Virat Kohli Retirement Plan

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ.

ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

Join Our Telegram: https://t.me/dcgkannada

ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ ಪ್ರಮುಖರಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಹೆಸರು ಮುಂಚೂಣಿಯಲ್ಲಿದೆ. ಈ ಇಬ್ಬರು ಹಿರಿಯ ಆಟಗಾರರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬರದ ಕಾರಣ ನಿವೃತ್ತಿಯಾಗುವುದು ಉತ್ತಮ ಎಂಬ ಅಭಿಪ್ರಾಯಗಳು ಕೇಳಿ ಬಂದಿದ್ದವು. ಇದರ ಬೆನ್ನಲ್ಲೇ ಕಿಂಗ್ ಕೊಹ್ಲಿ ಸದ್ಯಕ್ಕಂತು ನಿವೃತ್ತರಾಗಲ್ಲ ಎಂಬ ವಿಚಾರ ಬೆಳಕಿಗೆ ಬಂದಿದೆ.

ವಿರಾಟ್ ಕೊಹ್ಲಿ ಸದ್ಯ ನಿವೃತ್ತರಾಗುವ ಯಾವುದೇ ಮನಸ್ಥಿತಿಯಲ್ಲಿಲ್ಲ. ಬದಲಾಗಿ ಇನ್ನೂ ಮೂರು ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಮುಂದುವರೆಯುವ ಇರಾದೆಯಲ್ಲಿದ್ದಾರೆ. ಅಲ್ಲದೆ 2027 ರವರೆಗೆ ಟೀಮ್ ಇಂಡಿಯಾ ಪರ ಕಣಕ್ಕಿಳಿಯುವ ವಿಶ್ವಾಸ ಹೊಂದಿದ್ದಾರೆ.

ಇಲ್ಲಿ ವಿರಾಟ್ ಕೊಹ್ಲಿ 2027ರ ಏಕದಿನ ವಿಶ್ವಕಪ್ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಲು ಪ್ಲ್ಯಾನ್ ರೂಪಿಸಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ಕಿಂಗ್ ಕೊಹ್ಲಿಯನ್ನು ಇನ್ನೂ ಮೂರು ವರ್ಷಗಳ ಕಾಲ ಟೀಮ್ ಇಂಡಿಯಾದಲ್ಲಿ ಕಾಣಬಹುದು.

ಇದನ್ನು ಪುಷ್ಠೀಕರಿಸುವಂತೆ ಇತ್ತೀಚೆಗಷ್ಟೇ ವಿರಾಟ್ ಕೊಹ್ಲಿಯ ಬಾಲ್ಯದ ಕೋಚ್ ರಾಜ್​ ಕುಮಾರ್ ಶರ್ಮಾ ಸಹ ಹೇಳಿಕೆ ನೀಡಿದ್ದಾರೆ. ವಿರಾಟ್ ಸದ್ಯ ನಿವೃತ್ತಿಯ ಯೋಚನೆಯಲ್ಲಿಲ್ಲ. ಅವರು ಇನ್ನೂ 5 ವರ್ಷಗಳ ಕಾಲ ಮೈದಾನದಲ್ಲಿ ಕಾಣಿಸಿಕೊಳ್ಳುವ ವಿಶ್ವಾಸವಿದೆ ತಿಳಿಸಿದ್ದರು. ಈ ಮೂಲಕ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಬಳಿಕ ಕೊಹ್ಲಿ ನಿವೃತ್ತಿ ನೀಡಲಿದ್ದಾರೆ ಎಂಬ ವದಂತಿಯನ್ನು ತಳ್ಳಿ ಹಾಕಿದ್ದರು.

ಇದನ್ನೂ ಓದಿ: Prize Money Scholarship: ವಿದ್ಯಾರ್ಥಿಗಳ ಖಾತೆಗೆ 35 ಸಾವಿರ ಜಮಾ!

ಹಾಗೆಯೇ ಟೀಮ್ ಇಂಡಿಯಾದ ಮಾಜಿ ಕೋಚ್ ರವಿ ಶಾಸ್ತ್ರಿ ಕೂಡ ವಿರಾಟ್ ಕೊಹ್ಲಿ ಇನ್ನೂ ಮೂರು ವರ್ಷಗಳ ಕಾಲ ಭಾರತದ ಪರ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದ್ದರು. ಇವೆಲ್ಲವನ್ನೂ ಗಮನಿಸಿದರೆ 2027 ರಲ್ಲಿ ಸೌತ್ ಆಫ್ರಿಕಾ, ನಮೀಬಿಯಾ ಹಾಗೂ ಝಿಂಬಾಬ್ವೆ ಜಂಟಿಯಾಗುವ ಆಯೋಜಿಸುವ ಏಕದಿನ ವಿಶ್ವಕಪ್ ಮೂಲಕ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಬಹುದು.

Latest News

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ:                     ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ: ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಮುದ್ದೇಬಿಹಾಳ : ದೇಶವನ್ನು ಆಳುತ್ತಿರುವ ಪ್ರಧಾನ ನರೇಂದ್ರ ಮೋದಿ ಅವರಿಗೆ ಬಡವರು,ಮಧ್ಯಮ ವರ್ಗದವರದ್ದು ಆಲೋಚನೆ

ಜನ್ಮದಿನದ ಆಚರಣೆಗಳ ನೆಪದಲ್ಲಿ ದುಂದುವೆಚ್ಚ ಬೇಡ-ಕಾಶೀಬಾಯಿ ರಾಂಪೂರ

ಜನ್ಮದಿನದ ಆಚರಣೆಗಳ ನೆಪದಲ್ಲಿ ದುಂದುವೆಚ್ಚ ಬೇಡ-ಕಾಶೀಬಾಯಿ ರಾಂಪೂರ

ಮುದ್ದೇಬಿಹಾಳ : ಜನ್ಮದಿನ,ಮದುವೆ ವಾರ್ಷಿಕೋತ್ಸವ ಹಾಗೂ ಇನ್ನೀತರ ವಯಕ್ತಿಕ ಶುಭ ಸಂದರ್ಭಗಳಲ್ಲಿ ದುಂದುವೆಚ್ಚ ಮಾಡದೇ

ಮುದ್ದೇಬಿಹಾಳ : ಮಾ.15 ರಂದು ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್

ಮುದ್ದೇಬಿಹಾಳ : ಮಾ.15 ರಂದು ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್

ಮುದ್ದೇಬಿಹಾಳ : ಪಟ್ಟಣದ ವಿದ್ಯಾನಗರದ ಶಿರವಾಳ ಲೇಔಟ್‌ದಲ್ಲಿರುವ ಪ್ರಗತಿ ಜೆಸಿ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ

ಮುದ್ದೇಬಿಹಾಳ : ಮಾ.12 ರಂದು ಪದ್ಮಾವತಿ ಅಮ್ಮನವರ ಮಹಾರಥೋತ್ಸವ

ಮುದ್ದೇಬಿಹಾಳ : ಮಾ.12 ರಂದು ಪದ್ಮಾವತಿ ಅಮ್ಮನವರ ಮಹಾರಥೋತ್ಸವ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಪದ್ಮಾವತಿ ಅಮ್ಮನವರ ಜಾತ್ರಾ ಮಹೋತ್ಸವ ಮಾ.12,13 ರಂದು

ಮುದ್ದೇಬಿಹಾಳ : ಸಾವಿತ್ರಿ ವಣಕ್ಯಾಳಗೆ ‘ಸಾಧಕಿ’ ಪ್ರಶಸ್ತಿ ಪ್ರದಾನ

ಮುದ್ದೇಬಿಹಾಳ : ಸಾವಿತ್ರಿ ವಣಕ್ಯಾಳಗೆ ‘ಸಾಧಕಿ’ ಪ್ರಶಸ್ತಿ ಪ್ರದಾನ

ಮುದ್ದೇಬಿಹಾಳ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ಕೊಡಮಾಡುವ ಸಾಧಕಿ ಪ್ರಶಸ್ತಿಗೆ ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಮೇಲ್ವಿಚಾರಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸಾವಿತ್ರಿ ವಣಕ್ಯಾಳ ಅವರು ಸನ್ 2026 ನೇ ಸಾಲಿನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವಿಜಯಪುರ ಜಿಲ್ಲಾಡಳಿತ ವತಿಯಿಂದ ಪ್ರತಿ ವರ್ಷ ನೀಡುವ ಈ ಪ್ರಶಸ್ತಿಗೆ ಮುದ್ದೇಬಿಹಾಳ ತಾಲೂಕಿನಿಂದ ಸಾವಿತ್ರಿ ವಣಕ್ಯಾಳ ಅವರನ್ನು ಶಿಸ್ತುಬದ್ಧ ಕರ್ತವ್ಯ ನಿರ್ವಹಣೆಯಿಂದ ಆಯ್ಕೆ ಮಾಡಲಾಗಿದೆ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ ತೊಡಗಿಕೊಂಡಿದೆ ಎಂದು ಅಸ್ಕಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಸಿ.ಬಿ.ಅಸ್ಕಿ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ರೈತರಿಗೆ ರಿಯಾಯಿತಿ ದರದಲ್ಲಿ ಜೆಸಿಬಿ ಸೇವೆ, ರೈತರ ಆತ್ಮಹತ್ಯೆ,ಅಪಘಾತದ ಪ್ರಕರಣಗಳಲ್ಲಿ ನೊಂದವರಿಗೆ ಫೌಂಡೇಶನ್‌ದಿoದ ಕಾರ್ಯ ಮಾಡುತ್ತಾ ಬಂದಿದ್ದೇವೆ ಎಂದರು. ರಂಜಾನ್ ಮಾಸದ ನಿಮಿತ್ಯ ಮುಸ್ಲಿಂ ಬಾಂಧವರಿಗೆ ಇಫ್ತಾರಕೂಟಗಳನ್ನು ಆಯೋಜಿಸಿದ್ದು ಮಾ.9 ರಂದು ಮುದ್ದೇಬಿಹಾಳದ