ಅಂಗನವಾಡಿ ಬೆಲ್ಲದಲ್ಲಿ ಸತ್ತ ಇಲಿ ಪತ್ತೆ! ಮೊಟ್ಟೆ ಕೊಟ್ಟು ಕಿತ್ತುಕೊಂಡವರನ್ನು ಮನೆಗೆ ಕಳುಹಿಸಿದ ಸಚಿವೆ ಹೆಬ್ಬಾಳ್ಕರ್ ಈಗ ಏನು ಮಾಡ್ತಾರೆ? (ವಿಡಿಯೋ ನೋಡಿ)

ಅಂಗನವಾಡಿ ಬೆಲ್ಲದಲ್ಲಿ ಸತ್ತ ಇಲಿ ಪತ್ತೆ! ಮೊಟ್ಟೆ ಕೊಟ್ಟು ಕಿತ್ತುಕೊಂಡವರನ್ನು ಮನೆಗೆ ಕಳುಹಿಸಿದ ಸಚಿವೆ ಹೆಬ್ಬಾಳ್ಕರ್ ಈಗ ಏನು ಮಾಡ್ತಾರೆ? (ವಿಡಿಯೋ ನೋಡಿ)

ಚಿಕ್ಕಬಳ್ಳಾಪುರ: ಅಂಗನವಾಡಿ ಕೇಂದ್ರದಲ್ಲಿನ ಪೌಷ್ಟಿಕ ಆಹಾರದ ಬೆಲ್ಲದ ಪಾಕೆಟ್ ನಲ್ಲಿ ಸತ್ತ ಇಲಿ (dead rat in anganawadi food) ಪತ್ತೆಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಗರುಡಾಚಾರ್ಲಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಬೆಳಕಿಗೆ ಬಂದಿದೆ.

ಮಕ್ಕಳಿಗೆ ವಿತರಿಸುವ ಪೌಷ್ಟಿಕ ಆಹಾರದ ಜೊತೆಗೆ ಬೆಲ್ಲದ ಪೌಡರ್ ಪಾಕೆಟ್ ಸಹ ಕೊಡಲಾಗುತ್ತದೆ. ಆದರೆ ಗ್ರಾಮದ ರತ್ನಮ್ಮ ಹಾಗೂ ರಾಜು ಎಂಬುವವರ ಮನೆ ಮಕ್ಕಳಿಗೆ ಅಂಗನವಾಡಿ ಕೇಂದ್ರದಿಂದ ವಿತರಿಸಿದ್ದ ಬೆಲ್ಲದ ಪುಡಿಯ ಪಾಕೆಟ್ ನಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ಹಲವು ದಿನಗಳಿಂದ ಬೆಲ್ಲದ ಪುಡಿಯನ್ನ ಹಾಲಿಗೆ ಹಾಕಿ ಮಕ್ಕಳಿಗೆ ಕೊಟ್ಟು ಬಳಸಿದ್ದು, ಅರ್ಧ ಬಳಸಿದ ನಂತರ ಪಾಕೆಟ್ ನಲ್ಲಿ ಸತ್ತು ಕೊಳೆತಿರುವ ಇಲಿ (dead rat in anganawadi food) ಪತ್ತೆಯಾಗಿರೋದ್ರಿಂದ ಆತಂಕಗೊಂಡಿದ್ದಾರೆ.

Join Our Telegram: https://t.me/dcgkannada

ಅದೃಷ್ಟವಶಾತ್ ಸದ್ಯ ಮಕ್ಕಳಲ್ಲಿ ಯಾವುದೇ ಆರೋಗ್ಯ ಸಮಸ್ಯೆ ಕಂಡು ಬಂದಿಲ್ಲ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಕಳಪೆ ಗುಣಮಟ್ಟದ ಪೌಷ್ಟಿಕ ಆಹಾರ ವಿತರಸುತ್ತಿದ್ದಾರೆ ಅನ್ನೋ ಆರೋಪ ಪದೇಪದೇ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಬೆಲ್ಲದ ಪುಡಿಯ ಪಾಕೆಟ್ ನಲ್ಲಿ ಸತ್ತ ಇಲಿ ಪತ್ತೆಯಾಗಿರೋದು ಕಳಪೆ ಆಹಾರ ವಿತರಣೆಗೆ ಸಾಕ್ಷಿಯಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ಎಲ್ಲಂಪಲ್ಲಿ ಎಂಎಸ್,ಪಿ,ಸಿ ಆಹಾರ ಘಟಕದಿಂದ ಬೆಲ್ಲದ ಪುಡಿ ಪೂರೈಕೆಯಾಗಿದ್ದು, ಎಂ.ಎಸ್.ಪಿ.ಸಿ. ಘಟಕದ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಇಷ್ಟೇ ಅಲ್ಲದೆ ಸತ್ತ ಇಲಿ ಇದ್ದ ಬೆಲ್ಲ ಬಳಸಿ ಮಕ್ಕಳಿಗೆ ಏನಾದರೂ ಹೆಚ್ಚೂ ಕಡಿಮೆಯಾಗಿದ್ರೆ ಯಾರು ಹೊಣೆ ಅಂತ ಮಕ್ಕಳ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.

ಮೊನ್ನೆಯಷ್ಟೆ ಕೊಪ್ಪಳ ಜಿಲ್ಲೆಯ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಮೊಟ್ಟೆ ಬಡಿಸಿ, ವಿಡಿಯೋ ಮಾಡಿ ತದನಂತರ ಬಡಿಸಿದ್ದ ಮೊಟ್ಟೆಗಳನ್ನು ಮಕ್ಕಳ ತಟ್ಟೆಯಿಂದ ತೆಗೆದುಕೊಂಡಿದ್ದ ಅಂಗನವಾಡಿಯ ಸಹಾಯಕಿ ಮತ್ತು ಕಾರ್ಯಕರ್ತೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಅಮಾನತು ಮಾಡಿದ್ದರು.

ಇದನ್ನೂ ಓದಿ: Suicide: ಪತ್ನಿಯ ಕಿರುಕುಳ.. ಸರ್ಕಾರಿ ನೌಕರ ಆತ್ಮಹತ್ಯೆ..!

ಈಗ ಬೆಲ್ಲದ ಪೊಟ್ಟಣದಲ್ಲಿ ಇಲಿ ಪತ್ತೆಯಾಗಿದ್ದು, ಈ ಪ್ರಕರಣದಲ್ಲಿ ಸಚಿವೆ ಹೆಬ್ಬಾಳ್ಕರ್ ಏನು ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Latest News

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ:                            ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ಮುದ್ದೇಬಿಹಾಳ : ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯನ್ನು ಇಳಿಮುಖಗೊಳಿಸುವ ಕಾರ್ಯ ಶಿಕ್ಷಕರು ಮಾಡಬೇಕು.ಸರ್ಕಾರ ಜಾರಿಗೊಳಿಸಿರುವ ಹೊಸ ತಂತ್ರಾoಶವು ಶಿಕ್ಷಣ ಇಲಾಖೆಯಲ್ಲಿ ನಡೆದಿದ್ದ ಹಲವು ಅಕ್ರಮಗಳಿಗೆ ತಡೆ ನೀಡುವ ಉದ್ದೇಶ ಹೊಂದಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶಿಕ್ಷಕರೆಂದರೆ ದೇಶದ ಸಂಸ್ಕೃತಿ ಎತ್ತಿ ಹಿಡಿಯುವವರು.ಅತ್ಯುನ್ನತ ವ್ರತ್ತಿಯಲ್ಲಿರುವವರು.ಸರ್ಕಾರಿ ಶಾಲೆಯ

ಬಸವ ಇಂಟರನ್ಯಾಷನಲ್ ಸ್ಕೂಲ್ ಮಕ್ಕಳಿಂದ ವಿಶ್ವದಾಖಲೆ…!

ಬಸವ ಇಂಟರನ್ಯಾಷನಲ್ ಸ್ಕೂಲ್ ಮಕ್ಕಳಿಂದ ವಿಶ್ವದಾಖಲೆ…!

ಮುದ್ದೇಬಿಹಾಳ : ರಾಷ್ಟ್ರೀಯ ಮಟ್ಟದ ಇಬಿಕ್ ರೀಡಥಾನ್ -2,2025ರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಟ್ಟಣದ ಬಸವ ಇಂಟರ್‌ನ್ಯಾಶನಲ್ ಶಾಲೆಯ ವಿದ್ಯಾರ್ಥಿಗಳು ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಶಿವಕುಮಾರ ಹರ್ಲಾಪೂರ ಹೇಳಿದರು. ಪಟ್ಟಣದ ಹೊರವಲಯದಲ್ಲಿರುವ ಬಸವ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ಮಂಗಳವಾರ ನಡೆದ ಸಾಧನೆ ತೋರಿದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರನ್ನು ಸನ್ಮಾನಿಸಿ ಅವರು ಮಾತನಾಡಿದರು. ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವುದರ ಜೊತೆಗೆ