ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ ಸಂಬoಧಿಸಿದoತೆ ಮಹತ್ವದ ಸುಳಿವು ದೊರಕಿದ್ದು ಶೀಘ್ರದಲ್ಲಿ ಪ್ರಕರಣವನ್ನು ಬೇಧಿಸಲಾಗುವುದು ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ಸಂದೀಪ ಪಾಟೀಲ್ ಹೇಳಿದರು.

ತಾಲ್ಲೂಕಿನ ಬಸರಕೋಡ ಗ್ರಾಮದ ಐತಿಹಾಸಿಕ ಶ್ರೀ ಪವಾಡ ಬಸವೇಶ್ವರ ದೇವಾಲಯಕ್ಕೆ ಮಂಗಳವಾರ ಭೇಟಿ ನೀಡಿದ್ದ ಅವರು ದೇವಸ್ಥಾನದ ಕರ್ತೃಗದ್ದುಗೆ ಮೇಲಿನ 32 ಕೆಜಿ ಬೆಳ್ಳಿಯ ಕವಚ ಕಳ್ಳತನ ಪ್ರಕರಣದ ಕುರಿತು ವಿಜಯಪುರ ಎಸ್ಪಿ ಹಾಗೂ ದೇವಸ್ಥಾನದ ಆಡಳಿತ ಮಂಡಳಿಯವರಿoದ ಮಾಹಿತಿ ಪಡೆದುಕೊಂಡ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಳ್ಳತನ ಪ್ರಕರಣಕ್ಕೆ ಸಂಬoಧಿಸಿದoತೆ ಹಲವು ತಂಡಗಳನ್ನು ರಚನೆ ಮಾಡಿದ್ದು ಪ್ರಕರಣದಲ್ಲಿ ಕಳ್ಳರ ಬಗ್ಗೆ ಮಹತ್ವದ ಮಾಹಿತಿ ದೊರಕಿದೆ.ಶೀಘ್ರದಲ್ಲಿ ಕಳ್ಳರನ್ನು ಪತ್ತೆ ಮಾಡಲಾಗುವುದು ಹಾಗೂ 32 ಕೆಜಿಯ ಬೆಳ್ಳಿಯ ಪ್ರತಿಮೆ ಸಹ ಪತ್ತೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಲಕ್ಷಾಂತರ ಭಕ್ತರನ್ನು ಹೊಂದಿರುವ ಪವಾಡ ಬಸವೇಶ್ವರ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ.ಈ ಪ್ರಕರಣವನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಆದಷ್ಟು ತ್ವರಿತವಾಗಿ ಕಳ್ಳರ ಬಂಧನವಾಗಲಿದೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ದೇವಸ್ಥಾನದ ಆಡಳಿತ ಮಂಡಳಿ ನಿರ್ದೇಶಕ ಶ್ರೀಶೈಲ್ ಮೇಟಿ ಮಾತನಾಡಿ, ನಮ್ಮ ಊರಿನ ಆರಾಧ್ಯ ದೈವ ಪವಾಡ ಬಸವೇಶ್ವರರ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ ಸಂಬoಧಿಸಿದoತೆ ಉತ್ತರ ವಲಯ ಐಜಿಪಿ ಸಂದೀಪ ಪಾಟೀಲ ಅವರು ಹೇಳಿರುವ ಮಾತುಗಳು ನಮಗೆ ಸಮಾಧಾನ ತಂದಿವೆ.ಇಲಾಖೆ ಮೇಳೆ ಭಕ್ತರು,ಆಡಳಿತ ಮಂಡಳಿ ವಿಶ್ವಾಸ ಇರಿಸಿದ್ದೇವೆ.ಆದಷ್ಟು ಶೀಘ್ರ ಕಳ್ಳರು ಪತ್ತೆಯಾಗುವ ವಿಶ್ವಾಸ ನಮಗೂ ಇದೆ ಎಂದು ಹೇಳಿದರು.

ದೇವಸ್ಥಾನ ಕಮೀಟಿ ಅಧ್ಯಕ್ಷ ಕೆ.ವಾಯ್.ಬಿರಾದಾರ ಮಾತನಾಡಿ, ದೇವಾಲಯದ ಸುರಕ್ಷತಾ ದೃಷ್ಟಿಯಿಂದ ದೇವಾಲಯದಲ್ಲಿ ಇರುವ 20 ಸಿಸಿ ಕ್ಯಾಮೆರಾಗಳ ಜೊತೆಗೆ ಹೆಚ್ಚುವರಿಯಾಗಿ ಮತ್ತೆ 15 ಕ್ಯಾಮರಾಗಳನ್ನು ಅಳವಡಿಸಲಾಗುತ್ತಿದೆ. ದೇವಾಲಯಕ್ಕೆ ಎರಡು ಹೊಸ ಕಬ್ಬಿನ ಗೇಟಗಳನ್ನು ಗ್ರೀಲ್ ಅಳವಡಿಸಲಾಗುತ್ತಿದೆ. ಭದ್ರತಾ ಸಿಬ್ಬಂದಿ ನೇಮಕ ಹಾಗೂ ಸ್ಟ್ರಾಂಗ್ ರೂಂ ಮಾಡಲಾಗುವುದು ಎಂದು ಹೇಳಿದರು. ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ,ಡಿವೈಎಸ್ಪಿ ಚಂದ್ರಕಾoತ ನಂದರೆಡ್ಡಿ ,ಸಿಪಿಐ ಮೊಹ್ಮದಫಸಿವುದ್ದೀನ್,ಅಪರಾಧ ವಿಭಾಗದ ಪಿಎಸೈ ಆರ್.ಎಸ್.ಭಂಗಿ,ದೇವಸ್ಥಾನ ಆಡಳಿತ ಮಂಡಳಿ ಸದಸ್ಯರಾದ ಎಸ್.ಎಸ್. ಹಂಡರಗಲ್ಲ,ಬಿ.ಎಸ್.ಬೈಲಗೊoಡ,ಮುಖoಡ ಅಪ್ಪುಧಣಿ ನಾಡಗೌಡ, ವೀರೇಶ ಮಂಕಣಿ ಮೊದಲಾದವರು ಇದ್ದರು.

ಪವಾಡ ಬಸವನ ಮೂರ್ತಿಯೇ ಬಂತೆoದು ಓಡೋಡಿ ಬಂದ ಭಕ್ತರು:
ದೇವಸ್ಥಾನಕ್ಕೆ ಐಜಿಪಿ ಅವರು ಭೇಟಿ ಕೊಡುವ ವಿಷಯ ತಿಳಿಯದೇ ಹಲವರು ಐದಾರು ಪೊಲೀಸರ ವಾಹನಗಳು ಗಡಿಬಿಡಿಯಲ್ಲಿ ದೇವಸ್ಥಾನದತ್ತ ಬಂದಿದ್ದನ್ನು ಕಂಡ ಭಕ್ತರು, ತಮ್ಮೂರಿಗೆ ಕಳ್ಳತನವಾದ ಪವಾಡ ಬಸವೇಶ್ವರನ ಬೆಳ್ಳಿ ಕವಚವೇ ಸಿಕ್ಕಿದೆ ಎಂಬ ಸುದ್ದಿ ಹರಡಿ ದೇವಸ್ಥಾನದತ್ತ ಭಕ್ತರು ಓಡೋಡಿ ಬಂದರು.ಅಲ್ಲದೇ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಕಂಡು ದೇವರ ಮೂರ್ತಿ ದೊರೆಯಲಿದೆ ಎಂಬ ಆಶಾಭಾವವನ್ನು ಭಕ್ತರು ವ್ಯಕ್ತಪಡಿಸಿದರು.

Latest News

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಮುದ್ದೇಬಿಹಾಳ : ಸಿದ್ಧರಾಮಯ್ಯನವರ ಸರ್ಕಾರದಲ್ಲಿಯೇ ಈ ಹಿಂದೆ ನಿಮ್ಮ ಶಾಸಕ ಸಿ.ಎಸ್.ನಾಡಗೌಡರ ಹೆಸರು ಮಂತ್ರಿ ಸ್ಥಾನಕ್ಕೆ ಅಂತಿಮಗೊoಡಿತ್ತು.ಆದರೆ ಕೊನೆ ಗಳಿಗೆಯಲ್ಲಿ ಎಸ್.ಆರ್.ಪಾಟೀಲರ ಹೆಸರು ಘೋಷಣೆಯಾಯಿತು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರ ಬೆಂಬಲಿಗರು ನಾಡಗೌಡರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಸಿಎಂ ಕಚೇರಿಗೆ ಆಗಮಿಸಿದ್ದ ಪಕ್ಷದ ಕಾರ್ಯಕರ್ತರು,ಬೆಂಬಲಿಗರನ್ನುದ್ದೇಶಿಸಿ ಸಿಎಂ ಡಿಕೆಶಿ ಮಾತನಾಡುವ ವೇಳೆ ಈ ಹೇಳಿಕೆ ನೀಡಿದ್ದಾರೆ.ನಿಮ್ಮ ಆಸೆ,ವಿಚಾರ ನಾನು ಅರಿತಿದ್ದೇನೆ.ನಾಡಗೌಡರ ಬಗ್ಗೆ ಯಾರು

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ