ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ.
ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಕಾರ್ಯಕ್ರಮ ಉದ್ಘಾಟಿಸುವರು.ಕಾನಿಪ ಧ್ವನಿ ತಾಲ್ಲೂಕು ಅಧ್ಯಕ್ಷ ಶಂಕರ ಹೆಬ್ಬಾಳ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಗದಗ ನಿವೃತ್ತ ಡಿಡಿಪಿಐ ಎಸ್.ಡಿ.ಗಾಂಜಿ,ಉದ್ಯಮಿ ಎ.ಗಣೇಶ ನಾರಾಯಣಸ್ವಾಮಿ,ಮದರಿ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಟ್ರಸ್ಟ್ನ ಅಧ್ಯಕ್ಷ ಯಮನಪ್ಪ ವಡ್ಡರ,ಕಾನಿಪ ಧ್ವನಿ ರಾಜ್ಯ ಕಾರ್ಯಾಧ್ಯಕ್ಷ ಇರ್ಫಾನ್ ಬೀಳಗಿ,ಸಂಘಟನೆಯ ಉತ್ತರ ಕರ್ನಾಟಕ ಉಸ್ತುವಾರಿ ಅಶೋಕ ರಾಠೋಡ,ಕಾನಿಪ ಧ್ವನಿ ಜಿಲ್ಲಾಧ್ಯಕ್ಷ ವಿನಾಯಕ ಸೊಂಡೂರ,ದಿ ನೇಚರ್ ಗ್ರೋಮೋರ್ ಫೌಂಡೇಶನ್ ಅಧ್ಯಕ್ಷೆ ಸಂಗೀತಾ ನಾಡಗೌಡ,ಕದಳಿ ವೇದಿಕೆ ತಾಲ್ಲೂಕು ಅಧ್ಯಕ್ಷೆ ಕಾಶೀಬಾಯಿ ರಾಂಪೂರ,ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಅಶೋಕ ಮಣಿ,ಸಿಪಿಐ ಮೊಹ್ಮದ ಫಸಿವುದ್ದೀನ್,ಸರಕಾರಿ ಪಪೂ ಕಾಲೇಜಿನ ಪ್ರಾಚಾರ್ಯ ಎಸ್.ಎಸ್.ಅಂಗಡಿ ಆಗಮಿಸುವರು.
ಇದೇ ವೇಳೆ ಪ್ರತಿಭಾವಂತ ಸರಕಾರಿ,ಖಾಸಗಿ,ಅನುದಾನಿತ ಪ್ರೌಢಶಾಲೆ ಎಸ್.ಎಸ್.ಎಲ್.ಸಿ ಟಾಪರ್ಗಳನ್ನು ಸನ್ಮಾನಿಸಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಜಿ.ವಾಯ್.ದಫೇದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







