ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರಕಾರ ಸಾಮಾಜಿಕ ಭದ್ರತೆ ಯೋಜನೆಗಳ ಅಡಿ ನೀಡಲಾಗುವ ಮಾಶಾಸನಕ್ಕೆ ಸಂಬoಧಿಸಿದoತೆ ವಾರ್ಷಿಕ ಆದಾಯ ಮಿತಿಯನ್ನು ಹೆಚ್ಚಿಸಿರುವ ಕ್ರಮವನ್ನು ಖಂಡಿಸಿ ಪಟ್ಟಣದಲ್ಲಿ ಗುರುವಾರ ವಿಶೇಷಚೇತನರ ನಗರ ವಿವಿದೋದ್ದೇಶ ಹಾಗೂ ಗ್ರಾಮೀಣ /ನಗರ ಪುನರ್ವಸತಿ ಕಾರ್ಯಕರ್ತರ ಸಮಿತಿ. ಹಾಗೂ ತಾಲೂಕಿನ ವಿವಿಧ ಪ್ರಗತಿಪರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಪ್ರತಿಭಟನೆ ನಡೆಸಿ ಕಂದಾಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಆಗಮಿಸಿದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ರ‍್ಯಾಲಿ ಮೂಲಕ ಆಗಮಿಸಿದ ಹೋರಾಟಗಾರರು ತಹಶೀಲ್ದಾರ್ ಕಚೇರಿಯಲ್ಲಿ ಜಮಾಯಿಸಿದರು.

ವಿಕಲಚೇತನರ ಒಕ್ಕೂಟದ ಜಿಲ್ಲಾಧ್ಯಕ್ಷ ಎಸ್.ಕೆ.ಘಾಟಿ ಮಾತನಾಡಿ, ಆದಾಯ ಮಿತಿಯನ್ನು 32,000/- ಗಳಿಗೆ ನಿಗದಿಪಡಿಸಿರುವುದು ಅವೈಜ್ಞಾನಿಕ ಮತ್ತು ಅತ್ಯಂತ ಹಾಸ್ಯಾಸ್ಪದವಾದ ಸಂಗತಿಯಾಗಿದೆ.ಆದಾಯ ಮಿತಿಯ ನೆಪ ಒಡ್ಡಿ ರಾಜ್ಯಾದ್ಯಂತ ಲಕ್ಷಾಂತರ ವಿಕಲಚೇತನರ ಮಾಶಾಸನ ತಡೆ ಹಿಡಿಯಲಾಗಿದೆ. ಇದರ ಜೊತೆಗೆ ಸಮಾಜದ ಅತ್ಯಂತ ಅಸಹಾಯಕ ವರ್ಗಗಳಾದ ವಯೋವೃದ್ಧರ ವೃದ್ಯಾಪ ವೇತನಗಳು ಹಾಗೂ ವಿಧವಾ ಮಹಿಳೆಯರ ಹಾಗೂ ಮನಸ್ವಿನಿ ವೇತನವನ್ನು ಸಂಪೂರ್ಣ ಬಂದ್ ಮಾಡಲಾಗಿದೆ.ಕುಟುಂಬದ ವಾರ್ಷಿಕ ಆದಾಯವನ್ನು 32,000/- ರೂ. ನಿಗದಿ ಮಾಡಿದ ಪ್ರಕಾರ ಅದು ತಿಂಗಳಿಗೆ ಕೇವಲ 2,600/- ರೂ. ಗಳಾಗುತ್ತದೆ. ಇದು ಅತ್ಯಂತ ಹಾಸ್ಯಾಸ್ಪದವಾಗಿದ್ದು ಅದನ್ನು ಕೂಡಲೇ ರದ್ದು ಮಾಡಬೇಕು ಎಂದು ಒತ್ತಾಯಿಸಿದರು.

ವಿಕಲಚೇತನ ಶಿವಪುತ್ರ ಮೋಟಗಿ ಮಾತನಾಡಿ, ಕಳೆದ ಐದು ತಿಂಗಳಿನಿoದ ಆದಾಯ ಮಿತಿಯ ನೆಪವೊಡ್ಡಿ ಮಾಶಾಸನ ತಡೆ ಹಿಡಿದಿರುವುದನ್ನು ಬಾಕಿ ಸಮೇತ ಪಾವತಿಸಬೇಕು.ಸರ್ಕಾರಿ ನೌಕರರು ತಮ್ಮ ವೇತನವನ್ನು ಹೆಚ್ಚಿಸಿಕೊಳ್ಳುತ್ತಾರೆ.ನಮ್ಮದೇತಕ್ಕೆ ನೀಡುತ್ತಿಲ್ಲ.ತಹಶೀಲ್ದಾರ್ ಕಚೇರಿಯಲ್ಲಿ ಮೂಲಸೌರ‍್ಯಕ್ಕೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.

ಮನವಿಯಲ್ಲಿ ಬಿ.ಪಿ.ಎಲ್. ರೇಷನ್ ಕಾರ್ಡ್ಗೆ ಅನ್ವಯಿಸುತ್ತಿರುವ 1,20,000/- ಗಳ ವಾರ್ಷಿಕ ಆದಾಯ ಮಿತಿಯನ್ನೇ ವಿಕಲಚೇತನರಿಗೂ ಅನ್ವಯಿಸುವಂತೆ ಕ್ರಮ ಕೈಗೊಳ್ಳಬೇಕು.ಪ್ರಸ್ತುತ ಆದಾಯದ ನೆಪ ಒಡ್ಡಿ ನಿಲ್ಲಿಸಿರುವ ವಿಕಲಚೇತನರು ಮತ್ತು ವಯೋವೃದ್ಧರು ಹಾಗೂ ವಿಧವೆ ಮತ್ತು ಮನಸ್ವಿನಿ ಮಾಶಾಸನವನ್ನು ತಕ್ಷಣವೇ ಪುನಾರಂಭಿಸಬೇಕು.ಶೇ.40 ರಷ್ಟು ಅಂಗವೈಕಲ್ಯತೆಯನ್ನು ಹೊಂದಿರುವ ವಿಶಿಷ್ಟಾಂಗರಿಗೆ ರೂ 3,000 ಗಳನ್ನು ಮತ್ತು ಶೇ.75 ರಷ್ಟು ಅಂಗವೈಕಲ್ಯತೆಯನ್ನು ಹೊಂದಿರುವ ವಿಶಿಷ್ಟಾಂಗರಿಗೆ ರೂ:5,000 ಗಳನ್ನು, ವಯೋವೃದ್ಧರಿಗೆ ರೂ 3000 ವಿಧವೆಯರಿಗೆ ರೂ:3000, ಮನಸ್ವಿನಿಯರಿಗೆ 3000 ಗಳನ್ನು ಜೀವನ ಭತ್ಯೆಯಾಗಿ ನೀಡಬೇಕು ಎಂದು ಮನವಿಯಲ್ಲಿ ಇರಿಸಲಾಗಿದೆ.
ಮನವಿಯನ್ನು ತಹಶೀಲ್ದಾರ್ ಪ್ರಭಾರ ತಹಶಿಲ್ದಾರ್ ಎಂ.ಎಸ್.ಅರಕೇರಿ ಅವರು ಸ್ವೀಕರಿಸಿದರು.ಮೂಲಭೂತ ಸೌಕರ‍್ಯಗಳನ್ನು ಕಲ್ಪಿಸುವ ಸಂಬoಧ ವಿಕಲಚೇತನರ ಒಕ್ಕೂಟದ ಸಭೆಯನ್ನು ಕರೆಯುವುದಾಗಿ ತಿಳಿಸಿದರು.ಈ ಸಂದರ್ಭದಲ್ಲಿ ಎಂ.ಎo.ಕುoಬಾರ,ರುದ್ರಗೌಡ ಗೌಡರ,ಉಮೇಶ ಜತ್ತಿ,ನಾಗೇಶ ಅಮರಾವತಿ,ಬಾಲಪ್ಪ ಬಿಸಲದಿನ್ನಿ,ಅಡಿವೆಪ್ಪ ಕೊಡಗಾನೂರ,ಎಸ್.ಸಿ.ಮೇಟಿ,ಯಲ್ಲಪ್ಪ ಮಾದರ,ಪವಾಡೆಪ್ಪ ಚಲವಾದಿ,ಡಿ.ಎಚ್.ಮಾದರ,ಸಂಗೀತಾ ಕೋಳೂರ,ಸಂಗನಗೌಡ ಬಗಲಿ,ಬಿ.ಎಸ್.ನಾಯ್ಕೋಡಿ,ಶಶಿಕಾಂತ ಯಾಳಗಿ ಇದ್ದರು.

ವಿಜಯಪುರ ಜಿಲ್ಲೆಯನ್ನು 371 ಜೆ ಅಡಿ ಸೇರ್ಪಡೆಗೂ ಮನವಿ: ವಿಜಯಪುರ ಜಿಲ್ಲೆಯು ಹೈದ್ರಾಬಾದ್ ನಿಜಾಮರ ಆಳ್ವಿಕೆಯಲ್ಲಿ ಒಳಪಟ್ಟಿದ್ದು ಹಿಂದುಳಿದ ಜಿಲ್ಲೆಯಾಗಿದೆ.ಆದರೆ ಈವರೆಗೂ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಕೊಟ್ಟಿರುವ 371ಜೆ ಸೌಲಭ್ಯವನ್ನು ವಿಜಯಪುರಕ್ಕೆ ಒದಗಿಸಿಲ್ಲ.ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವಿಶೇಷ ಮೀಸಲಾತಿ ಸೌಲಭ್ಯದಡಿ ವಿಜಯಪುರಕ್ಕೆ 371ಜೆ ಸ್ಥಾನಮಾನ ಕಲ್ಪಿಸಬೇಕು ಎಂದು ಯುವ ವಕೀಲ ಚಂದ್ರಶೇಖರ ಹೊಸಮನಿ ಒತ್ತಾಯಿಸಿದರು.ಸಂಘ ಸಂಸ್ಥೆಗಳು,ಶಾಸಕರು,ಸoಸದರು,ಮoತ್ರಿಗಳು ಇದಕ್ಕಾಗಿ ಒತ್ತಾಯಿಸುವ ಕಾರ್ಯ ಮಾಡಬೇಕು ಎಂದು ಮನವಿ ಮಾಡಿದರು.ತಹಶೀಲ್ದಾರ್‌ಗೆ ಪ್ರತ್ಯೇಕ ಮನವಿ ಪತ್ರ ಸಲ್ಲಿಸಲಾಯಿತು.

Latest News

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ ಪ್ರತಿ ಎಕರೆ ಜಮೀನಿಗೆ 50 ಸಾವಿರ ರೂ.ಬರ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ ಆಗ್ರಹಿಸಿದರು. ಬಿಜೆಪಿ ನಿಯೋಗದಿಂದ ಬರ ಅಧ್ಯಯನ ಪ್ರವಾಸ ನಡೆಸುವ ಮುನ್ನ ತಾಲ್ಲೂಕಿನ ಕುಂಟೋಜಿ ಬಸವೇಶ್ವರ ದೇವಸ್ಥಾನದಲ್ಲಿ ಗುರುವಾರ ರೈತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಕೇವಲ ಕೇಂದ್ರದತ್ತ ಬೆರಳು ಮಾಡದೇ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ