ಸಸಿ ನೆಟ್ಟು ವನಮಹೋತ್ಸವ ಆಚರಣೆ

ಸಸಿ ನೆಟ್ಟು ವನಮಹೋತ್ಸವ ಆಚರಣೆ

ಇಳಕಲ್: ನಗರದ ಜೋಶಿ ಗಲ್ಲಿಯ ರಾಷ್ಟ್ರೀಯ ಹೆದ್ದಾರಿ ಐವತ್ತಕ್ಕೆ ಹೊಂದಿಕೊಂಡಂತೆ ಇರುವ ಸಾರ್ವಜನಿಕ ಉದ್ಯಾನವನದಲ್ಲಿ ಇಳಕಲ್ ಲೈನ್ಸ್ ಕ್ಲಬ್ ನ ಸದಸ್ಯರು ಸಸಿ ನೆಡುವ ಮೂಲಕ ವನಮಹೋತ್ಸವದಲ್ಲಿ ಪಾಲ್ಗೊಂಡರು.

ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತೆ ಇರುವ ಈ ಉದ್ಯಾನವನ ನಗರಕ್ಕೆ ಆಗಮಿಸುವ ಜನರನ್ನು ಆಕರ್ಷಿಸುವಂತೆ ಮಾಡುವ ನಿಟ್ಟಿನಲ್ಲಿ ಈ ಉದ್ಯಾನವನವನ್ನು ಸುಂದರವಾಗಿ ಮಾಡುವ ಉದ್ದೇಶ ಹೊಂದಿದ್ದೇವೆ ಎಂದು ಲೈನ್ಸ್ ಕ್ಲಬ್ ಅಧ್ಯಕ್ಷ ಮಹಾಬಲೇಶ್ ಮಠದ ಅವರು ತಿಳಿಸಿದರು.

ಲೈನ್ಸ್ ಕ್ಲಬ್ ನ ನಿಕಟಪೂರ್ವ ಅಧ್ಯಕ್ಷ ರಾಜು ಕಾಟವಾ ಮಾತನಾಡಿ, ಉದ್ಯಾನವನದ ಸುತ್ತಮುತ್ತಲಿ ವಾಸವಿರುವ ನಿವಾಸಿಗಳು ತಮ್ಮ ಮಕ್ಕಳನ್ನು ಪಾಲನೆ ಪೋಷಣೆ ಮಾಡುವಂತೆ ಈ ಸಸಿಗಳನ್ನು ಬೆಳೆಸುವಲ್ಲಿ ಕಾಳಜಿ ವಹಿಸಬೇಕು ಎಂದು ಅಲ್ಲಿಯ ನಿವಾಸಿಗಳಿಗೆ ಕರೆ ನೀಡಿದರು.

ಈ ವನಮಹೋತ್ಸವ ಕಾರ್ಯಕ್ರಮದಲ್ಲಿ ಜೋಶಿಗಲ್ಲಿ ಬಡಾವಣೆಯ ನಗರಸಭೆ ಸದಸ್ಯ ಮೌನೇಶ್ ಬಂಡಿವಡ್ಡರ್ ಪಾಲ್ಗೊಂಡಿದ್ದರು ಈ ವೇಳೆ ಹಾಗೂ ಬಡಾವಣೆಯ ನಿವಾಸಿಗಳ ಪರವಾಗಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಲೈನ್ಸ್ ಕ್ಲಬ್ ಅಧ್ಯಕ್ಷ ಮಹಾಬಲೇಶ್ ಮಾರಟದ, ಕಾರ್ಯದರ್ಶಿ ಮಹಾಂತೇಶ್ ಅಕ್ಕಿ, ಖಜಾಂಚಿ ಮುರುಗೇಶ್ ಪಾಟೀಲ್, ರಾಜಕುಮಾರ ಕಾಟವಾ, ಸಂತೋಷ್ ಪೂಜರಿ, ಡಾ. ವಿಠ್ಠಲ್ ಶಾವಿ, ಡಾ. ನಾಗರಾಜ ಸಜ್ಜನ್, ಪ್ರಮೋದ್ ಹಂಚಾಟೆ, ರವಿ ಅಂಗಡಿ, ವಿಶಾಲ್ ಜೈನ, ಲಾಲಬಾಷಾ ಶಿವನಗುತ್ತಿ, ಅಪ್ಪು ಹಿರೇಮಠ, ಬಸವರಾಜ ಮಠದ, ಡಾ. ಟಿಪ್ಪು ಭಂಡಾರಿ ಸೇರಿದಂತೆ ಬಡಾವಣೆ ನಿವಾಸಿಗಳಾದ ಆರ್.ಕೆ. ಕುಲಕರ್ಣಿ ಹಾಗೂ ಲೈನ್ಸ್ ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದರು.

Latest News

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ ಮಂಜೂರಾತಿಯಾಗಿದ್ದು ಅದನ್ನು ಕೂಡಲೇ ಕಾರ್ಯಾರಂಭಗೊಳಿಸಲು ಕ್ರಮ ಜರುಗಿಸುವಂತೆ ಮುದ್ದೇಬಿಹಾಳದ ಜನಸೇವಾ ಸಂಸ್ಥೆಯ ಪದಾಧಿಕಾರಿಗಳು ಬೆಳಗಾವಿ ಐಜಿಪಿ ಸಂದೀಪ್ ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿದ್ದ ವೇಳೆ ಐಜಿಪಿ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.ಈ ವೇಳೆ ಮಾತನಾಡಿದ ಜನಸೇವಾ ಸಂಸ್ಥೆಯ ಅಧ್ಯಕ್ಷ

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ ಸಂಬoಧಿಸಿದoತೆ ಮಹತ್ವದ ಸುಳಿವು ದೊರಕಿದ್ದು ಶೀಘ್ರದಲ್ಲಿ ಪ್ರಕರಣವನ್ನು ಬೇಧಿಸಲಾಗುವುದು ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ಸಂದೀಪ ಪಾಟೀಲ್ ಹೇಳಿದರು. ತಾಲ್ಲೂಕಿನ ಬಸರಕೋಡ ಗ್ರಾಮದ ಐತಿಹಾಸಿಕ ಶ್ರೀ ಪವಾಡ ಬಸವೇಶ್ವರ ದೇವಾಲಯಕ್ಕೆ ಮಂಗಳವಾರ ಭೇಟಿ ನೀಡಿದ್ದ ಅವರು ದೇವಸ್ಥಾನದ ಕರ್ತೃಗದ್ದುಗೆ ಮೇಲಿನ 32 ಕೆಜಿ ಬೆಳ್ಳಿಯ ಕವಚ ಕಳ್ಳತನ ಪ್ರಕರಣದ ಕುರಿತು ವಿಜಯಪುರ ಎಸ್ಪಿ