ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ ಹುಡೇದ ಅವರು ಮಂಗಳವಾರ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಗೆ ನಾನೇ ಕಾರಣ ಎಂದು ಆರೋಪಿಸಿದ್ದು, ಅದರಲ್ಲಿ ನನ್ನದು ಯಾವುದೇ ಪಾತ್ರವಿಲ್ಲ.ನನ್ನ ಹೋರಾಟವನ್ನು ಹತ್ತಿಕ್ಕಲು ಈ ಸಂಚು ಕೆಲವರು ರೂಪಿಸಿದ್ದಾರೆ ಎಂದು ಪ್ರತ್ಯಾರೋಪ ಮಾಡಿರುವ ಯುವಕ ವೀರೇಶ ಆಲಕೊಪ್ಪರ ಸರ್ಕಾರಿ ಆಸ್ಪತ್ರೆಯಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಡೆದಿದೆ.
ಆಸ್ಪತ್ರೆಯ ಎದುರಿಗೆ ಏಕಾಂಗಿಯಾಗಿ ಕೂತು ಪ್ರತಿಭಟನೆ ನಡೆಸುತ್ತಿದ್ದ ಯುವಕ ವೀರೇಶ ಮಾಧ್ಯಮದವರೊಂದಿಗೆ ಮಾತನಾಡಿದ್ದು, ನಾನು ಎಲ್ಲೂ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷಿö್ಮÃ ಚೌಧರಿ ಅವರ ಹೆಸರು ದುರುಪಯೋಗ ಮಾಡಿಕೊಂಡಿಲ್ಲ ಎಂದು ತಿಳಿಸಿದ್ದಾನೆ.
ಮಾತ್ರೆಗಳನ್ನು ನುಂಗಿ ಆಸ್ಪತ್ರೆಯ ಆವರಣದಲ್ಲಿ ಏಕಾಂಗಿ ಪ್ರತಿಭಟನೆ ನಡೆಸಿದ್ದು ಆಸ್ಪತ್ರೆಯ ಅಧಿಕಾರಿಗಳ ಮತ್ತು ಸಿಬ್ಬಂದಿ ವಿರುದ್ದ ಆರೋಪ ಮಾಡಿದ್ದಾನೆ.ಆಸ್ಪತ್ರೆಯ ಅವ್ಯವಸ್ಥೆಯ ಸುಧಾರಣೆಗೆಪತ್ರ ಮುಖೇನ ಹೋರಾಟ ನಡೆಸಿದ್ದರ ಫಲವಾಗಿ ಈ ರೀತಿ ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ದೂರಿದ್ದಾನೆ.
ನನ್ನ ಸಾವಿಗೆ ಇಲಾಖೆಯವರು ಸೇರಿದಂತೆ 61 ಜನರೇ ಹೊಣೆ ಎಂದು ದೂರಿದ್ದಾನೆ.ಅಸ್ವಸ್ಥಗೊಂಡಿದ್ದ ವೀರೇಶನನ್ನು ತಕ್ಷಣ ಸ್ಥಳೀಯ ಪೋಲೀಸರು ತಾಲೂಕಾಸ್ಪತ್ರೆಗೆ ರವಾನಿಸಿದರು.ಆದರೆ ದಲಿತ ಸಮಾಜದವರು ಹೋರಾಟ ಮಾಡಿದರೆ ಅದನ್ನು ಹತ್ತಿಕ್ಕುವುದು ಹಾಗೂ ದಲಿತ ಸಮಾಜದವರ ಹೋರಾಟಗಳಿಗೆ ಯಾವುದೇ ನ್ಯಾಯ ಈ ತಾಲ್ಲೂಕಿನಲ್ಲಿ ಸಿಗುವುದಿಲ್ಲ ಎಂದು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದ ಮೂಲಕ ವೈರಲ್ ಆಗಿದೆ.







