650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ.

ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು, 450ಕ್ಕೂ ಅಧಿಕ 130 ವಿದ್ಯಾರ್ಥಿಗಳು ಅಂಕ ಪಡೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

720ರಲ್ಲಿ 650 ಅಂಕ ಪಡೆದಿರುವ ಮಾನಸಾ ಎಚ್. ಪ್ರಥಮ, 637 ಅಂಕ ಪಡೆದಿರುವ ಗಾಯತ್ರಿ ಎಸ್ ದ್ವಿತೀಯ,635 ಅಂಕ ಪಡೆದಿರುವ ವರ್ಷಾ ವಾಯ್. ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.ಇನ್ನುಳಿದAತೆ 600ಕ್ಕೂ ಅಧಿಕ ಅಂಕ ಪಡೆದಿರುವ ಭಾಗ್ಯಾ ಎಚ್(634),ಶಿವಶಂಕರ ವೈ(632),ಪ್ರತೀಕ್ಷಾ ಕೆ(630),ಭಾಗ್ಯಶ್ರೀ ಬಿ(626),ಮಹ್ಮದ್‌ಇಬ್ರಾಹಿಂ ಡಬ್ಲೂö್ಯ(617),ಸುಮಿತ್ ಪಿ.(606),ಸಹನಾ ಎಚ್(604),ಅನ್ನಪೂರ್ಣ ಎನ್(601), ಪ್ರವೀಣ ಬಿ(600) ಅಂಕ ಪಡೆದುಕೊಂಡಿದ್ದಾರೆ.

ಮುದ್ದೇಬಿಹಾಳ,ನಾಗರಬೆಟ್ಟ ಹಾಗೂ ಬಾಗಲಕೋಟೆಯಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ನೀಟ್ ಅಕಾಡೆಮಿ ಶಾಖೆಗಳನ್ನು ಹೊಂದಿದೆ ಎಂದು ತಿಳಿಸಿದ್ದಾರೆ.ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಕಾರ್ಯದರ್ಶಿ ವಿಜಯಕುಮಾರ ಪಾಟೀಲ,ಪ್ರಾಚಾರ್ಯರಾದ ಸಿ.ಬಿ.ದೇಸಾಯಿ,ಮಾರ್ಗದರ್ಶಕರಾದ ಎನ್.ಎ.ಬಿರಾಜದಾರ, ರೇವಣಸಿದ್ದ ಚಲವಾದಿ(ಮುರಾಳ),ರಾಜಶೇಖರ ಹಿರೇಮಠ,ಇಸ್ಮಾಯಿಲ್ ಮನಿಯಾರ್ ಮೊದಲಾದವರು ಅಭಿನಂದಿಸಿದ್ದಾರೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ