ಅಂಗನವಾಡಿ ಕಾರ್ಯಕರ್ತೆಯರಿಂದ ಸಚಿವೆ ಹೆಬ್ಬಾಳ್ಕರ್‌ಗೆ ದೂರು

ಅಂಗನವಾಡಿ ಕಾರ್ಯಕರ್ತೆಯರಿಂದ ಸಚಿವೆ ಹೆಬ್ಬಾಳ್ಕರ್‌ಗೆ ದೂರು

ಮುದ್ದೇಬಿಹಾಳ : ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ ಅವರ ವಿರುದ್ಧ ಅಂಗನವಾಡಿ ಸಂಘಟನೆ ಹೆಸರಿನಲ್ಲಿ ಕೆಲವರನ್ನು ಗುಂಪು ಕಟ್ಟಿಕೊಂಡು ನೀಲಮ್ಮ ಬೋರಾವತ್ ಎನ್ನುವವರು ತೇಜೋವಧೆ ನಡೆಸಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು 30ಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು ಬುಧವಾರ ತಹಶೀಲ್ದಾರ್ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಪಟ್ಟಣದ ತಹಸೀಲ್ದಾರ್ ಕಚೇರಿಗೆ ಆಗಮಿಸಿದ್ದ ಕಾರ್ಯಕರ್ತೆಯರು, ಶಿರಸ್ತೇದಾರ ಎಂ.ಎಸ್.ಬಾಗೇವಾಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಅಂಗನವಾಡಿ ಕಾರ್ಯಕರ್ತೆ ನೀಲಮ್ಮ ಬೋರಾವತ್ ಅವರು, ಮಾಜಿ ಸೈನಿಕರಾಗಿರುವ ನಮ್ಮ ಇಲಾಖೆಯ ಅಧಿಕಾರಿ ಕುಂಬಾರ ಹಾಗೂ ಸಿಬ್ಬಂದಿ, ಸೂಪರ ವೈಸರ್‌ಗಳ ವಿರುದ್ಧ ಅತ್ಯಂತ ಕೆಳಮಟ್ಟದ ಪದಗಳನ್ನು ಬಳಸಿ ಅಂಗನವಾಡಿ ನೌಕರರು ತಲೆ ತಗ್ಗಿಸುವಂತೆ ಮಾಡಿದ್ದಾರೆ.ಅವರು ಮಾಡಿರುವ ಆರೋಪಗಳಿಗೆ ಆಧಾರಗಳನ್ನು ಒದಗಿಸಬೇಕು.

ಮೇಲಧಿಕಾರಿಗಳು ಅವರ ಆರೋಪಗಳ ಬಗ್ಗೆ ತನಿಖೆ ಮಾಡಬೇಕು. ಅಲ್ಲಿಯವರೆಗೂ ಅವರನ್ನು ಸೇವೆಯಿಂದ ಅಮಾನತಿನಲ್ಲಿಡಬೇಕು.ಶಾಸಕರ ಹೆಸರನ್ನು ಬಳಸಿಕೊಂಡು ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿರುವ ಈ ಹೋರಾಟಗಾರ್ತಿಯ ಸಂಘಟನೆ ಅಸಲಿಯೋ ನಕಲಿಯೋ ಎಂಬುದನ್ನು ಪರಿಶೀಲನೆ ನಡೆಸಿ ಸುಳ್ಳು, ಆಧಾರ ರಹಿತ ಆರೋಪಗಳನ್ನು ಮಾಡುತ್ತಿರುವ ಬೋರಾವತ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಸಿಡಿಪಿಒ ವಿರುದ್ಧ ಮಂಗಳವಾರ ಬೀದಿಗಿಳಿದ ಎಲ್ಲ ಕಾರ್ಯಕರ್ತೆಯರನ್ನು ವಜಾ ಮಾಡಬೇಕು ಎಂದು ಸಚಿವೆ ಹೆಬ್ಬಾಳ್ಕರ್ ಅವರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಲಾಗಿದೆ. ಮನವಿಯನ್ನು ಶಿರಸ್ತೇದಾರ ಎಂ.ಎಸ್.ಬಾಗೇವಾಡಿ ಅವರಿಗೆ ಸಲ್ಲಿಸಲಾಯಿತು.

ಅಂಗನವಾಡಿ ಕಾರ್ಯಕರ್ತೆಯರಾದ ಸಾವಿತ್ರಿ ನಾಗರತ್ತಿ,ರೇಣುಕಾ ಹಡಪದ, ಕೆ.ಜೆ.ಪಾದಗಟ್ಟಿ, ಮಹಾದೇವಿ ನಾಗೋಡ, ಸುವರ್ಣಾ ಕಾಳೆ, ಜಯಶ್ರೀ ಹಿರೇಮಠ, ಸರಸ್ವತಿ ಮದ್ದರಕಿ, ಮೈರುನಬಿ ಮುಲ್ಲಾ, ನಿರ್ಮಲಾ ಕುಲಕರ್ಣಿ, ಗುರುಬಾಯಿ ಮಲಗೌಡರ, ರೇಣುಕಾ ಕುಂಟೋಜಿ, ಕಲಾವತಿ ವಂದಾಲ, ರೇಣುಕಾ ಲಮಾಣಿ, ಎಚ್.ಆರ್.ಯರಗುಂಟಿ, ಎ.ಆಯ್.ಕುಂಬಾರ, ಬಸಮ್ಮ ಭಜಂತ್ರಿ, ಬಸಮ್ಮ ಮಾದರ, ಜಯಶ್ರೀ ಜೀರಲಭಾವಿ, ಮಾದೇವಿ ನಾಯಕರ, ಜಯಶ್ರೀ ಗೌಂಡಿ, ಶರಣಮ್ಮ ಗೌಂಡಿ, ಪಾರ್ವತಿ ಹಿರೇಮಠ, ಎಸ್.ಎಸ್.ಸಣಕಲಗೌಡರ, ಕೆ.ಎ.ದೇಶಪಾಂಡೆ ಮೊದಲಾದವರು ಇದ್ದರು.

Latest News

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಕುಳಗೇರಿ ಕ್ರಾಸ್: ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮನಕೊಪ್ಪದಲ್ಲಿ ಸನ್ 2025-26ನೇ ಸಾಲಿನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಮುದ್ದೇಬಿಹಾಳ : ಹಾಲು ಪೂರೈಸುವ ಗೂಡ್ಸ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಬಸ್‌ಗೆ ಡಿಕ್ಕಿ ಹೊಡೆದ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಮುದ್ದೇಬಿಹಾಳ : ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮುದ್ದೇಬಿಹಾಳ ಪಟ್ಟಣ ಮದುವಣಗಿತ್ತಿಯಂತೆ

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹಾಸನ: ಇತ್ತೀಚೆಗೆ ಯುವ ಜನರೇ ಹೃದಯಾಘತಕ್ಕೆ ಬಲಿಯಾಗುತ್ತಿರುವುದು ಹೆಚ್ಚಾಗಿದ್ದು, ಇದೀಗ ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನಾ ಕೆ.ವಿ. (21) ಎಂದು ಗುರುತಿಸಲಾಗಿದೆ. ಈಕೆ ಹಾಸನ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಾಗೆ ಧಿಡೀರ್ ಆಗಿ ಎದೆನೋವು

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು. ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ