ಮುದ್ದೇಬಿಹಾಳ : ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯನ್ನು ಇಳಿಮುಖಗೊಳಿಸುವ ಕಾರ್ಯ ಶಿಕ್ಷಕರು ಮಾಡಬೇಕು.ಸರ್ಕಾರ ಜಾರಿಗೊಳಿಸಿರುವ ಹೊಸ ತಂತ್ರಾoಶವು ಶಿಕ್ಷಣ ಇಲಾಖೆಯಲ್ಲಿ ನಡೆದಿದ್ದ ಹಲವು ಅಕ್ರಮಗಳಿಗೆ ತಡೆ ನೀಡುವ ಉದ್ದೇಶ ಹೊಂದಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.
ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಶಿಕ್ಷಕರೆಂದರೆ ದೇಶದ ಸಂಸ್ಕೃತಿ ಎತ್ತಿ ಹಿಡಿಯುವವರು.ಅತ್ಯುನ್ನತ ವ್ರತ್ತಿಯಲ್ಲಿರುವವರು.ಸರ್ಕಾರಿ ಶಾಲೆಯ ಶಿಕ್ಷಕರು ಡೊನೇಷನ್ ಕೊಟ್ಟು ಶಿಕ್ಷಕರಾದವರಲ್ಲ.ಸರಕಾರಿ ಶಾಲೆಯ ಶಿಕ್ಷಕರು ಒಂದು ಬೈಗುಳ ಹೆಚ್ಚಾದರೂ ಪಾಲಕರು ಶಾಲೆಗೆ ಬಂದು ಶಿಕ್ಷಕರನ್ನು ಪ್ರಶ್ನಿಸುವ ಮನೋಭಾವ ಬದಲಾಗಬೇಕಿದೆ.ಶಿಕ್ಷಕರ ಛಡಿ ಏಟು ನಮ್ಮನ್ನು ಇಲ್ಲಿಗೆ ತಂದು ನಿಲ್ಲಿಸಿದೆ ಎಂದು ಹೇಳಿದರು.
ಬಟ್ಟೆ,ಊಟ,ಪುಸ್ತಕ ಎಲ್ಲವನ್ನೂ ಕೊಟ್ಟಾಗಲೂ ಸರ್ಕಾರಿ ಶಾಲೆಗಳಿಗೆ ಹುಡುಗರು ಬರುತ್ತಿಲ್ಲ.ಸರ್ಕಾರಿ ಶಾಲೆಯಲ್ಲಿ ಒಳ್ಳೆಯ ಶಿಕ್ಷಣ ಸಿಗುವುದಿಲ್ಲ ಎಂಬುದು ಸಾಮಾನ್ಯವಾಗಿ ಬೆಳೆದು ಬಂದಿರುವ ಸ್ಥಿತಿಯಾಗಿದೆ.ಆದರೆ ಸರ್ಕಾರಿ ಶಾಲೆಗೆ ಆಯ್ಕೆಯಾಗದವರು ಖಾಸಗಿ ಶಾಲೆಯಲ್ಲಿ ಕೆಲಸ ಮಾಡುತ್ತಿರುತ್ತಾರೆ.ಆದರೆ ಜಾಣರನ್ನು ಜಾಣರನ್ನಾಗಿ ಮಾಡುವುದು ಮುಖ್ಯವಲ್ಲ ಸರಾಸರಿ ಬುದ್ದಿಮತ್ತೆ ಹೊಂದಿರುವ ಮಕ್ಕಳನ್ನು ಶಿಕ್ಷಣವಂತರನ್ನಾಗಿಸಬೇಕು.ತಾಲ್ಲೂಕಿನಲ್ಲಿ 230 ಶಾಲೆ ರಿಪೇರಿ ಮಾಡಬೇಕು ಎಂದು ಹೇಳಿದರು.
ಗುರುಭವನ ನಿರ್ಮಾಣಕ್ಕೆ 25 ಲಕ್ಷ ರೂಪಾಯಿ ಅನುದಾನ ಒದಗಿಸುವ ಭರವಸೆ ನೀಡಿದ ಶಾಸಕರು,ನಿಮ್ಮ ಶಿಕ್ಷಕರ ಸಂಘದ ಚುನಾವಣೆ ಬಂದಾಗ ರಾಜಕಾರಣ ಮಾಡಿ.ಆದರೆ ದಿನನಿತ್ಯ ರಾಜಕಾರಣ ಮಾಡಬೇಡಿ ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖ ನುಗ್ಗಲಿ,ಕುಂಟೋಜಿ ಭಾವೈಕ್ಯತೆ ಮಠದ ಚೆನ್ನವೀರ ಶಿವಾಚಾರ್ಯರು,ಕ್ಷೇತ್ರ ಸಮನ್ವಯಾಧಿಕಾರಿ ಆರ್.ಬಿ.ಧಮ್ಮೂರಮಠ ಮಾತನಾಡಿದರು.
ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅರವಿಂದ ಹೂಗಾರ,ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ,ಹೇಮರಡ್ಡಿ ಮಲ್ಲಮ್ಮ ಕಲ್ಯಾಣಮಂಟಪದ ಅಧ್ಯಕ್ಷ ಸುರೇಶಗೌಡ ಪಾಟೀಲ,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಬಸನಗೌಡ ಮುದ್ನೂರ,ತಾಳಿಕೋಟಿ ತಾಲ್ಲೂಕು ಅಧ್ಯಕ್ಷ ಬಿ.ಟಿ.ವಜ್ಜಲ,ನಿಡಗುಂದಿ ತಾಲ್ಲೂಕಿನ ಅಧ್ಯಕ್ಷ ಸಲೀಮ , ಗ್ಯಾರಂಟಿ ಸಮಿತಿ ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ, ತಾಪಂ ಇಒ ಸಂಗನಗೌಡ ಬಿರಾದಾರ,ದೈಹಿಕ ಶಿಕ್ಷಣ ಪರಿವೀಕ್ಷಕ ಎ.ಜೆ.ದಖನಿ ,ಶಿಕ್ಷಣ ಸಂಯೋಜಕ ಎಂ.ಕೆ.ಬಾಗವಾನ,ಎA.ಎಸ್.ಕವಡಿಮಟ್ಟಿ,ಶ್ರೀಶೈಲ ಭಾವಿಕಟ್ಟಿ,ಎಂ.ಜಿ.ವಾಲಿ,ಸರಸ್ವತಿ ವಡವಡಗಿ, ಮೊದಲಾದವರು ಇದ್ದರು.
ಸಂಗಮೇಶ ಶಿವಣಗಿ ಸಂಗಡಿಗರು ಪ್ರಾರ್ಥಿಸಿದರು.ಸಿದ್ದನಗೌಡ ಬಿಜ್ಜೂರ ಹಾಗೂ ಹೇಮಾ ಬಿರಾದಾರ ನಿರೂಪಿಸಿದರು.ಎಂ.ಎo.ಬೆಳಗಲ್ ಸ್ವಾಗತಿಸಿದರು.ನಿಡಗುಂದಿ,ಮುದ್ದೇಬಿಹಾಳ,ತಾಳಿಕೋಟಿ ತಾಲ್ಲೂಕಿನ ಶಿಕ್ಷಕರು ಇದ್ದರು.ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರು,ಎಸ್.ಎಸ್.ಎಲ್.ಸಿಯಲ್ಲಿ ಶೇ.100ರಷ್ಟು ಸಾಧನೆ ತೋರಿದ ಶಾಲೆಗಳ ಶಿಕ್ಷಕರನ್ನು ಸನ್ಮಾನಿಸಲಾಯಿತು.







