ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು.

ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು ಶೈಕ್ಷಣಿಕವಾಗಿ ಇನ್ನೂ ಪ್ರಗತಿ ಸಾಧಿಸಬೇಕಾಗಿದೆ ಎಂಬ ಅರಿವಿದೆ.ಸಮಾಜದಲ್ಲಿರುವ ಅತ್ಯಂತ ಕಡು ಬಡ ಪ್ರತಿಭಾವಂತ ಮಕ್ಕಳ ಶೈಕ್ಷಣಿಕ ಮುನ್ನಡೆಗೆ ತಮ್ಮಿಂದಾದ ನೆರವು ನೀಡುವುದಾಗಿ ಹೇಳಿದರು.

ದೇವಾಂಗ ನೌಕರರ ಸಂಘದ ಅಧ್ಯಕ್ಷ ಶ್ರೀಶೈಲ ಭಾವಿಕಟ್ಟಿ ಮಾತನಾಡಿ, ಅತ್ಯಂತ ಸರಳ ಸಜ್ಜನಿಕೆಯ ವ್ಯಕ್ತಿ ಬಡದಾನಿ ಅವರಾಗಿದ್ದು ಸಾಕಷ್ಟು ಕಷ್ಟಕೋಟಲೆಗಳನ್ನು ಎದುರಿಸಿ ಇಂದು ಮುದ್ದೇಬಿಹಾಳದ ಬಿಇಒ ಆಗಿ ಸೇವೆಗೆ ಬಂದಿರುವುದು ನಮಗೆಲ್ಲರಿಗೂ ಹೆಮ್ಮೆ ತರುವ ಸಂಗತಿಯಾಗಿದೆ.ಸಮಾಜದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ನಾವೆಲ್ಲರೂ ಶಕ್ತಿಮೀರಿ ಪ್ರಯತ್ನಿಸುತ್ತೇವೆ ಎಂದು ಹೇಳಿದರು.

ಬನಶಂಕರಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶಂಕರ ಈ.ಹೆಬ್ಬಾಳ ಮಾತನಾಡಿ, ಮುದ್ದೇಬಿಹಾಳ ಕ್ಷೇತ್ರ ಶಿಕ್ಷಣಾಧಿಕಾರಿ ಹುದ್ದೆ ಅತ್ಯಂತ ಜವಾಬ್ದಾರಿಯಾಗಿದೆ.ಎಲ್ಲ ಜಾತಿ ಜನಾಂಗದವರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಕೆಲಸ ಮಾಡುವ ಶಿಕ್ಷಕರಿಗೆ ಪ್ರೋತ್ಸಾಹ,ಕೆಲಸ ಮಾಡದ ಶಿಕ್ಷಕರಿಗೆ ಕಠಿಣ ಸೂಚನೆಗಳನ್ನು ನೀಡುವ ಮೂಲಕ ಎಲ್ಲರ ಮೆಚ್ಚುಗೆ ಗಳಿಸುವಂತೆ ಸಲಹೆ ಮಾಡಿದರು.

ದೇವಾಂಗ ಸಮಾಜದ ಅಧ್ಯಕ್ಷರಾದ ಚನ್ನಬಸ್ಸು ಗುಡ್ಡದ, ಮುತ್ತಣ್ಣ ಪ್ಯಾಟಿಗೌಡರ, ಮಾತನಾಡಿದರು.ಸಮಾಜದ ಹಿರಿಯರಾದ ಸಿದ್ದಣ್ಣ ಚಿತ್ತರಗಿ,ಬಸವರಾಜ ಅಗಸಬಾಳ,ಈಶ್ವರಪ್ಪ ಹೆಬ್ಬಾಳ,ದೇವಾಂಗ ನೌಕರರ ಸಂಘದ ಸದಸ್ಯರಾದ ಬಿ.ಬಿ.ಕಲ್ಲುಂಡಿ, ಸಿ.ಎಚ್.ಚಿತ್ತರಗಿ, ಎನ್.ಎಸ್.ಚಿತ್ತರಗಿ, ಅನೀಲ್ ಬೇನಾಳ, ಸಂತೋಷ ಹೆಬ್ಬಾಳ,ವೀರೇಶ ಮಾಶೆಟ್ಟಿ,ಶಿವಾನಂದ ಹೆಬ್ಬಾಳ,ರುಕ್ಮಿಣಿ ಶೇಬಿನಕಟ್ಟಿ, ಸುನಂದಾ ಗುಡ್ಡದ,ರಾಘು ಬೇಲಾಳ,ಸುರೇಶ ಮಾಶ್ಯಾಳ,ಐ.ಎಸ್.ಮೋರ್ಖೆ,ಮಹಾಂತೇಶ ಮೋರ್ಖೆ,ವಿಜಯಲಕ್ಷಿö್ಮÃ ಬಡದಾನಿ,ಶಿಕ್ಷಕಿ ಪ್ಯಾಟಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.ಅಮೃತಾ ಹೆಬ್ಬಾಳ ಹಾಗೂ ಅರ್ಪಿತಾ ಹೆಬ್ಬಾಳ ಸ್ವಾಗತ ಗೀತೆ ಹಾಡಿದರು.ಕಸ್ತೂರಿ ಗದೆಪ್ಪನವರ ಪ್ರಾರ್ಥಿಸಿದರು.ಸಂತೋಷ ಚಿತ್ತರಗಿ ನಿರೂಪಿಸಿದರು. ಸಿಆರ್‌ಪಿ ಸರಸ್ವತಿ ವಡವಡಗಿ(ಹುಣಶ್ಯಾಳ) ವಂದಿಸಿದರು.

ಶೀಘ್ರ ಪ್ರತಿಭಾ ಪುರಸ್ಕಾರ ಆಯೋಜನೆ:
ದೇವಾಂಗ ಸಮಾಜದ ಪ್ರತಿಭಾವಂತ ಮಕ್ಕಳನ್ನು ಸನ್ಮಾನಿಸುವ,ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಸೆಪ್ಟೆಂಬರ್ ತಿಂಗಳಲ್ಲಿ ಆಯೋಜಿಸುವುದಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತದೆ ಎಂದು ದೇವಾಂಗ ನೌಕರರ ಸಂಘದ ಅಧ್ಯಕ್ಷ ಶ್ರೀಶೈಲ ಭಾವಿಕಟ್ಟಿ ತಿಳಿಸಿದರು.

Latest News

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಪವಿತ್ರವಾದ ಸಂಸ್ಥೆಯಾಗಿದೆ. ಅಂಜುಮನ್ ಕಮೀಟಿ ಹದಿನೈದು ವರ್ಷಗಳಿಂದ ಅಭಿವೃದ್ಧಿ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಮುದ್ದೇಬಿಹಾಳ : ಹಸಿರು ಬಣ್ಣ,ಅರ್ಧ ಚಂದ್ರಾಕೃತಿ,ನಕ್ಷತ್ರ ಇವು ಮುಸ್ಲಿಂರ ಗುರುತುಗಳಲ್ಲ.ಅದೇ ರೀತಿ ಕೇಸರಿ ಬಣ್ಣವೂ ಹಿಂದೂಗಳದ್ದಲ್ಲ.ಎಲ್ಲ ಬಣ್ಣಗಳು ಯಾವುದೇ ಒಂದು ಸಮುದಾಯಕ್ಕೆ ಸೇರಿಲ್ಲ.ಲಾಂಛನಗಳನ್ನು ನಾವು ಮಾಡಿಕೊಂಡು ನಮ್ಮ ನಮ್ಮಲ್ಲಿ ಬೇಧಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ ಎಂದು ಇಳಕಲ್‌ನ ಖ್ಯಾತ ಪ್ರವಚನಕಾರ ಲಾಲ್‌ಹುಸೇನ್ ಕಂದಗಲ್ ಹೇಳಿದರು. ಪಟ್ಟಣದ ಸಾರಿಗೆ ಘಟಕದಲ್ಲಿ ಬುಧವಾರ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾನವನ ಘನತೆ ಎತ್ತಿ ಹಿಡಿಯುವ ಕೆಲಸವನ್ನು ಪ್ರವಾದಿ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ:          ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ: ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಬಳಿಕ ಕರಡು ಪಟ್ಟಿ ಪ್ರಕಟಿಸಲಾಗಿದ್ದು ಯಾರ ಹೆಸರು ಬಂದಿಲ್ಲವೋ ಅವರಿಗೆ ನೋಟಿಸ್ ಕೊಡುವ ಕಾರ್ಯ ಆರಂಭಗೊಳ್ಳಲಿದೆ ಎಂದು ಮತಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ಯೋಜನಾ ನಿರ್ದೇಶಕ ಬಿ.ಎ.ಸೌದಾಗರ ತಿಳಿಸಿದ್ದಾರೆ. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಅವರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ಕುರಿತು ಮಾಹಿತಿ ನೀಡಿದರು. ಜೂ.29,2026ರಲ್ಲಿ ಮತಕ್ಷೇತ್ರದ ಮತಗಟ್ಟೆ ಸಂಖ್ಯೆ 246 ಇದ್ದು ಪರಿಷ್ಕರಣೆಯ