾಲೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿದ ತಹಶೀಲ್ದಾರ್ ಕೀರ್ತಿ ಚಾಲಕ್ ಅವರು, ಸರಸ್ವತಿ ದೇವಿಗೆ ನಮಿಸಿ ಶಾಲಾ ಮಕ್ಕಳಿಗೆ ಹೂವು ನೀಡಿ ಶಾಲಾ ಆರಂಭೋತ್ಸವಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಇದೇ ವೇಳೆ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ ಟಿಸಿ ಒದಗಿಸುವಲ್ಲಿ ವಿಳಂಬ ಧೋರಣೆ ಖಂಡಿಸಿದ ರೈತರು ಸೋಮವಾರ ಇಲ್ಲಿನ ಹೆಸ್ಕಾಂ ಕಚೇರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ತಾಲ್ಲೂಕಿನ ಅನೇಕ ಗ್ರಾಮಗಳಿಂದ ಬಂದಿದ್ದ ರೈತರು ತಮ್ಮೂರುಗಳಲ್ಲಿ ಎದುರಿಸುತ್ತಿರುವ ವಿದ್ಯುತ್ ಸಂಬoಧಿ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ