ಅಂಗನವಾಡಿ ಕಾರ್ಯಕರ್ತೆಯರಿಂದ ಸಚಿವೆ ಹೆಬ್ಬಾಳ್ಕರ್‌ಗೆ ದೂರು

ಅಂಗನವಾಡಿ ಕಾರ್ಯಕರ್ತೆಯರಿಂದ ಸಚಿವೆ ಹೆಬ್ಬಾಳ್ಕರ್‌ಗೆ ದೂರು

ಮುದ್ದೇಬಿಹಾಳ : ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ ಅವರ ವಿರುದ್ಧ ಅಂಗನವಾಡಿ ಸಂಘಟನೆ ಹೆಸರಿನಲ್ಲಿ ಕೆಲವರನ್ನು ಗುಂಪು ಕಟ್ಟಿಕೊಂಡು ನೀಲಮ್ಮ ಬೋರಾವತ್ ಎನ್ನುವವರು ತೇಜೋವಧೆ ನಡೆಸಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು 30ಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು ಬುಧವಾರ ತಹಶೀಲ್ದಾರ್ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಪಟ್ಟಣದ ತಹಸೀಲ್ದಾರ್ ಕಚೇರಿಗೆ ಆಗಮಿಸಿದ್ದ ಕಾರ್ಯಕರ್ತೆಯರು, ಶಿರಸ್ತೇದಾರ ಎಂ.ಎಸ್.ಬಾಗೇವಾಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಅಂಗನವಾಡಿ ಕಾರ್ಯಕರ್ತೆ ನೀಲಮ್ಮ ಬೋರಾವತ್ ಅವರು, ಮಾಜಿ ಸೈನಿಕರಾಗಿರುವ ನಮ್ಮ ಇಲಾಖೆಯ ಅಧಿಕಾರಿ ಕುಂಬಾರ ಹಾಗೂ ಸಿಬ್ಬಂದಿ, ಸೂಪರ ವೈಸರ್‌ಗಳ ವಿರುದ್ಧ ಅತ್ಯಂತ ಕೆಳಮಟ್ಟದ ಪದಗಳನ್ನು ಬಳಸಿ ಅಂಗನವಾಡಿ ನೌಕರರು ತಲೆ ತಗ್ಗಿಸುವಂತೆ ಮಾಡಿದ್ದಾರೆ.ಅವರು ಮಾಡಿರುವ ಆರೋಪಗಳಿಗೆ ಆಧಾರಗಳನ್ನು ಒದಗಿಸಬೇಕು.

ಮೇಲಧಿಕಾರಿಗಳು ಅವರ ಆರೋಪಗಳ ಬಗ್ಗೆ ತನಿಖೆ ಮಾಡಬೇಕು. ಅಲ್ಲಿಯವರೆಗೂ ಅವರನ್ನು ಸೇವೆಯಿಂದ ಅಮಾನತಿನಲ್ಲಿಡಬೇಕು.ಶಾಸಕರ ಹೆಸರನ್ನು ಬಳಸಿಕೊಂಡು ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿರುವ ಈ ಹೋರಾಟಗಾರ್ತಿಯ ಸಂಘಟನೆ ಅಸಲಿಯೋ ನಕಲಿಯೋ ಎಂಬುದನ್ನು ಪರಿಶೀಲನೆ ನಡೆಸಿ ಸುಳ್ಳು, ಆಧಾರ ರಹಿತ ಆರೋಪಗಳನ್ನು ಮಾಡುತ್ತಿರುವ ಬೋರಾವತ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಸಿಡಿಪಿಒ ವಿರುದ್ಧ ಮಂಗಳವಾರ ಬೀದಿಗಿಳಿದ ಎಲ್ಲ ಕಾರ್ಯಕರ್ತೆಯರನ್ನು ವಜಾ ಮಾಡಬೇಕು ಎಂದು ಸಚಿವೆ ಹೆಬ್ಬಾಳ್ಕರ್ ಅವರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಲಾಗಿದೆ. ಮನವಿಯನ್ನು ಶಿರಸ್ತೇದಾರ ಎಂ.ಎಸ್.ಬಾಗೇವಾಡಿ ಅವರಿಗೆ ಸಲ್ಲಿಸಲಾಯಿತು.

ಅಂಗನವಾಡಿ ಕಾರ್ಯಕರ್ತೆಯರಾದ ಸಾವಿತ್ರಿ ನಾಗರತ್ತಿ,ರೇಣುಕಾ ಹಡಪದ, ಕೆ.ಜೆ.ಪಾದಗಟ್ಟಿ, ಮಹಾದೇವಿ ನಾಗೋಡ, ಸುವರ್ಣಾ ಕಾಳೆ, ಜಯಶ್ರೀ ಹಿರೇಮಠ, ಸರಸ್ವತಿ ಮದ್ದರಕಿ, ಮೈರುನಬಿ ಮುಲ್ಲಾ, ನಿರ್ಮಲಾ ಕುಲಕರ್ಣಿ, ಗುರುಬಾಯಿ ಮಲಗೌಡರ, ರೇಣುಕಾ ಕುಂಟೋಜಿ, ಕಲಾವತಿ ವಂದಾಲ, ರೇಣುಕಾ ಲಮಾಣಿ, ಎಚ್.ಆರ್.ಯರಗುಂಟಿ, ಎ.ಆಯ್.ಕುಂಬಾರ, ಬಸಮ್ಮ ಭಜಂತ್ರಿ, ಬಸಮ್ಮ ಮಾದರ, ಜಯಶ್ರೀ ಜೀರಲಭಾವಿ, ಮಾದೇವಿ ನಾಯಕರ, ಜಯಶ್ರೀ ಗೌಂಡಿ, ಶರಣಮ್ಮ ಗೌಂಡಿ, ಪಾರ್ವತಿ ಹಿರೇಮಠ, ಎಸ್.ಎಸ್.ಸಣಕಲಗೌಡರ, ಕೆ.ಎ.ದೇಶಪಾಂಡೆ ಮೊದಲಾದವರು ಇದ್ದರು.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600