A caste was jailed by a Guru - Jayasiddeswar Sri

ಜಾತಿಗೊಬ್ಬ ಗುರು ಮಾಡಿದವ ಜೈಲು ಸೇರಿದ- ಜಯಸಿದ್ದೇಶ್ವರ ಶ್ರೀ

ಜಾತಿಗೊಬ್ಬ ಗುರು ಮಾಡಿದವ ಜೈಲು ಸೇರಿದ- ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಜಾತಿಗೊಬ್ಬ ಗುರುವನ್ನು ಮಾಡಿದ್ದರಿಂದ ವೀರಶೈವ ಲಿಂಗಾಯತ ಧರ್ಮ ಹಾಳಾಗಿ ಹೋಗಿದೆ. ಜಾತಿಗೊಬ್ಬ ಗುರು ಮಾಡಿದವ ಜೈಲು ಸೇರಿದ ಎಂದು ಹಿರೂರು ಅನ್ನದಾನೇಶ್ವರ ಮಠದ ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು.

ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಗಜದಂಡ ಶಿವಾಚಾರ್ಯರ ಮಠದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಗುರುಪೌರ್ಣಿಮೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ 3-4 ಕಾವಿಧಾರಿಗಳು ಧರ್ಮವನ್ನು ಕೆಡಿಸಿದ್ದಾರೆ. ಕಂಡ ಕಂಡವರಿಗೆಲ್ಲ ಸ್ವಾಮಿಗಳೆಂದು ಕಾಲು ಮುಗಿಯಬೇಡಿ. ಕೆಲ ಕಾವಿಧಾರಿಗಳು ವೀರಶೈವ ಲಿಂಗಾಯತ ಧರ್ಮ ಒಡೆಯಲು ಮುಂದಾಗಿದ್ದಾರೆ. ಗುರುವಿನ ಹಿನ್ನೆಲೆ ಅರಿತು ಕಾಲು ಮುಗಿಯಬೇಕು. ಶಿಶುನಾಳ ಷರೀಫ, ಸಜ್ಜಲಗುಡ್ಡ ಶರಣಮ್ಮ, ಸಿದ್ಧಾರೂಢರು, ಗಜದಂಡ ಶಿವಾಚಾರ್ಯರು ದೇವರನ್ನು ತೋರಿಸುವ ಗುರುಗಳಾಗಿದ್ದರು ಎಂದರು.

ಸಿದ್ಧನಕೊಳ್ಳದ ಶಿವಕುಮಾರ ಸ್ವಾಮೀಜಿ ಮಾತನಾಡಿ, ಸ್ವಾಮಿಗಳು ಹಲವರಿದ್ದು ಸ್ವಾಮಿತ್ವ ಪಡೆವರೆಷ್ಟು ಲೆಕ್ಕ ಹಾಕಿ ನೋಡಿದರೆ ಕಳವಳ ಉಂಟಾಗುತ್ತದೆ. ಸ್ವಾಮಿಯಾಗುವುದು ಈಗ ಉದ್ಯೋಗವಾಗಿದೆ. ತಂದೆ, ತಾಯಿ, ಸಂಸ್ಕಾರ ನೀಡುವ ಶಿಕ್ಷಕರು, ರೈತರು, ಸೈನಿಕರು ಗುರುಗಳಾಗಿದ್ದಾರೆ ಎಂದರು.

ಸರೂರು-ಅಗತೀರ್ಥ ಹಾಲುಮತ ಗುರುಪೀಠದ ರೇವಣಸಿದ್ದೇಶ್ವರ ಸ್ವಾಮೀಜಿ, ಸಾಹಿತಿ ಬಿ. ಎಂ. ಹಿರೇಮಠ, ಕನ್ನೂರಿನ ಚಂದ್ರಶೇಖರ ಮಹಾರಾಜರು, ಉದ್ಯಮಿ ಟಿ. ವಿಜಯಭಾಸ್ಕರ್, ಜಮ್ಮಲದಿನ್ನಿ ಸಿದ್ಧರಾಮದೇವರು, ಸಂತೋಷ ಶಾಸ್ತ್ರಿ ಸುಶೀಲಮ್ಮ ಶರಣೆ ಇದ್ದರು. ಗಜದಂಡ ಹಾಗೂ ಸಿದ್ದಾರೂಢ ಸ್ವಾಮೀಜಿಗಳ ಚಿತ್ರವನ್ನು ಮೆರವಣಿಗೆ ನಡೆಸಲಾಯಿತು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ