ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಶಾಸಕ ಸಿ.ಎಸ್.ನಾಡಗೌಡರು ವಿಶೇಷ ಮುತುವರ್ಜಿ ವಹಿಸಿ ನಗರದಲ್ಲಿ ಕೃತಕ ಬುದ್ಧಿಮತ್ತೆ(ಎಐ) ಚಾಲಿತ ಟ್ರಾಫಿಕ್ ಸಿಗ್ನಲ್ ವ್ಯವಸ್ಥೆ ಅಳವಡಿಸುವ ಕಾರ್ಯ ಆರಂಭಿಸಲಾಗಿದೆ ಎಂದು ಡಿವೈಎಸ್ಪಿ ಚಂದ್ರಕಾAತ ನಂದರೆಡ್ಡಿ ಹೇಳಿದರು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಸುವ ಕಾರ್ಯದ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ಮುದ್ದೇಬಿಹಾಳ ಪಟ್ಟಣದ ಬೆಳೆದಿದ್ದು ತಾಲ್ಲೂಕಿನ ಗ್ರಾಮಾಂತರ ಪ್ರದೇಶದಲ್ಲೂ ಹೆಚ್ಚಿನ ಜನಸಂದಣಿ ಇದ್ದು ಅಪರಾಧ ಮಾಡಿದವರು ತಪ್ಪಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ.ಅಲ್ಲದೇ ಟ್ರಾಫಿಕ್ ರೂಲ್ಸ್ಗಳನ್ನು ಪಾಲನೆ ಮಾಡಬೇಕಾಗುತ್ತದೆ ಎಂದು ಹೇಳಿದರು.
ಶಾಸಕ ಸಿ.ಎಸ್.ನಾಡಗೌಡ ಮಾತನಾಡಿ, ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಈ ವ್ಯವಸ್ಥೆಯನ್ನು ಪಟ್ಟಣದಲ್ಲಿ ಅಳವಡಿಸಲಾಗುತ್ತಿದೆ.ನಗರ ಸುಂದರವಾಗಿ ಕಾಣಲು ಹಾಗೂ ಜನರು ಕಾನೂನು ಸುವ್ಯವಸ್ಥೆಯನ್ನು ಪಾಲಿಸುವುದಕ್ಕಾಗಿ ಈ ವ್ಯವಸ್ಥೆ ಜಾರಿಗೊಳಿಸಲಾಗುತ್ತದೆ.ಇದು ಪೊಲೀಸ್ ಇಲಾಖೆಗೆ ಹೆಚ್ಚಿನ ಬಲ ತಂದುಕೊಡಲಿದೆ ಎಂದು ತಿಳಿಸಿದರು.
ಸಿಪಿಐ ಮೊಹ್ಮದ ಫಸಿವುದ್ದೀನ,ಪಿಎಸೈ ವಿಜಯಕುಮಾರ ತಳವಾರ,ತಾಳಿಕೋಟಿ ಪಿಎಸೈ ಜ್ಯೋತಿ ಖೋತ,ಮುಖಂಡರಾದ ವಾಯ್.ಎಚ್.ವಿಜಯಕರ್,ಬಾಲಾಜಿ ಶುರ್ಸ್ನ ನಿರ್ದೇಶಕ ರಾಹುಲಗೌಡ ಪಾಟೀಲ,ಬಿಎಎಸ್ ಇಂಟರನ್ಯಾಶನಲ್ ಶಾಲೆಯ ಮಾರ್ಗದರ್ಶಕ ಶಿವನಗೌಡ ಬಿರಾದಾರ, ಕೆಆರ್ಡಿಎಲ್ ಇಲಾಖೆ ಎಇಇ ಅನುರಾಗ್, ಅಂಜುಮನ್ ಕಮೀಟಿ ಸದಸ್ಯ ಅಬ್ದುಲಗಫೂರ ಮಕಾನದಾರ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ,ಮೊಹ್ಮದರಫೀಕ ಶಿರೋಳ, ಸೇರಿದಂತೆ ಹಲವರು ಇದ್ದರು.
ಸಮಾಜದಲ್ಲಿ ಪೊಲೀಸರನ್ನು ಯಾವತ್ತಿಗೂ ಬಳಸಿಕೊಳ್ಳಬಾರದು.ಅವರನ್ನು ಬಳಸಿಕೊಂಡವರಿಗೆ ತಕ್ಕ ಉತ್ತರ ಜನರು ಕೊಟ್ಟಿದ್ದಾರೆ.ಪೊಲೀಸರಿಗೆ ಸ್ವತಂತ್ರö್ಯವಾಗಿ ಕಾರ್ಯನಿರ್ವಹಿಸಲು ಬಿಡಬೇಕು.ಅಂದಾಗ ಕಾನೂನು ಸುವ್ಯವಸ್ಥೆ ಸರಿಯಾಗಿರುತ್ತದೆ ಎಂದು ಶಾಸಕ ನಾಡಗೌಡರು ಹೇಳಿದರು.
ಬಸ್ ನಿಲ್ದಾಣದ ಪಕ್ಕದಲ್ಲಿರುವ ಹಳೇ ಪೊಲೀಸ ಠಾಣೆಯ ನವೀಕರಣ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಪೊಲೀಸ್ ಇಲಾಖೆಯ ಅಧಿಕಾರಿಗಳು,ಜನಪ್ರತಿನಿಧಿಗಳು ಇದ್ದರು.







