ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ.
ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ ಭೂಮಿಪೂಜೆ ಮಾಡಿ ಕೆಲಸ 8 ತಿಂಗಳು ಕಳೆದರೂ ಆರಂಭವಾಗಿಲ್ಲ.ಪ್ರತಿ ದಿನ ಇದೇ ರಸ್ತೆಯಲ್ಲಿ ಮರ್ನಾಲ್ಕು ಊರುಗಳ ಜನ ಸಂಚರಿಸುತ್ತಾರೆ.ರಸ್ತೆ ಮೇಲೆ ದ್ವಿಚಕ್ರವಾಹನ ಚಲಿಸುವಾಗ ಬಿದ್ದು ಕೈಕಾಲು ಮುರಿದುಕೊಂಡು ದವಾಖಾನೆ ಸೇರಿದ್ದಾರೆ.ಗುತ್ತಿಗೆದಾರರು ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ವಿರುದ್ಧ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಲಾಗಿದೆ.
ಪೊಲೀಸ್ ಇಲಾಖೆಗೆ ಕೊಟ್ಟಿರುವ ಪತ್ರಕ್ಕೆ ಗ್ರಾಮಸ್ಥರಾದ ಗುರುನಾಥ ದೇಶಮುಖ, ಅಶೋಕ ಹಗರಗುಂಡ,ಆನAದ ದೇವೂರ,ವೀರೇಶ ನೆರಬೆಂಚಿ,ಸAಗಮೇಶ ಢವಳಗಿ,ಇಂತಿಹಾಜ ಆಲೂರ,ಸಚಿನ ಕೇಸಾಪೂರ ಮೊದಲಾದವರು ಸಹಿ ಮಾಡಿದ್ದಾರೆ.







