32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.

ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ ಕ್ಯಾಮೆರಾಗಳು ಜೂ.27 ರಂದೇ ಬಂದ್ ಆಗಿದ್ದು ಅವುಗಳನ್ನು ದುರಸ್ತಿ ಮಾಡಿಸಿರಲಿಲ್ಲ.ಇದನ್ನು ಸಾಧಿಸಿ ಕಳ್ಳರು ದೇವರ ಮೂರ್ತಿ ಕಳ್ಳತನ ಮಾಡಿಕೊಂಡು ಹೋಗಿದ್ದಾರೆ.ನಮಗೆ ಯಾರ ಮೇಲೂ ಸಂಶಯವಿಲ್ಲ.ಆದರೆ ಹೊರಗಿನಿಂದ ಬಂದವರೇ ದೇವಸ್ಥಾನದ ಮಾಹಿತಿ ತಿಳಿದುಕೊಂಡು ವಿಗ್ರಹ ಕಳ್ಳತನ ಮಾಡಿಕೊಂಡು ಹೋಗಿರುವ ಸಂಶಯ ಇದೆ ನಮಗಿದೆ ಎಂದು ದೇವಸ್ಥಾನ ಕಮೀಟಿ ಅಧ್ಯಕ್ಷ ಕೆ.ವಾಯ್.ಬಿರಾದಾರ ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ದೇವಸ್ಥಾನ ಕಮೀಟಿ ಸದಸ್ಯ ಶ್ರೀಶೈಲ ಮೇಟಿ, ಹಾಲಿ,ಮಾಜಿ ಶಾಸಕರು ಘಟನೆಯ ಕುರಿತು ಕಟ್ಟುನಿಟ್ಟಾಗಿ ತನಿಖೆ ನಡೆಸಿ ತ್ವರಿತವಾಗಿ ಕಳ್ಳರನ್ನು ಬಂಧಿಸಲು ಸೂಚನೆ ನೀಡಿದ್ದು ಪೊಲೀಸ ಇಲಾಖೆಯ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.ಆದಷ್ಟು ಶೀಘ್ರ ಕಳ್ಳರು ಪತ್ತೆಯಾಗುವ ನಿರೀಕ್ಷೆ ಇದೆ ಎಂದು ಹೇಳಿದರು.ಸದಸ್ಯರಾದ ಎಸ್.ಬಿ.ನಾಡಗೌಡ್ರ,ಎಸ್.ಎಸ್.ಹಂಡರಗಲ್ ಇದ್ದರು.ಘಟನೆಯ ಕುರಿತಂತೆ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಜಿ ಪ್ರಧಾನಿ ಸಮ್ಮುಖದಲ್ಲಿ ಮೂರ್ತಿ ಪ್ರತಿಷ್ಠಾಪನೆ: ಪವಾಡ ಬಸವೇಶ್ವರ ದೇವಸ್ಥಾನಕ್ಕೆ ಕಳೆದ 2016-17ರಲ್ಲಿ ಈಗಿನ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು ತಾವು ದೇವಸ್ಥಾನಕ್ಕೆ ಹೊತ್ತಿದ್ದ ಹರಕೆಯಂತೆ 55 ಕೆಜಿ ಬೆಳ್ಳಿಯನ್ನು ದೇಣಿಗೆಯಾಗಿ ಕೊಟ್ಟಿದ್ದರು.ಅದರಲ್ಲಿ ದೇವಸ್ಥಾನದ ಆಡಳಿತ ಮಂಡಳಿಯವರು ಬಸವೇಶ್ವರ ವಿಗ್ರಹವನ್ನು 32ಕೆಜಿ ತೂಕದಲ್ಲಿ ತಯಾರಿಸಿದ್ದರು.ಇನ್ನೊಂದು ಶರಣ ಬಸವೇಶ್ವರರ ಮೂರ್ತಿಯನ್ನು 20 ಕೆಜಿ ತೂಕದಲ್ಲಿ ಮಾಡಿಸಲಾಗಿತ್ತು.ದೇವರಹಿಪ್ಪರಗಿ ಶಾಸಕರಾಗಿದ್ದ ಎ.ಎಸ್.ಪಾಟೀಲ ನಡಹಳ್ಳಿ ಅವರು ಮಾಜಿ ಪ್ರಧಾನ ಎಚ್.ಡಿ.ದೇವೇಗೌಡ,ಅಂದಿನ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಕರೆಯಿಸಿ ಈ ಮೂರ್ತಿಗಳನ್ನು ಭವ್ಯ ಮೆರವಣಿಗೆ ನಡೆಸಿ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿ ಪೂಜಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು.ಇಂದು ದೇವಸ್ಥಾನದ ಕೀಲಿ ಮುರಿದು ಪ್ರಧಾನ ವಿಗ್ರಹವನ್ನೇ ಕಳ್ಳರು ಹೊತ್ತೊಯ್ದಿದ್ದಾರೆ. ಪೊಲೀಸರು,ಶ್ವಾನದಳ,ಬೆರಳಚ್ಚು ತಂಡ ಭೇಟಿ: ದೇವಸ್ಥಾನದ ಬೆಳ್ಳಿ ಮೂರ್ತಿ ಕಳ್ಳತನದ ಸುದ್ದಿ ಕಾಳ್ಗಿಚ್ಚಿನಿಂತೆ ಹರಡುತ್ತಿದ್ದಂತೆ ಡಿವೈಎಸ್ಪಿ ಚಂದ್ರಕಾoತ ನಂದರೆಡ್ಡಿ,ಸಿಪಿಐ ಮೊಹ್ಮದ ಫಸಿವುದ್ದೀನ್,ಪಿಎಸ್‌ಐ ಸಂಜಯ ತಿಪರೆಡ್ಡಿ ದೇವಸ್ಥಾನಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದರು.ಅಲ್ಲದೇ ವಿಜಯಪುರದಿಂದ ಶ್ವಾನದಳ,ಬೆರಳಚ್ಚು ತಜ್ಞರ ತಂಡದವರು ಆಗಮಿಸಿ ಮಹತ್ವದ ಮಾಹಿತಿ ಸಂಗ್ರಹಿಸಿದ್ದಾರೆ.ಪ್ರಕರಣದ ತನಿಖೆ ನಡೆದಿದೆ.ಸದ್ಯಕ್ಕೆ ಏನೂ ಹೇಳಲಾಗುವುದಿಲ್ಲ.ಆದಷ್ಟು ಬೇಗ ಕಳ್ಳರನ್ನು ಬಂಧಿಸುತ್ತೇವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಶಾಸಕ ಸಿ.ಎಸ್.ನಾಡಗೌಡ ಭೇಟಿ: ಘಟನೆ ವಿಷಯ ತಿಳಿದ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ದೇವಸ್ಥಾನಕ್ಕೆ ಭೇಟಿ ನೀಡಿ ಆಡಳಿತ ಮಂಡಳಿಯವರಿoದ ಘಟನೆ ಮಾಹಿತಿ ತಿಳಿದುಕೊಂಡರು.ಅಲ್ಲದೇ ಡಿವೈಎಸ್ಪಿ ಚಂದ್ರಕಾAತ ನಂದರೆಡ್ಡಿ ಅವರಿಗೆ ಆದಷ್ಟು ಬೇಗ ಕಳ್ಳರನ್ನು ಬಂಧಿಸುವoತೆ ಸೂಚನೆ ನೀಡಿದರು.

ಮೂರ್ತಿ ಕಳವು; ಭಕ್ತೆ ಕಣ್ಣೀರು: ಪವಾಡ ಬಸವೇಶ್ವರ ಮೂರ್ತಿ ಕಳುವು ಆಗಿದೆ ಎಂಬ ಸುದ್ದಿ ತಿಳಿದ ತಕ್ಷಣ ಸಾವಿರಾರು ಭಕ್ತರು ದೇವಸ್ಥಾನದತ್ತ ಆಗಮಿಸಿ ಘಟನೆಯ ಕುರಿತು ಆತಂಕ,ದಿಗ್ಭçಮೆ ವ್ಯಕ್ತಪಡಿಸಿದರು.ಈ ವೇಳೆ ಭಕ್ತೆಯೊಬ್ಬಳು, ದೇವಸ್ಥಾನದ ಆವರಣದಲ್ಲಿಯೇ ಪವಾಡ ಮುತ್ಯಾ ಎಲ್ಲಿಗೆ ಹೋದ್ಯೋ ಎಪ್ಪಾ , ನಮ್ಮಪ್ಪನ್ನ ಕರಕೊಂಡು ಹುಡಕಾಡಿಕೊಂಡು ರ‍್ರೊö್ಯÃ ಎಂದು ಕಣ್ಣೀರು ಹಾಕಿದ ದೃಶ್ಯ ಭಕ್ತರ ಮನಕಲುಕಿತು.ದೇವಸ್ಥಾನದಲ್ಲಿ ಮೂರ್ತಿ ಇಲ್ಲದ ಕಾರಣ ಪಾದಗಟ್ಟೆಗೆ ಭಕ್ತರು ನಮಸ್ಕರಿಸಿ ಹೋಗುತ್ತಿದ್ದ ದೃಶ್ಯ ಕಂಡು ಬಂದಿತು.

ಮಾಜಿ ಶಾಸಕ ನಡಹಳ್ಳಿ ದಿಗ್ಭçಮೆ: ಪವಾಡ ಬಸವೇಶ್ವರ ದೇವರ ವಿಗ್ರಹ ಕಳ್ಳತನವಾಗಿರುವುದು ನನಗೆ ದಿಗ್ಘçಮೆ ಮೂಡಿಸಿದ್ದು ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದೇನೆ.ಆದಷ್ಟು ಬೇಗ ಕಳ್ಳರನ್ನು ಬಂಧಿಸಬೇಕು ಎಂದು ಪೊಲೀಸರಿಗೆ ಒತ್ತಾಯಿಸಿದ್ದೇನೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ತಿಳಿಸಿದ್ದಾರೆ.

Latest News

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ

ಐದು ವರ್ಷದ ಮಗು ಸೇರಿ ಮೂವರು ಮಕ್ಕಳಿಗೆ ಕಚ್ಚಿದ ಬೀದಿ ನಾಯಿ..!

ಐದು ವರ್ಷದ ಮಗು ಸೇರಿ ಮೂವರು ಮಕ್ಕಳಿಗೆ ಕಚ್ಚಿದ ಬೀದಿ ನಾಯಿ..!

ಮುದ್ದೇಬಿಹಾಳ : ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಮೀತಿ ಮೀರಿದ್ದು ಭಾನುವಾರ ಪಿಲೇಕೆಮ್ಮ ನಗರದ ವಾರ್ಡ ಸಂಖ್ಯೆ 11ರಲ್ಲಿ ಮೂವರು ಮಕ್ಕಳ ಮೇಲೆ ದಾಳಿ ಮಾಡಿ ಕಚ್ಚಿ ಗಾಯಗೊಳಿಸಿದ ಘಟನೆ ನಡೆದಿದೆ.ಪಿಲೇಕೆಮ್ಮ ನಗರದ ಐದು ವರ್ಷದ ಉಲ್ಲಾಸ್ ಹಂಡರಗಲ್‌ಗೆ ದೇಹದ ಎದೆಯ ಮೇಲ್ಭಾಗದಲ್ಲಿ ಕಚ್ಚಿದ್ದು ವಾರ್ಡನ ಇನ್ನಿಬ್ಬರು ಮಕ್ಕಳಿಗೂ ಕಚ್ಚಿ ಗಾಯಗೊಳಿಸಿದೆ ಎಂದು ವಾರ್ಡನ ಮುಖಂಡ ಮೊಹ್ಮದಅಜರುದ್ದೀನ ಮೂಲಿಮನಿ ತಿಳಿಸಿದ್ದಾರೆ. ಬೀದಿ ನಾಯಿ ಕಚ್ಚಿದ ಕೂಡಲೇ ಮಕ್ಕಳನ್ನು ಸರಕಾರಿ ಆಸ್ಪತ್ರೆಗೆ