ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.
ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು ಪ್ರತಿಕ್ರಿಯಿಸುವುದಿಲ್ಲ.ಅವರು ಆವೇಶದಲ್ಲಿ ಹೇಳಿರಬಹುದು ಎಂದು ನಾಡಗೌಡರು ಹೇಳಿದರು. ಕೆಎಸ್ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ.ಮುಖ್ಯಮಂತ್ರಿಗಳು ಅದನ್ನು ಇನ್ನೂ ಅಂಗೀಕರಿಸಿಲ್ಲ.ನಾಳೆ ಬೆಂಗಳೂರಿಗೆ ಹೋಗಿ ಸಿಎಂ ಅವರನ್ನು ಭೇಟಿ ಮಾಡುತ್ತೇನೆ.ಒಂದು ವೇಳೆ ಮುಂದುವರೆಯಿರಿ ಎಂದರೆ ಮುಂದುವರೆಯುತ್ತೇನೆ ಎಂದು ಹೇಳಿದರು.
ತಾಲ್ಲೂಕುಮಟ್ಟದ ಸಭೆ ನಡೆಸಿದ ಶಾಸಕ ನಾಡಗೌಡರು:
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬರಪೀಡಿತ ತಾಲ್ಲೂಕು ಘೋಷಣೆ ಹಾಗೂ ಇನ್ನೀತರ ಬರದ ಮೇಲಿನ ವಿಷಯಗಳ ಕುರಿತು ಶಾಸಕ ಸಿ.ಎಸ್.ನಾಡಗೌಡ ತಾಲ್ಲೂಕು ಮಟ್ಟದ ಅಧಿಕಾರಿಗಳ ಟಾಸ್ಕ್ಫೋರ್ಸ್ ಸಭೆ ನಡೆಸಿದರು.ವರದಿ ಸಂಗ್ರಹಿಸಿ ಕೊಡುವ ಕೆಲಸವಲ್ಲ.ಸ್ಯಾಟಲೈಟ್ ಮೂಲಕ ಅಂಕಿ ಅಂಶಗಳು ಸಿಗುತ್ತವೆ. ಬರಗಾಲದ ಸಮಯದಲ್ಲಿ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿವ ನೀರಿನ ನಿರ್ವಹಣೆ ಸರಿಯಾಗಿ ಮಾಡಬೇಕು.ಗ್ರಾಮೀಣ ಭಾಗದಲ್ಲಿ ಎಲ್ಲಿಲ್ಲಿ ಮುಖ್ಯಪೈಪಲೈನ್ ಕತ್ತರಿಸುವರು ಕಂಡು ಬರುತ್ತಾರೆಯೋ ಅವರ ಮೇಲೆ ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳಬೇಕು.ತೊಂದರೆ ಕೊಡುವವರ ಬಗ್ಗೆ ಪೊಲೀಸರಿಗೆ ದೂರು ನೀಡಬೇಕು ಎಂದು ಸೂಚಿಸುರುವುದಾಗಿ ತಿಳಿಸಿದರು.
ಬೆಳೆಗಳು ಹತ್ತಿ,ಸೂರ್ಯಕಾಂತಿ,ಸಜ್ಜೆ,ಮೆಕ್ಕೆಜೋಳ ಸೇರಿದಂತೆ ಎಲ್ಲ ಬೆಳೆಗಳು ಶೇ.70-80ರಷ್ಟು ಬೆಳೆ ನಾಶವಾಗಿದೆ.ಬರಗಾಲ ಘೋಷಣೆ ಆಗಬೇಕು ಎಂದು ಹೇಳಿದಾಗ ಸಂಬAಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಿದ್ದು ನಮ್ಮ ತಾಲ್ಲೂಕು ಮೊದಲ ಆದ್ಯತೆ ಪಟ್ಟಿಯಲ್ಲಿದೆ ಎಂದಿದ್ದಾರೆ ಎಂದು ತಿಳಿಸಿದರು.ಸಭೆಯಲ್ಲಿ ಪ್ರಭಾರ ತಹಶೀಲ್ದಾರ್ ಆನಂದ ಕೋಲಾರ,ಪ್ರಭಾರ ತಾಪಂ ಇಓ ಸಂಗನಗೌಡ ಬಿರಾದಾರ,ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಡಿ.ಭಾವಿಕಟ್ಟಿ,ತೋಟಗಾರಿಕೆ ಇಲಾಖೆ ಅಧಿಕಾರಿ ರಾಘವೇಂದ್ರ ದೇಶಪಾಂಡೆ ಸೇರಿದಂತೆ ಹಲವರು ಇದ್ದರು







