ಅಂಗನವಾಡಿ ಬೆಲ್ಲದಲ್ಲಿ ಸತ್ತ ಇಲಿ ಪತ್ತೆ! ಮೊಟ್ಟೆ ಕೊಟ್ಟು ಕಿತ್ತುಕೊಂಡವರನ್ನು ಮನೆಗೆ ಕಳುಹಿಸಿದ ಸಚಿವೆ ಹೆಬ್ಬಾಳ್ಕರ್ ಈಗ ಏನು ಮಾಡ್ತಾರೆ? (ವಿಡಿಯೋ ನೋಡಿ)

ಅಂಗನವಾಡಿ ಬೆಲ್ಲದಲ್ಲಿ ಸತ್ತ ಇಲಿ ಪತ್ತೆ! ಮೊಟ್ಟೆ ಕೊಟ್ಟು ಕಿತ್ತುಕೊಂಡವರನ್ನು ಮನೆಗೆ ಕಳುಹಿಸಿದ ಸಚಿವೆ ಹೆಬ್ಬಾಳ್ಕರ್ ಈಗ ಏನು ಮಾಡ್ತಾರೆ? (ವಿಡಿಯೋ ನೋಡಿ)

Ad
Ad

Ad
Ad

ಚಿಕ್ಕಬಳ್ಳಾಪುರ: ಅಂಗನವಾಡಿ ಕೇಂದ್ರದಲ್ಲಿನ ಪೌಷ್ಟಿಕ ಆಹಾರದ ಬೆಲ್ಲದ ಪಾಕೆಟ್ ನಲ್ಲಿ ಸತ್ತ ಇಲಿ (dead rat in anganawadi food) ಪತ್ತೆಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಗರುಡಾಚಾರ್ಲಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಬೆಳಕಿಗೆ ಬಂದಿದೆ.

ಮಕ್ಕಳಿಗೆ ವಿತರಿಸುವ ಪೌಷ್ಟಿಕ ಆಹಾರದ ಜೊತೆಗೆ ಬೆಲ್ಲದ ಪೌಡರ್ ಪಾಕೆಟ್ ಸಹ ಕೊಡಲಾಗುತ್ತದೆ. ಆದರೆ ಗ್ರಾಮದ ರತ್ನಮ್ಮ ಹಾಗೂ ರಾಜು ಎಂಬುವವರ ಮನೆ ಮಕ್ಕಳಿಗೆ ಅಂಗನವಾಡಿ ಕೇಂದ್ರದಿಂದ ವಿತರಿಸಿದ್ದ ಬೆಲ್ಲದ ಪುಡಿಯ ಪಾಕೆಟ್ ನಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ಹಲವು ದಿನಗಳಿಂದ ಬೆಲ್ಲದ ಪುಡಿಯನ್ನ ಹಾಲಿಗೆ ಹಾಕಿ ಮಕ್ಕಳಿಗೆ ಕೊಟ್ಟು ಬಳಸಿದ್ದು, ಅರ್ಧ ಬಳಸಿದ ನಂತರ ಪಾಕೆಟ್ ನಲ್ಲಿ ಸತ್ತು ಕೊಳೆತಿರುವ ಇಲಿ (dead rat in anganawadi food) ಪತ್ತೆಯಾಗಿರೋದ್ರಿಂದ ಆತಂಕಗೊಂಡಿದ್ದಾರೆ.

Join Our Telegram: https://t.me/dcgkannada

ಅದೃಷ್ಟವಶಾತ್ ಸದ್ಯ ಮಕ್ಕಳಲ್ಲಿ ಯಾವುದೇ ಆರೋಗ್ಯ ಸಮಸ್ಯೆ ಕಂಡು ಬಂದಿಲ್ಲ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಕಳಪೆ ಗುಣಮಟ್ಟದ ಪೌಷ್ಟಿಕ ಆಹಾರ ವಿತರಸುತ್ತಿದ್ದಾರೆ ಅನ್ನೋ ಆರೋಪ ಪದೇಪದೇ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಬೆಲ್ಲದ ಪುಡಿಯ ಪಾಕೆಟ್ ನಲ್ಲಿ ಸತ್ತ ಇಲಿ ಪತ್ತೆಯಾಗಿರೋದು ಕಳಪೆ ಆಹಾರ ವಿತರಣೆಗೆ ಸಾಕ್ಷಿಯಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ಎಲ್ಲಂಪಲ್ಲಿ ಎಂಎಸ್,ಪಿ,ಸಿ ಆಹಾರ ಘಟಕದಿಂದ ಬೆಲ್ಲದ ಪುಡಿ ಪೂರೈಕೆಯಾಗಿದ್ದು, ಎಂ.ಎಸ್.ಪಿ.ಸಿ. ಘಟಕದ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಇಷ್ಟೇ ಅಲ್ಲದೆ ಸತ್ತ ಇಲಿ ಇದ್ದ ಬೆಲ್ಲ ಬಳಸಿ ಮಕ್ಕಳಿಗೆ ಏನಾದರೂ ಹೆಚ್ಚೂ ಕಡಿಮೆಯಾಗಿದ್ರೆ ಯಾರು ಹೊಣೆ ಅಂತ ಮಕ್ಕಳ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.

ಮೊನ್ನೆಯಷ್ಟೆ ಕೊಪ್ಪಳ ಜಿಲ್ಲೆಯ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಮೊಟ್ಟೆ ಬಡಿಸಿ, ವಿಡಿಯೋ ಮಾಡಿ ತದನಂತರ ಬಡಿಸಿದ್ದ ಮೊಟ್ಟೆಗಳನ್ನು ಮಕ್ಕಳ ತಟ್ಟೆಯಿಂದ ತೆಗೆದುಕೊಂಡಿದ್ದ ಅಂಗನವಾಡಿಯ ಸಹಾಯಕಿ ಮತ್ತು ಕಾರ್ಯಕರ್ತೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಅಮಾನತು ಮಾಡಿದ್ದರು.

ಇದನ್ನೂ ಓದಿ: Suicide: ಪತ್ನಿಯ ಕಿರುಕುಳ.. ಸರ್ಕಾರಿ ನೌಕರ ಆತ್ಮಹತ್ಯೆ..!

ಈಗ ಬೆಲ್ಲದ ಪೊಟ್ಟಣದಲ್ಲಿ ಇಲಿ ಪತ್ತೆಯಾಗಿದ್ದು, ಈ ಪ್ರಕರಣದಲ್ಲಿ ಸಚಿವೆ ಹೆಬ್ಬಾಳ್ಕರ್ ಏನು ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Latest News

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಮುದ್ದೇಬಿಹಾಳ : ಕೌಟುಂಬಿಕ ಹಿನ್ನೆಲೆಯ ದಂಪತಿಗಳಿಬ್ಬರ ಪ್ರಕರಣವನ್ನು ಇಲ್ಲಿನ ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನದ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ರಾಯಚೂರು: ಕನ್ನಡಿಗರಾದ ನಾವು ಕನ್ನಡ ಸಾಹಿತ್ಯ ಒಲವು ಬೆಳೆಸಿಕೊಂಡು ಭಾಷಾ ಪ್ರೇಮವನ್ನು ಮೆರೆಯುವಂತಾಗಬೇಕು ಎಂದು

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿಯ ಸುರಪುರ ತಾಲೂಕಿನ ತಿಂಥಣಿ ಬಳಿ ನಡೆದಿದೆ. ಆಂಜನೇಯ (35) ಪತ್ನಿ ಗಂಗಮ್ಮ (28) & ಅವರ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಾವನಪ್ಪಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಇಬ್ಬರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲು ಆಂಬುಲೆನ್ಸ್ ನಲ್ಲಿ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸುರಪುರ ಠಾಣೆಯಲ್ಲಿ ಈ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸುತ್ತಿದ್ದಾರೆ. ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ ಸೀತಾರಾಮನ್. ಕಿಸಾನ್ ಕ್ರೆಡಿಟ್ ಕಾರ್ಯ ಸಾಲದ ಮಿತಿಯನ್ನು 5 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಏನಿದು ಕಿಸಾನ್ ಕ್ರೆಡಿಟ್ ಕಾರ್ಡ್? ಕಿಸಾನ್ ಕ್ರೆಡಿಟ್ ಕಾರ್ಡ್ (KCC) ಭಾರತ ಸರ್ಕಾರವು ರೈತರಿಗೆ ಕೃಷಿ ಮತ್ತು